Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ವಿದ್ಯುತ್ ಅಂತಿ ತುಳಿದು ಕಾಫಿ ಬೆಳೆಗಾರ ಸಾವನಪ್ಪಿರುವ ಘೋರ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲಗುಂದ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟಕ್ಕೆ ನೀರು ಹಾಯಿಸುವಾಗ ಹಾಲುಗುಂದ ಗ್ರಾಮದ ಕೆ ಜಿಮಾಂ(67) ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂಬೈ : ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಹೌದು ಅದೇ ಮಹಾರಾಷ್ಟ್ರದ ಮುಂಬೈನ ಛತ್ರಪತಿ ಸಂಭಾಜಿ ಮಹಾರಾಜ್ ಕರಾವಳಿ ರಸ್ತೆಯಲ್ಲಿ ಭಾರತದ ಮೊದಲ ಸಂಗೀತ ರಸ್ತೆ ಎಂದು ಕರೆಯಲಾಗುತ್ತೆ. ಕರಾವಳಿ ರಸ್ತೆ ಸುರಂಗದಿಂದ ವಾಹನಗಳು ನಿರ್ಗಮಿಸಿದ ಸ್ವಲ್ಪ ಸಮಯದ ನಂತರ, ನಾರಿಮನ್ ಪಾಯಿಂಟ್ ಮತ್ತು ವರ್ಲಿ ನಡುವಿನ ಉತ್ತರ ದಿಕ್ಕಿನ ಕ್ಯಾರೇಜ್ವೇಯಲ್ಲಿ 500 ಮೀಟರ್ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ, ಈ ಪ್ರದೇಶದ ಬಗ್ಗೆ ಕೆಲವು ಪ್ರಮುಖ ವಿವರಗಳನ್ನು ನೋಡೋಣ. ಈ ರಸ್ತೆಯನ್ನು ವಿಶೇಷವಾಗಿ ವಿನ್ಯಾಸಗೊಳಿಸಿದ ರಂಬಲ್ ಪಟ್ಟಿಗಳನ್ನು ಬಳಸಿಕೊಂಡು ವಿನ್ಯಾಸಗೊಳಿಸಲಾಗಿದೆ, ಇದರಲ್ಲಿ ಡಾಂಬರಿನಲ್ಲಿ ಲೆಕ್ಕಹಾಕಿದ ಅಂತರ ಮತ್ತು ಆಳದಲ್ಲಿ ಕೆತ್ತಲಾಗಿದೆ. ವಾಹನಗಳು ಈ ಚಡಿಗಳ ಮೇಲೆ ಸುಮಾರು 60 ರಿಂದ 80 ಕಿ.ಮೀ ವೇಗದಲ್ಲಿ ಚಲಿಸುವಾಗ, ಟೈರ್ಗಳು ಮತ್ತು ರಸ್ತೆ ಮೇಲ್ಮೈ ನಡುವಿನ ಪರಸ್ಪರ ಕ್ರಿಯೆಯು ಕಂಪನಗಳನ್ನು ಉಂಟುಮಾಡುತ್ತದೆ. ಈ ಕಂಪನಗಳು ಧ್ವನಿ ತರಂಗಗಳನ್ನು ಉತ್ಪಾದಿಸುತ್ತವೆ, ಇದು ಸ್ಲಮ್ಡಾಗ್ ಮಿಲಿಯನೇರ್ ಚಿತ್ರಕ್ಕಾಗಿ ಎ.ಆರ್.…
ನವದೆಹಲಿ : ನಾವು ರಾಜಕಾರಣದಲ್ಲಿದ್ದೇವೆ. ರಾಜಕಾರಣ ಮಾಡಲೇಬೇಕು ನನಗೆ ಸದಾ ಯಶಸ್ಸು ಸಿಗುತ್ತೆ. ಸ್ವಲ್ಪ ಶ್ರಮ ಬೇಕಷ್ಟೆ. ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ಜಾರಿ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ ಬಗ್ಗೆ ನಮಗೆ ಸಂತೋಷವಿದೆ. ಈ ಅಭೂತಪೂರ್ವ ಕ್ಷಣವನ್ನು ನಾವು ಸಂಭ್ರಮಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಂದು ಗ್ಯಾರಂಟಿ ಭೂಮಿ ಗ್ಯಾರಂಟಿಯನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ. ಭೂಮಿಯ ಹಕ್ಕು ಪತ್ರ ಇಲ್ಲದ ಲಕ್ಷಾಂತರ ಜನರಿಗೆ ನಾವು ಹಕ್ಕುಪತ್ರ, ಪಟ್ಟಾ ದಾಖಲೆ ನೀಡುತ್ತಿದ್ದೇವೆ. ಜತೆಗೆ ಜನರಿಗೆ ಪಕ್ಕಾ ಖಾತೆ ಹಂಚಿಕೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳ ಹೊರತಾಗಿ ಇದು ನಮ್ಮ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಎಂದು ತಿಳಿಸಿದರು. ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಏನನ್ನೂ ಮಾತನಾಡುವುದಿಲ್ಲ. ಶಾಸಕರುಂಟು ಹಾಗೂ…
ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಹರಿದು ಬೀದಿ ನಾಯಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ನಾಯಿಯ ಮೇಲೆ ಕಾರು ಹರಿಸಿ ಕೊಂದ ಚಾಲಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಸಂಜಯ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ನಿನ್ನೆ ಮಧ್ಯಾಹ್ನ 1:00 ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಜೀವಿಕ ಗೌಡ ಎಂಬವರು ಕಾರು ಚಾಲಕನ ವಿರುದ್ಧ ದೂರು ನೀಡಿದ್ದರು ಅವರ ದೂರಿನ ಆಧಾರದ ಮೇಲೆ ಚಾಲಕನ ವಿರುದ್ಧ FIR ದಾಖಲಾಗಿದೆ.
ಉತ್ತರಪ್ರದೇಶ : ಕುಡಿದ ಮತ್ತಿನಲ್ಲಿ ಅಡ್ಡಾಡಿದ್ದಿ ಕಾರು ಓಡಿಸಿ 6 ಜನರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಪೊಲೀಸರು ಪ್ರಮುಖ ತಂಬಾಕು ಉದ್ಯಮಿಯ ಪುತ್ರ 26 ವರ್ಷದ ಶಿವಂ ಮಿಶ್ರಾ ಅವರನ್ನು ಬಂಧಿಸಿದ್ದರು. ಇದೀಗ ಕಾನ್ಪುರದ ACMM ಕೋರ್ಟ್ ನಿಂದ ಜಾಮೀನು ಮಂಜೂರು ಸಿಕ್ಕಿದೆ. ಉತ್ತರ ಪ್ರದೇಶದ ಖ್ಯಾತ ತಂಬಾಕು ಉದ್ಯಮಿ ಕೆಕೆ ಮಿಶ್ರಾ ಪುತ್ರ ಶಿವಂ ಮಿಶ್ರಾನನ್ನ ಕಾನ್ಪುರ ಪೋಲಿಸರು ಬೆಳಿಗ್ಗೆಯಷ್ಟೇ ಬಂಧಿಸಿದ್ದರು. ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಕಾರು ಓಡಿಸಿದ್ದ. ಈ ವೇಳೆ ಕಾರು ಡಿಕ್ಕಿಯಾಗಿ ಆರು ಪಾದಚಾರಿಗಳು ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಪೊಲೀಸರು FIR ದಾಖಲಿಸಿಕೊಂಡಿದ್ದರು. ಇದೀಗ ಕಾನ್ಪುರ ಕೋರ್ಟ್ ಶಿವು ಮಿಶ್ರಾಗೆ ಜಾಮೀನು ಮಂಜೂರು ಮಾಡಿದೆ.
ಬಳ್ಳಾರಿ : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ 2028ರ ವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಸಿದ್ದರಾಮಯ್ಯ ಸಾರಥ್ಯದಲ್ಲಿ 2028 ರ ಚುನಾವಣೆಗೆ ಹೋಗುತ್ತೇವೆ. ನಮ್ಮದು ಹೈಕಮಾಂಡ್ ಪಕ್ಷ ಸಿಎಂ ಬದಲಾವಣೆ ನಮ್ಮ ಕೈಯಲ್ಲಿ ಇಲ್ಲ. ಹಾಗಾಗಿ 2028 ರ ವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ತಿಳಿಸಿದರು.
ಧಾರವಾಡ : ಕ್ಷುಲ್ಲಕ ಕಾರಣಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷನ ತಮ್ಮನಿಂದ ಮೂವರ ಮೇಲೆ ಮಾರಕಾಸ್ತ್ರರಗಳಿಂದ ಹಲ್ಲೆ ನಡೆಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಕಾರಿಗೆ ಚಕ್ಕಡಿ ಡಿಕ್ಕಿ ಹೊಡೆದಿದ್ದಕ್ಕೆ ಮೋಹರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಹನುಮಂತ್ ಕರಿಗಾರ್ ಎಂಬಾತ ಮೂವರ ಮೇಲೆ ಹಲ್ಲೆ ಮಾಡಿದ್ದಾನೆ. ಚಕ್ಕಡಿಯಲ್ಲಿದ್ದ ಸೋಮಶೇಖರ ಬೆಂಗೇರಿ, ರಮೇಶ್ ಬೆಂಗೇರಿ ಹಾಗೂ ಮಂಜುನಾಥ್ ಬಳ್ಳೊಳ್ಳಿ ಮೇಲೆ ಹನುಮಂತ ಹಲ್ಲೆ ಮಾಡಿದ್ದಾನೆ. ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಸಹೋದರನಾಗಿರುವ ಹನುಮಂತ ಮೂವರ ಮೇಲೆ ಹಲ್ಲೆ ಮಾಡಿದ್ದು, ಹಲ್ಲೆಗೋಳಗಾದ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಹನುಮಂತ ಕರಿಗಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಾಫಿ ಬಿಲ್ ಕೇಳಿದ್ದಕ್ಕೆ ಪೊಲೀಸರೇ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ ಕ್ಯಾಂಟೀನ್ ಸಿಬ್ಬಂದಿಯ ಮೇಲೆ ಅವರು ಪೊಲೀಸರು ಹಲ್ಲೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಪೊಲೀಸ್ ಠಾಣೆಯ 3 ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಏರ್ ಪೋರ್ಟ್ ನ ಸಿಬ್ಬಂದಿ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಗಂಗರಾಜು, ಬಾಳಪ್ಪ ಮತ್ತು ಕುಮಾರ್ ಎನ್ನುವ ಮೂರು ಪೊಲೀಸ್ ಸಿಬ್ಬಂದಿಗಳು ಅಲ್ಫಾ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಾಲೆ ಮಾಡಿದ್ದಾರೆ. ಹೋಟೆಲ್ ಸಂಬಂಧಿಯ ಮೇಲೆ ಕೈ ಮಾಡಿದ ಅಲ್ಲದೆ ಪಂಚ್ ಮಾಡಿ ಹಲ್ಲೆ ಮಾಡಿದ್ದಾನೆ ಈ ನೆಲೆಯಲ್ಲಿ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಮೂವರು ಪೋಲಿಸಿ ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತುಳಿತ ದುರಂತ ನಡೆದ ಬಳಿಕ ಯಾವುದೇ ಕ್ರಿಕೆಟ್ ಪಂದ್ಯ ಆಯೋಜಿಸಿಲ್ಲ ಇದೀಗ ಇಂದು ವಿಧಾನಸೌಧದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಹಲವು ಷರತ್ತುಗಳೊಂದಿಗೆ ಜನ ಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಪಂದ್ಯ ನಡೆಸುವ ಕುರಿತು ಚರ್ಚೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪದ್ಯ ನಡೆಸಲು ಅನುಮತಿ ನೀಡಬೇಕು ಎಂದು ಈಗಾಗಲೇ KSCA ಮನವಿ ಮಾಡಿದ್ದರು. ಈ ವಿಚಾರವಾಗಿ ರಾಜ್ಯ ಸರ್ಕಾರ ನಮ್ಮ ಜಿಬಿಎ ಚೀಫ್ ಕಮಿಷನರ್ ಅವರ ಅಧ್ಯಕ್ಷತೆಯಲ್ಲಿ ನಮ್ಮ ಪೊಲೀಸ್ ಕಮಿಷನರ್, ಜಾಯಿಂಟ್ ಕಮಿಷನರ್, ಪಿಡಬ್ಲ್ಯೂಡಿ ರೆಪ್ರೆಸೆಂಟೇಟಿವ್, ಹೆಲ್ತ್ ಡಿಪಾರ್ಟ್ಮೆಂಟ್ ಸೇರಿಸಿ ಒಂದು ಸಮಿತಿ ಮಾಡಿತ್ತು. ಅದರ ವರದಿ ಇಂದು ನಮ್ಮ ಕೈ ಸೇರಿದೆ. ಅದರ ಸಾಧಕ ಭಾದಕ ಕುರಿತು ಚರ್ಚೆ ಮಾಡಿದ್ದು ಕ್ಯಾಬಿನೆಟ್ ನಲ್ಲಿ ಗೃಹ ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದು ಈ…
ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಅದರ ಬೆನ್ನಲ್ಲೆ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಸಹ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸದ್ಯ ಶಾಸಕ ಭೈರತಿ ಬಸವರಾಜ್ ತಲೆಮೆಡಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ನಿನ್ನೆ ಹೈಕೋರ್ಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿತ್ತು ಬಳಿಕ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಶಾಸಕ ಭರತಿ ಬಸವರಾಜ್ ದುಬೈನಲ್ಲಿ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೀಗ ಸುಪ್ರೀಂ ಕೋರ್ಟಲ್ಲು ನಿರೀಕ್ಷಣ ಜಾಮೀನು ಅರ್ಜಿ ವಜಾ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಶರಣ ಗತಿ ಆಗುವ ಸಾಧ್ಯತೆ ಇದೆ…














