Author: kannadanewsnow05

ಬೆಂಗಳೂರು : ಕನ್ನಡ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಹಲವಾರು ಸಂಕಷ್ಟ ಎದುರಾಗಿತ್ತು. ಇದೀಗ ಬಿಗ್ ಬಾಸ್ ಕನ್ನಡ ಶೋಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಅಕ್ಷೇಪರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಗೆ ದೂರು ನೀಡಲಾಗಿದೆ. ಹೌದು ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ಕಾರ್ಯಕ್ರಮದ ವೀಳೆ ರಣಹದ್ದುಗಳ ಬಗ್ಗೆ ಕಿಚ್ಚ ಸುದೀಪ್ ಆಕ್ಷೇಪ ಅರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಡಿ ಎಫ್ ಓ ರಾಮಕೃಷ್ಣಪ್ಪ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ. ಹೊಂಚು ಹಾಕಿ ಸಂಚು ಮಾಡಿ ಹಿಡಿಯುವುದು ಎಂಬ ಪದ ಬಳಕೆ ಮಾಡಿದ್ದಾರೆ. ರಣಹದ್ದು ಕುರಿತು ಬಿಗ್ ಬಾಸ್ ಶೋನಲ್ಲಿ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಹಾಗಾಗಿ ಸರಿಯಾದ ಮಾಹಿತಿಯನ್ನು ವೀಕ್ಷಕರಿಗೆ ತಿಳಿಸುವಂತೆ ಆಗ್ರಹಿಸಿದ್ದಾರೆ.

Read More

ತುಮಕೂರು : ಇಂದಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮ. ಸ್ವಲ್ಪ ಗದರಿದರೂ ಸಾಕು ಸಿಟ್ಟಿನಲ್ಲಿ ತಮ್ಮ ಜೀವಕ್ಕೆ ಆಪತ್ತು ತಂದುಕೊಳ್ಳುತ್ತಾರೆ. ಇದೀಗ ಶಾಲೆಗೆ ತಪ್ಪದೆ ಹೋಗು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾವಿಗೆ ಹಾರಿ 8ನೇ ತರಗತಿ ವಿದ್ಯಾರ್ಥಿ ಜಗದೀಶ್ (14) ಆತ್ಮಹತ್ಯೆ ಶರಣಾಗಿರುವ ಬಾಲಕ ಎಂದು ತಿಳಿದು ಬಂದಿದೆ.ಶಾಲೆಗೆ ತಪ್ಪದೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ಇದರಿಂದ ಬಾಲಕ ಮನನೊಂದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಚಿಕ್ಕನಾಯಕನಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕಾನೂನು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಒಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿಠಲ ರಾಠೋಡ್ (60) ಎನ್ನುವವರನ್ನು ಕೊಲೆ ಮಾಡಲಾಗಿದ್ದು ಹುಬ್ಬಳ್ಳಿಯ ನವನಗರ್ ಠಾಣೆ ಪೋಲಿಸರಿಂದ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮೇಘವ್ ಆತನ ಪತ್ನಿ ವಿಮಲ ಹಾಗೂ ಭಗವಾನ್ ಎಂದು ತಿಳಿದುಬಂದಿದೆ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ತಳ್ಳಿ ವಿಠಲ ರಾಠೋಡ್ನನ್ನು ಮೂವರು ಕೊಲೆ ಮಾಡಿದ್ದಾರೆ. ಕಟ್ಟಡದ ಮೇಲಿನಿಂದ ಬಿದ್ದು ಸಾವನಪ್ಪಿದ್ದಾರೆ ಎಂದು ಆರೋಪಿಗಳು ಬಿಂಬಿಸಿದ್ದರು. ವಿಚಾರಣೆ ಮಾಡಿದಾಗ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ನವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪತ್ನಿಗೆ ಪೊಲೀಸ್ ಕಾನ್ಸ್ಟೇಬಲ್ ನಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ ಚಿಟಗುಪ್ಪ ಮೂಲದ ಕಾನ್ಸ್ಟೇಬಲ್ ಮ ಕೇಂದ್ರ ವಿರುದ್ಧ ಈ ಒಂದು ಕಿರುಕುಳ ಆರೋಪ ಕೇಳಿ ಬಂದಿದೆ. ಬೀದರ ಜಿಲ್ಲೆಯ ಔರಾದ್ನಲ್ಲಿ ಮಚೇಂದ್ರ ಪತ್ನಿ ಸೀನಾ ಈ ಒಂದು ಆರೋಪ ಮಾಡಿದ್ದು ಬೆಂಗಳೂರಿನ ಮೈಕೋಲೇಔಟ್ ಟ್ರಾಫಿಕ್ ಠಾಣೆಯ ಪಿಸಿ ಆಗಿರುವ ಮಚೇಂದ್ರ ಮೃದ ಈ ಒಂದು ಆರೋಪ ಮಾಡಿದ್ದಾರೆ. ಮಕ್ಕಳು ಆಗಿಲ್ಲ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಮಚೇಂದ್ರ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ಆರೋಪ ಕೇಳಿಬಂದಿದೆ. ಮಾನಸಿಕ ಹಿಂಸೆ ನೀಡಿ ಜೀವ ಬಿದರಿಕೆ ಹಾಕಿದ್ದಾರೆ ವರದಕ್ಷಿಣೆ ಕೊಡದಿದ್ದರೆ ಅಕ್ಕನ ಮಗಳನ್ನು ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದಾರೆ ಈ ಬಗ್ಗೆ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಔರಾದ್ ತಾಲೂಕಿನ ಚಿಂತಾಕಿ ಠಾಣೆಯಲ್ಲೂ ಕೂಡ ಎಫ್ಐಆರ್ ದಾಖಲಾಗಿತ್ತು. ಆದರೂ ಕೂಡ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ ಸೇರಿ ಹಲವು ಆರೋಪಿಗಳು ಮನೆ ಊಟ ಬೇಕು ಎಂದು ಅರ್ಜಿ ಸಲ್ಲಿಸಿದರು.ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಈ ಒಂದು ಅರ್ಜಿಯ ವಿಚಾರಣೆ ನಡೆಸಿ ಪವಿತ್ರ ಗೌಡ, ನಾಗರಾಜ ಮತ್ತು ಲಕ್ಷ್ಮಣ್ಗೆ ವಾರಕ್ಕೊಮ್ಮೆ ಮನೆ ಊಟ ನೀಡಬೇಕು ಎಂದು ಆದೇಶ ಹೊರಡಿಸಿದೆ. ಮನೆ ಊಟಕ್ಕಾಗಿ ಪವಿತ್ರ ಗೌಡ ಸೇರಿದಂತೆ ಹಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇಂದು 57ನೇ ಸಿಸಿಎಚ್ ನ್ಯಾಯಾಲಯ ವಿಚಾರ ನಡೆಸಿ ಈ ಒಂದು ಆದೇಶ ನೀಡಿದ್ದು ದಿನನಿತ್ಯ ಮನೆ ಊಟಕ್ಕೆ ಜೈಲು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಆದೇಶವನ್ನು ಮಾರ್ಪಡಿಸಿದ್ದು ವಾರಕ್ಕೆ ಒಂದು ಬಾರಿ ಮನೆ ಊಟ ನೀಡಲು ಇದೀಗ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಮೂಲಕ ಪವಿತ್ರ ಗೌಡ ನಾಗರಾಜು ಮತ್ತು ಲಕ್ಷ್ಮಣ್ಗೆ ವಾರಕ್ಕೆ ಒಮ್ಮೆ ಮನೆ ಊಟ ಸಿಗುತ್ತದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಗೊಂದಲದ ವಿಚಾರವಾಗಿ ಸಂಕ್ರಾಂತಿ ಮರುದಿನವೇ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಜನವರಿ 16 ಹಾಗೂ ಜನವರಿ 22ರಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಪ್ರಯತ್ನಿಸುತ್ತಿದ್ದಾರೆ.ಜನಮರಿ 16ರಂದು ರಾಹುಲ್ ಗಾಂಧಿ ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚಿಸುವ ಸಾಧ್ಯತೆ ಇದ್ದು ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಂಬಂಧಪಟ್ಟಂತೆ ವೀಕ್ಷಕರ ಸಭೆಯ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಚರ್ಚಿಸುವ ಸಾಧ್ಯತೆ ಇದೆ. ಇದೆ ಸಂದರ್ಭದಲ್ಲಿ ರಾಜ್ಯದಲ್ಲಿ ಆಗುತ್ತಿರುವ ಗೊಂದಲಗಳ ಕುರಿತಂತೆ ರಾಹುಲ್ ಗಾಂಧಿ ಅವರ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 22ರಂದು ಕೂಡ ದೆಹಲಿಗೆ ಭೇಟಿ ನೀಡಲಿದ್ದಾರೆ. ತಿಂಗಳ ಅಂತ್ಯದ ವೇಳೆಗೆ ನಾಯಕತ್ವ ಗೊಂದಲಕ್ಕೆ ತೆರೆ ಬೀಳುವ ನಿರೀಕ್ಷೆ ಇದೆ. ನಾಯಕತ್ವ…

Read More

ಬೆಳಗಾವಿ : ಇತ್ತೀಚಿಗೆ ತಾನೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟದಿಂದ 7 ಜನ ಕಾರ್ಮಿಕರು ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ದುರಂತ ಸಂಭವಿಸಿದ್ದು ಸಕ್ಕರೆ ಕಾರ್ಖಾನೆ, ಕೃಷಿ ಬೆಲ್ಟ್ ನಲ್ಲಿ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಇರುವಂತಹ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಅಮೀನಾಭಾವಿ ಗ್ರಾಮದ ಕಾರ್ಮಿಕ ಸಚಿನ್ ದ್ಯಾಮಣ್ಣಿ (36) ಸಾವನ್ನಪ್ಪಿದ್ದಾರೆ ಕ್ರಶರ್ ನಲ್ಲಿ ಸುಣ್ಣ ಹಾಕುವಾಗ ಆಯತಪ್ಪಿ ಬಿದ್ದು ಸಚಿನ್ ಸಾವನ್ನಪ್ಪಿದ್ದರೆ. 10 ದಿನಗಳ ಹಿಂದೆ ದಿನಗೂಲಿ ಆಧಾರದ ಮೇಲೆ ಸಚಿನ್ ಕೆಲಸಕ್ಕೆ ಸೇರಿದ್ದರು. ಈ ಗುರುತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : BMRCL ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿಗ್ ಶಾಕ್ ನೀಡಲು ಮುಂದಾಗಿದೆ. ಈಗಾಗಲೇ ನಮ್ಮ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿರುವ ಬಿಎಮ್ಆರ್‌ಸಿಎಲ್ ಮತ್ತೆ ಟಿಕೆಟ್ ಪ್ರೈಸ್ ಏರಿಸಲು ಇದೀಗ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಹೌದು ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು BMRCL ಮುಂದಾಗಿದೆ.2025 ರಲ್ಲಿ 71% ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈಗ 5% ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ (FFC) ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ 5% ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ. ಕಳೆದ ವರ್ಷ 71% ದರವನ್ನು ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿ ದೇಶದ ಅತ್ಯಂತ ದುಬಾರಿ ಸೇವೆ ನೀಡುವ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಇದೀಗ ಮೆಟ್ರೋ ರೈಲು ನಿರ್ವಹಣೆ ಕಾಯ್ದೆ 2002 ರ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC…

Read More

ಬೆಂಗಳೂರು : ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ. ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಚುನಾವಣೆ ಅಧಿಕಾರಿಗಳು ಸಂಜೀವ್ ಸಹಾಯಕ ಚುನಾವಣೆ ಅಧಿಕಾರಿ ಶ್ರೀನಿವಾಸ್ ರವರು ಪ್ರಮಾಣಪತ್ರ ನೀಡಿದರು. ಅಧ್ಯಕ್ಷರಾದ ಎಂ.ಜಿ.ರಾಮಮೂರ್ತಿ. ನಂದಿಯಾಳ್ ಎಸ್ ಜೆ. ಬಾಮ ಗಿರೀಶ್. ಆರ್ ಎಸ್ ಗೌಡ್ರು. ರಮೇಶ್ ಯಾದವ್ ರವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ||ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದಾರೆ. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ. ನಿರ್ಮಾಪಕ ಹಾಕಿದ ಹಣ ವಾಪಸ್ಸು ಬರಬೇಕು. ಕೆಲವು ನಿರ್ಮಾಪಕರು ಆರ್ಥಿಕವಾಗಿ ಸಂಕಷ್ಟದಲ್ಲಿ ಇದ್ದಾರೆ ಅವರನ್ನ ಗುರುತಿಸಿ ನಿರ್ಮಾಪಕರ ಸಂಘದಿಂದ ಆರ್ಥಿಕವಾಗಿ ಸಹಾಯ ಮಾಡಬೇಕು ಎಂಬ ಉದ್ದೇಶವಿದೆ. ಕನ್ನಡ ಚಲನಚಿತ್ರ ಅನ್ಯ ಭಾಷೆಗಳ ನಡುವೆ ಪೈಪೋಟಿ ಇದೆ, ಕನ್ನಡ ಚಿತ್ರಗಳಿಗೆ ಜನರು ಚಿತ್ರಮಂದಿರಕ್ಕೆ ಬಂದು ನೋಡಿ, ನಿರ್ಮಾಪಕ, ನಿರ್ದೇಶಕ ಮತ್ತು ನಟ, ನಟಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

Read More

ಬೀದರ್ : ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನದಲ್ಲಿ ಬೀದರ್ ಮೂಲದ ಯುವಕನೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದ್ದು, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಹೌದು ಕರ್ನಾಟಕದ ಬೀದರ್‌ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ. ಸಫಿಲ್ಗುಡದಲ್ಲಿರುವ ಕಟ್ಟಾ ಮೈಸಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪ್ರವೇಶಿಸಿದ 26 ವರ್ಷದ ಅಲ್ತಾಫ್‌ ಈ ಕೃತ ಎಸಗಿದಾತ. ಆತ ಮೂತ್ರ ವಿಸರ್ಜನೆ ಮಾಡುತ್ತಿದ್ದನ್ನು ಗಮನಿಸಿದ ಕೆಲವರು ಆತನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆಕ್ರೋಶಗೊಂಡು ಥಳಿಸಿದ್ದಾರೆ. ಇದರ ವಿಡಿಯೋ, ಇಂಟರ್ನೆಟ್‌ನಲ್ಲಿ ವೈರಲ್‌ ಆಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿದ್ದು, ಬಿಎನ್‌ಎಸ್‌ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More