Subscribe to Updates
Get the latest creative news from FooBar about art, design and business.
Author: kannadanewsnow05
ಅಸ್ಸಾಂ : ದೆಹಲಿಯಲ್ಲಿ AI ಶೃಂಗಸಭೆ ನಡೆದಿದ್ದನ್ನು ನೀವೆಲ್ಲ ನೋಡಿದ್ದೀರಿ. ಕಳೆದ ತಿಂಗಳು ದೆಹಲಿಯಲ್ಲಿ ವಿಶ್ವದ ಎಐ ಶೃಂಗ ಸಭೆ ಆಯೋಜಿಸಿದ್ದೆವು. ಈಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದರು ನಾನು ನಿಮಗೆ ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲಾಗಿದ್ದೀರಿ ಎನ್ನುವುದು ದೇಶಕ್ಕೆ ಗೊತ್ತಿದೆ ಆದರೂ ನಿಮಗೆ ಅನಿಸಿತು ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು. ಅಸ್ಸಾಂನ ಚಿಲಚರ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದು, ವಿಶ್ವದ 80ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ದೆಹಲಿಗೆ ಬಂದಿದ್ದರು. ಇದುವರೆಗೂ ಅಭಿವೃದ್ಧಿ ಶೀಲ ರಾಷ್ಟ್ರದಲ್ಲಿ ಇಂತಹ ಸಮ್ಮೇಳನ ನಡೆದಿರಲಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರು ಭಾರತದ ಜಾಗತಿಕ ಕಾರ್ಯಕ್ರಮವನ್ನು ತಮ್ಮ ಬೆತ್ತಲೆ ಮತ್ತು ಕೊಳಕು ರಾಜಕೀಯದ ಅಖಾಡವನ್ನಾಗಿ ಪರಿವರ್ತಿಸಿದರು. ಅತಿಥಿಗಳ ಮುಂದೆ ವಿವಸ್ತ್ರಗೊಳ್ಳುತ್ತ ಶೃಂಗಸಭೆ ಸ್ಥಳಕ್ಕೆ ಬಂದಿದ್ದರು. ಕಾಂಗ್ರೆಸ್ ನಾಯಕರು ಮತ್ತು ಮುಖಂಡರನ್ನು ನಾನು ಕೇಳಲು ಬಯಸುತ್ತೇನೆ ನೀವು ಈಗಾಗಲೇ ಬೆತ್ತಲೆಯಾಗಿದ್ದೀರಿ ಎಂದು ಇಡೀ ದೇಶಕ್ಕೆ ತಿಳಿದಿದೆ. ಹಾಗಿದ್ದು ನಿಮ್ಮ ಬಟ್ಟೆಗಳನ್ನು ತೆಗೆಯಬೇಕೆಂದು ನಿಮಗೆ ಏಕೆ…
ಚಿಕ್ಕಮಗಳೂರು : ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಮನೆಯಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯ ಸಂಸ್ಕಾರ ಹಾಗೂ ದೇಹಕ್ಕೆ ಅಗ್ನಿಸ್ಪರ್ಶ ಮಾಡುವ ವಿಧಿ-ವಿಧಾನಗಳನ್ನು ಸಾಮಾನ್ಯವಾಗಿ ಗಂಡು ಮಕ್ಕಳೇ ಮಾಡುವ ಸಂಪ್ರದಾಯ ಈ ಹಿಂದಿನಿಂದಲೂ ಇದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಸಂಪ್ರದಾಯಕ್ಕೆ ಸೆಡ್ಡು ಹೊಡೆದು, ಅದಕ್ಕೆ ಮೀರಿದ ಘಟನೆಯೊಂದು ನಡೆದಿದೆ. ಇದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಹೆಣ್ಣುಮಕ್ಕಳು ತಂದೆಯ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಲಿಂಗ ಸಮಾನತೆಯ ಸಂದೇಶ ಸಾರಿದ್ದಾರೆ. ಭಾವಸಾರ ಕ್ಷತ್ರಿಯ ಸಮಾಜದ ಬಿ.ಎಸ್.ವಿಶ್ವನಾಥ ಎಂಬವರು ನಿಧನರಾಗಿದ್ದರು. ಆದರೆ, ಅವರಿಗೆ ಗಂಡು ಮಕ್ಕಳು ಇರಲಿಲ್ಲ. ಹೀಗಾಗಿ, ಮಗಳು ಐಶ್ವರ್ಯ ಅವರೇ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ. ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.…
ದಾವಣಗೆರೆ : ದಾವಣಗೆರೆಯಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಖಾಸಗಿ ಆಸ್ಪತ್ರೆ ನರ್ಸ್ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು ಸಂಚು ರೂಪಿಸಿ ಸಿಲುಕಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಮಹಿಳೆ, ಓರ್ವ ಪ್ರಭಾವಿ ವ್ಯಕ್ತಿಯಿಂದ ನಮಗೆ ತೊಂದರೆಯಾಗಿತ್ತು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು. ಬಡ ಹೆಣ್ಣು ಮಕ್ಕಳ ಮತ್ತು ಸಾಮಾನ್ಯ ಜನರ ಜೀವನದ ಜೊತೆ ಆಟವಾಡುವ ಪ್ರಭಾವಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಆರೋಪಿತರು ಪೂರ್ವ ವಲಯ ಐಜಿಪಿ (IGP) ಅವರಿಗೆ ಸಮಗ್ರ ತನಿಖೆ ಕೋರಿ ಮನವಿ ಸಲ್ಲಿಸಿದ್ದಾರೆ.ಈ ಹಿಂದೆ ಇದೇ ಪ್ರಕರಣದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್…
ನವದೆಹಲಿ : ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿಯಬಗ್ಗೆ ಸುಳಿವು ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ಗೆ (IRGC) ಸಂಬಂಧಿಸಿದ ಹಲವಾರು ಹಿರಿಯ ಅಧಿಕಾರಿಗಳ ಫೋಟೋವನ್ನು ಅಮೆರಿಕದ ಡಿಪಾರ್ಟ್ಮೆಂಟ್ನ ಡಿಪ್ಲೊಮ್ಯಾಟಿಕ್ ಸೆಕ್ಯುರಿಟಿ ಸರ್ವಿಸ್ ನಡೆಸುವ ರಿವಾರ್ಡ್ಸ್ ಫಾರ್ ಜಸ್ಟೀಸ್ ಅಪ್ಲೋಡ್ ಮಾಡಿ ನಗದು ಬಹುಮಾನ ಪ್ರಕಟಿಸಿದೆ ಈ ವ್ಯಕ್ತಿಗಳು ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಯೋಜಿಸುವ, ಸಂಘಟಿಸುವ ಮತ್ತು ಕಾರ್ಯಗತಗೊಳಿಸುವ ಐಆರ್ಜಿಸಿಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅದನ್ನು ಟಾರ್ ಆಧಾರಿತ ಟಿಪ್ಲೈನ್ ಅಥವಾ ಸಿಗ್ನಲ್ ಮೂಲಕ ನಮಗೆ ಕಳುಹಿಸಿ ಎಂದು ಕೇಳಿಕೊಂಡಿದೆ. https://twitter.com/RFJ_USA/status/2032482180568654025?t=o1UzWMmZzAiqx1XF45fy9w&s=19
ಮಹಾರಾಷ್ಟ್ರ : ರೈಲು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಗರದಲ್ಲಿ ನಡೆದಿದೆ. ಪೊಲೀಸರ ಲಾಠಿ ಚಾರ್ಜ್ ಗೆ ಹೆದರಿ ಮೂವರು ಯುವಕರು ಹೆದರಿ ಓಡಿ ಹೋಗುತ್ತಿದ್ದರು. ಈ ವೇಳೆ ಗೂಡ್ಸ್ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಸ್ವಪ್ನಿಲ್ ಶೈಲೇಶ ಪಲಾಂಡೆ (23) ಕುನಾಲ್ ಕುಮಾರ್ (23) ಹಾಗೂ ಅಪ್ರೋಜ್ ಖಲೀಲ್ ಶೇಕ್ (28) ಮೃತ ದುರ್ದೈವಿಗಳು. ಓಲ್ಡ್ ಪಾಲ್ಗರ್ ನಲ್ಲಿರುವ ಜೈನ ದೇವಸ್ಥಾನದ ಬಳಿ ಗುಂಪು ಸೇರಿತ್ತು. ಗುಂಪು ಚತುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಈ ವೇಳೆ ರೈಲ್ವೆ ಹಳಿಯ ಕಡೆಗೆ ಮೂವರು ಯುವಕರು ಓಡಿ ಹೋಗುತ್ತಿದ್ದರು. ಇದೇ ವೇಳೆ ಬರುತ್ತಿದ ರೈಲು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದರೆ. ಪೊಲೀಸರ ವಿರುದ್ಧ ಮೃತರ ಕುಟುಂಬದವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ತುಮಕೂರು : ಮಾರ್ಚ್ 28ಕ್ಕೆ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಆ ಒಂದು ಸಂಪುಟ ಸಭೆಯ ಬಳಿಕ ಒಳ ಮೀಸಲಾತಿ ಜಾರಿಗೆ ಬರಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಒಳ ಮೀಸಲಾತಿ ಜಟಾಪಟಿ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಇದೇ 28ರಂದು ಸಿಎಂ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಬಹುಶಹ ಅವತ್ತು ಈ ಒಂದು ವಿಚಾರ ಬಗೆಹರಿಯುತ್ತದೆ ಎಂದು ಅಂದುಕೊಂಡಿದ್ದೇನೆ. ಸಭೆಯಲ್ಲಿ ತೀರ್ಮಾನವಾದ ಬಳಿಕ ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತದೆ. ಸರ್ಕಾರದ ಆದೇಶದ ಬಳಿಕ ನಮ್ಮ ಆಯ್ಕೆ ಪ್ರಕ್ರಿಯೆ ಶುರುವಾಗುತ್ತದೆ. 50,000 ಹುದ್ದೆ ನೇಮಕ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ.ಪೊಲೀಸ್ ಇಲಾಖೆಯಲ್ಲಿ 8 ಸಾವಿರ ಹುದ್ದೆಗಳು ಖಾಲಿ ಇವೆ. ರಾಜ್ಯ ಸರ್ಕಾರ ತೀರ್ಮಾನ ನಂತರ ತುರ್ತಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ತುಮಕೂರು ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಸಿಲಿಂಡರ್…
ಬೆಂಗಳೂರು : ಕರ್ನಾಟಕದಾದ್ಯಂತ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್ ಮಾಲೀಕರು ಮತ್ತು ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ. ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಆಗಿರುವ ತೊಂದರೆಗಳು: ಹೋಟೆಲ್ ಮುಚ್ಚುವ ಆತಂಕ: ಸಿಲಿಂಡರ್ಗಳ ಕೊರತೆಯಿಂದ ಅನೇಕ ಹೋಟೆಲ್ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ. ಸರಿಯಾದ ಸಮಯದಲ್ಲಿ ಸಿಲಿಂಡರ್ಗಳು ದೊರೆಯದಿದ್ದರೆ ಆಹಾರ ಪದಾರ್ಥಗಳ ತಯಾರಿಕೆ ಕಷ್ಟವಾಗುತ್ತದೆ. ಕಾರ್ಮಿಕರ ಕೆಲಸ ಕಳೆದುಕೊಳ್ಳುವ ಭೀತಿ: ಹೋಟೆಲ್ಗಳು ಮುಚ್ಚಿದರೆ, ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಬದುಕು ಬೀದಿಗೆ ಬೀಳಲಿದೆ. ಅವರಿಗೆ ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟ ಎದುರಾಗಲಿದೆ. ಅತಿಯಾದ ಬೇಡಿಕೆ: ಹೋಟೆಲ್ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿಲಿಂಡರ್ಗಳ ಅವಶ್ಯಕತೆ ಇರುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಸಿಲಿಂಡರ್ಗಳ ಕೊರತೆ ಇರುವುದರಿಂದ ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ. ಬ್ಲಾಕ್ ಮಾರ್ಕೆಟ್ ಹೆಚ್ಚಳ: ಸಿಲಿಂಡರ್ಗಳ ಕೊರತೆಯಿಂದಾಗಿ ಕಪ್ಪು ಮಾರುಕಟ್ಟೆಯಲ್ಲಿ ಸಿಲಿಂಡರ್ಗಳ ಬೆಲೆ ಗಗನಕ್ಕೇರಿದೆ. ಹೋಟೆಲ್ ಮಾಲೀಕರು ಅತಿಯಾದ ಬೆಲೆ ನೀಡಿ ಸಿಲಿಂಡರ್ಗಳನ್ನು ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು : ಬೆಂಗಳೂರಿನ ಚಂದ್ರಾಲೇಔಟ್ನಲ್ಲಿ ಹಣದಾಸೆಗಾಗಿ 15 ವರ್ಷದ ಮಗಳನ್ನು ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ. ಘಟನೆ ಹಿನ್ನೆಲೆ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗಿರಾಕಿಗಳ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಬಾಲಕಿಯೊಂದಿಗೆ ಸಮಯ ಕಳೆಯಲು ಮಧ್ಯವರ್ತಿಯು 6 ರಿಂದ 10 ಸಾವಿರ ರು.ವರೆಗೂ ಹಣ ನಿಗದಿಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ಆಕೆಯ ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಹಣದಾಸೆಗೆ ಬಿದ್ದು ತನ್ನ 15 ವರ್ಷದ ಮಗಳನ್ನು ಮಾಂಸದಂಧೆಗೆ ದೂಡಿದ ತಾಯಿಯ ಕರಾಳ ಕೃತ್ಯ ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಬಯಲಾಗಿದೆ. ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪದ ಮೇಲೆ ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮಧ್ಯವರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ…
ಬೆಂಗಳೂರು : ದಿನದಿಂದ ದಿನಕ್ಕೆ ಏರುತ್ತಿರುವ ಎಲ್ಪಿಜಿ ದರದಿಂದಾಗಿ ಸಾಮಾನ್ಯ ಜನರ ಬಜೆಟ್ ಏರುಪೇರಾಗುತ್ತಿದೆ. ಆದರೆ, ಅಡುಗೆ ಮಾಡುವಾಗ ನಾವು ಮಾಡುವ ಸಣ್ಣಪುಟ್ಟ ಬದಲಾವಣೆಗಳಿಂದ ಒಂದು ಸಿಲಿಂಡರ್ ಅನ್ನು ಕನಿಷ್ಠ 10 ರಿಂದ 15 ದಿನಗಳ ಕಾಲ ಹೆಚ್ಚು ಬಳಸಲು ಸಾಧ್ಯವಿದೆ. ಇಂದಿನ ದಿನಗಳಲ್ಲಿ ಎಲ್ಪಿಜಿ (LPG) ಸಿಲಿಂಡರ್ ಬೆಲೆ ಏರಿಕೆಯು ಪ್ರತಿಯೊಬ್ಬ ಸಾಮಾನ್ಯ ಕುಟುಂಬದ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಅಡುಗೆ ಮನೆಯಲ್ಲಿ ನಾವು ಮಾಡುವ ಸಣ್ಣಪುಟ್ಟ ಬದಲಾವಣೆಗಳು ಸಿಲಿಂಡರ್ ಅನ್ನು ಕನಿಷ್ಠ 10 ರಿಂದ 15 ದಿನಗಳ ಕಾಲ ಹೆಚ್ಚುವರಿಯಾಗಿ ಬಳಸಲು ಸಹಾಯ ಮಾಡುತ್ತವೆ. ಆ ಉಪಯುಕ್ತ ಮಾಹಿತಿ ಇಲ್ಲಿದೆ 1. ಪಾತ್ರೆಗಳನ್ನು ಮುಚ್ಚಿ ಅಡುಗೆ ಮಾಡಿ ಅಡುಗೆ ಮಾಡುವಾಗ ಯಾವಾಗಲೂ ಪಾತ್ರೆಗಳ ಮೇಲೆ ಮುಚ್ಚಳವನ್ನು ಬಳಸಿ. ಇದರಿಂದ ಹಬೆಯು ಹೊರಹೋಗದೆ ಶಾಖವು ಪಾತ್ರೆಯ ಒಳಗೇ ಇರುತ್ತದೆ, ಪರಿಣಾಮವಾಗಿ ಆಹಾರವು ಬೇಗನೆ ಬೇಯುತ್ತದೆ ಮತ್ತು ಗ್ಯಾಸ್ ಉಳಿತಾಯವಾಗುತ್ತದೆ. 2. ಪ್ರೆಶರ್ ಕುಕ್ಕರ್ ಬಳಕೆ ಹೆಚ್ಚಿರಲಿ ಸಾಮಾನ್ಯ ಪಾತ್ರೆಗಳಿಗಿಂತ…
ಬೆಂಗಳೂರು : ಯಲಹಂಕ ತಾಲೂಕು ಆಡಳಿತದಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದ್ದು ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಇದೀಗ ಮರು ವಶಪಡಿಸಿಕೊಳ್ಳಲಾಗಿದೆ. 80 ಕೋಟಿ ಮೊಲದ 13 ಎಕರೆ 20 ಗುಂಟೆ ಒತ್ತುವರಿ ಜಮೀನು, ಇದೀಗ ತೆಲುಗು ಮಾಡಲಾಗಿದೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಬೆಂಗಳೂರಿನ ಯಲಹಂಕ ತಾಲೂಕಿನ ಇಟಕಲ್ಪುರ ಸುತ್ತಮುತ್ತ ಅಕ್ರಮ ಜಮೀನು ಒತ್ತುವರಿಯಾಗಿತ್ತು.














