Author: kannadanewsnow05

ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಧ್ಯಾನ, ಜಪ ಮಾಡಿದ್ದಾರೆ. ಮಠದ ಶ್ರೀಗಳದ ಲಿಂಗೈಕ್ಯ ವೀರ ಗಂಗಾಧರ ಶ್ರೀಗಳ ಮಠಕ್ಕೆ ಇಂದು ಭೇಟಿ ನೀಡಿ ಧ್ಯಾನ ಜಪ ಮಾಡಿದರು. ಮುಕ್ತಿ ಮಂದಿರದ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ನೊಣವಿನ ಕೆರೆ ಶ್ರೀಗಳ ಅಣತಿಯಂತೆ ಅಜ್ಜಯ್ಯನ ದರ್ಶನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಶೀರ್ವಾದ ಪಡೆದು ಧ್ಯಾನ, ಜಪ ಮಾಡಿದರು. ಅಜ್ಜಯ್ಯನ ಹೆಸರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗಾಗಿ ನೊಣವಿನ ಕೆರೆ ಶ್ರೀಗಳ ಅಣತಿಯಂತೆ ಇದೀಗ ಅಧ್ಯಯನ ದರ್ಶನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಇನ್ನು ನೊಣವಿನಕೆರೆ ಶ್ರೀಗಳು ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಅನುವ ವಿಚಾರವಾಗಿ ಮಾತನಾಡಿದ ಅವರು, ನಾನು ಸದ್ಯ ಏನು ಮಾತನಾಡುವುದಿಲ್ಲ. ಇದಕ್ಕೆಲ್ಲ ಕಾಲ ಉತ್ತರ ಕೊಡುತ್ತದೆ. ನಾನು ಇಲ್ಲಿ ಕುಳಿತಿದ್ದೆ ಅಲ್ವಾ ಆ…

Read More

ಗದಗ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಧ್ಯಾನ, ಜಪ ಮಾಡಿದ್ದಾರೆ. ಮಠದ ಶ್ರೀಗಳದ ಲಿಂಗೈಕ್ಯ ವೀರ ಗಂಗಾಧರ ಶ್ರೀಗಳ ಮಠಕ್ಕೆ ಇಂದು ಭೇಟಿ ನೀಡಿ ಧ್ಯಾನ ಜಪ ಮಾಡಿದರು. ಮುಕ್ತಿ ಮಂದಿರದ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ನೊಣವಿನ ಕೆರೆ ಶ್ರೀಗಳ ಅಣತಿಯಂತೆ ಅಜ್ಜಯ್ಯನ ದರ್ಶನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಶೀರ್ವಾದ ಪಡೆದು ಧ್ಯಾನ, ಜಪ ಮಾಡಿದರು. ಅಜ್ಜಯ್ಯನ ಹೆಸರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗಾಗಿ ನೊಣವಿನ ಕೆರೆ ಶ್ರೀಗಳ ಅಣತಿಯಂತೆ ಇದೀಗ ಅಧ್ಯಯನ ದರ್ಶನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಇದೆ ವೇಳೆ ಮುಖ್ಯಮಂತ್ರಿ ಮಠದ ವಿಮಲರೇಣುಕಾ ವೀರಮುಕ್ತಿ ಮುನಿ ಶ್ರೀಗಳು ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಡಿಕೆ ಶಿವಕುಮಾರ್ ತಮ್ಮ ತನು ಮನವನ್ನು ಗುರುಗಳಿಗೆ ಅರ್ಪಣೆ ಮಾಡಿದ ಗುರುಗಳು ಸಹ ಅವರಿಗೆ ಹರಸಿ ಆಶೀರ್ವಾದ…

Read More

ಉತ್ತರಪ್ರದೇಶ : ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಬಳಿಕ ಪೊಲೀಸರಿಗೆ ಕರೆ ಮಾಡಿ ಹೆಣ್ಣುಮಕ್ಕಳನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಹೌದು 48 ವರ್ಷದ ಮೆಡಿಕಲ್ ರೆಪ್ ಶಶಿ ರಂಜನ್ ಮಿಶ್ರಾ ತನ್ನ 11 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆರೋಪಿ ಮತ್ತು ಆತನ ಪತ್ನಿ ರೇಷ್ಮಾ ಛೆಟ್ರಿ 2014 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಮೂಡಿತು. ಆರೋಪಿ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದ. ಎಷ್ಟರಮಟ್ಟಿಗೆ ಅಂದರೆ, ಮನೆಯ ಪ್ರತಿಯೊಂದು ಮೂಲೆಯಲ್ಲಿ ಹಾಗೂ ಮಲಗುವ ಕೋಣೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪತ್ನಿಯ ಮೇಲೆ ನಿಗಾ ಇಟ್ಟಿದ್ದ. ಅಲ್ಲದೇ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಶಿ ರಂಜನ್…

Read More

ಹಾಸನ : ಕಳೆದ 2 ದಿನಗಳ ಹಿಂದೆ ಮಂತ್ರಾಲಯದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಮತ್ತಿಬ್ಬರು ಸಾವಿಗೀಡಾಗುವ ಮೂಲಕ ಸಾವಿನ ಸಂಖ್ಯೆ 11ಕ್ಕೆ ಏರಿದೆ. ಮೃತರಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಇಬ್ಬರು ಸಂಬಂಧಿಕರೂ ಸೇರಿದ್ದಾರೆ. ಎ.16ರಂದು ಬೇಲೂರು ತಾಲೂಕು ಶೆಟ್ಟಿಗೆರೆ ಕುಟುಂಬದ 18 ಮಂದಿ ಮಂತ್ರಾಲಯಕ್ಕೆ ಪಯಣ ಬೆಳೆಸಿದ್ದರು. ಗೂಡ್ಸ್ ಮತ್ತು ಲಾರಿಯ ನಡುವೆ ಸಂಭವಿಸಿದ್ದ ಅಪಘಾತದಿಂದಾಗಿ ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದು, ಎ.17ರಂದು ಚಿಕಿತ್ಸೆ ಫಲಿಸದೆ ಬಾಲಕಿ ತೇಜಸ್ವಿನಿ (17) ಸಾವನ್ನಪ್ಪಿದ್ದರಿಂದ ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮತ್ತಿಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗುವ ಮೂಲಕ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಜಯಮ್ಮ (65), ಶುಭ (35) ಇಬ್ಬರೂ ಮಹಿಳೆಯರು ಮೃತಪಡುವ ಮೂಲಕ ಕುಟುಂಬದಲ್ಲಿ ಮತ್ತಷ್ಟು ಶೋಕ ಮಡುಗಟ್ಟಿದ್ದು, ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Read More

ಬೆಂಗಳೂರು : ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಲ್ಸ್ ತಾಪಮಾನ ಇದೀಗ ದಾಟಿದ್ದು, ರಾಜ್ಯದ 5ಕ್ಕೂ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದೆ. ಗದಗ, ರೈಚೂರು, ವಿಜಯಪುರ ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ 40 ಡಿಗ್ರಿ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಕೂಡ ದಿನದಿಂದ ದಿನಕ್ಕೆ ಉಷ್ಣಾಂಶ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 36 ಡಿಗ್ರಿ ಸೆಲ್ಸಿ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 36 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ 38 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಹಾವೇರಿ : ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿರೋಧಿ ಅಲ್ಲ ಎಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಮರು ವಿಂಗಡಣೆಗೆ ಮುಂದಾಗಿದ್ದರು ನಾವು ಮಹಿಳಾ ಮೀಸಲಾತಿ ವಿರೋಧ ಮಾಡುವುದಿಲ್ಲ ಕ್ಷೇತ್ರ ಪುನರ್ ವಿಂಗಡಣೆಗೆ ನಮ್ಮ ವಿರೋಧವಿದೆ ಎಂದು ತಿಳಿಸಿದರು. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ವಿರೋಧ ಮಾಡಿಲ್ಲ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ಪರವಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಯಾರು? ರಾಜೀವ್ ಗಾಂಧಿ ಅವಧಿಯಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡಲಾಗಿತ್ತು. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿ ಮಾಡಿದ್ದು ರಾಜೀವ್ ಗಾಂಧಿ. ಆಗ ಈ ಬಗೆ ಬಿಜೆಪಿಯವರು ಏನಾದರೂ ಆಗ್ರಹ ಮಾಡಿದ್ರಾ? ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ಮರು ವಿಂಗಡಣೆ ಜಾರಿಗೆ ಯತ್ನಿಸುತ್ತಿದ್ದಾರೆ. ಕ್ಷೇತ್ರ ಮರು ವಿಂಗಡಣೆ ಜಾರಿಗೆ ನಮ್ಮ ವಿರೋಧವಿದೆ ಅಷ್ಟೇ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೃಷಿಹೊಂಡದಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ಇಬ್ಬರು ಕಾರ್ಮಿಕರ ಸಾವನ್ನಪ್ಪಿರುವ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತರನ್ನು ರಮೇಶ್ (27) ಹಾಗೂ ಮಹೇಶ್ (34) ಎಂದು ತಿಳಿದುಬಂದಿದೆ ಕೃಷಿ ಹೊಂಡದ ಸಮೀಪ ಚಪ್ಪಲಿ ಪತ್ತೆಯಾದ ಹಿನ್ನೆಲೆಯಲ್ಲಿ, ಅಗ್ನಿ ಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಕೃಷಿ ಹೊಂಡದಲ್ಲಿ ಈಜಲು ಹೋಗಿ ರಮೇಶ್ ಮಹೇಶ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಲ್ ಎಂದು ಶಂಕಿಸಲಾಗಿದೆ. ಬನ್ನೂರಿನ ಕಾಫಿ ತೋಟದಲ್ಲಿ ರಮೇಶ್ ಮತ್ತು ಕೆಲಸ ಮಾಡುತ್ತಿದ್ದರು. ಕೊಪ್ಪ ತಾಲೂಕಿನ ಜಯಪುರ ಮೂಲದ ರಮೇಶ ಮತ್ತು ಮಹೇಶ್ ಎಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಸರ್ಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ ಆಧರಿಸಿ ಹೊಸ ತೆರಿಗೆ ವ್ಯವಸ್ಥೆ ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಇದರಿಂದ ವಿಸ್ಕಿ, ರಮ್ ಸೇರಿದಂತೆ ಸಾಮಾನ್ಯ ಮದ್ಯಗಳ ಬೆಲೆ ಕನಿಷ್ಠ ಶೇ.20ರಷ್ಟು ಹೆಚ್ಚಾಗಲಿದೆ. ಇದು ಕಡಿಮೆ ಆದಾಯ ವರ್ಗದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಹೊಸ ವ್ಯವಸ್ಥೆ ಜಾರಿಗೆ ಬಂದಲ್ಲಿ ಆಲ್ಕೋಹಾಲ್ ಇನ್ ಬೇವರೇಜ್ (AIB) ಆಧಾರಿತ ತೆರಿಗೆ ಜಾರಿಗೆ ತರುತ್ತಿರುವ ಭಾರತದ ಮೊದಲ ರಾಜ್ಯ ಕರ್ನಾಟಕವಾಗಲಿದೆ. ಸರ್ಕಾರವು ಆರು ದಶಕಗಳ ಹಳೆಯ ಮದ್ಯ ತೆರಿಗೆ ನೀತಿಯಲ್ಲಿ ತಿದ್ದುಪಡಿ ಮಾಡಲು ಶನಿವಾರ ಕರಡು ಅಧಿಸೂಚನೆ ಹೊರಡಿಸಿದ್ದು, ಇದು ಜಾರಿಯಾದಲ್ಲಿ ಆಲ್ಕೋಹಾಲ್-ಇನ್-ಬೇವರೇಜ್ (AIB) ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಪಾಶ್ಚಾತ್ಯ ದೇಶಗಳಲ್ಲಿ ಈ ವ್ಯವಸ್ಥೆ ಇದ್ದರೂ, ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಮದ್ಯದ ಪ್ರಮಾಣದ ಬದಲಿಗೆ ಅದರಲ್ಲಿನ ನಿಜವಾದ ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸುವ ಕ್ರಮಕ್ಕೆ ರಾಜ್ಯ ಮುಂದಾಗಿದೆ. ಈಗಾಗಲೇ MRP…

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇರುವ ಶಾಂತಿನಗರದ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 10 ಎಕರೆಗೂ ಅಧಿಕಾರಿ ಅರಣ್ಯ ಪ್ರದೇಶ ಇದೀಗ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಜ್ವಾಲೆ ವೇಗವಾಗಿ ಹರಡಿದ್ದರಿಂದ ಸುಮಾರು 10 ಎಕರೆಗೂ ಅಧಿಕ ಅರಣ್ಯ ಪ್ರದೇಶವು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯದಲ್ಲಿದ್ದ ಅಪಾರ ಪ್ರಮಾಣದ ಗಿಡಮೂಲಿಕೆಗಳು ಮತ್ತು ಸಸ್ಯಸಂಕುಲ ನಾಶವಾಗಿದ್ದು, ವನ್ಯಜೀವಿಗಳಿಗೂ ಸಂಕಷ್ಟ ಎದುರಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.

Read More

ಮೈಸೂರು : ರಾಜ್ಯದಲ್ಲಿ ಈಗಾಗಲೇ ಕೆಲವು ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರ ಜೊತೆಗೆ ಸಚಿವ ಸ್ಥಾನ ನೀಡುವ ಕುರಿತು ಸಚಿವ ಸಂಪುಟ ಪುನಾರಚನೆ ಮಾಡುವಂತೆ ಚರ್ಚೆ ಮಾಡಿದ್ದರು. ಈ ವಿಚಾರ ಒಂದು ಕಡೆ ಆದರೆ ಇದೀಗ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಒಬ್ಬರು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು ನನಗೆ ವಿಧಾನ ಪರಿಷತ್ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದು ಪತ್ರ ಬರೆದಿದ್ದಾರೆ. ಹೌದು ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾರ್ಯಕರ್ತ ಮೈಸೂರು ಬಸವಣ್ಣ ಪತ್ರ ಬರೆದಿದ್ದಾರೆ. ಇದೀಗ ಇವರು ಪತ್ರ ಬರೆಯುತ್ತಿರುವುದು ಮೊದಲನೇ ಬಾರಿ ಏನಲ್ಲ ಸತತ ನಾಲ್ಕನೇ ಬಾರಿಗೆ ಬಸವಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಲವಾರು ವರ್ಷಗಳಿಂದ ನಾನು ಸೇವೆ ಸಲ್ಲಿಸುತ್ತಿದ್ದೇನೆ ಆದರೂ ನನಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ ಮೈಸೂರು…

Read More