Author: kannadanewsnow05

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಕೆಎಎಫ್ ಕ್ರಿಯೇಟಿವ್ ಶಾಪ್ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೋಲಿಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Read More

ತುಮಕೂರು : ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು ಕಳೆದ ಎರಡು ದಿನಗಳ ಹಿಂದೆ ಅಷ್ಟೇ ದೆಹಲಿಗೆ ತೆರಳಿ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯದ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಡಿಕೆ ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯದಲ್ಲಿ ಹಲವು ಬೆಳವಣಿಗೆಗಳು ಆಗಿದ್ದು ಇದೀಗ ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ ಎಂದು ಟ್ವೀಟ್ ನಲ್ಲಿ ಡಿಕೆ ಶಿವಕುಮಾರ್, ಮಾರ್ಮಿಕವಾಗಿ ಬರೆದುಕೊಂಡಿದ್ದಾರೆ. ನಿನ್ನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದೆ. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ – 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಡಿಸಿಎಂ ಆಗಿ ಅಲ್ಲ, ಮಠದ ಒಬ್ಬ ಭಕ್ತನಾಗಿ, ಶ್ರೀಗಳ ಶಿಷ್ಯನಾಗಿ, ಅಜ್ಜನ ಒಬ್ಬ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ.. ಮಾನವ…

Read More

ಬೆಂಗಳೂರು : ಕದ್ದ ಆಸ್ತಿಯನ್ನು ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಗೊಳಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ ಹಕ್ಕನ್ನು ಹೊಂದಿರುವುದಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಕದ್ದ ಆಸ್ತಿ ವಿಷಯದಲ್ಲಿ ಅದು ಚಿನ್ನದ ಸಾಲ ಕಂಪನಿಯಾಗಿದ್ದರೂ ಸಹ ಕದ್ದ ಆಸ್ತಿಯನ್ನು ಹೊಂದುವುದು ರಕ್ಷಾ ಕವಚವಾಗಿ ಬದಲಾಗುವುದಿಲ್ಲ. ಅಲ್ಲದೇ, ಬಡ್ಡಿ ಮತ್ತು ಭದ್ರತೆಯ ಕಾರಣ ನೀಡಿ ಕದ್ದ ವಸ್ತುಗಳನ್ನು ತನ್ನ ಬಳಿಯೇ ಇಟ್ಟುಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಕೆಂಗೇರಿಯ ಕರೂರು ವೈಶ್ಯ ಬ್ಯಾಂಕ್‌ ಶಾಖೆಯಿಂದ ಕದ್ದ ಒಡವೆಗಳನ್ನು ಅಡವಿಟ್ಟುಕೊಂಡು ಸಾಲ ಮಂಜೂರು ಮಾಡಿದ್ದ ಆರೋಪದಲ್ಲಿ ಕದ್ದ ಒಡವೆಗಳನ್ನು ಒಪ್ಪಿಸುವಂತೆ ಕೆಂಗೇರಿ ಪೊಲೀಸರು ನೀಡಿದ್ದ ನೋಟಿಸ್ ಪ್ರಶ್ನಿಸಿ ಐಐಎಫ್ಎಲ್ ಫೈನಾನ್ಸ್ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಪ್ರಕರಣದ ಹಿನ್ನೆಲೆ 2022ರಿಂದ ಕರೂರು ವೈಶ್ಯ ಬ್ಯಾಂಕ್​ನ ಕೆಂಗೇರಿ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಮಹಿಳಾ ಸಿಬ್ಬಂದಿಯೊಬ್ಬರು…

Read More

ಯಾದಗಿರಿ : ರಾಜ್ಯದಲ್ಲಿ ಅನಿಷ್ಟ ಪದ್ಧತಿ ಸಾಮಾಜಿಕ ಬಹಿಷ್ಕಾರ ಇನ್ನು ಜೀವಂತವಾಗಿದೆ. ಹೌದು ತಮ್ಮದೇ ಸಮುದಾಯದಿಂದ 12 ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ನೀಡಲಾಗಿದೆ ಈ ಒಂದು ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ. ಸ್ವಕೋಳಿ ಸಾಳಿ ಸಮುದಾಯದ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ತಮ್ಮದೇ ಸಮುದಾಯದಿಂದ 12 ಕುಟುಂಬಗಳು ಬಹಿಷ್ಕಾರಗೊಂಡಿವೆ. ಕಳೆದ 8 ವರ್ಷಗಳಿಂದ ಕುಟುಂಬದ ಸದಸ್ಯರು ಈ ಒಂದು ಸಂಕಷ್ಟ ಎದುರಿಸುತ್ತಿದ್ದಾರೆ. ಸಮುದಾಯಕ್ಕೆ ಸೇರಿದ ಸಂಘದ ಬಗ್ಗೆ ಆಸ್ತಿ ಲೆಕ್ಕ ಕೇಳಿದ್ದಕ್ಕೆ ಬಹಿಷ್ಕಾರ ಹಾಕಿದ್ದಾರೆ. ಶಹಾಪುರದ ನಗರದಲ್ಲಿರುವ ಜಿಹ್ವೇಶ್ವರ ಕಲ್ಯಾಣ ಮಂಟಪ ಹಾಗೂ 18 ವಾಣಿಜ್ಯ ಮಳಿಗೆಗಳ ಆದಾಯದ ಬಗ್ಗೆ 20 ಕುಟುಂಬಗಳು ಪ್ರಶ್ನೆ ಮಾಡಿದ್ದವು. ಸಂಘಕ್ಕೆ ಸೇರಿ ಆಸ್ತಿಗಳಿಂದ ವಾರ್ಷಿಕ 25 ಲಕ್ಷ ಆದಾಯ ಹರಿದು ಬರುತ್ತೆ ಆದಾಯದ ಬಗ್ಗೆ 20 ಕುಟುಂಬಗಳು ಪ್ರಶ್ನೆ ಮಾಡಿದ್ದವು. ಪ್ರಶ್ನೆ ಮಾಡಿದ್ದಕ್ಕೆ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿವೆ. 20 ರಲ್ಲಿ 8 ಕುಟುಂಬಗಳು…

Read More

ಮಂಡ್ಯ : ಮಂಡ್ಯದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿರುವ ಘಟನೆ ಇದೀಗ ವರದಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಾಲೆಗೆ ಮಕ್ಕಳು ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಆದರೆ ಈ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ್ದಾರೆ. ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಶಾಲೆಯಲ್ಲಿ ಶಾಲಾ ಮಕ್ಕಳು ಕೂಲಿ ಆಳುಗಳಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ಸ್ಥಳೀಯರು ಶಾಲಾ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಷ್ಟು ಜನ ಮಕ್ಕಳನ್ನು ಇಟ್ಕೊಂಡು ಗಾಡಿ ಕೆಲಸ ಮಾಡುತ್ತಿದ್ದೀರಲ್ಲ ಗ್ರಾಮದಲ್ಲಿ ಬೇರೆ ಯಾರು ನಿಮಗೆ ಈ ಕೆಲಸ ಮಾಡೋಕೆ ಸಿಗಲಿಲ್ವಾ? ಮಕ್ಕಳ ಕೈಯಲ್ಲಿ ಹೇಗೆ ಕೆಲಸ ಮಾಡಿಸಿದ್ದೀರಾ? ನೀವು ಏನು ಬೇಕಾದರೂ ಮಾಡಿ ಆದರೆ ಮಕ್ಕಳ ಕೈಯಲ್ಲಿ ಯಾಕೆ ಕೆಲಸ ಮಾಡಿಸುತ್ತೀರಾ? ಮಕ್ಕಳನ್ನು ಶಾಲೆಗೆ ಕಳಿಸುವುದು ಇದಕ್ಕೆನಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Read More

ಹಾಸನ : ಬಿಪಿಎಲ್‌ ಕಾರ್ಡ್‌ನಿಂದ ತೆಗೆದುಹಾಕಿರುವ ಆದಾಯ ತೆರಿಗೆದಾರರು ಮನೆ ಮತ್ತು ಬೈಕ್‌ ಸಾಲ ಕಟ್ಟುತ್ತಿದ್ದರೆ ಅವರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ನೀಡಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್‌ ಕಾರ್ಡ್‌ಗಳನ್ನು ಎ.ಪಿ.ಎಲ್‌ಗೆ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ. ನಿನ್ನೆ ಹಾಸನದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದ್ದರೆ ಅಗತ್ಯ ದಾಖಲೆಗಳನ್ನು ಪಡೆದು ಬಿಪಿಎಲ್ ಕಾರ್ಡ್ ನೀಡಲು ಮರು ಪರಿಶೀಲನೆ ನಡೆಸಬೇಕು. ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದರು. ಮಾರ್ಚ್ ನಿಂದ ‘ಇಂದಿರಾ ಕಿಟ್’ ವಿತರಣೆ ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಮತ್ತೊಂದು ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ…

Read More

ಶಿವಮೊಗ್ಗ : ಸ್ನೇಹಿತರೆಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ ಎಂದು ತಿಳಿದುಬಂದಿದೆ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ಮದ್ಯದ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು…

Read More

ಹಾಸನ : ಹಾಸನ ನಗರದಲ್ಲಿ ಎಮ್ ಡಿಎಂಎ ಡ್ರಗ್ಸ್ ಮಾರಾಟ ಜಾಲ ಪತ್ತೆಯಾಗಿದ್ದು, ಕಾರಿನಲ್ಲಿ ಡ್ರಗ್ ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಾಸನದ ರಾಜಕುಮಾರ ನಗರದ ಚೆಕ್ ಪೋಸ್ಟ್ ಬಳಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ನಾಲ್ವರು ಹಾಗೂ ಹಾಸನದ ಓರ್ವ ಆರೋಪಿಯ ಬಂಧನವಾಗಿದೆ. ಪರ್ವೀಜ್ (29)ಸುಹೇಲ್ (24) ಅಬ್ದುಲ್ ಯಾಸಿನ್ (20) ಇಬ್ರತ್ ಖಾನ್ (24) ಸಯ್ಯದ್ ಯೂಸುಫ್ (23) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿ ಇದ್ದ 2 ಲಕ್ಷಕ್ಕೂ ಅಧಿಕ ಮೌಲ್ಯದ 40 ಗ್ರಾಂ MDMA ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರು ತಪಾಸಣೆಯ ವೇಳೆ ಐವರು ಆರೋಪಿಗಳು ಸಿಗಿ ಬಿದ್ದಿದ್ದಾರೆ.

Read More

ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ನಡೆಯಲಿದೆ. ಭೂ ಗ್ಯಾರಂಟಿ ಸಮರ್ಪಣ ಹೆಸರಿನಲ್ಲಿ ಸರ್ಕಾರದಿಂದ ಸಾಧನ ಸಮಾವೇಶ ಆಯೋಜನೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಅಲ್ಲದೇ ಈ ಸಮಾವೇಶದಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ. ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಮಾವೇಶದ ವೇದಿಕೆ ಈಗಾಗಲೇ ಸಿದ್ಧವಾಗಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಇಂದು ಹೆಲಿಕ್ಯಾಪ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾವೇರಿಗೆ ಆಗಮಿಸಲಿದ್ದಾರೆ ಹಾವೇರಿಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ಸಿಎಂ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಆಗಲಿದೆ. ಹಂಪಿಯಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10:40ಕ್ಕೆ ಪ್ರತ್ಯೇಕವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ. ಸಾಧನಾ ಸಮಾವೇಶಕ್ಕಾಗಿ ಸುಮಾರು 2 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ವೀಕ್ಷಣೆಗೆ…

Read More

ಬೀದರ್ : ಬೀದರ್ ನಲ್ಲಿ ಘೋರ ಘಟನೆ ಒಂದು ನಡೆದಿದ್ದು ಮನೆಯ ಮುಂದೆ ಇರುವ ಚರಂಡಿಗೆ ಬಿದ್ದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಮಲ್ಲಿಪರ್ಜಾಪುರ ಎಂಬಲ್ಲಿ ನಡೆದಿದೆ. ಶಿವರಾತ್ರಿ ಹಬ್ಬಕ್ಕೆ ಅಂತ ಅಜ್ಜಿ ಮನೆಗೆ ಬಂದಿದ್ದಾಗ ಈ ಒಂದು ಘಟನೆ ಸಂಭವಿಸಿದೆ. ಮನೆ ಮುಂದೆ ಆಟವಾಡುತ್ತಿರುವಾಗ ಅಲ್ಲಿಯೇ ಇದ್ದ ಚರಂಡಿಗೆ ಆಯತಪ್ಪಿ ಅವಿನಾಶ್ (5) ಬಿದ್ದಿದ್ದಾನೆ. ಗುಂಡಿ ತುಂಬಾ ಆಳವಿದ್ದು ನೀರು ತುಂಬಿಕೊಂಡಿದ್ದ ಹಿನ್ನೆಲೆಯಲ್ಲಿ ಹೊರಬರಲಾಗದೆ ಅಂಕುಶ್ ಅಲ್ಲಿಯೇ ಉಸಿರುಗುಟ್ಟು ಸಾವನಪ್ಪಿದ್ದಾನೆ. ಗ್ರಾಮ ಪಂಚಾಯಿತಿ ಗುಂಡಿ ಮುಚ್ಚದೆ ಇರುವುದರಿಂದ ಮಗುವಿಗೆ ಸಾವಿಗೆ ಕಾರಣ. ಪಿಡಿಒ ವಿರುದ್ಧ ಕ್ರಮ ಆಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More