Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಈ ವರ್ಷ ಮಾರುಕಟ್ಟೆಯಲ್ಲಿ ಕಾಣುತ್ತಿರುವಷ್ಟು ನೇರಳೆ ಹಣ್ಣುಗಳನ್ನು ನಾನು ಕಳೆದ ಮೂರು ದಶಕಗಳಲ್ಲಿ ಎಂದೂ ನೋಡಿಲ್ಲ. ನೇರಳೆ ಹಣ್ಣುಗಳು ಅಕ್ಷರಶಃ ರಾಶಿ ರಾಶಿಯಾಗಿ ಬಿದ್ದಿವೆ. ಕಳೆದ ವರ್ಷ ತೀರಾ ಕಡಿಮೆ ಫಲ ಬಿಟ್ಟಿದ್ದ ಮರಗಳೂ ಈಗ ನೇರಳೆ ಹಣ್ಣಿನಿಂದ ತುಂಬಿ ನೆಲದ ಮೇಲೆ ಸುರಿಯುತ್ತಿವೆ. ಫಲ ಬಿಟ್ಟಿದ್ದ ಮರಗಳಲ್ಲಂತೂ ಹಣ್ಣಿನ ಸುರಿಮಳೆಯೇ ಆಗಿದೆ. ಇದು ನಿಖರವಾಗಿ ಏನಾಗುತ್ತಿದೆ? ನಮ್ಮ ಅಜ್ಜಿ ಯಾವಾಗಲೂ ಹೇಳುತ್ತಿದ್ದರು: “ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು ಹೀಗೆ ರಾಶಿ ರಾಶಿಯಾಗಿ ಬೀಳುತ್ತದೆಯೋ, ಆ ವರ್ಷ ಬರಗಾಲ ಇರುತ್ತದೆ” ಅಜ್ಜಿಯ ಪಾರಂಪರಿಕ ಜ್ಞಾನವು ಸಸ್ಯಶಾಸ್ತ್ರದ ವೈಜ್ಞಾನಿಕ ವಿಶ್ಲೇಷಣೆಯ ಪ್ರಕಾರ ಸಂಪೂರ್ಣ ಸರಿ ಮತ್ತು ನಿಖರವಾಗಿದೆ. ವಿಜ್ಞಾನದಲ್ಲಿ ಈ ರೋಚಕ ಮತ್ತು ಅಷ್ಟೇ ಆಘಾತಕಾರಿ ಪ್ರಕ್ರಿಯೆಗೆ “ಮಾಸ್ಟಿಂಗ್” (Masting) ಅಥವಾ “ಸ್ಟ್ರೆಸ್ ಫ್ರೂಟಿಂಗ್” (Stress Fruiting) ಎಂದು ಕರೆಯುತ್ತಾರೆ. ಮರಗಳು ತಮ್ಮನ್ನು ತಾವು ಮುಗಿಸಿಕೊಂಡು ಗರಿಷ್ಠ ಹಣ್ಣು ಕೊಡುವ ಈ ಕೊನೆಯ ಪ್ರಯತ್ನವನ್ನು ಕೆಲವೊಮ್ಮೆ “ಸೂಸೈಡ್ ಫ್ರೂಟಿಂಗ್” (Suicide Fruiting) ಅಥವಾ…
ಬಳ್ಳಾರಿ: ರಾಜ್ಯದಲ್ಲಿ ಮನಕಲಕುವ ಘೋರ ಘಟನೆಯೊಂದು ಸಂಭವಿಸಿದೆ. ಕೌಟುಂಬಿಕ ಸಮಸ್ಯೆಯಿಂದ ಜುಗುಪ್ಸೆಗೊಂಡ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಉಣಿಸಿ, ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಗಡಿಭಾಗವಾದ ಆಂಧ್ರಪ್ರದೇಶದ ಗೂಳ್ಯಂ ಬಳಿ ನಡೆದಿದೆ. ಒಂದೇ ಕುಟುಂಬದ ಮೂವರು ಹೀಗೆ ಧಾರುಣವಾಗಿ ಸಾವನ್ನಪ್ಪಿರುವುದು ಸ್ಥಳೀಯವಾಗಿ ತೀವ್ರ ಶೋಕವನ್ನು ಉಂಟುಮಾಡಿದೆ. ಮೃತರ ಗುರುತು ಪತ್ತೆ: ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ನಿವಾಸಿಯಾದ ಮಹೇಶ್ (37) ಎಂಬಾತನೇ ತನ್ನ ಮೂರನೇ ಪತ್ನಿ ಮತ್ತು ಮೂರು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮಹೇಶ್ ತನಗಿದ್ದ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಂದಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಇಡೀ ಕುಟುಂಬ ಇಹಲೋಕ ತ್ಯಜಿಸುವಂತಾಗಿದೆ. ಘಟನೆಯ ಹಿನ್ನೆಲೆ: ಮೃತ ಮಹೇಶ್ನ ವೈವಾಹಿಕ ಜೀವನವು ಮೊದಲಿನಿಂದಲೂ ಸಾಕಷ್ಟು ಏರುಪೇರುಗಳಿಂದ ಕೂಡಿತ್ತು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ಈತ ಸುಮಾರು ಆರು ವರ್ಷಗಳ ಹಿಂದೆಯೇ ತನ್ನ ಮೊದಲ ಹಾಗೂ…
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವವರ ಸರಣಿ ಮುಂದುವರಿದಿದೆ. ಹಳ್ಳ, ಕೊಳ್ಳ, ಕೆರೆಗಳಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಿರುವ ಕೃಷಿ ಹೊಂಡಗಳು ಅಮಾಯಕರ ಪಾಲಿಗೆ ಮೃತ್ಯುಕೂಪಗಳಾಗುತ್ತಿವೆ. ಇಂತಹದ್ದೇ ಒಂದು ಘೋರ ದುರಂತ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಆಟವಾಡಲು ಹೋಗಿದ್ದಾಗ ಸಂಭವಿಸಿದ ದುರಂತ: ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಮೃತಪಟ್ಟ ದುರ್ದೈವಿ ಮಕ್ಕಳನ್ನು ದಕ್ಷಾ (11) ಮತ್ತು ಧನುಷ್ (4) ಎಂದು ಗುರುತಿಸಲಾಗಿದೆ. ಭಾನುವಾರ ಮನೆಯಲ್ಲಿ ಪೋಷಕರು ಇಲ್ಲದಿದ್ದ ಸಮಯದಲ್ಲಿ ಈ ಇಬ್ಬರು ಮಕ್ಕಳು ಆಟವಾಡುತ್ತಾ ಪಕ್ಕದ ಜಮೀನಿನ ಕಡೆಗೆ ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದಿದ್ದು, ನೀರಿನ ಆಳ ತಿಳಿಯದೇ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ, ಗ್ರಾಮದಲ್ಲಿ ನೀರವ ಮೌನ: ಮನೆಯ ಬೆಳಕಾಗಬೇಕಿದ್ದ ಇಬ್ಬರು ಕಂದಮ್ಮಗಳು ಏಕಕಾಲದಲ್ಲಿ ಜೀವ ಕಳೆದುಕೊಂಡಿರುವುದು ಇಡೀ ಗ್ರಾಮವನ್ನೇ…
ಬೆಂಗಳೂರು : ನಿನ್ನೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಹೊಸಕೋಟೆ ಬಳಿ ಬೆಂಜ್ ಕಾರು ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದರೆ, ಇನ್ನೂ ಕೆಂಗೇರಿ ಬಳಿ ರಸ್ತೆ ಬದಿಯ ದಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅದೇ ರೀತಿಯಾಗಿ ಶಾಲಾ ಬಸ್ ಹರಿದು ಓರ್ವ ಮಹಿಳೆ ಸಾವನಪ್ಪಿದ್ದರೆ, ಇನ್ನೊಂದು ಘಟನೆಯಲ್ಲಿ ಇಕೋ ಕಾರು ಪಲ್ಟಿಯಾಗಿ ಇನ್ನೊರ್ವ ವ್ಯಕ್ತಿ ಸಾವನಪ್ಪಿದ್ದಾನೆ. ಬೆಂಜ್ ಕಾರು ಅಪಘಾತ : ಇಬ್ಬರು ಸಾವು ನಿನ್ನೆ ಹೊಸಕೋಟೆ ಬಳಿ ಬೆಂಜ್ ಕಾರು ಅಪಘಾತ ಸಂಭವಿಸಿ ಇಬ್ಬರು ಸಾವನಪ್ಪಿದ್ದಾರೆ, ಕಳೆದ ರಾತ್ರಿ ಚೆನ್ನೈ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿ ಓರ್ವ ಯುವತಿ ಹಾಗು ಕಾರು ಚಾಲಕ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಇದ್ದ 28 ವರ್ಷದ ಯುವತಿ ಶಹಜಾನ್ ಶೇಕ್ ಹಾಗು ಚಾಲಕ ರಿಜ್ವಾನ್ ಸಾವನಪ್ಪಿದ್ದಳು. ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದ ಕಾರು ಮತ್ತು ಚಾಲಕ ರಿಜ್ವನ್ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಅಪಘಾತದ ರಭಸಕ್ಕೆ ರಿಜ್ವಾನ್…
ಉತ್ತರಕನ್ನಡ: ತಂದೆ ಕಾಲೇಜು ಶುಲ್ಕ ಪಾವತಿಸಲು ನೀಡಿದ್ದ ಹಣವನ್ನು ನಂಬಿ ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಸಕಾಲಕ್ಕೆ ಮರಳಿ ಸಿಗದೆ, ಹಾಲ್ಟಿಕೆಟ್ ಕೂಡ ಕೈತಪ್ಪಿದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿನಿಯನ್ನು ಭಟ್ಕಳದ ಕಾಲೇಜೊಂದರಲ್ಲಿ ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಎಂದು ಗುರುತಿಸಲಾಗಿದೆ. ಸಾಲದ ರೂಪದಲ್ಲಿ ಹಣ ಪಡೆದಿದ್ದ ಪರಿಚಯಸ್ಥ ಮೃತ ಗಾಯತ್ರಿ ಅವರ ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಮಗಳ ಕಾಲೇಜು ಶುಲ್ಕವನ್ನು ಪಾವತಿಸುವಂತೆ 10 ಸಾವಿರ ರೂಪಾಯಿ ಹಣವನ್ನು ನೀಡಿದ್ದರು. ಆದರೆ ಇದೇ ಸಮಯದಲ್ಲಿ ಅದೇ ಊರಿನ ಪರಿಚಯಸ್ಥನಾಗಿದ್ದ ಸಂತೋಷ ಮಾಧೇವ ನಾಯ್ಕ ಎಂಬಾತ ಗಾಯತ್ರಿ ಬಳಿ ಬಂದು ತುರ್ತು ಅಗತ್ಯವಿದೆ ಎಂದು ಕೇಳಿದ್ದಲ್ಲದೆ, ನಿಗದಿತ ಸಮಯಕ್ಕೆ ಸರಿಯಾಗಿ ಹಣವನ್ನು ಮರಳಿ ನೀಡುವುದಾಗಿ ಭರವಸೆ ನೀಡಿದ್ದ. ಇದನ್ನು ನಂಬಿದ ವಿದ್ಯಾರ್ಥಿನಿ ತಂದೆ ನೀಡಿದ್ದ 10 ಸಾವಿರ ರೂಪಾಯಿಯನ್ನು ಆತನಿಗೆ…
ಮೈಸೂರು : ಜಿಲ್ಲೆಯ ಸಾಲಿಗ್ರಾಮದಲ್ಲಿ ತಾಯಿಯೊಬ್ಬಳು ತನ್ನಿಬ್ಬರು ಹಸುಗೂಸುಗಳನ್ನು ಉಸಿರುಗಟ್ಟಿಸಿ ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಅತ್ಯಂತ ಹೃದಯವಿದ್ರಾವಕ ಮತ್ತು ಘೋರ ದುರಂತವೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಕಳವಳ ಹಾಗೂ ವಿಷಾದವನ್ನು ಉಂಟುಮಾಡಿದೆ. ಸಾಲಿಗ್ರಾಮ ತಾಲೂಕಿನ ಜವರೇಗೌಡರ ಕೊಪ್ಪಲು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇವಲ ಮೂರು ವರ್ಷದ ಧೃತಿ ಹಾಗೂ ಒಂದೂವರೆ ವರ್ಷದ ದಿಶಾ ಎಂಬ ಎರಡು ಮುಗ್ಧ ಹೆಣ್ಣುಮಕ್ಕಳು ಹೆತ್ತ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಕಣ್ಣಿಗೆ ರೆಪ್ಪೆಯಂತೆ ಕಾಯಬೇಕಾದ ತಾಯಿಯೇ ಮಕ್ಕಳ ಪಾಲಿಗೆ ಯಮನಾದ ಈ ಘಟನೆ ಗ್ರಾಮಸ್ಥರನ್ನು ತೀವ್ರ ದಿಗ್ಭ್ರಮೆಗೊಳಿಸಿದೆ. ಘಟನೆಯ ವಿವರ: ವಿವರಗಳ ಪ್ರಕಾರ, ಆರೋಪಿ ತಾಯಿ ಪ್ರಿಯಾಂಕಾ ತನ್ನಿಬ್ಬರು ಹೆಣ್ಣುಮಕ್ಕಳಿಗೆ ನೇಣು ಬಿಗಿದು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದಾಳೆ. ಕಂದಮ್ಮಗಳು ಪ್ರಾಣಬಿಟ್ಟಿದ್ದನ್ನು ಖಚಿತಪಡಿಸಿಕೊಂಡ ನಂತರ, ತಾನೂ ಕೂಡ ಅದೇ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ…
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ರೈತರ ಭೂಮಿ ವಶಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಡದಿ ಟೌನ್ಶಿಪ್ ಯೋಜನೆ ಮೂಲತಃ ನನ್ನ ಕನಸಿನ ಕೂಸೇ ಹೊರತು ಬೇರೆಯವರದಲ್ಲ ಎಂದು ಸ್ಪಷ್ಟಪಡಿಸಿದರು. “ರೈತರನ್ನು ಒಕ್ಕಲೆಬ್ಬಿಸಿ ಎಂದು ನಿಮ್ಮ ಅಜ್ಜಯ್ಯ ಹೇಳಿದ್ದಾರಾ? ನಿಮಗೆ ಯಾವ ರೀತಿ ಬದುಕಬೇಕು ಎಂಬ ಕರುಣೆಯನ್ನು ಅವರು ತೋರಿಸಿಲ್ಲವೇ?” ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ತೀವ್ರ ಆಕ್ರೋಶ ಹೊರಹಾಕಿದರು. “ನನ್ನ ಉದ್ದೇಶವೇ ಬೇರೆ ಇತ್ತು, ಇವರದ್ದು ಲ್ಯಾಂಡ್ ದಂಧೆ” ಯೋಜನೆಯ ಹಿನ್ನೆಲೆಯನ್ನು ನೆನಪಿಸಿಕೊಂಡ ಕುಮಾರಸ್ವಾಮಿ, ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗ ಹೊಂದಿದ್ದ ಉದ್ದೇಶಕ್ಕೂ, ಈಗಿನ ಸರ್ಕಾರದ ಉದ್ದೇಶಕ್ಕೂ ಭಾರಿ ವ್ಯತ್ಯಾಸವಿದೆ ಎಂದು ಆರೋಪಿಸಿದರು.…
BREAKING : ಸೇನಾ ಮುಖ್ಯಸ್ಥರಾಗಿ ಲೆ.ಜನರಲ್ ಧೀರಜ್ ಸೇಠ್ ನೇಮಕ ಮಾಡಿದ ಕೇಂದ್ರ ಸರ್ಕಾರ | Lt. General Dheeraj Seth
ನವದೆಹಲಿ : ಕೇಂದ್ರ ಸರ್ಕಾರವು ಭಾರತೀಯ ಸೇನೆಯ ನೂತನ ಮುಖ್ಯಸ್ಥರ (Chief of Army Staff) ನೇಮಕಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪ್ರಸ್ತುತ ಸದರ್ನ್ ಕಮಾಂಡ್ನ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿರುವ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ದೇಶದ ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರವು ರಕ್ಷಣಾ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಹಾಲಿ ಸೇನಾ ಮುಖ್ಯಸ್ಥರು ಜೂನ್ 30 ರಂದು ನಿವೃತ್ತರಾಗಲಿದ್ದು, ಅದೇ ದಿನ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ನೂತನ ಸೇನಾ ಮುಖ್ಯಸ್ಥರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ದೇಶದ ರಕ್ಷಣಾ ವ್ಯವಸ್ಥೆಯನ್ನು ಮುನ್ನಡೆಸುವ ಅತ್ಯುನ್ನತ ಮತ್ತು ಜವಾಬ್ದಾರಿಯುತ ಹುದ್ದೆ ಇದಾಗಿದ್ದು, ಜೂನ್ ಕೊನೆಯ ವಾರದಲ್ಲಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸರಾಗವಾಗಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಯಾರು ಈ ಧೀರಜ್ ಸೇಠ್? ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಭಾರತೀಯ ಸೇನೆಯಲ್ಲಿ ಸುದೀರ್ಘ ಮತ್ತು…
ಮಂಡ್ಯ : ಜಿಲ್ಲೆಯಲ್ಲಿ ಅತ್ಯಂತ ದುರದೃಷ್ಟಕರ ಹಾಗೂ ಕರುಳು ಹಿಂಡುವ ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಿದ್ದ ಎರಡು ವರ್ಷದ ಕಂದಮ್ಮನೊಂದು ಆಕಸ್ಮಿಕವಾಗಿ ನೀರಿನ ಸಂಪ್ಗೆ ಬಿದ್ದು ಸಾವನ್ನಪ್ಪಿರುವ ಧೋರಣ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಬಾಲಕನನ್ನು ಲಕ್ಷ್ಮೀಸಾಗರ ಗ್ರಾಮದ ನಿವಾಸಿಗಳಾದ ಹರೀಶ್ ಮತ್ತು ಸುಷ್ಮಾ ದಂಪತಿಯ ಪುತ್ರ ವಿನು (2 ವರ್ಷ) ಎಂದು ಗುರುತಿಸಲಾಗಿದೆ. ಕಣ್ಣೆದುರೇ ಇದ್ದ ಮಗು ಇನ್ನು ನೆನಪಾಗಿ ಉಳಿದಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಶನಿವಾರ ಬಾಲಕ ವಿನು ಎಂದಿನಂತೆ ತನ್ನ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದನು. ಈ ವೇಳೆ ಮನೆಯ ಮುಂದಿದ್ದ ನೀರಿನ ಸಂಪ್ನ ಮುಚ್ಚಳ ಸರಿಯಾಗಿ ಮುಚ್ಚದ ಕಾರಣ ಅಥವಾ ಆಕಸ್ಮಿಕವಾಗಿ ಮಗು ಅದರ ಬಳಿ ಹೋದಾಗ ಕಾಲು ಜಾರಿ ಒಳಗೆ ಬಿದ್ದಿದೆ ಎನ್ನಲಾಗಿದೆ. ಮಗು ಕಾಣಿಸುತ್ತಿಲ್ಲ ಎಂದು ಪೋಷಕರು ಹುಡುಕಾಡಿದಾಗ ಈ ಘೋರ ದುರಂತ ಬೆಳಕಿಗೆ ಬಂದಿದೆ. ಮಗುವನ್ನು ಸಂಪ್ನಿಂದ ಮೇಲಕ್ಕೆತ್ತಿ ರಕ್ಷಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲೇ ಮಗು ಜೀವ ಬಿಟ್ಟಿತ್ತು.…
ಬಾಗಲಕೋಟೆಯ : ಬಾಗಲಕೋಟೆಯಲ್ಲಿ ಪ್ರಾಣಿ ಲೋಕದ ಅಪಾರ ಪ್ರೇಮ ಮತ್ತು ಕರುಳಬಳ್ಳಿಯ ಸಂಬಂಧವನ್ನು ಅನಾವರಣಗೊಳಿಸುವ ಮನಕಲಕುವ ಘಟನೆಯೊಂದು ನಡೆದಿದೆ. ಮನುಷ್ಯರಿಗಷ್ಟೇ ಅಲ್ಲ, ಪ್ರಾಣಿಗಳಿಗೂ ಹೆತ್ತ ಒಡಲಿನ ಮಮಕಾರ, ಅಗಲಿಕೆಯ ನೋವು ಎಷ್ಟು ತೀವ್ರವಾಗಿರುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ತನ್ನ ಒಂಬತ್ತು ತಿಂಗಳ ಗಂಡು ನಾಯಿಮರಿಯನ್ನು ಕಳೆದುಕೊಂಡ ತಾಯಿ ಶ್ವಾನದ ಆಕ್ರಂದನ ಮತ್ತು ಮೌನ ರೋದನ ಪ್ರತಿಯೊಬ್ಬರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ಅನಾರೋಗ್ಯದಿಂದ ಮರಿ ಶ್ವಾನ ಸಾವು ಬಾಗಲಕೋಟೆಯ ಸ್ಥಳೀಯ ಪ್ರದೇಶವೊಂದರಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಒಂಬತ್ತು ತಿಂಗಳ ಗಂಡು ನಾಯಿಮರಿಯು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಮರಿ ಕಣ್ಣು ಮುಚ್ಚುತ್ತಿದ್ದಂತೆ ಅದರ ತಾಯಿ ಶ್ವಾನ ಪಟ್ಟ ಪಾಡು, ಅಲ್ಲಿ ನೆರೆದಿದ್ದ ಜನರ ಮನಸ್ಸನ್ನು ಕಲಕುವಂತಿತ್ತು. ತನ್ನ ಕಂದ ಇನ್ನೇಳುವುದಿಲ್ಲ ಎಂಬ ಕಹಿ ಸತ್ಯವನ್ನು ಅರಗಿಸಿಕೊಳ್ಳಲಾಗದ ತಾಯಿ ಶ್ವಾನ, ಮರಿಯ ದೇಹದ ಸುತ್ತಲೂ ಸುತ್ತುತ್ತಾ ಮಮ್ಮಲ ಮರುಗಿದೆ. ಸ್ಕೂಟರ್ ಹಿಂಬಾಲಿಸಿದ ತಾಯಿ ಶ್ವಾನ ಮೃತ…














