Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರಿನ ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ವಿಶೇಷ ನ್ಯಾಯಾಲಯವು ದೇಶದ ಸುರಕ್ಷತೆಗೆ ಧಕ್ಕೆ ತರುವ ಕೃತ್ಯದಲ್ಲಿ ತೊಡಗಿದ್ದ ಆರೋಪಿಗೆ ಮಹತ್ವದ ಶಿಕ್ಷೆ ಪ್ರಕಟಿಸಿದೆ. ನಿಷೇಧಿತ ತಾಲಿಬಾನ್​ ಹಾಗೂ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ (ಟಿಟಿಪಿ) ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಮಹಾರಾಷ್ಟ್ರ ಮೂಲದ ಹಮ್ರಾಜ್‌ ವೋರ್ಷಿದ್‌ ಶೇಕ್‌ಗೆ ನ್ಯಾಯಾಲಯವು 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 63 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದ ಹಿನ್ನೆಲೆಯನ್ನು ನೋಡುವುದಾದರೆ, 2023ರ ಏಪ್ರಿಲ್‌ನಲ್ಲಿ ಎನ್‌ಐಎ ಅಧಿಕಾರಿಗಳು ಹಮ್ರಾಜ್ ವೋರ್ಷಿದ್ ಶೇಕ್ ಮತ್ತು ಮೊಹಮ್ಮದ್‌ ಆರೀಫ್‌ ಎಂಬ ಇಬ್ಬರು ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ತೀವ್ರ ತನಿಖೆ ನಡೆಸಿದ ಸಂಸ್ಥೆಯು, ಅದೇ ವರ್ಷದ ಅಕ್ಟೋಬರ್‌ನಲ್ಲಿ ನ್ಯಾಯಾಲಯಕ್ಕೆ ಸುದೀರ್ಘ ಆರೋಪಪಟ್ಟಿಯನ್ನು ಸಲ್ಲಿಸಿತ್ತು. ಈ ಆರೋಪಪಟ್ಟಿಯ ಆಧಾರದ ಮೇಲೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಇದೀಗ ಹಮ್ರಾಜ್‌ಗೆ ಶಿಕ್ಷೆ ಪ್ರಕಟಿಸಿದ್ದು, ಪ್ರಕರಣದ ಮತ್ತೊಬ್ಬ ಆರೋಪಿಯ…

Read More

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ನಡೆಸುವ ಸಂಬಂಧ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ. ಈ ಹಿಂದೆ ನಿಗದಿಪಡಿಸಿದ್ದ ಜೂನ್ 30ರ ಗಡುವನ್ನು ವಿಸ್ತರಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ (KSEC) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಮುಂಬರುವ ಆಗಸ್ಟ್ 31 ರವರೆಗೆ ಅಂತಿಮ ಕಾಲಾವಕಾಶವನ್ನು ನೀಡಿದೆ. ಸೆಪ್ಟೆಂಬರ್ 30ರವರೆಗೆ ವಿನಂತಿಸಿದ್ದ ಸರ್ಕಾರ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣೆ ನಡೆಸಲು ಜೂನ್ 30ರವರೆಗೆ ಈ ಹಿಂದೆ ಸುಪ್ರೀಂಕೋರ್ಟ್ ಗಡುವು ನೀಡಿತ್ತು. ಆದರೆ, ಪ್ರಸ್ತುತ ರಾಜ್ಯದಲ್ಲಿ ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಗಳು ಪ್ರಗತಿಯಲ್ಲಿರುವುದರಿಂದ, ಎಲ್ಲಾ ಸರ್ಕಾರಿ ಸಿಬ್ಬಂದಿ ಹಾಗೂ ತಾಂತ್ರಿಕ ವ್ಯವಸ್ಥೆಗಳು ಈ ಕೆಲಸಗಳಲ್ಲಿ ನಿರತವಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಸಿಬ್ಬಂದಿ ಹಾಗೂ ಕಾನೂನಾತ್ಮಕ ಸಿದ್ಧತೆಗಳ ಕೊರತೆಯನ್ನು ಉಲ್ಲೇಖಿಸಿ, ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಸೆಪ್ಟೆಂಬರ್ 30ರವರೆಗೆ (ಮೂರು ತಿಂಗಳ ಹೆಚ್ಚುವರಿ…

Read More

ಬೆಂಗಳೂರು: ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿ ಕೈಕೊಟ್ಟಿದ್ದಾಳೆಂಬ ಕಾರಣಕ್ಕೆ ಬೇಸತ್ತ ಯುವಕನೊಬ್ಬ ಭಾರಿ ಗಾತ್ರದ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ವಿದ್ಯುತ್ ಕಂಬದ ಮೇಲೇರಿ ಯುವಕ ನಡೆಸಿದ ಈ ಹೈಡ್ರಾಮಾದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ತೀವ್ರ ಆತಂಕದಲ್ಲಿ ಕಳೆಯುವಂತಾಯಿತು. ಚಿನ್ನಯ್ಯನಪಾಳ್ಯದ ನಿವಾಸಿಯಾದ ಸೋಮಶೇಖರ್ ಎಂಬಾತನೇ ಈ ಕೃತ್ಯ ಎಸಗಿದ ಪ್ರೇಮಿಯಾಗಿದ್ದಾನೆ. ಸ್ಥಳೀಯ ಮೂಲಗಳ ಪ್ರಕಾರ, ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ತೀವ್ರವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಇತ್ತೀಚೆಗೆ ಆ ಯುವತಿಯು ಮದುವೆಗೆ ನಿರಾಕರಿಸಿದ್ದಾಳೆ. ಅಷ್ಟೇ ಅಲ್ಲದೆ, ಆತನೊಂದಿಗಿನ ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು (ಲವ್ ಬ್ರೇಕಪ್) ಮುಂದಾಗಿದ್ದಾಳೆ. ಇದರಿಂದಾಗಿ ತೀವ್ರ ಆಕ್ರೋಶಗೊಂಡ ಸೋಮಶೇಖರ್, ಮಾನಸಿಕ ನಿಯಂತ್ರಣ ಕಳೆದುಕೊಂಡು ಮೊದಲು ತನ್ನ ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ಹಾಕಿ ತೀವ್ರ ದಾಂಧಲೆ ನಡೆಸಿದ್ದಾನೆ. ಮನೆಯಲ್ಲಿ ದಾಂಧಲೆ ನಡೆಸಿದ ಬಳಿಕವೂ ಆಕ್ರೋಶ ತಣಿಯದ ಸೋಮಶೇಖರ್, ಮನೆ ಸಮೀಪದಲ್ಲೇ ಇದ್ದ…

Read More

ಹೈದ್ರಾಬಾದ್ : ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಸಾರ್ವಜನಿಕರನ್ನು ಬೆಚ್ಚಿಬೀಳಿಸುವ ಭೀಕರ ಘಟನೆಯೊಂದು ನಡೆದಿದೆ. ಹಾಡಹಗಲೇ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಆಕೆಯ ಪತಿಯೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೈದ್ರಾಬಾದ್‌ನ ಗಾಂಧಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ದಿಗ್ಭ್ರಮೆ ಮೂಡಿಸಿದೆ. ಕೊಲೆಯಾದ ದುರ್ದೈವಿಯನ್ನು ಬಹಾದ್ದೂರ್ ಪುರದ ಕಿಶನ್ ಬಾಗ್ ನಿವಾಸಿ ಬಂಗಿ ದೇಬೋರ ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯ ಸ್ಪಾ ಒಂದರಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದಾ ಸಾರ್ವಜನಿಕರ ಓಡಾಟವಿರುವ ಹಾಗೂ ವಾಣಿಜ್ಯ ಪ್ರದೇಶದಲ್ಲೇ ಈ ಘಟನೆ ನಡೆದಿರುವುದು ಭದ್ರತೆಯ ಕುರಿತು ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗಳ ನಡುವೆ ಇದ್ದ ಕೌಟುಂಬಿಕ ಕಲಹವೇ ಈ ಭೀಕರ ಹತ್ಯೆಗೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ಘಟನೆ ನಡೆದ ದಿನದ ಮುಂಜಾನೆ ಪತಿ ಮತ್ತು ಪತ್ನಿ ನಡುವೆ ಮನೆಯಲ್ಲಿ ತೀವ್ರ ಮಾತಿನ ಚಕಮಕಿ ಹಾಗೂ ಜಗಳ ನಡೆದಿತ್ತು…

Read More

ಬಾಗಲಕೋಟೆ: ಜಿಲ್ಲೆಯಲ್ಲಿ ದೀರ್ಘಕಾಲದಿಂದ ಅವಿರತವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸುವ ಮೂಲಕ ಭಾರಿ ಶಾಕ್ ನೀಡಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನದಿಯ ಒಡಲನ್ನು ಕೊರೆದು ಮರಳು ಲೂಟಿ ಮಾಡುತ್ತಿದ್ದ ಅಡ್ಡೆಗಳ ಮೇಲೆ ಇಂದು ಏಕಕಾಲದಲ್ಲಿ ದಾಳಿ ನಡೆಸಿ, ಕಾನೂನು ಕ್ರಮ ಜರುಗಿಸಲಾಗಿದೆ. ವಿವಿಧೆಡೆ ಏಕಕಾಲಕ್ಕೆ ದಾಳಿ: ಲೋಕಾಯುಕ್ತ ಅಧಿಕಾರಿಗಳ ತಂಡವು ಬಾಗಲಕೋಟೆ ಜಿಲ್ಲೆಯ ಮುಧೋಳ್, ಇಳಕಲ್, ಹುನಗುಂದ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಪ್ರಮುಖ ಕೇಂದ್ರಗಳ ಮೇಲೆ ಈ ಕಾರ್ಯಾಚರಣೆ ಕೈಗೊಂಡಿದೆ. ಮರಳು ಮಾಫಿಯಾ ಸಕ್ರಿಯವಾಗಿದ್ದ ಜಾಗಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ಯಾವುದೇ ಸುಳಿವು ಸಿಗದಂತೆ ಅತ್ಯಂತ ಗೌಪ್ಯವಾಗಿ ಈ ದಾಳಿಯನ್ನು ಸಂಘಟಿಸಿದ್ದರು. ನದಿಯ ಒಡಲಿಗೆ ಕನ್ನ: ವಿಶೇಷವಾಗಿ ಮುಧೋಳ ತಾಲೂಕಿನ ಜೀರಾಗಳ ಗ್ರಾಮದ ಬಳಿ ಹರಿಯುವ ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಅವಿಶ್ರಾಂತವಾಗಿ ನಡೆಯುತ್ತಿತ್ತು. ನಿಯಮಗಳನ್ನು ಗಾಳಿಗೆ ತೂರಿ, ನದಿಯ ಪಾತ್ರದಿಂದ ಯಂತ್ರೋಪಕರಣಗಳ ಸಹಾಯದಿಂದ ರಾಜಾರೋಷವಾಗಿ ಮರಳನ್ನು ಎತ್ತಲಾಗುತ್ತಿತ್ತು.…

Read More

ಮಂಡ್ಯ :- ಸಕ್ಕರೆನಾಡು ಮಂಡ್ಯದಲ್ಲಿ ಎರಡು ತಿಂಗಳಲ್ಲಿ ಐದು ಭೀಕರ ಹತ್ಯೆಗಳು ಸಂಭವಿಸಿದ್ದು, ಜಿಲ್ಲೆಯ ಜನತೆ ಆತಂಕದಲ್ಲಿ ಜೀವನ ನಡೆಸುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ತಡರಾತ್ರಿ 10.30 ರ ಸಮಯದಲ್ಲಿ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ತಾಲೂಕಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಮದ್ದೂರು ತಾಲೂಕಿನ ಚುಂಚಗಳ್ಳಿ ಗ್ರಾಮದ ಸುನೀಲ್ (29) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಸುನೀಲ್ ಮತ್ತು ಸ್ನೇಹಿತರಾದ ಸತೀಶ್, ಸಿದ್ದರಾಜು ಅವರೊಂದಿಗೆ ಮಂಗಳವಾರ ರಾತ್ರಿ 9.30ರ ವೇಳೆಗೆ ಕೆ.ಹೊನ್ನಲಗೆರೆಯ ದೀಪ ಬಾರ್ ನಲ್ಲಿ ಮದ್ಯಪಾನ ಮಾಡುವ ವೇಳೆಗೆ ಅಜ್ಜಹಳ್ಳಿ ಗ್ರಾಮದ ನಿಶಾಂತ್ ಮತ್ತು ಆತನ ಸ್ನೇಹಿತರು ಆಗಮಿಸಿದ್ದಾರೆ. ನಿಶಾಂತ್ ಹಾಗೂ ಕ್ಯಾಷಿಯರ್ ಜೊತೆಗೆ ಕೆಲಕಾಲ ಮಾತುಕತೆ ಬೆಳೆದಿದೆ. ಬಳಿಕ ಸುನೀಲ್ ಮತ್ತು ಆತನ ಸ್ನೇಹಿತರು ಮಧ್ಯೆ ಪ್ರವೇಶಿಸಿ ತಿಳಿಗೊಳಿಸಿದ್ದಾರೆ. ಆನಂತರ ಸುನೀಲ್ ಮತ್ತು ಸ್ನೇಹಿತರು ಒಂದೇ ಬೈಕ್ ನಲ್ಲಿ 10.30 ರ ಸಮಯಕ್ಕೆ ತಮ್ಮ ಸ್ವಗ್ರಾಮ ಚುಂಚಗಳ್ಳಿಗೆ ತೆರಳುವಾಗ ಕೆ. ಹೊನ್ನಲಗೆರೆಯ…

Read More

ಕೊಡಗು : ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿ ಮಹಿಳೆ ಮತ್ತು ಆನೆಯ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಮುನ್ನೆಲೆಗೆ ಬಂದಿದೆ. ದುಬಾರೆ ಶಿಬಿರದ ನಿರ್ವಹಣೆ ಕುರಿತು ಅರಣ್ಯ ಇಲಾಖೆಯು ಈ ಹಿಂದೆ ತಜ್ಞರ ಸಮಿತಿ ನೀಡಿದ್ದ ಪ್ರಮುಖ ವರದಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆನೆಗಳು ಮತ್ತು ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನೀಡಲಾಗಿದ್ದ ಎಚ್ಚರಿಕೆಗಳನ್ನು ಗಾಳಿಗೆ ತೂರಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಮಾನ್ಯ ಹೈಕೋರ್ಟ್ ಆದೇಶದ ಅನ್ವಯ ಈ ಹಿಂದೆ ವಿಶೇಷ ತಜ್ಞರ ಸಮಿತಿಯೊಂದನ್ನು ರಚಿಸಲಾಗಿತ್ತು. ಖ್ಯಾತ ವನ್ಯಜೀವಿ ತಜ್ಞ ಕೆ.ಎಂ. ಚಿನ್ನಪ್ಪ, ಪಶುವೈದ್ಯಕೀಯ ಸರ್ಜನ್ ಡಾ. ಕಲೈವಿಣ್ಣನ್ ಮತ್ತು ಮುಖ್ಯ ಪಶುವೈದ್ಯ ಡಾ. ಅಶ್ರಫ್ ಅವರನ್ನೊಳಗೊಂಡ ಮೂವರು ಸದಸ್ಯರ ಈ ಸಮಿತಿಯು ಕರ್ನಾಟಕದ ಎಲ್ಲಾ ಆನೆ ಶಿಬಿರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಸುದೀರ್ಘ ಅಧ್ಯಯನದ ಬಳಿಕ ಈ ತಜ್ಞರ ಸಮಿತಿಯು 2019ರಲ್ಲೇ ಅರಣ್ಯ ಇಲಾಖೆಗೆ…

Read More

ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಕೊಲೆ ನಡೆದಿದ್ದು ಕೆ ಹೊನ್ನಲಗೆರೆಯಲ್ಲಿ ಮಾರ್ಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ ಹೊನಲಗಿರಿ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದ್ದೂರು ತಾಲೂಕಿನ ಚುಂಚಗನಹಳ್ಳಿ ನಿವಾಸಿ ಸುನಿಲ್ (29) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಸುನಿಲ್ ಬೈಕ್ ನಲ್ಲಿ ತಿರುಳುತ್ತಿದ್ದಾಗ ಏಕಾಏಕಿ ಅಟ್ಯಾಕ್ ನಡೆಸಿದ ದುಷ್ಕರ್ಮಿಗಳು, ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಸುನೀಲನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯೆ ಸುನಿಲ್ ಸಾವನಪ್ಪಿದ್ದಾನೆ ಬೈಕ್ನಲ್ಲಿ ಇದ್ದ ಸತೀಶ್ ಮತ್ತು ಸಿದ್ದರಾಜುಗೆ ಯಾವುದೇ ಗಾಯವಾಗಿಲ್ಲ ಸ್ಥಳಕ್ಕೆ ಮಂಡ್ಯ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮದ್ದೂರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಮೈಸೂರು: ವಿಧಾನಪರಿಷತ್ ಸದಸ್ಯ (MLC) ಎಚ್. ವಿಶ್ವನಾಥ್ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದು, ಹಿರಿಯ ರಾಜಕಾರಣಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೋಲಾರ ಅಥವಾ ಮೈಸೂರು ಭಾಗದ ಪ್ರಭಾವಿ ರಾಜಕಾರಣಿಯಾಗಿರುವ ಎಚ್. ವಿಶ್ವನಾಥ್ ಅವರು ತಮಗೆ ನೀಡಬೇಕಾಗಿದ್ದ ಸಾಲದ ಹಣವನ್ನು ವಾಪಸ್ ಕೇಳಲು ಹೋದಾಗ ತಮ್ಮ ಮೇಲೆ ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಕೋಟೆಹುಂಡಿ ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ. ಸಾಲದ ವ್ಯವಹಾರದ ಜಗಳವೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರೂ. 55 ಲಕ್ಷ ಸಾಲದ ಹಿನ್ನೆಲೆ ದೂರಿನ ವಿವರಗಳ ಪ್ರಕಾರ, ಈ ವಿವಾದವು 2013ರ ಸಾಲದ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಅಂದು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಎಚ್.…

Read More

ಬೀದರ್ : ರಾಜ್ಯಾದ್ಯಂತ ಮುಂಗಾರು ಎಂಟ್ರಿಗು ಮುನ್ನವೇ ವರುಣ ಅಬ್ಬರಿಸುತ್ತಿದ್ದು, ಬೀದರ್ ನಲ್ಲಿ ಮನೆಯ ಮೇಲ್ಚಾವಣಿ ಕುಸಿದು ಐದು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಇಬ್ಬರು ಮಕ್ಕಳ ಹಾಗೂ ಮಹಿಳೆ ಸೇರಿದಂತೆ ಐವರಿಗೆ ಗಂಭೀರವಾದ ಗಯಗಳಾಗಿರುವ ಘಟನೆ ನಡೆದಿದೆ. ಬೀದರ್ ನ ಕಮಠಾಣಾ ಎಂಬ ಗ್ರಾಮದಲ್ಲಿ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಿನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿಯಾಗಿ ರಾಯಚೂರಲ್ಲಿ ಕೂಡ ಹಲವಡೆ ಸುರಿದ ಮಳೆಯಿಂದಾಗಿ ಅವಾಂತರ ನಡೆದಿದ್ದು ಮಸ್ಕಿ ಪಟ್ಟಣದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗೆ ಉರುಳಿವೆ. ವಾಲ್ಮೀಕಿ ಮತ್ತು ಬಸವೇಶ್ವರ ನಗರದಲ್ಲಿ ಭಾರಿ ಮಳೆಯಿಂದಾಗಿ ವಿದ್ಯುತ್ ಕಂಬ ಧರೆಗೆ ಉರುಳಿವೆ.

Read More