Author: kannadanewsnow05

ಮಂಡ್ಯ :- ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಜರುಗಿದೆ. ಅರುಣ್ ರೌಡಿಶೀಟರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಎಂ.ಟಿ.ಆರ್ ಬಾರ್ ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್ ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿದ್ದಾರೆ. ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆಸ್ತೂರು ಪೋಲೀಸರು ಶವವನ್ನು ಮಂಡ್ಯ ಮಿಮ್ಸ್ ಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Read More

ಯಾದಗಿರಿ : ರಾಜ್ಯದಲ್ಲಿ ಗುಡುಗು-ಸಿಡಿಲು ಸಮೇತ ಶುಕ್ರವಾರ ಭರ್ಜರಿ ಮಳೆ ಸುರಿದಿದ್ದು, ಸಿಡಿಲು ಬಡಿದು ಓರ್ವ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ ಸೇರಿ ಆರೇಳು ಜಿಲ್ಲೆಗಳಲ್ಲಿ ಧಾರಾಕಾರ ವರ್ಷಧಾರೆಗೆ ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದ ಹೊರವಲಯದಲ್ಲಿ ಪರಮಣ್ಣ ಕಕ್ಕೇರಾ (26) ಎಂಬ ಯುವಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಪರಮಣ್ಣ ತಮ್ಮ ಜಮೀನು ಕೆಲಸಕ್ಕೆ ಅಣ್ಣನ ಜತೆಗೆ ಹೋಗಿದ್ದ. ಗುಡುಗು ಸಹಿತ ಮಳೆ ಬರ್ತಿದ್ದಂತೆ ಅಣ್ಣ-ತಮ್ಮಂದಿರು ಗಿಡದ ಕೆಳಗೆ ನಿಂತಿದ್ದರು. ಆಗ ಸಿಡಿಲು ಬಡಿದಿದ್ದು, ಪರಮಣ್ಣ ಸ್ಥಳದಲ್ಲಯೇ ಮೃತಪಟ್ಟಿದ್ದಾನೆ. ಅಣ್ಣನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 5 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಬಲಪಡಿಸಲು ಸರ್ಕಾರ 12,060 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಇದರ ಜೊತೆಗೆ, ದೇಶೀಯ ಅಡುಗೆ ಅನಿಲವನ್ನು ಅಗ್ಗವಾಗಿಸಲು 30000 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ, 52,667 ಕೋಟಿ ರೂ.ಗಳ ಪ್ಯಾಕೇಜ್‌ಗೆ ಅನುಮೋದನೆ ನೀಡಲಾಯಿತು. ಇದರಲ್ಲಿ ಎಲ್‌ಪಿಜಿ, ಶಿಕ್ಷಣ, ಮೂಲಸೌಕರ್ಯ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಇದರ ಜೊತೆಗೆ, ದೇಶೀಯ ಅಡುಗೆ ಅನಿಲವನ್ನು ಅಗ್ಗವಾಗಿಸಲು 30000 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಸಂಸ್ಥೆಗಳ ಮೂಲಸೌಕರ್ಯವನ್ನು ಬಲಪಡಿಸಲು 4200 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಸಭೆಯಲ್ಲಿ, ದೇಶೀಯ ಎಲ್‌ಪಿಜಿ ಮಾರಾಟದಲ್ಲಿನ ನಷ್ಟವನ್ನು ಸರಿದೂಗಿಸಲು ಮೂರು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್)…

Read More

ಬೆಂಗಳೂರು : ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ ಮಾಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿದರು. ರಾಹುಲ್ ಗಾಂಧಿ ಆರೋಪಗಳಿಗೆ ಅರವಿಂದ ಲಿಂಬಾವಳಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅವರು ಹೇಳಿಕೆ ಸ್ವಾಗತಿಸಬೇಕು ಏನು ಮಾತಾಡಬೇಕು ಗೊತ್ತಾಗುತ್ತಿಲ್ಲ. 2008ರಿಂದ ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಒಟ್ಟು ನಾಲ್ಕು ಬಾರಿ ಗೆದ್ದಿದೆ. ಮಹದೇವಪುರದಲ್ಲಿ ವಲಸಿಗೆರೆ ಹೆಚ್ಚು ಇದ್ದಾರೆ, ಹೀಗಾಗಿ ಮತದಾರರ ಸಂಖ್ಯೆ ಹೆಚ್ಚಳ ಆಗಿದೆ. ಮಹಾದೇವಪುರ ಕ್ಷೇತ್ರದಲ್ಲಿ ಒಂದೇ ಕಟ್ಟಡದಲ್ಲಿ 80 ಜನ ವೋಟರ್ಸ್ ವಾಸ ಮಾಡುತ್ತೀದ್ದಾರೆ. ರಾಹುಲ್ ಗಾಂಧಿ ಆರೋಪಕ್ಕೆ ಲಿಂಬಾವಳಿ ಇದೀಗ ತಿರುಗೇಟು ನೀಡಿದ್ದು, ಚುನಾವಣೆಯಲ್ಲಿ ಮತದಾನ ಮಾಡಿರುವವರೇ 6 ಜನ. ಆ ಕಟ್ಟಡದಲ್ಲಿ ವಾಸವಿರುವುದು ಹೋಟೆಲ್ ಸಿಬ್ಬಂದಿಗಳು ಉದ್ದಕ್ಕೂ ರೂಂಗಗಳಿವೆ ಅಲ್ಲಿ ವಾಸ ಮಾಡುತ್ತಿದ್ದಾರೆ. ಹೋಟೆಲ್ ಮಾಲೀಕರು ಅವರಿಗೆ ರೂಮ್ ಕೊಟ್ಟಿದ್ದಾರೆ. ಹೋಟೆಲ್ನಲ್ಲಿ ಕೆಲಸ ಮಾಡುವವರು ಮತ ಹಾಕಬಾರದು. ನಮ್ಮ ಬಳಿ ಇರುವ…

Read More

ಮಂತ್ರ ನಮ್ಮ ಕುಟುಂಬವು ಯಾವುದೇ ನ್ಯೂನತೆಗಳಿಂದ ಮುಕ್ತವಾಗಿರಲು ಮತ್ತು ಉತ್ತಮವಾಗಿರಲು ನಾವು ಪ್ರತಿಯೊಬ್ಬರೂ ಶ್ರಮಿಸುತ್ತಿದ್ದೇವೆ. ನಾವು ಎಷ್ಟೇ ಕಷ್ಟಪಟ್ಟು ದುಡಿದು ಸಂಪಾದಿಸಿದರೂ, ಕುಟುಂಬದಲ್ಲಿರುವ ಜನರು ಆರೋಗ್ಯವಾಗಿದ್ದರೆ ಮಾತ್ರ ನಾವು ಗಳಿಸುವ ಹಣವನ್ನು ಉತ್ತಮ ರೀತಿಯಲ್ಲಿ ಖರ್ಚು ಮಾಡಬಹುದು. ಇಲ್ಲದಿದ್ದರೆ, ನಾವು ಗಳಿಸುವ ಹಣದ ಅರ್ಧಕ್ಕಿಂತ ಹೆಚ್ಚು ವೈದ್ಯಕೀಯ ವೆಚ್ಚಗಳಿಗೆ ಹೋಗುತ್ತದೆ. ಈ ಪೋಸ್ಟ್‌ನಲ್ಲಿ, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ವೈದ್ಯಕೀಯ ವೆಚ್ಚಗಳಿಂದಾಗಿ ಗಳಿಸಿದ ಹಣವನ್ನು ಹೆಚ್ಚಾಗಿ ಕಳೆದುಕೊಳ್ಳುವವರು ವರಲಕ್ಷ್ಮಿ ವ್ರತದ ದಿನದಂದು ಪಠಿಸಬೇಕಾದ ಮಂತ್ರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…

Read More

ಬೆಂಗಳೂರು : ಕೃಷಿ ತೋಟಗಾರಿಕೆಯ 18 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲು ಸಂಪುಟ ಉಪ ಸಮಿತಿ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಳೆದ ವರ್ಷ 6.11 ಲಕ್ಷ ರೈತರಿಗೆ 135 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಈ ಬಾರಿ 7 ಲಕ್ಷ ರೈತರಿಂದ ಖರೀದಿ ಮಾಡಲಿದ್ದೇವೆ. ಸೆಪ್ಟೆಂಬರ್ ನಿಂದ ನೊಂದಣಿ ಕಾರ್ಯ ಪ್ರಾರಂಭ ಮಾಡಲಿದ್ದೇವೆ. ಮುಂದಿನ ಮಾರ್ಚ್ ವರೆಗೂ ಉತ್ಪನ್ನಗಳ ಖರೀದಿ ಮಾಡಲಿದ್ದೇವೆ. 4846 ರೂಪಾಯಿಗೆ ಕ್ವಿಂಟಾಲ ರಾಗಿ ಖರೀದಿ ಮಾಡಲಿದ್ದೇವೆ ಈ ಬಾರಿ 596 ರೂಪಾಯಿ ಹೆಚ್ಚಳ ಮಾಡಿದ್ದೇವೆ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

Read More

ತುಮಕೂರು : ತುಮಕೂರು ಜಿಲ್ಲೆಯ ಗೃಹ ಸಚಿವ ಜಿ ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊನೆಗೂ ಪೊಲೀಸರು ಶವದ ಜಾಡು ಹಿಡಿದು ಹೊರಟಾಗ ಸಹಜವಾಗಿ ಶಾಕ್ ಗೆ ಒಳಗಾಗಿದ್ದಾರೆ. ಹೌದು ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ. ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ತಾಲ್ಲೂಕಿನ ಒಟ್ಟು ಐದು ಕಡೆ ಎಸೆಯಲಾಗಿದೆ. ಚಿಂಪುಗಾನಹಳ್ಳಿ ಬಳಿ ಗುರುವಾರ ನಾಯಿಯೊಂದು ಪ್ಲಾಸ್ಟಿಕ್‌ ಕವರ್‌ ಎಳೆದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಪರಿಶೀಲಿಸಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು, ವಿವರ ಲಭ್ಯವಾಗಿಲ್ಲ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬ ಮಾಹಿತಿಯೂ ತಿಳಿದು ಬಂದಿಲ್ಲ. ರುಂಡ ಸೇರಿದಂತೆ ದೇಹದ ಇನ್ನೂ ಕೆಲವು ಭಾಗಗಳು ದೊರೆತಿಲ್ಲ. ಮೃತದೇಹದ…

Read More

ಶಿವಮೊಗ್ಗ : ಮತಗಳ್ಳತನ ಆರೋಪ ಮಾಡಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿರುವ ರಾಹುಲ್ ಗಾಂಧಿಯವರ ವಿಚಾರವಾಗಿ ಕಾಂಗ್ರೆಸ್‍ಗೆ ಮತಗಳ್ಳತನದ ಹಿನ್ನೆಲೆ ಬಹಳ ಹಿಂದಿನಿಂದಲೂ ಇದೆ. ರಾಹುಲ್ ಗಾಂಧಿಯವರ ಅಜ್ಜಿಯೇ ಇದರಿಂದ ಗೆದ್ದಿದ್ದರು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಮತಗಳ್ಳತನ ನಡೆದಿದೆ. ರಾಯ್‍ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಗಾಂಧಿ ಮತಗಳ್ಳತನದಿಂದ ಗೆದ್ದಿದ್ದರು. ಈಗ ರಾಹುಲ್ ಅವರು ಪ್ರಚಾರಕ್ಕಾಗಿ ಮತಗಳ್ಳತನದ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಯವರ ಸದಸ್ಯತ್ವ ರದ್ದು ಮಾಡಿತ್ತು. ಆಗ ಅವರು ಸುಪ್ರೀಂ ಕೋರ್ಟ್‍ಗೆ ಹೋಗಿದ್ದರು. ಅಲಹಾಬಾದ್ ಕೋರ್ಟ್ ತೀರ್ಪನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ಹೇಳಿದ್ರೂ ಅಧಿಕಾರದಿಂದ ಅವರು ಕೆಳಗೆ ಇಳಿಯಲಿಲ್ಲ. ತುರ್ತು ಪರಿಸ್ಥಿತಿ ಹೇರಿ ದಬ್ಬಾಳಿಕೆ ಮಾಡಿದ್ರು. ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದು ಕಾಂಗ್ರೆಸ್, ರಾಹುಲ್ ಇದನ್ನ ಅರ್ಥ ಮಾಡಿಕೊಳ್ಳಲಿ. 50 ವರ್ಷ ಆಗಿದೆ, ದೇಶದ ಜನರಿಗೂ ಮರೆತು ಹೋಗಿದೆ…

Read More

ನವದೆಹಲಿ : ಆರು ದಶಕಗಳಷ್ಟು ಹಳೆಯದಾದ 1961 ರ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಲು ಫೆಬ್ರವರಿ 13 ರಂದು ಲೋಕಸಭೆಯಲ್ಲಿ ಪರಿಚಯಿಸಲಾದ ಆದಾಯ ತೆರಿಗೆ ಮಸೂದೆ 2025 ಅನ್ನು ಸರ್ಕಾರ ಔಪಚಾರಿಕವಾಗಿ ಹಿಂತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಬೈಜಯಂತ್ ಪಾಂಡಾ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಮಾಡಿದ ಹೆಚ್ಚಿನ ಶಿಫಾರಸುಗಳನ್ನು ಒಳಗೊಂಡ ಆದಾಯ ತೆರಿಗೆ ಮಸೂದೆಯ ಹೊಸ ಆವೃತ್ತಿಯನ್ನು ಆಗಸ್ಟ್ 11 ರ ಸೋಮವಾರ ಮಂಡಿಸಲಾಗುವುದು. ಮಸೂದೆಯ ಬಹು ಆವೃತ್ತಿಗಳಿಂದ ಗೊಂದಲ ಉಂಟಾಗುವುದನ್ನು ತಪ್ಪಿಸಲು ಮತ್ತು ಎಲ್ಲಾ ಬದಲಾವಣೆಗಳೊಂದಿಗೆ ಸ್ಪಷ್ಟ ಮತ್ತು ನವೀಕರಿಸಿದ ಆವೃತ್ತಿಯನ್ನು ಒದಗಿಸಲು, ಆದಾಯ ತೆರಿಗೆ ಮಸೂದೆಯ ಹೊಸ ಆವೃತ್ತಿಯನ್ನು ಸೋಮವಾರ ಸದನದ ಪರಿಗಣನೆಗೆ ಪರಿಚಯಿಸಲಾಗುವುದು ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಾಜಿ ಸಂಸದೆ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಹಾಕಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಪ್ರಮುಖ A1 ಆರೋಪಿ ಪ್ರಮೋದ್ ಗೌಡ (18) ನನ್ನು ಇಂದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಆರ್ ಪುರಂ ಮೂಲದ ಪ್ರಮೋದನ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಮೋದ್ ಫ್ರೆಂಡ್ ಮೊಬೈಲ್ ನಲ್ಲಿ ಜಾಲತಾಣ ಓಪನ್ ಮಾಡಿದ್ದ. ಈ ವೇಳೆ ಪ್ರಮೋದ್ ಫ್ರೆಂಡ್ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಈ ಕುರಿತಂತೆ ನಟಿ ರಮ್ಯಾ ಬೆಂಗಳೂರು ಕಮಿಷನರ್ ಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಕಮಿಷನರ್ ಸಿಸಿಬಿಗೆ ವರ್ಗಾಯಿಸಿದರು. ಈ ವೇಳೆ ಸಿಸಿಬಿ ಸುಮಾರು 48 ಐಡಿ ಪತ್ತೆ ಮಾಡಿದ್ದು ಅದರಲ್ಲಿ ಈಗಾಗಲೇ ಹಲವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದೀಗ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವ ಪ್ರಮೋದ್ ಗೌಡನನ್ನು ಅರೆಸ್ಟ್ ಮಾಡಿದ್ದಾರೆ.

Read More