Author: kannadanewsnow05

ಬೆಂಗಳೂರು : 66 ವರ್ಷದ ಮಹಿಳೆಯೊಬ್ಬರು ತಮ್ಮ 73 ವರ್ಷದ ಪತಿಯ ವಿರುದ್ಧ ದಾಖಲಿಸಿದ್ದ ದ್ವಿಪತ್ನಿತ್ವ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಕೇವಲ ಸಂಬಂಧ ಹೊಂದಿರುವುದು ವಿವಾಹಕ್ಕೆ ಸಮನಾಗುವುದಿಲ್ಲ ಮತ್ತು ಆದ್ದರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 494 ರ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗುವುದಿಲ್ಲ ಎಂದು ಹೇಳಿದೆ. ದ್ವಿಪತ್ನಿತ್ವಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಒಬ್ಬ ವ್ಯಕ್ತಿಯು ತನ್ನ ಸಂಗಾತಿಯ ಜೀವಿತಾವಧಿಯಲ್ಲಿ ಇನ್ನೊಬ್ಬರನ್ನು ಮದುವೆಯಾದಾಗ ಅನ್ವಯಿಸುತ್ತದೆ. ಆ ವ್ಯಕ್ತಿಗೆ ಏಳು ವರ್ಷಗಳವರೆಗೆ ಕಠಿಣ ಅಥವಾ ಸರಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಮತ್ತು ದಂಡಕ್ಕೂ ಗುರಿಯಾಗಬೇಕಾಗುತ್ತದೆ. ನ್ಯಾಯಮೂರ್ತಿ ಆರ್ ನಟರಾಜ್ ಮಾರ್ಚ್ 3 ರಂದು ತಮ್ಮ ಆದೇಶದಲ್ಲಿ ಮಹಿಳೆಯ ದೂರಿನಲ್ಲಿ ಪತಿ ಮತ್ತು ಮಹಿಳೆ “ಅಕ್ರಮ ಸಂಬಂಧ”ದಲ್ಲಿ ವಾಸಿಸುತ್ತಿದ್ದಾರೆ ಎಂದು ಮಾತ್ರ ಉಲ್ಲೇಖಿಸಲಾಗಿದೆ ಎಂದು ಗಮನಿಸಿದರು. ಆದೇಶದಲ್ಲಿ, “ಐಪಿಸಿಯ 494 ರ ಅಡಿಯಲ್ಲಿ ಅಪರಾಧವು ಒಬ್ಬ ವ್ಯಕ್ತಿಯು ತನ್ನ ಸಂಗಾತಿಯ ಜೀವಿತಾವಧಿಯಲ್ಲಿ ಇನ್ನೊಬ್ಬರನ್ನು ಮದುವೆಯಾದಾಗ ಮಾತ್ರ ಆಕರ್ಷಿಸಲ್ಪಡುತ್ತದೆ ಎಂದು ಈಗ…

Read More

ರಾಯಚೂರು : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಯುವಕನನ್ನು ಆತನ ತಾಯಿಯ ಎದುರಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ. ಬುಳ್ಳಾಪುರದ ಪ್ರಾಣೇಶ್ (23) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ದಿನ್ನಿ ಗ್ರಾಮದ ಪ್ರಸಾದ್‌, ಮಲ್ಲೇಶ್, ಮಲ್ಲಿಕಾರ್ಜುನ್, ಅಮರೇಶ್‌ ಎಂಬುವವರಿಂದ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಪ್ರಸಾದ್ ಹೆಂಡತಿ ಮತ್ತು ಪ್ರಾಣೇಶ್ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಬುಳ್ಳಾದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ಕಳೆದ ಮೂರು ತಿಂಗಳಿನಿಂದ ಪ್ರಾಣೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದರು. ಪ್ರಾಣೇಶ್‌ ಇರುವುದನ್ನು ಖಚಿತಪಡಿಸಿಕೊಂಡು ಹಿಂದಿನಿಂದ ಬಂದ ಪ್ರಸಾದ್ ತಲೆಗೆ ಕೊಡಲಿಯಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಪ್ರಾಣೇಶ್ ನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಆರೋಪಿಗಳು ತಲೆ ಮರೆಸಿಕೊಂಡಿದ್ದು, ಇಡಪನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಜಮ್‌ಶೆಡ್‌ಪುರ : ಅದು ಮದುವೆ ಮನೆ ಎಲ್ಲರು ಮದ್ವೆ ಸಂಭ್ರಮದಲ್ಲಿ ಇದ್ದರು. ಆದರೆ ಅದೊಂದು ಘಟನೆ ಇಡಿ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಹೌದು ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ರಸಗುಲ್ಲಾ ಸೇವನೆಯು ವ್ಯಕ್ತಿಯೊಬ್ಬರ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದ ಘಟನೆ ಜಾರ್ಖಂಡ್‌ನ ಜಮ್‌ಶೆಡ್‌ಪುರ ಸಮೀಪದ ಮಲಿಯಂತ ಗ್ರಾಮದಲ್ಲಿ ನಡೆದಿದೆ. ರಸಗುಲ್ಲಾ ಗಂಟಲಲ್ಲಿ ಸಿಲುಕಿ ಲಲಿತ್ ಸಿಂಗ್ (41) ಎಂಬುವವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಶುಕ್ರವಾರ ತಡರಾತ್ರಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಲಲಿತ್ ಸಿಂಗ್ ಕೂಡ ಪಾಲ್ಗೊಂಡಿದ್ದರು. ಊಟದ ಸಮಯದಲ್ಲಿ ರಸಗುಲ್ಲಾ ತಿನ್ನುತ್ತಿದ್ದಾಗ, ಅದು ಅವರ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ಅವರಿಗೆ ತಕ್ಷಣವೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಸಿಂಗ್‌ ಅವರು ಉಸಿರಾಡಲು ಕಷ್ಟಪಡುತ್ತಿರುವುದನ್ನು ಕಂಡು ಅಲ್ಲಿದ್ದ ಅತಿಥಿಗಳು ಮತ್ತು ಸಂಬಂಧಿಕರು ಅವರ ಗಂಟಲಿನಲ್ಲಿ ಸಿಲುಕಿದ್ದ ರಸಗುಲ್ಲಾವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ ಆದರೆ, ಯಾವುದೇ ಪ್ರಯೋಜನವಾಗಲಿಲ್ಲ. ಅವರ ಸ್ಥಿತಿ ಗಂಭೀರವಾಗುತ್ತಿದ್ದಂತೆ ತಕ್ಷಣ ಅವರನ್ನು ಜಮ್‌ಶೆಡ್‌ಪುರದ ಎಂಜಿಎಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಪರಿಶೀಲಿಸಿದ ವೈದ್ಯರು ಅವರು…

Read More

ಬೆಂಗಳೂರು : ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ಹಾಗೂ ಮಂಗಳೂರಿನಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮನ ಮತ್ತು ಆಗಮಿಸಬೇಕಿದ್ದ ಒಟ್ಟು 24 ವಿಮಾನಗಳ ಹಾರಾಟ ಕ್ಯಾನ್ಸಲ್ ಆಗಿವೆ. ಕೆಂಪೇಗೌಡ ಏರ್​ಪೋರ್ಟ್​ನಿಂದ ನಿರ್ಗಮಿಸಬೇಕಿದ್ದ 11 ಫ್ಲೈಟ್​ಗಳು ಮತ್ತು ಅರಬ್ ದೇಶಗಳಿಂದ ಕೆಐಎಬಿಗೆ ಆಗಮಿಸಬೇಕಿದ್ದ 13 ಫ್ಲೈಟ್ ರದ್ದಾಗಿವೆ. ಅಬುದಾಬಿ, ರಿಯಾದ್, ಜಿಡ್ಡಾ, ಡಮಾಮ್, ದುಬೈ ಹಾಗೂ ದೋಹಾದಿಂದ ಕೆಐಎಬಿಗೆ ಆಗಮಿಸಿದ್ದ ವಿಮಾನಗಳು ಕ್ಯಾನ್ಸಲ್ ಆಗಿವೆ ಎನ್ನಲಾಗಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ…

Read More

ಬೆಂಗಳೂರು : ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 39.37 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. 39.37 ಲಕ್ಷ ಮೌಲ್ಯದ 1 ಕೆಜಿ 125 ಗ್ರಾಂ ಹೈಡ್ರೋಪೋನಿಕ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯು ಫೋಟೋ ಫ್ರೇಮ್ನಲ್ಲಿ ಅಡಗಿಸಿ ಬಿಟ್ಟು ಗಾಂಜಾ ಸಾಗಾಟ ಮಾಡುತ್ತಿದ್ದ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯ ಬಳಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಗಾಜಾ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. NDPS ಕಾಯ್ದೆಯ ಅಡಿ ಅಧಿಕಾರಿಗಳಿಂದ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಗ್ಯಾಸ್ ಸಿಲಿಂಡರ್ ಅಭಾವದ ನಡುವೆ ಇದೀಗ ಗ್ರಾಹಕರಿಗೆ ಕೇಂದ್ರ ಸರ್ಕಾರ ಇದೀಗ ಬಿಗ್ ಶಾಕ್ ನೀಡಿದೆ. PNG ಇದ್ದರೆ, ಎಲ್‌ಪಿಜಿ ಸರೆಂಡರ್ ಮಾಡುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೌದು ಮನೆಗಳಲ್ಲಿ ಪೈಪ್ಡ್ ನ್ಯಾಚುರಲ್ ಗ್ಯಾಸ್ ಸಂಪರ್ಕ ಹೊಂದಿದ ಗ್ರಾಹಕರು ಎಲ್‌ಪಿಜಿ ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಹಿಂತಿರುಗಿಸಬೇಕು ಎಂದು ಸೂಚನೆ ನೀಡಿದೆ. LPG ಸಿಲಿಂಡರ್ ಸಂಪರ್ಕವನ್ನು ಕಡ್ಡಾಯವಾಗಿ ಗ್ರಾಹಕರು ಹಿಂದಿರುಗಿಸಬೇಕು ಎಂದು ಪಿಎನ್‌ಜಿ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ಕೊಟ್ಟಿದೆ. ಎಲ್‌ಪಿಜಿ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಈ ಒಂದು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಸುಲಭವಾಗಿ ಸಿಲಿಂಡರ್ ಸಿಗುವಂತೆ ಮಾಡಲು ಈ ಒಂದು ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿನಲ್ಲಿ ಹೋಟೆಲ್ಗಳಲ್ಲಿ ಪ್ರತಿನಿತ್ಯ ಸಾವಿರ ಸಿಲಿಂಡರ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

Read More

ಬೆಂಗಳೂರು : ಕೇವಲ ಐವತ್ತು ಸಾವಿರ ಮಾಮೂಲಿ ಹಣಕ್ಕಾಗಿ ಕಿಡಿಗೇಡಿಗಳು ವ್ಯಕ್ತಿ ಒಬ್ಬರನ್ನು ಮಕ್ಕಳ ಎದುರಲ್ಲಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಮೆಕ್ಯಾನಿಕ್ ಆಗಿದ್ದ ರಶೀದ್ ಪಾಷಾ (45) ಕೊಲೆಗೀಡಾದ ವ್ಯಕ್ತಿ. ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಂಗಡಿಗೆ ಹೊಸ ಮೋಲ್ಡ್ ಹಾಕಿಸಿದ್ದ ರಶೀದ್ ಬಳಿ ಸ್ಥಳೀಯ ಕೆಲ ಕಿಡಿಗೇಡಿಗಳು ಭಾನುವಾರ ಬೆಳಗ್ಗೆ ಬಂದು ಐವತ್ತು ಸಾವಿರ ರೂಪಾಯಿ ತಮಗೆ ಕೊಡುವಂತೆ ಪೀಡಿಸಿದ್ದರು. ಆದರೆ ಹಣ ನೀಡಲು ರಶೀದ್ ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ. ಅದೇ ಜಿದ್ದಿನಲ್ಲಿ ರಾತ್ರಿ 8.30ರ ಸುಮಾರಿಗೆ ಮತ್ತೆ ಮೂವರು ಆರೋಪಿಗಳ ಗ್ಯಾಂಗ್ ಬಂದಿದೆ. ರಶೀದ್ ಅವರ ಇಬ್ಬರು ಮಕ್ಕಳ ಮುಂದೆಯೇ ಬ್ಯಾಟ್ ಮತ್ತು ಬೊಂಬಿನಿಂದ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ತೀವ್ರವಾಗಿ ಗಾಯಗೊಂಡಿದ್ದ ರಶೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.​ ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ. ಹಕೇ ಅವರು ಭೇಟಿ ನೀಡಿ…

Read More

ಬೆಂಗಳೂರು : ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೌದು ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್…

Read More

ಬೆಂಗಳೂರು ಮಾರ್ಚ್ 16: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವ್ಹಾಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ಕಳೆದ 70 ವರ್ಷಗಳಿಂದ ಎಲ್ಲಾ ಸರ್ಕಾರಗಳೂ ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ ಜನಪರ ಯೋಜನೆಗಳಿಗೆ ಮಂಜೂರು ಮಾಡಿದ್ದು, ಪ್ರಸ್ತುತ ಸ್ಮಶಾನಕ್ಕೂ ಭೂಮಿ ಇಲ್ಲದಂತಾಗಿದೆ” ಎಂದು ಬೇಸರ ಹೊರಹಾಕಿದರು. “ಕಳೆದ ಹತ್ತು ವರ್ಷಗಳಿಂದ ಎಲ್ಲಾ ಸರ್ಕಾರಗಳೂ ವಸತಿ ಪ್ರದೇಶಗಳಿಗೆ ಅವಶ್ಯ ಇರುವಷ್ಟು ಸ್ಮಶಾನ ಭೂಮಿ ನೀಡಬೇಕು ಎಂದು ಪ್ರಯತ್ನಿಸಿದೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ಸರ್ಕಾರದ ಬೆನ್ನುಹತ್ತಿದೆ. ಸರ್ಕಾರಿ ಜಮೀನು ಇದ್ದಲ್ಲಿ ಆ ಭೂಮಿಯನ್ನೇ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಸರ್ಕಾರಿ ಜಮೀನು ಇಲ್ಲದಿದ್ದ ಭಾಗಗಳಲ್ಲಿ ಸ್ಮಶಾನ ಭೂಮಿ ನೀಡುವ ಸಲುವಾಗಿ ಕಳೆದ…

Read More

ಬೆಂಗಳೂರು: ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಕೊನೆಗೂ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ. ಇಂದು ನಡೆದ ಮಹತ್ವದ ಸಭೆಯಲ್ಲಿ, ನಿಯಮಾನುಸಾರವಾಗಿ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದ್ದು, ಅಗತ್ಯ ಭದ್ರತೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಒಟ್ಟು 7 ಪಂದ್ಯಗಳಿಗೆ ಅವಕಾಶ ಸರ್ಕಾರದ ಈ ನಿರ್ಧಾರದಿಂದಾಗಿ ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ. ಆರ್ ಸಿಬಿ ತಂಡದ ಐದು ಪಂದ್ಯಗಳು, ಒಂದು ಪ್ಲೇ-ಆಫ್ ಹಾಗೂ ಹೈವೋಲ್ಟೇಜ್ ಫೈನಲ್ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೇಳಾಪಟ್ಟಿಗೆ ಅನುಗುಣವಾಗಿ ಮುಂದಿನ ಸಿದ್ಧತೆಗಳನ್ನು ಈಗಿನಿಂದಲೇ ಚುರುಕುಗೊಳಿಸಲಾಗಿದೆ. ತಜ್ಞರ ಸಮಿತಿ ವರದಿ ಆಧಾರಿತ ನಿರ್ಧಾರ ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ವಕ್ತಾರರು, “ಪಂದ್ಯಗಳ ಆಯೋಜನೆ ಕುರಿತು ಪರಿಶೀಲಿಸಲು ಗೃಹ ಸಚಿವರು ತಜ್ಞರ ಸಮಿತಿಯನ್ನು ರಚಿಸಿದ್ದರು. ಕಳೆದ ಶುಕ್ರವಾರ ಮೈದಾನಕ್ಕೆ…

Read More