Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಹಿನ್ನಲೆ ಇಂಧನ ಉಳಿತಾಯ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಎಂಟು ಸಲಹೆಗಳಿಗೆ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವ್ಯಂಗ್ಯ ಮಾಡಿದ್ದಾರೆ. ಜನ ಸಾಮಾನ್ಯರಿಗೆ ಅಗತ್ಯವಾಗಿ ಬೇಕಾಗುವ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಅಂತಾರೆ. ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು ಎಂದು ಕುಟುಕಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಈ ಕೇಂದ್ರ ಸರ್ಕಾರ ಇರುವುದೇ ಶ್ರೀಮಂತರಿಗೆ ಪರವಾಗಿ, ತೈಲ ಕೊರತೆ ಇಲ್ಲ ಎಂದು ಪ್ರಧಾನಿ ಮೋದಿ ಬೋಗಳೆ ಹೊಡೆಯುತ್ತಿದ್ದರು, ಈಗ ಉಳಿತಾಯ ಮಾಡಿ ಅಂತಾರೆ, ರಸಗೊಬ್ಬರ ಬಳಕೆ ಕಡಿಮೆ ಮಾಡಿ ಅಂತಾರೆ. ಚುನಾವಣಾ ಸಮಯದ ನಾಲ್ಕು ತಿಂಗಳಲ್ಲಿ ಇವರಿಗೆ ಯಾವುದು ಗೊತ್ತಾಗಿಲ್ಲ, ದೊಡ್ಡ ರ‍್ಯಾಲಿ ಮಾಡಬಹುದು, ಹೊರ ದೇಶಕ್ಕೆ ಇವರು ಹೋಗಬಹುದು. ಆದರೆ ಇತರೆ ಜನರು ಏನು ಮಾಡಬಾರದು. ಮೊದಲು ವರ್ಕ್ ಫ್ರಮ್ ಹೋಮ್ ಕೆಲಸವನ್ನು ಪ್ರಧಾನಿ ಮೋದಿ ಮಾಡಬೇಕು ಎಂದು ತಿರುಗೇಟು ನೀಡಿದರು. ನೀಟ್ ಪ್ರಶ್ನೆ ಪತ್ರಿಕೆ…

Read More

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಮೂಲಕ ಮನೆಮಾತಾಗಿದ್ದ ಖ್ಯಾತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (47) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾ ಸಕ್ರಿಯರಾಗಿರುತ್ತಿದ್ದ ನಟನ ಹಠಾತ್ ಸಾವು ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಲೋಕಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಬೆಂಗಳೂರಿನಲ್ಲಿ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಲಿಂಗಾಯತ ಸಂಪ್ರದಾಯದಂತೆ ವಿದಾಯ: ದಿಲೀಪ್ ರಾಜ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನದ ನಂತರ ರಾಮನಗರ ತಾಲೂಕಿನ ಗುನ್ನೂರು ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಅಲ್ಲಿನ ಅವರ ಸ್ವಂತ ಫಾರ್ಮ್‌ಹೌಸ್ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು.ದಿಲೀಪ್ ರಾಜ್ ಅವರ ಸಹೋದರ ದೀಪಕ್ ರಾಜ್ ಎಲ್ಲ ವಿಧಿ ವಿಧಾನ ಪೂರೈಸಿದರು. ಕುಟುಂಬದ ಆಪ್ತರು ಮತ್ತು ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಅಂತಿಮ ವಿಧಿಗಳನ್ನು ಪೂರೈಸಿ, ಮಣ್ಣು ಮಾಡಲಾಯಿತು. 10 ವರ್ಷಗಳ ಹಿಂದೆ ನಟ ದಿಲೀಪ್ ರಾಜ್…

Read More

ನವದೆಹಲಿ : ಅಂತರಾಷ್ಟ್ರೀಯ ಸಂಚಾರ ಕಡಿತಗೊಳಿಸಿದ ಏರ್ ಇಂಡಿಯಾ ಸಂಸ್ಥೆ, ವಿಮಾನ ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯಿಂದ ಈ ಒಂದು ಕ್ರಮ ಕೈಗೊಳ್ಳಲಾಗಿದೆ ತಿಂಗಳಲ್ಲಿ 1,200 ಬಾರಿ ಏರ್ ಇಂಡಿಯಾ ವಿಮಾನ ಅಂತರಾಷ್ಟ್ರೀಯ ಸಂಚಾರ ನಡೆಸುತ್ತಿತ್ತು. ಇಂಧನದ ಏರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಚಾರದಲ್ಲಿ ಇದೀಗ ಕಡಿತಗೊಳಿಸಲಾಗಿದೆ. ಇಂಧನ ಬೆಲೆ ಏರಿಕೆ ಮತ್ತು ಆರ್ಥಿಕ ಹೊರೆ ಕಳೆದ ಕೆಲವು ತಿಂಗಳುಗಳಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ವಿಮಾನ ಇಂಧನ ದರವು ದುಪ್ಪಟ್ಟಾಗಿದೆ. ವಿಮಾನಯಾನ ಸಂಸ್ಥೆಯ ಒಟ್ಟು ನಿರ್ವಹಣಾ ವೆಚ್ಚದಲ್ಲಿ ಸುಮಾರು 40% ರಷ್ಟು ಪಾಲು ಇಂಧನಕ್ಕೇ ವ್ಯಯವಾಗುತ್ತಿದೆ. ಈ ಹೆಚ್ಚುವರಿ ವೆಚ್ಚವನ್ನು ಭರಿಸುವುದು ಸಂಸ್ಥೆಗೆ ಆರ್ಥಿಕವಾಗಿ ಹೊರೆಯಾಗುತ್ತಿರುವುದರಿಂದ, ಲಾಭದಾಯಕವಲ್ಲದ ಮಾರ್ಗಗಳಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಸಂಚಾರ ಕಡಿತದ ಪ್ರಮಾಣ ಮಾಹಿತಿಗಳ ಪ್ರಕಾರ, ಏರ್ ಇಂಡಿಯಾ ಈ ಮೊದಲು ಪ್ರತಿ ತಿಂಗಳು ಸುಮಾರು 1,200 ಬಾರಿ ಅಂತರಾಷ್ಟ್ರೀಯ ಹಾರಾಟ ನಡೆಸುತ್ತಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ…

Read More

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಹಿಂದೆ ಇದ್ದ 5% ಗೈಡೆನ್ಸ್ ವ್ಯಾಲ್ಯೂ ಶುಲ್ಕವನ್ನು ಈಗ ಕೇವಲ 2% ಕ್ಕೆ ಇಳಿಸಲಾಗಿದೆ. (ಉದಾಹರಣೆಗೆ: 5 ಲಕ್ಷ ರೂ. ಕಟ್ಟಬೇಕಿದ್ದ ಜಾಗದಲ್ಲಿ ಈಗ 2 ಲಕ್ಷ ರೂ. ಪಾವತಿಸಿದರೆ ಸಾಕು).ಈ ರಿಯಾಯಿತಿಯು ಕೇವಲ 100 ದಿನಗಳವರೆಗೆ ಮಾತ್ರ ಲಭ್ಯವಿರುತ್ತದೆ. ಈ ಅವಧಿಯ ನಂತರ ಶುಲ್ಕವು ಪುನಃ 5% ಕ್ಕೆ ಏರಿಕೆಯಾಗಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 15 ರಿಂದ ಆರಂಭವಾಗಲಿದೆ. ಇನ್ನೂ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ನಮ್ಮ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗೋಷ್ಠಿಯನ್ನು…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್​ವೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಸತೀಶ್ (53) ಅಕಾಲಿಕ ನಿಧನ ಹೊಂದಿದವರು ಎಂದು ತಿಳಿದುಬಂದಿದೆ. ಮಂಗಳವಾರ ತಡರಾತ್ರಿ ರಾತ್ರಿ 112 ತುರ್ತು ಸೇವಾ ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸತೀಶ್ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದೆ. ಇತರ ಸಿಬ್ಬಂದಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದವರಾದ ಇವರು, ಈ ಹಿಂದೆ ಭಾರತೀಯ ಸೇನೆಯಲ್ಲಿಯೂ 17 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಕಳೆದ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಹರಿಹರಪುರದಲ್ಲಿ ವಾಸವಿದ್ದ ಇವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯವರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಕೊಪ್ಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ.

Read More

ಮಂಗಳೂರು : ಮಂಗಳೂರಲ್ಲಿ ಹೈಡ್ರೋವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಸಿಎ ವಿದ್ಯಾರ್ಥಿನಿಯನ್ನು ಬಂಧಿಸಿ, 35ಲಕ್ಷ ರೂ‌. ಮೌಲ್ಯದ 1.42 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ, ಸದ್ಯ ಕುಂದಾಪುರ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುಹಾನ (21) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಮೇ 12ರಂದು ಮಾರಾಟ ಮಾಡಲೆಂದು ಸುಹಾನ ಹೈಡ್ರೋವೀಡ್ ಗಾಂಜಾವನ್ನು ಸಾಗಿಸುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆಯ ಪೊಲೀಸರು ತಂಡ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಅವಳ ಬಳಿ ಇದ್ದ ಸುಮಾರು 35 ಲಕ್ಷ ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೋವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ…

Read More

ದಕ್ಷಿಣಕನ್ನಡ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್​​ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಹೌದು ಮೃತ ಗೃಹಲಕ್ಷ್ಮಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ಹಣ ಜಮೆಯಾಗುತ್ತಿದ್ದು, ಮೃತಪಟ್ಟ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣವನ್ನು ಮರಳಿ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮರಣ ಹೊಂದಿದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ರೂ.22 ಕೋಟಿ ಅನುದಾನ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ರಾಜ್ಯ ಕಚೇರಿಯಿಂದ ತಿಳಿಸಿರುವ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿ, ಫಲಾನುಭವಿಗಳ ಖಾತೆಗೆ ಜಮೆಯಾಗಿರುವ…

Read More

ಬೆಂಗಳೂರು : ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತೇವೆ. ಒಟ್ಟು 7 ಲಕ್ಷ ಬಿ ಖಾತೆಗಳಿವೆ ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುತ್ತೇವೆ. ನಗರದಲ್ಲಿ ಕೆಲವರು ಪ್ಲಾನ್ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂಥವರ ಅನುಕೂಲಕ್ಕಾಗಿ ಈ ಅಭಿಯಾನ ಅಂದ್ಕೊಂಡಿದ್ದೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮೇ 16ರ ಬಳಿಕ ಪ್ರತಿ ಶನಿವಾರ ಜಾಗ ನಿಗದಿ ಮಾಡಿ ಅಭಿಯಾನ ಮಾಡುತ್ತೇವೆ ಶಾಲಾ ಆವರಣದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ 10 ಕಡೆ ಅಭಿಯಾನ ಮಾಡಲಾಗುತ್ತದೆ. ಅಧಿಕಾರಿಗಳು ರಜೆ ಇದ್ದರೂ ಕೂಡ ಕೆಲಸ ಮಾಡಬೇಕು. 7 ಲಕ್ಷ ಈ ಕಾತೆದಾರಿಗೆ ಇದರಿಂದ ಅನುಕೂಲ ಆಗಲಿದೆ. ಬಿ ಖಾತೆಯಿಂದ ಏ ಖಾತೆ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ. ಶೇಕಡ 2ಡಕ್ಕೆ ಗೈಡೆನ್ಸ್ ವ್ಯಾಲ್ಯೂ ಇಳಿಕೆ ಆಗಲಿದೆ. ಭೂ ಗ್ಯಾರಂಟಿ ನಮ್ಮ ಸರ್ಕಾರದ ಆರನೇ ಗ್ಯಾರಂಟಿ ಆಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು…

Read More

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತನಿಂದ ಹಲ್ಲೆಗೊಳಗಾದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೇ 10ರಂದು ಮಾರತ್ ಹಳ್ಳಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ನೇಹಿತ ರಾಮು ಎಂಬಾತನಿಂದ ಚಾಕು ಇರಿತಕ್ಕೊಳಗಾಗಿದ್ದ ಪರಶುರಾಮ ಎಲ್ಲಪ್ಪ ಮಂಗಳಗಟ್ಟಿ (25) ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಮೂಲದ ಪರಶುರಾಮ ಹಾಗೂ ರಾಮು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು. ಮಾರತ್ ಹಳ್ಳಿ ಠಾಣೆ ವ್ಯಾಪ್ತಿಯ ಚೌಡೇಶ್ವರಿ ರಸ್ತೆಯಲ್ಲಿನ ಬೆಸ್ಕಾಂ ಕಚೇರಿ ಬಳಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದರು. ಮೇ 10ರಂದು ನೈಟ್ ಶಿಫ್ಟ್ ಮುಗಿಸಿ, ಪಾನಮತ್ತನಾಗಿ ಬಂದಿದ್ದ ರಾಮು, ಪರಶುರಾಮನ ಮೊಬೈಲ್ ಫೋನ್ ಬಚ್ಚಿಟ್ಟಿದ್ದ. ಎಚ್ಚರವಾದ ಬಳಿಕ ‘ಮೊಬೈಲ್ ಎಲ್ಲಿಟ್ಟಿದ್ದೀಯಾ, ಕೊಡು’ ಎಂದು ಪರಶುರಾಮ ಕೇಳಿದ್ದ. ಈ ವೇಳೆ, ರಾಮು ಮೊಬೈಲ್ ಕೊಡಲ್ಲ ಎಂದಿದ್ದಕ್ಕೆ ಇಬ್ಬರ ನಡುವೆ ವಾಗ್ವಾದವಾಗಿತ್ತು. ಸಿಟ್ಡಿಗೆದ್ದ ರಾಮು, ಅಡುಗೆ ಕೋಣೆಯಿಂದ ಚಾಕು ತಂದು ಪರಶುರಾಮನಿಗೆ ಇರಿದಿದ್ದ. ಬಳಿಕ ಆತನ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದವನನ್ನು ಅಕ್ಕಪಕ್ಕದವರು…

Read More

ನವದೆಹಲಿ : ಮೇ 3 ರಂದು ದೇಶಾದ್ಯಂತ ನಡೆದಿದ್ದ ನೀಟ್ ಅರ್ಹತಾ ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿಯ NTA ಕಚೇರಿಯಲ್ಲಿದ್ದ ಅಧಿಕಾರಿಯನ್ನು ಅರೆಸ್ಟ್ ಮಾಡಲಾಗಿದೆ. NTA ಕೇಂದ್ರ ಕಚೇರಿಯಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದೆ ಸಿಬಿಐ ತಂಡ NTA ಕಚೇರಿಗೆ ನೇರವಾಗಿ ದಾಳಿ ಮಾಡಿದೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುದೀರ್ಘ ತನಿಖೆ ನಡೆಸುತ್ತಿರುವ ಸಿಬಿಐಗೆ, ಎನ್‌ಟಿಎ ಒಳಗಿನ ಸಿಬ್ಬಂದಿಯೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿತ್ತು. ಅದರಂತೆ ನಡೆಸಿದ ಕಾರ್ಯಾಚರಣೆಯಲ್ಲಿ ಕಚೇರಿಯ ಒಳಗಿದ್ದ ಅಧಿಕಾರಿಯನ್ನೇ ವಶಕ್ಕೆ ಪಡೆಯಲಾಗಿದ್ದು, ಇದು ಪರೀಕ್ಷಾ ವ್ಯವಸ್ಥೆಯೊಳಗಿನ ಭ್ರಷ್ಟಾಚಾರವನ್ನು ಬಯಲಿಗೆಳೆದಿದೆ. ಬಂಧಿತ ಅಧಿಕಾರಿಯು ಪ್ರಶ್ನೆ ಪತ್ರಿಕೆಗಳ ಭದ್ರತೆ ಅಥವಾ ವಿತರಣಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಈತ ಪತ್ರಿಕೆ ಸೋರಿಕೆ ಮಾಡುವ ಜಾಲದೊಂದಿಗೆ ನೇರ…

Read More