Author: kannadanewsnow05

ಬೆಂಗಳೂರು : ಒಳ ಮೀಸಲಾತಿ ಹಂಚಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಇದೀಗ ನಿರ್ಧಾರ ತೆಗೆದುಕೊಳ್ಳಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ದಲಿತ ಎಡಗೈ 5.25 ಮತ್ತು ಬಲಗೈ 5.25 ಹಾಗೂ ಇತರರಿಗೆ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ವರ್ಗ ನಿಗದಿಪಡಿಸಲಾದ ಮೀಸಲಾತಿ ಪ್ರಮಾಣ ಎಡಗೈ ಸಮುದಾಯ (SC-Left) 5.25% ಬಲಗೈ ಸಮುದಾಯ (SC-Right) 5.25% ಇತರ ಪರಿಶಿಷ್ಟ ಜಾತಿಗಳು (Others/Touchables) 4.5% ಈ ನಿರ್ಧಾರದ ಪ್ರಾಮುಖ್ಯತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಸಾಮಾಜಿಕ ನ್ಯಾಯ: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆಯಾಗಬೇಕು ಎಂಬ ಎಡಗೈ ಸಮುದಾಯದ ಬೇಡಿಕೆಯನ್ನು ಈ ನಿರ್ಧಾರವು ಬಹುಮಟ್ಟಿಗೆ ಈಡೇರಿಸಿದೆ. ಸುಪ್ರೀಂ ಕೋರ್ಟ್ ಹಸಿರು ನಿಶಾನೆ: ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರವಿದೆ…

Read More

ಬೀದರ್ : ಬೀದರ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ತಾಯಿ ಒಬ್ಬರು ಜನ್ಮ ನೀಡಿದ್ದಾರೆ. ಬಸಮ್ಮ ಎನ್ನುವವರು ಎರಡನೇ ಹರಿಗೆಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಸಮ್ಮ, ಇದೀಗ 2 ವರ್ಷದ ಬಳಿಕ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಕ್ಕಳು ಇಬ್ಬರು ಸಹ ಆರೋಗ್ಯವಾಗಿದ್ದಾರೆ.

Read More

ನವದೆಹಲಿ : ದೇಶದ ರಾಜಕೀಯ ವಲಯದಲ್ಲಿ ಇಂದು ಭಾರಿ ಸಂಚಲನ ಸೃಷ್ಟಿಯಾಗಿದ್ದು, ಆಮ್ ಆದ್ಮಿ ಪಕ್ಷದ (AAP) ಪ್ರಭಾವಿ ನಾಯಕ ಹಾಗೂ ಸಂಸದ ರಾಘವ್ ಚಡ್ಡಾ ಅವರು ಕೇಸರಿ ಪಡೆಗೆ ಸೇರ್ಪಡೆಯಾಗುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಶೀಘ್ರದಲ್ಲೇ ಭಾರತೀಯ ಜನತಾ ಪಾರ್ಟಿ (BJP) ಸೇರುವುದಾಗಿ ತಿಳಿಸುವ ಮೂಲಕ ತಮ್ಮ ಹಳೆಯ ಪಕ್ಷಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಇನ್ನು ಅವರ ಜೊತೆಗೆ ಸಂದೀಪ ಪಾಠಕ್, ಅಶೋಕ್ ಮಿತ್ತಲ್, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತ ವಿಕ್ರಂ ಸಹ್ನೇ, ಸ್ವಾತಿ ಮಲಿವಾಲ್ ಕೂಡ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಬಿಜೆಪಿ ಆಪರೇಷನ್ ಕಮಲ ಸಕ್ಸಸ್ ಆಗಿದೆ. ಇತ್ತೀಚಿಗಷ್ಟೇ ರಾಘವ ಚಡ್ದ ಹಾಗೆ ಆಪ್ ಪಕ್ಷದಿಂದ ನಿರ್ಬಂಧ ಹೇರಲಾಗಿತ್ತು. ಸಂಸತ್ ನಲ್ಲಿ ಮಾತನಾಡದಂತೆ ಆಪ್ ಪಕ್ಷ ರಾಘವ ಛಡ್ಡಾ ಅವರಿಗೆ ನಿರ್ಬಂಧಿಸಿತ್ತು. ಹಾಗಾಗಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಜೊತೆಗೆ ಇನ್ನು ನಾಲ್ವರು ಸಂಸದರು ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ…

Read More

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಬಹುದೊಡ್ಡ ರಾಜಕೀಯ ಬೆಳವಣಿಗೆಯಾಗಿದ್ದು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ರಾಘವ ಛಡ್ಡಾ ಅವರು ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಜೊತೆಗೆ ಆಪ್ ಪಕ್ಷದ ಸಂಸದರಾದ ಸಂದೀಪ್ ಪಾಠಕ್ ಅಶೋಕ್ ಮಿತ್ತಲ್ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೌದು ರಾಘವ್ ಚಡ್ಡಾ ಅವರು ಆಮ್ ಆದ್ಮಿ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ. ಈ ಕ್ರಮವು ರಾಜ್ಯಸಭೆಯಲ್ಲಿ ಎಎಪಿಯ ಬಲವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಎಎಪಿ ತನ್ನ ಸ್ಥಾಪನಾ ತತ್ವಗಳಿಂದ ದೂರ ಸರಿದಿದೆ ಎಂದು ಛಡ್ಡಾ ಹೇಳಿದ್ದಾರೆ. ಇತರ ಅನೇಕ ಎಎಪಿ ರಾಜ್ಯಸಭಾ ಸದಸ್ಯರು ಸಹ ಬಿಜೆಪಿಗೆ ಸೇರಬಹುದು ಎಂದು ಮೂಲಗಳು ಸೂಚಿಸುತ್ತವೆ. ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. “ಪಕ್ಷದ ಸಹೋದ್ಯೋಗಿಗಳಾದ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಸಂಸದ ರಾಘವ್…

Read More

ತುಮಕೂರು : ಮೇ 5 ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಸ್ಫೋಟಕವಾದ ಭವಿಷ್ಯ ನುಡಿದರು. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡೆ ನೋಡಿದರೆ ಸರ್ಕಾರ ಕ್ರಾಂತಿಗೆ ಒಳಗಾಗುತ್ತದೆ. ಪಂಚರಾಜ್ಯ ಚುನಾವಣೆಯ ನಂತರ ರಾಜಕೀಯದಲ್ಲಿ ಬದಲಾವಣೆ ಆಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ ಪರಮೇಶ್ವರ್ ಅವರು ಸಹ ರೇಸ್ನಲ್ಲಿ ಇದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಮುಖ್ಯಮಂತ್ರಿ ರೇಸ್ನಲ್ಲಿ ಇದ್ದಾರೆ. ಅತ್ತ ಎಂಬಿ ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ ಡಿಕೆ ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ಮೈತ್ರಿಕೂಟ 175 ಸ್ಥಾನ ಗೆಲ್ಲುತ್ತದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದರು.

Read More

ತುಮಕೂರು : ಇಂದಿನಿಂದ ಮೂರು ದಿನಗಳ ಕಾಲ ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಅಂಡರ್ 20 ಕ್ರೀಡಾಕೂಟ ನಡೆಯಲಿದೆ. ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಇಂದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಆದರೆ ಕ್ರೀಡಾಂಗಣದ ಶೌಚಾಲಯದಲ್ಲಿ ಇದೀಗ ಸೂಜಿ ಮತ್ತು ಸಿರಿಂಜ್ ಪತ್ತೆಯಾಗಿದ್ದು ಈ ಒಂದು ಸೂಜಿ ಮತ್ತು ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ. ಕ್ರೀಡೆ ಆರಂಭವಾದ ಮೊದಲ ದಿನವೇ ಸೂಜಿ ಮತ್ತು ಸಿರಿಂಜ್ ಗಳು ಪತ್ತೆಯಾಗಿವೆ. ಕ್ರೀಡಾಪಟುಗಳಿಂದ ಉತ್ತೇಜಕ ಮದ್ದು ಸೇವನೆ ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಇಂದು ಬೆಳಿಗ್ಗೆ ಕ್ರೀಡಾಕೂಟಕ್ಕೆ ಸಚಿವ ಜಿ ಪರಮೇಶ್ವರ್ ಚಾಲನೆ ನೀಡಿದರು. ದೇಶದ 28 ರಾಜ್ಯಗಳಿಂದ 1500ಕ್ಕೂ ಹೆಚ್ಚು ಕ್ರೀಡಾಪಟುಗಳು ಇದರಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಆಯ್ಕೆ ಆಗುವವರು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಇದೆ. ಇಂದು ಬೆಳಿಗ್ಗೆ 1,500 ಮೀಟರ್ ಊಟ ಜಾವೆಲಿನ್ ಎಸೆತ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕ್ರೀಡಾ ಸ್ಪರ್ಧೆಗಳು ನಡೆದಿದೆ. ಇದರ ಬೆನ್ನಲ್ಲೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್…

Read More

ಬೆಂಗಳೂರು : ಬೆಂಗಳೂರಲ್ಲಿ ಯುವಕನಿಗೆ ಯುವತಿಯರು ಹಲ್ಲೆ ಮಾಡಿದ್ದಾರೆ ಅದಕ್ಕೆ ಕಾರಣ ಪಬ್ ನಲ್ಲಿ ಯುವಕ ಯುವತಿಗೆ ಕಿರುಕುಳ ನೀಡಿದ್ದ. ಬಳಿಕ ಆತ ಪಬ್ ನಿಂದ ಹೊರಗೆ ಬಂದ ಬಳಿಕ ಯುವತಿಯರು ಆತನಿಗೆ ಥಳಿಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಿನ ಕೋರಮಂಗಲದಲ್ಲಿ ಯುವಕನಿಗೆ ಯುವತಿಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಡು ರಸ್ತೆಯಲ್ಲಿಯೇ ಯುವತಿಯರು ರಂಪಾಟ ಮಾಡಿದ್ದಾರೆ. ಪೊಲೀಸರ ಎದುರೇ ಯುವಕನ ಮೇಲೆ ಯುವತಿಯರು ಅಟ್ಯಾಕ್ ಮಾಡಿದ್ದಾರೆ. ಯುವಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು ಒಬ್ಬನಿಂದ ಹೊರಗೆ ಬಂದಾಗ ಯುವತಿಯರು ಹಲ್ಲೆ ಮಾಡಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಜನಿವಾರ ದಂಗಲ್ ಶುರುವಾಗಿದೆ, ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ 5ಕ್ಕೂ ಅಧಿಕ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿಬಂದಿದೆ. ಹೌದು ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ಆನಂದ್ ಸುಧೀರ್ ರಾವ್ ಎಂಬ ವಿದ್ಯಾರ್ಥಿ ಸೇರಿದಂತೆ ಐದಕ್ಕೂ ಹೆಚ್ಚು ಮಕ್ಕಳ ಜನಿವಾರ ತೆಗೆಸಿದ್ದಾರೆ. ಹಿಡಿದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಷಕರು ಕಾಲೇಜ್ ವಿರುದ್ಧ ದೂರು ದಾಖಲಿಸಿದ್ದಾರೆ ಈ ವೇಳೆ ವಿದ್ಯಾರ್ಥಿ ತಗೆಯಲ್ಲ ಅಂತ ಹೇಳಿದಕ್ಕೆ ಮನೆಗೆ ವಾಪಸ್ ಹೋಗಿ ಅಂದಿದ್ದಾರೆ. ಅದಕ್ಕೆ ಕೊನೆಗೆ ಪೋಷಕರು ಮಗನ ಭವಿಷ್ಯದ ದೃಷ್ಠಿಯಿಂದ ಜನಿವಾರ ತಗೆದು ಪರೀಕ್ಷೆ ಕೇಂದ್ರಕ್ಕೆ ಕಳಸಿದ್ದಾರೆ. ವಿವಾದವಾದ ಬೆನ್ನಲ್ಲೇ ಇದರ ಬೆನ್ನಲ್ಲೇ ಕಾಲೇಜಿಗೆ ತಹಶೀಲ್ದಾರ್, ಶಿಕ್ಷಣಾಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ. ಪೋಷಕರ ಮನವೊಲಿಸಿ ಎಲ್ಲೂ ಈ ಬಗ್ಗೆ ಹೇಳದ್ದಂತೆ ಒತ್ತಾಯ ಮಾಡಿ ಲೆಟರ್ ಹಾಕಿಸಿಕೊಂಡಿದ್ದರು. ಇಂದು ಅದೇ ಕಾಲೇಜು ಸಿಬ್ಬಂದಿ ಪೋಷಕರಿಗೆ ಕ್ಷಮೆ ಕೇಳಿ, ಜನಿವಾರ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಇನ್ನು…

Read More

ಬೆಂಗಳೂರು : ಬಿಜೆಪಿ ನಾಯಕನ ಪುತ್ರನ ವಿರುದ್ಧ ಪ್ರೀತಿಸಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ ಅರ್ಜಿ ವಿತರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಆರೋಪಿಯ ದೈಹಿಕ ಸಂಪರ್ಕದಿಂದ ಯುವತಿಗೆ ಮಗುವಾಗಿದೆ. 10 ತಿಂಗಳ ಮಗು ತಾಯಿಯನ್ನು ಅನಾಥವನ್ನಾಗಿಸುವುದು ಬೇಡ. ಮಗು ಹಾಗು ತಾಯಿಗೆ ಮಾಸಿಕ 75,000 ರೂಪಾಯಿ ಪಾವತಿಸಲು, ಮುಂದಿನ ಆದೇಶದವರೆಗೂ ತಿಂಗಳಿಗೆ 75,000 ಪಾವತಿಸಲು ಅರ್ಜಿದಾರ ಕೃಷ್ಣ ಜೆ. ರಾವ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಸಂಬಂಧಿಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದಂತೆ ಸೂಚನೆ ನೀಡಿತು. ಷರತ್ತಿನ ಮೇರೆಗೆ ಕೃಷ್ಣ ಜಯರಾ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

Read More

ಉಡುಪಿ : ಉಡುಪಿಯಲ್ಲಿ ಘೋರ ಘಟನೆ ನಡೆದಿದ್ದು, ಮರದಲ್ಲಿ ಮಾವಿನಕಾಯಿ ಕೀಳುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಹಿಂಬಾಗದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅಲೆವುರು ನಿವಾಸಿ ಸದಾನಂದ ದೇವಾಡಿಗ (55) ಎಂದು ತಿಳಿದು ಬಂದಿದೆ. ಗ್ರಾಮ ಸಹಾಯಕನಾಗಿ ಸದಾನಂದ ದೇವಾಡಿಗ ಕೆಲಸ ಮಾಡುತ್ತಿದ್ದರು. ಮಾವಿನ ಕಾಯಿ ಕೀಳುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ ಸಂಭವಿಸಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More