Author: kannadanewsnow05

ಮಂಡ್ಯ : ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಕೊಲೆಯಾದವರು. ಸಿದ್ದಲಿಂಗಪ್ಪನ ಪತ್ನಿ ಶಾಲಿನಿ (32), ಮರಳಗಾಲ ಗ್ರಾಮದ ಹರೀಶ (33), ಸಂತೋಷ್ ಕುಮಾರ್ (29) ಮತ್ತು ಗಣೇಶ ಬಿ.ಆ‌ರ್. ಬಿನ್ ಲೇಟ್ ರಾಮಸಿದ್ದು (29) ಕೊಲೆ ಪ್ರಕರಣದ ಬಂಧಿತ ಆರೋಪಿಗಳಾಗಿದ್ದಾರೆ. ಮಾ.6ರಂದು ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರು ಕೆ.ಶೆಟ್ಟಹಳ್ಳಿ ಗಣಪತಿ ದೇವಸ್ಥಾನಕ್ಕೆ ಪೂಜೆಗೆ ಹೋಗಿ ರಾತ್ರಿ ಮನೆಗೆ ಬಾರದೇ ಇದ್ದಾಗ ಮತ್ತು ಫೋನ್​ ಸ್ವಿಚ್ ಆಫ್ ಆಗಿದ್ದರಿಂದ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ರಾತ್ರಿ ಸಿಡಿಎಸ್ ಕಾಲುವೆಯ ತೂಬಿನ ಹತ್ತಿರದ ರಸ್ತೆಯಲ್ಲಿ ಆರ್ಚಕ ಸಿದ್ದಲಿಂಗಪ್ಪನ ಚಪ್ಪಲಿ ಮತ್ತು ಪಕ್ಕದ ಹುಲ್ಲಿನ ಮೇಲೆ ರಕ್ತ ಚೆಲ್ಲಿದ್ದು, ಅಕ್ಕಪಕ್ಕದಲ್ಲಿ ಅರ್ಚಕ ಧರಿಸುತ್ತಿದ್ದ ರುದ್ರಾಕ್ಷಿಮಣಿ ಸ್ಪಟಿಕಮಣಿ ಸರ, ಅದರಲ್ಲಿದ್ದ ಡಾಲರ್‌ಗಳು ಬಿದ್ದಿದ್ದವು. ಶಾಲಿನಿ ಹಾಗೂ…

Read More

ಮಂಗಳೂರು : ಚೀನಾ ಸೈಬರ್ ವಂಚಕರಿಗೆ ಜನಸಾಮಾನ್ಯರ ಬ್ಯಾಂಕ್ ಅಕೌಂಟ್ ಗಳ ಮಾಹಿತಿಗಳನ್ನು ನೀಡುತ್ತಿದ್ದ ಇಬ್ಬರು ಸೈಬರ್ ವಂಚಕರನ್ನು ಮಂಗಳೂರಲ್ಲಿ ಸೈಬರ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ರಾಜ್ಯ ಸೈಬರ್ ಕಮಾಂಡ್ ಯೂನಿಟ್​ನಿಂದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ‌ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್‌ಗಳು, 18 ಬಿಟ್ ಕಾರ್ಡ್‌ಗಳು, 17 ಬ್ಯಾಂಕ್ ಪಾಸ್‌ಬುಕ್‌ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ) 1 ಕಾರನ್ನು ವಶಕ್ಕೆ ಪಡೆಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ…

Read More

ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧ ಆಗುತ್ತಿದೆ. ಪೆಟ್ರೋಲ್, ಗ್ಯಾಸ್ ಬರುತ್ತಿಲ್ಲ. ಮನೆಬಳಕೆ ಸಿಲಿಂಡರ್​​ಗೆ ಸಮಸ್ಯೆ ಇಲ್ಲ. 28 ದಿನದ ಉಪಯೋಗಕ್ಕೆ ಕೊಡುತ್ತೇವೆ. ಸಿಲಿಂಡರ್ ಸ್ಟೋರೇಜ್​ಗೆ ಅವಕಾಶವಿಲ್ಲ. ಒಂದು ವೇಳೆ ಮಾಡಿದರೆ ಕ್ರಮ‌ ಜರುಗಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ವಿಧಾನಸಭೆಯಲ್ಲಿಂದು ವಾಣಿಜ್ಯ ಎಲ್​ಪಿಜಿ ಕೊರತೆ ತೀವ್ರ ಸದ್ದುಗದ್ದಲಕ್ಕೆ ಕಾರಣವಾಯಿತು. ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ಸಾಕ್ಷಿಯಾಯಿತು. ನಾನು ಬೆಳಗ್ಗೆಯೇ ತೈಲ‌ ಮಾರುಕಟ್ಟೆ ಕಂಪನಿ‌ ಜೊತೆ ಸಭೆ ಮಾಡಿದ್ದೇನೆ. ಇವತ್ತಿನವರೆಗೆ ಸರಬರಾಜು ಸಮಸ್ಯೆ ಇಲ್ಲ. 20.30% ನಮ್ಮ ಸ್ವಂತ ಉತ್ಪಾದನೆ ಇದೆ. 70%ರಷ್ಡು ವಿದೇಶದಿಂದ ಬರಬೇಕು. ಆಯಿಲ್ ತುಂಬಿರುವ ಹಡಗನ್ನು ಬಿಡುತ್ತಿಲ್ಲ. ಇರಾನ್-ಇಸ್ರೇಲ್ ಯುದ್ಧ ಆಗುತ್ತಿದೆ. ಪೆಟ್ರೋಲ್, ಗ್ಯಾಸ್ ಬರುತ್ತಿಲ್ಲ. ಮನೆಬಳಕೆ ಸಿಲಿಂಡರ್​​ಗೆ ಸಮಸ್ಯೆ ಇಲ್ಲ. 28 ದಿನದ ಉಪಯೋಗಕ್ಕೆ ಕೊಡುತ್ತೇವೆ. ಬೇರೆಯ ಉಪಯೋಗವನ್ನು ಸದ್ಯಕ್ಕೆ ನಿಲ್ಲಿಸುತ್ತೇವೆ. ಗ್ಯಾಸ್ ಹೆಚ್ಚು ಖರ್ಚು ಮಾಡುವುದು ಬೇಡ. ಸ್ಟೋರೇಜ್ ಮಾಡುವುದು ಬೇಡ. ಆದರೆ ವಾಣಿಜ್ಯ ಸಿಲಿಂಡರ್ ಸಮಸ್ಯೆ ಇದೆ ಎಂದರು.…

Read More

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಈ ಹಿಂದೆ 11.67 ಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಈಗ ಆ ಒಂದು ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಸಮಿತಿ ಒಂದನ್ನು ರಚಿಸಿ ಮರು ತನಿಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು 2021ರಿಂದ 4 ವರ್ಷಗಳ ವರೆಗೆ ಅಂಕಪಟ್ಟಿ ನೀಡದೆ, ಭೌತಿಕ ಅಂಕಪಟ್ಟಿಗಳನ್ನು ಮುದ್ರಿಸಿ ವಿಶ್ವವಿದ್ಯಾನಿಲಯಕ್ಕೆ ಒಟ್ಟಾರೆ 11.67 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿರುವುದು ಗುಲ್ಬರ್ಗಾ ವಿವಿಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆಗಾಗಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ನೇತೃತ್ವದಲ್ಲಿ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಈ ಮೂಲಕ ವಿವಿಯಲ್ಲಿನ ಕೋಟ್ಯಂತರ ಹಣ ಲೂಟಿ ಪ್ರಕರಣದ ತನಿಖೆ ಮತ್ತೆ ಆರಂಭವಾಗಿದೆ. ಏನಿದು 11.67 ಕೋಟಿ ಹಗರಣ? 2024ರ ವೇಳೆಯಲ್ಲಿನ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಅವರು ಗುಲ್ಬರ್ಗಾ ವಿವಿಗೆ ಭೇಟಿ ನೀಡಿ,…

Read More

ಬೆಂಗಳೂರು : ತಮ್ಮ ಕ್ಷೇತ್ರದ ಅಭಿವೃದ್ಧಿಗಳಿಗೆ ಅನುದಾನ ನೀಡಿ ಎಂದು ಸದನದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಡಿಕೆ ಇಟ್ಟರು ಇದೆ ವೇಳೆ ನಮಗೂ ಅನುದಾನ ಕೇಳಿ ಕೇಳಿ ಸಾಕಾಗಿದೆ ಎಂದು ಬೇಸರವನ್ನು ಸಹ ಹೊರಹಾಕಿದ ಪ್ರಸಂಗ ಇಂದು ನಡೆಯಿತು. ಹೌದು ಪ್ರಶ್ನೋತ್ತರ ಅವಧಿಯಲ್ಲಿ ಮದ್ದೂರು ಶಾಸಕ ಉದಯ್ ಕದಲೂರ್ ಅನುದಾನಕ್ಕಾಗಿ ಬೇಡಿಕೆ ಇಟ್ಟರು. ಸಚಿವ ಮಹಾದೇವಪ್ಪ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಾಕಿ ಇದೆ. ಮದ್ದೂರಿನಲ್ಲಿ ಎಸ್‌ಸಿ ವರ್ಗದ ಜನ ಇರುವ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬೇಕು ಎಂದು ಆಗ್ರಹಿಸಿದರು. ಅನುದಾನ ಸಿಗದೆ ಇರುವುದರಿಂದ ಕ್ಷೇತ್ರಕ್ಕೆ ಹೋಗಲು ಆಗುತ್ತಿಲ್ಲ. ಹೋದರೆ ಜನ ಅಪೂರ್ಣ ಕಾಮಗಾರಿ ತೋರಿಸ್ತಾರೆ. ನಮಗೆ ಅನುದಾನ ಬೇಕು, ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ. ಕಾಲಮಿತಿಯೊಳಗೆ ಅನುದಾನ ಕೊಡಿ ಎಂದು ಮದ್ದೂರು ಶಾಸಕ ಉದಯ್ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು. ಇದೀಗ ಈ ಒಂದು ವಿಚಾರ ವಿಪಕ್ಷಗಳಿಗೆ ಭಾರಿ ಅಸ್ತ್ರವಾಗಿದೆ.

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪುಂಡರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಹೌದು ಬೆಂಗಳೂರಿನಲ್ಲಿ ಹಾಡ ಹಗಲೇ ವ್ಯಕ್ತಿಯ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕಿಡಿಗೇಡಿಗಳು ವ್ಯಕ್ತಿ ಒಬ್ಬನ ಮೇಲೆ 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ 68 ಬಾರಿ ಹಲ್ಲೆ ಮಾಡಿದರು ಕೂಡ ವ್ಯಕ್ತಿ ಬದುಕು ಉಳಿದಿದ್ದಾನೆ. ಬೆಂಗಳೂರಿನ ಮಾಗಡಿ ರಸ್ತೆ ಬದಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆಗೆ ಒಳಗಾದ ವ್ಯಕ್ತಿ ಕೆಳಗೆ ಬಿದ್ದರೂ ಸಹ ದುಷ್ಕರ್ಮಿಗಳು 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಾಗಡಿ ರಸ್ತೆಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಕಳೆದ ಮಾರ್ಚ್ 9 ರಂದು ಕೊಲೆ ಆರೋಪಿ ಸಂತೋಷ್ ಎಂಬಾತನ ಮೇಲೆ ಶರತ್ ಮತ್ತು ಗ್ಯಾಂಗ್ ಅಟ್ಯಾಕ್ ಮಾಡಿದೆ. ನಾಲ್ವರು ಯುವಕರು ಕೊಲೆ ಆರೋಪಿ ಸಂತೋಷ್ ಮೇಲೆ ಅಟ್ಯಾಕ್ ಮಾಡಿದ್ದಾರೆ. 2024ರಲ್ಲಿ ಕೊಳ್ಳೇಗಾಲದ ಮೋಹನ್ ಎಂಬಾತ ಕೊಲೆ ಆಗಿರುತ್ತಾನೆ. ಮೋಹನ್ ಹಾಗೂ ಅಟ್ಯಾಕ್ ಮಾಡಿದಂತ ಶರತ್ ಇಬ್ಬರೂ ಕೂಡ…

Read More

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಬಹಳಷ್ಟು ವ್ಯತ್ಯಯ ಉಂಟಾಗಿದೆ. ಇಂದು ಸದನದಲ್ಲಿ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಬಹುದೊಡ್ಡ ಗದ್ದಲವೇ ನಡೆದುಹೋಯಿತು. ಶೂನ್ಯ ವೇಳೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಪ್ರಸ್ತಾಪಿಸಲಾಯಿತು. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕನ ನಡುವೆ ವಾಗ್ವಾದ ನಡೆಯಿತು. ವಾಣಿಜ್ಯ ಬಳಕೆ ಸಿಲಿಂಡರ್ ಬರ್ಲಿಲ್ಲ ಅಂದರೆ ಚಳವಳಿ ಮಾಡಬೇಕಾಗುತ್ತದೆ. ನಾವು ಚಳವಳಿ ಹಾಗು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ಸದನದಲ್ಲಿ ಗದ್ದಲ ನಡೆದಿದ್ದು ಶಾಸಕ ರಂಗನಾಥ ಮೇಲೆ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೆರಗನಾಥ ಪ್ರಸ್ತಾಪಿಸಿದ್ದು 900 ಸಿಲಿಂಡರ್ ಗೆ…

Read More

ಬೆಂಗಳೂರು : ಸಿಲಿಂಡರ್ ವಿಚಾರವಾಗಿ ಯಾರು ಆತಂಕ ಪಡುವ ಅಗತ್ಯ ಇಲ್ಲ ಒಂದು ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ಕೊಡಲು ತೀರ್ಮಾನಿಸಲಾಗಿದೆ ಯುದ್ಧ ನಡೆಯುತ್ತಿರುವಾಗ ಎಲ್ಲಾ ಗ್ರಹಕರು ಸಹಕರಿಸಬೇಕು ಕಲ್ಯಾಣ ಮಂಟಪದವರು ಸೇರಿ ಎಲ್ಲರೂ ಸಹಕರಿಸಿ ಎಂದು ವಿಧಾನಸಭೆಯಲ್ಲಿ ಆಹಾರ ಸಚಿವ ಕೆ.ಎಚ್ ಎಸ್ ಮುನಿಯಪ್ಪ ಹೇಳಿಕೆ ನೀಡಿದರು. ಮದುವೆ ನಿಲ್ಲಿಸಿ ಬಿಡಬೇಕು ಎಂದು ಬಿಜೆಪಿ ಶಾಸಕ ಸುರೇಶ ಗೌಡ ಇದೇ ಸಂದರ್ಭದಲ್ಲಿ ಹೇಳಿದರು. ಬಳಿಕ ಮುನಿಯಪ್ಪ ಗ್ಯಾಸ್ ವ್ಯರ್ಥ ಮಾಡಬೇಡಿ ಎಲ್ಲರೂ ಸಹಕರಿಸಬೇಕು. ಆಯಿಲ್ ಕಂಪನಿ ಜೊತೆಗೆ ನಾನು ಬೆಳಿಗ್ಗೆ ಸಭೆ ಮಾಡಿದ್ದೇನೆ. ಶೇ.20 ರಿಂದ 30ರಷ್ಟು ನಮ್ಮ ಉತ್ಪಾದನೆ ಇದೆ ಶೇಕಡ 70% ರಷ್ಟು ವಿದೇಶಿ ದಿಂದ ಬರಬೇಕು ನಾಲ್ವರ ಕುಟುಂಬಕ್ಕೆ ತಿಂಗಳಿಗೆ ಒಂದು ಗ್ಯಾಸ್ ಸಾಕು ಅಂದಿದ್ದಾರೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಆಸ್ಪತ್ರೆಗಳು ಶಾಲೆಗಳಿಗೆ ವಾಣಿಜ್ಯ ಸಿಲಿಂಡರ್ ಕೊಡಬೇಕು. ಹೋಟೆಲ್, ಕಲ್ಯಾಣ ಮಂಟಪದವರು ಸಹಕಾರ ನೀಡಬೇಕು. ನಾವು ಮುಖ್ಯವಾಗಿ ಗ್ರಾಹಕರ ಬಗ್ಗೆ ಗಮನ ಹರಿಸಬೇಕು. ಯುದ್ಧಕಾಲದಲ್ಲಿ…

Read More

ಬೆಂಗಳೂರು : ಅಮೇರಿಕಾ ಇಸ್ರೆಲ್ ಹಾಗೂ ಇರಾನ್ ಮಧ್ಯ ಯುದ್ಧ ನಡೆಯುತ್ತಿದ್ದು ಇದರ ಪರಿಣಾಮ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಬಹಳಷ್ಟು ವ್ಯತ್ಯಯ ಉಂಟಾಗಿದೆ. ಇಂದು ಸದನದಲ್ಲಿ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಬಹುದೊಡ್ಡ ಗದ್ದಲವೇ ನಡೆದುಹೋಯಿತು. ಶೂನ್ಯ ವೇಳೆಯಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವದ ಬಗ್ಗೆ ಪ್ರಸ್ತಾಪಿಸಲಾಯಿತು. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕನ ನಡುವೆ ವಾಗ್ವಾದ ನಡೆಯಿತು. ವಾಣಿಜ್ಯ ಬಳಕೆ ಸಿಲಿಂಡರ್ ಬರ್ಲಿಲ್ಲ ಅಂದರೆ ಚಳವಳಿ ಮಾಡಬೇಕಾಗುತ್ತದೆ. ನಾವು ಚಳವಳಿ ಹಾಗು ಬಂದ್ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಸಿಎಂ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಪ್ರಧಾನ ಮಂತ್ರಿ ಮೋದಿ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ ಸದನದಲ್ಲಿ ಗದ್ದಲ ನಡೆದಿದ್ದು ಶಾಸಕ ರಂಗನಾಥ ಮೇಲೆ ವಿಪಕ್ಷ ನಾಯಕರು ಮುಗಿಬಿದ್ದಿದ್ದಾರೆ. ಕುಣಿಗಲ್ ಕಾಂಗ್ರೆಸ್ ಶಾಸಕ ಕೆರಗನಾಥ ಪ್ರಸ್ತಾಪಿಸಿದ್ದು 900 ಸಿಲಿಂಡರ್ ಗೆ…

Read More

ಮಂಗಳೂರು: ಬಜೆಟ್‌ನಲ್ಲಿ ಕಾಲೇಜು ಚುನಾವಣೆ ನಡೆಸುವ ಕುರಿತು ಘೋಷಣೆಯಾಗುತ್ತಿದ್ದಂತೆ ಕರಾವಳಿಯ ಶೈಕ್ಷಣಿಕ ನಗರಿ ಮಂಗಳೂರಿನಲ್ಲಿ ಚುನಾವಣಾ ಕಾವು ಏರತೊಡಗಿದೆ. ಆದರೆ, ಈ ಸಂಭ್ರಮದ ನಡುವೆಯೇ ವಿದ್ಯಾರ್ಥಿ ಸಂಘಟನೆಗಳ ನಡುವೆ ಭಾರಿ ಸಂಘರ್ಷ ಏರ್ಪಟ್ಟಿದ್ದು, ಕ್ಯಾಂಪಸ್‌ ಅಂಗಳ ಈಗ ರಣರಂಗವಾಗಿ ಮಾರ್ಪಟ್ಟಿದೆ. ಬಜೆಟ್‌ನಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಹಸಿರು ನಿಶಾನೆ ಸಿಕ್ಕಿದ್ದೇ ತಡ, ಮಂಗಳೂರಿನ ಪ್ರಮುಖ ಕಾಲೇಜುಗಳಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ತಮ್ಮ ಅಸ್ತಿತ್ವ ಪ್ರದರ್ಶಿಸಲು ಮುಂದಾಗಿವೆ. ಈ ವೇಳೆ ಪೋಸ್ಟರ್ ಅಂಟಿಸುವ ವಿಚಾರ ಹಾಗೂ ಪ್ರಚಾರದ ಹಮ್ಮುವಿಕೆ ಕುರಿತು ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿ ಸಂಘದ ಚುನಾವಣೆ ಘೋಷಣೆ ಮಾಡಿದ್ದು ಅಷ್ಟೇ, ಇನ್ನು ಅದು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಅಷ್ಟರಲ್ಲೇ ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಜಕೀಯ ಕಿಚ್ಚು ಭುಗಿಲೆದ್ದಿದೆ. ಕಾಂಗ್ರೆಸ್ ಬೆಂಬಲಿತ NSUI ಮತ್ತು ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿನಿಂದ ಕಾಲೇಜು ಆವರಣ ರಣರಂಗವಾಗಿ…

Read More