Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕದ ಸುಪ್ರಸಿದ್ದ ನಂದಿನಿ ಬ್ರಾಂಡ್ ಗಳ ಕುರಿತು ಫೇಕ್ ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಈ ಒಂದು ನಕಲಿ ಉತ್ಪನ್ನಗಳ ತಡೆಗೆ ಕೆಎಂಎಫ್ ಮಾಸ್ಟರ್ ಪ್ಲಾನ್ ಮಾಡಿದ್ದು, ಗ್ರಾಹಕರು ಬಳಸುವ ನಂದಿನಿ ಬ್ರಾಂಡ್ ಅಸಲಿಯೋ ನಕಲಿಯೋ ಎಂದು ತಿಳಿಯಲು ಇದೀಗ ಹೊಸ ಪ್ಲಾನ್ ಸಿದ್ಧಪಡಿಸಿದೆ. ಹೌದು ಕೆಎಂಎಫ್ ಸದ್ಯ ನಂದಿನಿ ಉತ್ಪನ್ನಗಳ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ ಅಳವಡಿಕೆ ಮೂಲಕ ಬ್ರ್ಯಾಂಡ್ ಶ್ರೇಣಿ ಕಾಪಾಡುವ ಜೊತೆಗೆ ನಕಲಿ ಉತ್ಪನ್ನಗಳ ಹಾವಳಿಗೂ ಬ್ರೇಕ್ ಹಾಕಲು ಮುಂದಾಗಿದೆ. ಆರಂಭಿಕವಾಗಿ ತುಪ್ಪದ ಪ್ಯಾಕೆಟ್ ಮತ್ತು ಬಾಟಲ್ಗಳ ಮೇಲೆ ಈ ಕೋಡ್ ಅಳವಡಿಕೆ ಮಾಡಿದೆ. ತುಪ್ಪ ಕ್ವಾಲಿಟಿ ಅಥವಾ ಅಸಲಿತನವನ್ನ ಪರೀಕ್ಷೆ ಮಾಡಬೇಕಿದ್ರೆ ನೇರವಾಗಿ ಕೋಡ್ನ್ನ ಒಮ್ಮೆ ಸ್ಕ್ಯಾನ್ ಮಾಡಿ, ನಂಬರ್ ಹಾಕಿದ್ರೆ, ಒಟಿಪಿ ಬರಲಿದೆ. ಇದನ್ನ ಎಂಟರ್ ಮಾಡಿದ ಕೂಡಲೇ ಆ ತುಪ್ಪದ ಸಂಪೂರ್ಣ ಮಾಹಿತಿ ನಿಮ್ಮ ಫೋನ್ನಲ್ಲಿ ಸಿಗಲಿದೆ. ಎಲ್ಲಿ ತಯಾರಾಗಿದೆ. ಯಾವಾಗ ತಯಾರಿಕಾ ಜಾಗದಿಂದ ಮಾರುಕಟ್ಟೆಗೆ ಬಂದಿದೆ.…
ಬೆಂಗಳೂರು : ನಿನ್ನೆ ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಲಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್ ಮಾಹಿತಿ ನೀಡಿದ್ದು ಇದುವರೆಗೂ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಆರೋಪಿಗಳ ವಿರುದ್ಧ ಸುಮಟೊ ಕೇಸ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ ಎಂದು ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ? ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ…
ಬಾಗಲಕೋಟೆ : ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತ ಎಲ್ಲಾ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬುಧವಾರ ಸಂಜೆ ನಡೆದ ಈ ಘಟನೆಯ ಹಿನ್ನೆಲೆ 8 ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಎಸ್ ಪಿ ಸಿದ್ದಾರ್ಥ ಗೊಯಲ್ ಮಾಹಿತಿ ನೀಡಿದ್ದು, ಈ ಗಲಾಟೆ ಪೂರ್ವ ಯೋಜಿತವಾಗಿದ್ದಲ್ಲ ಮತ್ತು ಡಿಜೆ ವಿಚಾರಕ್ಕಾಗಿಯಾಗಿ ಕಲ್ಲು ತೂರಾಟ ನಡೆದಿಲ್ಲ. ರಾತ್ರಿ ಸುಮಾರು 10 ಗಂಟೆ 6 ನಿಮಿಷಕ್ಕೆ ಕಲ್ಲು ತೂರಾಟವಾಗಿದ್ದು, ಈ ವೇಳೆ ನನಗೆ ಮತ್ತು ಇಬ್ಬರು ಕಾನ್ಸ್ಟೇಬಲ್ಗಳಿಗೆ ಗಾಯಗಳಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ. ಕಲ್ಲು ತೂರಾಟದ ಜೊತೆ ಚಪ್ಪಲಿಯನ್ನು ಕೂಡ ಎಸೆಯಲಾಗಿದೆ. ಮಸೀದಿ ಒಳಗೆ ಕಲ್ಲಿನಿಂದ ಶೂ ರ್ಯಾಕ್ ಮಾಡಲಾಗಿತ್ತು. ಅದೇ ರ್ಯಾಕ್ನ ಕಲ್ಲು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ಯಾವುದೇ ರಾಡ್ ಆಗಲಿ…
ಬೆಂಗಳೂರು : ಬೆಂಗಳೂರಲ್ಲಿ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಗೂರು ಸಮೀಪದ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣ ಘಟಕದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಸದ ರಾಶಿ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಬೆಂಕಿ ಜೊತೆಗೆ ಘಟಕದ ಸುತ್ತಮುತ್ತಲು ಕೂಡ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಹುಳಿಮಾವು ಮತ್ತು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದನ್ನು ಪ್ರಶ್ನಿಸಿ ತಡೆದಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಯಿಂದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದಿದೆ. ಡಾಕ್ಟರ್ ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿದ್ದಾನೆ ಕಾಲೇಜಿನ ವಿದ್ಯಾರ್ಥಿ ಶಹಬಾಜ್ ಎಂಬತ ಪ್ರಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದಾನೆ. ಮಟೀರಿಯ ಮೆಡಿಕ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿತ್ತು. ಮೊಬೈಲ್ ಬಳಸಿ ವಿದ್ಯಾರ್ಥಿ ಶಹಾಬಾದ್ ನಕುಲು ಮಾಡಲು ಮುಂದಾಗಿದ್ದ. ಇದನ್ನು ಪ್ರಶ್ನಿಸಿ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಅವರು ಆತನ ಉತ್ತರ ಪತ್ರಿಕೆಯನ್ನು ಪಡೆದಿದ್ದಾರೆ. ಈ ವೇಳೆ ಶಿವರಾಜಕುಮಾರ್ ಮೇಲೆ ಶಹಬಾಜ್ ಹಲ್ಲೆ ಮಾಡಿದ್ದಾನೆ. ವಿದ್ಯಾರ್ಥಿ ಶಹಬಾಜ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಯ ನಡವಳಿಕೆಯ ಬಗ್ಗೆ ಆಡಳಿತ ಮಂಡಳಿ ಪಾಲಕರಿಗೆ ಮಾಹಿತಿ ನೀಡಿದೆ. ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡಿದರಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.
ಕಲಬುರ್ಗಿ : ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ ಮೆರೆದಿದೆ. ನಗರದ ದೇವಿ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಐದು ಮಕ್ಕಳು ಗಾಯಗೊಂಡಿದ್ದಾರೆ.ಮನೆ ಮುಂದೆ ಆಟವಾಡುತ್ತಿದ್ದಾಗ ಹುಚ್ಚುನಾಯಿ ಒಂದು ದಾಳಿ ಮಾಡಿದೆ. ದಾಳಿಯ ಪರಿಣಾಮ ಮಕ್ಕಳ ಕಣ್ಣು ಕಿವಿ ಮತ್ತು ಎದೆ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಐವರು ಮಕ್ಕಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳ ವಿರುದ್ಧ ದೇವಿ ನಗರ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ದಿನ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶ : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲೆಟು ಎಸೆಯಲಾಗಿದೆ ಆರ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ವಂದೇ ಭಾರತ ರೈಲಿನ ಮೇಲೆ ಕಿಡಿ ಗಿಡಿಗಳು ಕಲ್ಲು ತೂರಿದ್ದಾರೆ. ಉತ್ತರ ಪ್ರದೇಶದ ಕೌಡ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಗಾಜು ಬಿರುಕು ಬಿಟ್ಟಿದೆ. ನಿನ್ನೆ ಮಧ್ಯಾಹ್ನ 3.20 ರ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ NIA ಘೋಷಿಸಿದೆ.ಕಳೆದ ಮೂರು ವರ್ಷದಿಂದ ಎನ್ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಮೋಸ್ಟ್ ವಾಂಟೆಡ್ ಉಗ್ರ ಜುನೈದ್ ಅಹಮದ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ರಕ್ತಚಂದನ ಕೇಸ್ನಲ್ಲಿ ಬಂಧನವಾಗಿದ್ದ ಜುನೇದ್ ಅಹ್ಮದ್. ನಂತರ ಜೈಲಿನಲ್ಲಿ ಟಿ.ನಾಸೀರ್ನಿಂದ ಪ್ರೇರಿತನಾಗಿ ಉಗ್ರ ಸಂಘಟನೆ ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ದುಬೈ ಹೋಗಿ ಅಲ್ಲಿಂದ ಸಹಚರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿರುವ ಆರೋಪ ಇದೆ. ಬೆಂಗಳೂರು ನಾಗಶೆಟ್ಟಿ ಹಳ್ಳಿ ನಿವಾಸಿಯಾಗಿದ್ದ ಜುನೇದ್ ಅಹ್ಮದ್. ಸದ್ಯ ನಗರದಾದ್ಯಂತ ಎನ್ಐಎ ಪೊಲೀಸರು ವಾಂಟೆಡ್ ಪೋಸ್ಟರ್ ಅಂಟಿಸುತ್ತಿದ್ದಾರೆ. ನಗರದ ಜನನಿಬಿಡ ಪ್ರದೇಶ ಮೆಜೆಸ್ಟಿಕ್ ಪ್ರತಿ ಕಂಬಗಳಿಗೂ, ವಾಂಟೆಡ್ ಉಗ್ರನ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ…
ದಾವಣಗೆರೆ : ದಾವಣಗೆರೆಯಲ್ಲಿ ಭೀಖರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಬಳಿಯ ಟೋಲ್ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಯಂತ್ರದ ಮೂಲಕ ವಾಹನ ಬಿಡಿವಾದ ಕತ್ತರಿಸಿ ಚಾಲಕನನ್ನ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ದಾಂಡೇಲಿ ಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ದಾವಣಗೆರೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಜನವರಿಯಲ್ಲಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿ ಕರ್ನಲ್ ಕುರೈ ಕೆಲವು ವಿಕೃತಿ ವಿಚಾರಗಳು ಬೆಳಕಿಗೆ ಬಂದಿವೆ. ಪ್ರಕರಣದ ಆರೋಪಿಯಾಗಿರುವ 18 ವರ್ಷದ ಕರ್ನಲ್ ಕುರೈ ಯಾವ ರೀತಿ ಕೃತ್ಯ ಎಸಗಿದ್ದಾನೆ ಎನ್ನುವುದು ಇದೀಗ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. ಶರ್ಮಿಳಾದ ಶವದ ಮೇಲೆ ಅತ್ಯಾಚಾರಕ್ಕೆ ಆರೋಪಿ ಕರ್ನಲ್ ಯತ್ನಿಸಿದ್ದಾನೆ ಎನ್ನುವುದು ಬೆಳಕಿಗೆ ಬಂದಿದೆ. ಜನವರಿ 16 ರಂದು ರಾಮಮೂರ್ತಿ ನಗರದಲ್ಲಿ ಈ ಒಂದು ಕೊಲೆ ನಡೆದಿತ್ತು. ಪಕ್ಕದ ಮನೆಯ ಶರ್ಮಿಳಾಳನ್ನು ಕರ್ನಾಲ್ ಕ್ರೂರವಾಗಿ ಕೊಂದಿದ್ದ. ಅತ್ಯಾಚಾರಕ ಯತ್ನಿಸಿದ ವೇಳೆ ಶರ್ಮಿಳ ಪ್ರತಿರೋಧ ಒಡ್ಡಿದ್ದಳು. ಸೋಫಾ ಗೆ ಶರ್ಮಿಳಾ ತಲೆಗೆ ಬಡಿದು, ತಲೆಯಿಂದ ತೀವ್ರವಾಗಿ ರಕ್ತಸ್ರಾವ ಆಗಿತ್ತು. ಆಕೆ ಎಷ್ಟೇ ಬೇಡಿಕೊಂಡರು ಬಿಡದೆ ಕತ್ತುಹಿಸಿಕೆ ಶರ್ಮಿಳಾಳನ್ನು ಕರ್ನಲ್ ಕೊಲೆ ಮಾಡಿದ್ದ. ರಕ್ತದ ಮಡುವಿನಲ್ಲಿ ಶರ್ಮಿಳ ಬಿದ್ದಿದ್ದರು ಆಕೆಯ ಶವದ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು…














