Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್ 17 ರಿಂದ ಸಾಕ್ಷಿ ವಿಚಾರಣೆಗೆ ಕೋರ್ಟ್ ಇದೀಗ ನಿರ್ಧರಿಸಿದೆ. ಈ ವಿಚಾರವಾಗಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ ಪರ ವಕೀಲ ಬಾಲನ್ ಅವರಿಗೆ ಕೋರ್ಟ್ ಈ ಕುರಿತು ಮಾಹಿತಿ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರೋಪಿಗಳು ಕೂಡ ಸಾಕ್ಷ್ಯಗೆ ಸಂಬಂಧಪಟ್ಟಂತೆ ಹಾಗು ಸಾಕ್ಷಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಕೊಡಬೇಕು ಅಂತ ಮನವಿ ಮಾಡಿಕೊಂಡಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಆತ್ಮಹತ್ಯೆ ಘಟನೆ ನಡೆದಿದೆ. ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಮುರಳಿ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುರುಳಿಗಿ ಗ್ರೇಟರ್, ಬೆಂಗಳೂರು ಅಥಾರಿಟಿ ನೋಟಿಸ್ ನೀಡಿತ್ತು. ತನಗೆ ಜಿಬಿಎಯಿಂದ ನೋಟಿಸ್ ಕೊಡಿಸಲು ಪಕ್ಕದ ಮನೆಯ ಉಷಾ ನಾಯಕ್ ಕಾರಣ ಆಗಿದ್ದಾರೆ ಎಂದು ಉಲ್ಲೇಖಿಸಿ ಮುರುಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯಘಟ್ಟನ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಯಾವಕರಣಕ್ಕೆ ಮುರುಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೂಲಕ ಫುಲ್ ಸ್ಟಾಪ್ ಹಾಕಿದ್ದಾರೆ. ಅಲ್ಲದೆ ಇಂದು ಮಂಗಳೂರಿನ ಕಾವೇರಿ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ನಡೆಸಿದರು. ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ಅಧಿಕಾರ ಶಾಶ್ವತ ಅಲ್ಲ ಯಾವತ್ತಿದ್ದರೂ ಬಿಡಲೇಬೇಕು 10 ವರ್ಷದ ನಂತರವಾದರೂ ಕೂಡ ಅಧಿಕಾರ ಬಿಡಬೇಕು ಆದರೆ ಯಾವಾಗ ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.ಇನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೆಸಿ ವೇಣುಗೋಪಾಲ್ ಆಗಮಿಸಿದಾಗ ಡಿಕೆ ಶಿವಕುಮಾರ್ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಈ ವಿಚಾರವಾಗಿ ಜೈಕಾರದಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಲ್ಲವೂ ತಿಳಿಯದೆ ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಕೆಸಿ ವೇಣುಗೋಪಾಲ್ ಕಾರ್ಯಕ್ರಮಕ್ಕೆ ಬಂದಿದ್ದರು ಅಷ್ಟೇ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಸಿಎಂ ಜೊತೆಗೆ…
ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವ ವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕೊಣಾಜೆ ಯ ಮಂಗಳ ಗಂಗೋತ್ರಿ ಯಲ್ಲಿ ಆಯೋಜಿಸಲಾಗಿದ್ದ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧೀ ಐತಿಹಾಸಿಕ ಸಂವಾದ ಶತಮಾನೋತ್ಸವ. ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ. ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಇದೇ ವೇಳೆ ಅವರು ವೇಣುಗೋಪಾಲ್ ಅವರೊಂದಿಗೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿಗಳ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರೆದರೆ ಮಾತ್ರ ದೆಹಲಿಗೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ…
ಬೆಂಗಳೂರು : ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಪೋಸ್ಟ್ ಗೆ ಎಂದು ಬಂದಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈಯಲ್ಲಿ ಇರುವ ಒಂದೇ ಬ್ರಾಂಡ್ ವಾಚ್ ಎಲ್ಲರ ಗಮನ ಸೆಳೆದಿತ್ತು. ಇನ್ನು ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಟೀಕೆ ಮಾಡಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು 24 ಲಕ್ಷ ರೂಪಾಯಿ ಕೊಟ್ಟು ಈ ಗಡಿಯಾರ ನಾನೇ ಖರೀದಿ ಮಾಡಿದ್ದೇನೆ ನನ್ನದೇ ಕ್ರೆಡಿಟ್ ಕಾರ್ಡ್ ಕೊಟ್ಟು ಖರೀದಿಸಿದ್ದೇನೆ ಚೆಕ್ ಮಾಡಬಹುದು ಎಲೆಕ್ಷನ್ ಅಫೀಡಿವೇಟ್ ನಲ್ಲೂ ಕೂಡ ತೋರಿಸಿದ್ದೇನೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಗುರಿಯಾಗಿಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ನನಗೆ ಅದರ ಬಗ್ಗೆ ಗೊತ್ತಿಲ್ಲ ಸಿಎಂ ಸಿದ್ದರಾಮಯ್ಯ ಅವರಿಗೆ ವಾಚ್ ಹಾಕಿಕೊಳ್ಳುವ ಅಧಿಕಾರವಿದೆ ಸಿಎಂ ಸಿದ್ದರಾಮಯ್ಯ ಅವರಿಗೆ ವಾಜ್ ಖರೀದಿಸುವ ತಾಕತ್ತು ಕೂಡ ಇದೆ ನನ್ನ ತಂದೆ…
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8 ಕೆ.ಜಿ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್ ಜಾಲದ ಸಂಬಂಧ ತಾಂಜೇನಿಯಾ ಮೂಲದ ನ್ಯಾನ್ಸಿ ಮತ್ತು ನೈಜೀರಿಯಾ ಮೂಲದ ಎಮುನಲ್ ಅರೆಂಜಿ ಇಡಿಕೋ ಎಂಬ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ನ್ಯಾನ್ಸಿ ಮೂರು ವರ್ಷಗಳ ಹಿಂದೆ ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದಳು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಈಕೆ ಡ್ರಗ್ ಪೆಡ್ಲಿಂಗ್ನಲ್ಲಿ ಸಕ್ರಿಯಳಾಗಿದ್ದಳು. ಈಕೆಗೆ ಸಹಕರಿಸುತ್ತಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳು ಸ್ಥಳೀಯರು, ವಿದ್ಯಾರ್ಥಿಗಳು ಮತ್ತು ಐಟಿ-ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಇನ್ನೊಬ್ಬ ಆರೋಪಿ ಎಮುನಲ್ ಅರೆಂಜಿ ಇಡಿಕೋ ನಾಲ್ಕು ವರ್ಷಗಳ ಹಿಂದೆ ವ್ಯಾಪಾರ ವೀಸಾದಡಿ ಭಾರತಕ್ಕೆ ಬಂದಿದ್ದ. ಸಿದ್ದಾಪುರ ಪೊಲೀಸ್…
ಮಂಡ್ಯ : ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನ ಯಾತ್ರೆ ನಡೆಯಿತು. ಜಾಮಿಯಾ ಮಸೀದಿ ಮುಂದೆ ಕುಳಿತು ಹನುಮ ಮಾಲಾಧಾರಿಗಳು ಭಜನೆ ಮಾಡಿದರು. ಈ ವೇಳೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡೆ ಅವರು ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಮಾಲಾಧಾರಿಗಳು ಎಸ್ ಪಿ ಮನೋವೊಲಿಕೆಗೆ ನಂತರ ಮುಂದೆ ಸಾಗಿದರು. ಜಾಮಿಯಾ ಮಸೀದಿ ವೃತದಿಂದ ಹನುಮ ಮಾಲಾಧಾರಿಗಳು ಮುಂದೆ ಸಾಗಿದರು ಕೆಲವೇ ನಿಮಿಷಗಳಲ್ಲಿ ರಂಗನಾಥ ಸ್ವಾಮಿ ದೇವಾಲಯ ಬಳಿ ಯಾತ್ರೆ ಸಮಾಪ್ತಿ ಆಗಲಿದೆ. ಈ ವೇಳೆ ಜಾಮಿಯಾ ಮಸೀದಿ ಜಾಗ ನಮ್ಮದು ಎಂದು ಮಾಲಾಧಾರಿಗಳು ಘೋಷಣೆ ಕೂಗಿದರು. ಮಸೀದಿ ವೃತದಲ್ಲೇ ಹನುಮ ಮಾಲಾಧಾರಿಗಳು ಘೋಷಣೆ ಕೂಗುತ್ತಿದ್ದರು. ಈ ವೇಳೆ ಕೆಲವು ಹನುಮ ಮಾಲಾಧಾರಿಗಳು ಜಾಮಿಯ ಮಸೀದಿಗೆ ಹೋಗಲು ಯತ್ನಿಸಿದರು. ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ಈ ಬೆಳೆ ವಾಗ್ವಾದ ನಡೆಯಿತು. ಹರಸಾಹಸ ಪಟ್ಟು ಮಾಲದಾರಿಗಳನ್ನು ಪೊಲೀಸರು ಮುಂದೆ ಕಳುಹಿಸಿದರು.
ಬೆಂಗಳೂರು : ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಸೀಕ್ವೆಲ್’ನ ಸಿನಿಮಾವನ್ನು ನೋಡಿದ ನಟ ರಣವೀರ್ ಸಿಂಗ್ ಅವರು ಈ ಸಿನಿಮಾದಲ್ಲಿರುವ ಚಾವುಂಡಿ ದೈವವನ್ನು ಫೀಮೇಲ್ ಘೋಸ್ಟ್ ಎಂದು ಕರೆದು ಅದರ ನಟನೆಯ ಅನುಕರಣೆ ಮಾಡಿದ್ದರು. ಇದೀಗ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲಾಗಿದೆ. ಬಾಲಿವುಡ್ ಸ್ಟಾರ್ ನಟ ದೀಪಿಕಾ ಪಡುಕೋಣೆ ಪ, ಸ್ಟಾರ್ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಕರ್ನಾಟಕದಲ್ಲಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಣವೀರ್ ಸಿಂಗ್ ಅವರು ಕಾಂತಾರ ದೈವವನ್ನು ‘ದೆವ್ವ’ ಎಣಬ ಪದ ಉಪಯೋಗಿಸಿ ಕರೆದಿದ್ದು ದೊಡ್ಡ ವಿವಾದವಾಗುತ್ತಿದೆ.28 ನವೆಂಬರ್ 2025ರಂದು, ಗೋವಾದ ಇಂಟರ್ ನ್ಯಾಷನಲ್ ಫೀಲಂ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ಈ ಘಟನೆ ನಡೆದಿತ್ತು. ಕಾಂತಾರ ಸಿನಿಮಾದ ಉಳ್ಳಾಳ್ತಿ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನಟ ರಣವೀರ್ ಸಿಂಗ್ ವಿರುದ್ಧ ಇದೀಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ…
ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.
ಬೆಂಗಳೂರು : ಕಳೆದ ಶನಿವಾರದಿಂದ ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ರಾಜಕಾರಣ ಜೋರಾಗಿತ್ತು. ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಕರೆದು ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿದ್ದರು. ಬಳಿಕ ನಿನ್ನೆ ಡಿಕೆ ಶಿವಕುಮಾರ್ ಖುದ್ದು ಸಿಎಂ ಸಿದ್ದರಾಮಯ್ಯಗೆ ಅಹ್ವಾನ ನೀಡಿದ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದರು. ಇದೀಗ ಇಂದು ರಾಜ್ಯಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆಗಮಿಸಿದ್ದು, ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಲಂಚ್ ಮೀಟಿಂಗ್ ಅರೇಂಜ್ ಮಾಡಿದ್ದಾರೆ. ಮಂಗಳೂರಲ್ಲಿ ಕಾವೇರಿ ಗೆಸ್ಟ್ ಹೌಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೆ.ಸಿ ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಸಿಎಂಗೆ ಖಾದ್ಯ ರೆಡಿ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಗೆ ಸಿಎಂ ಫೆವರೇಟ್ ನಾಟಿಕೋಳಿ ಸಾರು ಮಾಡಿದ್ದರು. ಇದೀಗ ಮಂಗಳೂರಲ್ಲಿ ಸಹ ನಾಟಿ ಕೋಳಿ ಸಾರು ಸೇರಿದಂತೆ ಮಂಗಳೂರಿನ ಹಲವು ಖಡಯಗಳನ್ನು ತಯ್ಯಾರಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಲಂಚ್ ಮೀಟಿಂಗ್ ಆರಂಭವಾಗಲಿದೆ. ರಾಜ್ಯದ ಬೆಳವಣಿಗೆ ಬಗ್ಗೆ ವೇಣುಗೋಪಾಲ್ ಮಾಹಿತಿ ಸಂಗ್ರಹಿಸಲಿದ್ದಾರೆ. https://twitter.com/siddaramaiah/status/1996110251494711411?t=IiQqITxUyGSvFXF6VLRNZw&s=19














