Author: kannadanewsnow05

ಕೊಡಗು : ಮೀಸಲು ಅರಣ್ಯದಲ್ಲಿ ತೆಗದ ಮರ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗಿನಲ್ಲಿ ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ ಡಿಆರ್‌ಎಫ್‌ಒ ಉಲ್ಲಾಸ್, ವಾಚರ್ ಚಂದ್ರಶೇಖರ್ ಹಾಗೂ ಕೆ.ಎ ಅಂತೋನಿ ಅಮಾನತುಗೊಳಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಅರಣ್ಯದಲ್ಲಿ ತೇಗದ ಮರ ಕಳ್ಳತನ ನಡೆದಿತ್ತು. ಬಳಿಕ ಈ ಒಂದು ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ಎಸ್ಐಟಿ ಒಂದನ್ನು ರಚನೆ ಮಾಡಿದ್ದು, ತನಿಖೆಗೆ ಖುದ್ದು ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದರು. ಮರಕಳ್ಳತನದಲ್ಲಿ ಭಾಗಿಯಾಗಿದ್ದ 7 ಜನರ ವಿರುದ್ಧ ಕೆಎಸ್ ದಾಖಲಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಅರಣ್ಯ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಮತ್ತೊಬ್ಬ ಆಪ್ತನಿಗೆ ಶಾಕ್ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರಿಗೆ ಇದೀಗ ಕೊಕ್ ನೀಡಲಾಗಿದೆ. ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ನಸೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದು ಇದೀಗ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನೀಡಿದ್ದ ಕಟ್ಟುನಿಟ್ಟಿನ ಸೂಚನೆ ಹಾಗೂ ಗಡುವಿನ ಬೆನ್ನಲ್ಲೇ ನಜೀರ್ ಅಹ್ಮದ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಡೆದಿದ್ದೇನು? ಸೋಮವಾರ (ಏಪ್ರಿಲ್ 13) ರಂದು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡುವಂತೆ ಅಂತಿಮ ಗಡುವು (ಡೆಡ್ಲೈನ್) ನೀಡಿದ್ದರು. ಅಷ್ಟೇ ಅಲ್ಲದೆ, ಸೋಮವಾರ ಸಂಜೆಯೊಳಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡದಿದ್ದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಶ್ರೀಗಳನ್ನು ಇಂದು ಧರ್ಮದರ್ಶಿ ಟ್ರಸ್ಟಿಗಳು ಉಚ್ಚಾಟನೆಗೊಳಿಸಿದ್ದಾರೆ. ಉಚ್ಚಾಟನೆಗೊಂಡ ಬಳಿಕ ವಚನಾನಂದ ಶ್ರೀಗಳು ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಂಚಮಸಾಲಿ ಸಮುದಾಯದ ನಾಯಕರು ಬಲಿಷ್ಠರಾಗುತ್ತಿದ್ದಾರೆ. ಹೀಗಾಗಿ ಪಂಚಮಸಾಲಿ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಭಕ್ತರು ಏನು ಹೇಳುತ್ತಾರೋ ಅದೇ ಫೈನಲ್. ನಾಲ್ಕು ಜನ ಹೇಳಿದ್ದು ಅಂತಿಮ ಆಗಲ್ಲ. ಈ ವಿಚಾರವಾಗಿ ಪಂಚಮಸಾಲಿ ಮುಖಂಡರು ಚರ್ಚೆ ಮಾಡುತ್ತಾರೆ. ಭಕ್ತರು ಪಂಚಮಸಾಲಿ ಗುರು ಪೀಠದ ಲೆಕ್ಕ ಕೇಳುತ್ತಿದ್ದಾರೆ ಪಂಚಮಸಾಲಿ ಸಮುದಾಯದ ಜನರು ಸತ್ಯವನ್ನು ಅರಿತುಕೊಳ್ಳಬೇಕು. ನನ್ನ ಉಚ್ಛಾಟನೆ ಹಾಸ್ಯಾಸ್ಪದವಾಗಿದೆ. ಪಂಚಮಸಾಲಿ ಸಮುದಾಯದ ಭಕ್ತರು ಟ್ರಸ್ಟ್ ನವರಿಗೆ ಲೆಕ್ಕ ಕೇಳುತ್ತಿದ್ದಾರೆ. ಟ್ರಸ್ಟ್ ನವರಿಗೆ ಲೆಕ್ಕ ಕೇಳಿದ್ದಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ವಚನಾನಂದ ಸ್ವಾಮೀಜಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

Read More

ಮಧ್ಯಪ್ರದೇಶ : ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಹಾಡಹಗಲೇ ನಡು ರಸ್ತೆಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯ ತಲೆಯನ್ನು ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು ಸಹಜವಾಗಿ ಸ್ಥಳೀಯ ಜನರನ್ನು ಬೆಚ್ಚಿ ಬೀಳಿಸಿದೆ. ಹೌದು ಮಧ್ಯಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ. ರಸ್ತೆಯ ತುಂಬೆಲ್ಲಾ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಘಟನಾ ಸ್ಥಳಕ್ಕೆ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆರ್ ಟಿ ಓ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರ್‌ಟಿಓ ಪ್ರೊಬೆಷನರಿ ಇನ್ಸ್ಪೆಕ್ಟರ್ ಗಳಾದ ದಿನೇಶ್ ಕುಮಾರ್ ಹಾಗೂ ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 30,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಗೂಗಲ್ ಪೇ ಮೂಲಕ 2000, 1000 ನಗದು ಲಂಚವನ್ನು ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂಪಾಯಿ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ನೈಸ್ ರಸ್ತೆಯಲ್ಲಿ ವಾಹನ ತಪಾಸನೆ ನಡೆಸಿ ಬಿಡಲು ಲಂಚ ಸ್ವೀಕರಿಸಿದ್ದಾರೆ. ಓವರ್ಲೋಡ್ ಟ್ರಕ್ ಬಿಡಲು ಲಂಚ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. ಆರ್.ಟಿ.ಒ ಪ್ರೊಬೆಷನರಿ ಅಧಿಕಾರಿ ದಿನೇಶ್ ಕುಮಾರ್ ಕಿರಣ್ ಮತ್ತು ರಮೇಶನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ಉಚ್ಚಾರಣೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಮೂಲದ ಪ್ರಶಾಂತ ದತ್ತಾತ್ರೇಯ ದೂರು ನೀಡಿದ್ದರು. ಈ ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Read More

ಬೆಂಗಳೂರು : ಅಸ್ತಿತ್ವದಲ್ಲೆ ಇಲ್ಲದ ಕಂಪನಿಗಾಗಿ 53 ಎಕರೆ ಭೂಸ್ವಾಧೀನ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ನಡೆ ಸಂವಿಧಾನಕ್ಕೆ ಬಗೆದ ವಂಚನೆ ಎಂದು ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಕಾರಣಕರ್ತರ ವಿರುದ್ಧ ಸಿಬಿಐ ತನಿಕೆಗೆ ಇದೀಗ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಡಿಕೆ ಸಿಂಗ್ ಹಾಗೂ ತಾರಾ ವಿತಸ್ತ ಗಂಜು ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬೆಂಗಳೂರಿನ ಹೆಬ್ಬಾಳ ಅಮಾನಿಕೆರೆಯ ಬಹುಕೋಟಿ ಮೌಲ್ಯದ ಜಮೀನು ಇದಾಗಿದ್ದು, 2004ರಲ್ಲಿ ಪ್ರತಿ ಎಕರೆಗೆ 15 ಲಕ್ಷ ರೂಪಾಯಿಯಂತೆ ಭೂ ಸ್ವಾಧೀನ ಮಾಡಿಕೊಳ್ಳಲಾಗಿತ್ತು. ರೈತರಿಂದ ಸ್ವಾಧೀನ ಪಡಿಸಿಕೊಂಡು ರಿಯಲ್ ಎಸ್ಟೇಟ್ ಗೆ ಹಂಚಿಕೆ ಮಾಡಲಾಗಿತ್ತು. 2000 ದಲ್ಲಿ ಹೈ ಲೆವೆಲ್ ಕಮಿಟಿ ಭೂಸ್ವಾಧಿನಕ್ಕೆ ಶಿಫಾರಸು ಮಾಡಿತ್ತು. ಅರ್ಜಿ ಸಲ್ಲಿಸಿದ ಐದು ದಿನದಲ್ಲಿ ಸಂಸ್ಥೆ ಸಭೆ ಸಭೆ ನಡೆಸಿ ಶಿಫಾರಸು ಮಾಡಿತು. 2001ರ ಒಳಗೆ 150 ಕೋಟಿ ಹೂಡಿಕೆ ಮಾಡುವುದಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಲೇಕ್ ವ್ಯೂ ಟೂರಿಸಮ್ ಕಾರ್ಪೊರೇಷನ್ ಸಂಸ್ಥೆ ಪರವಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಡಾ. ರಾಮದಾಸ್ ಪೈ,…

Read More

ದಾವಣಗೆರೆ : ಹಲವು ಬೆಳವಣಿಗೆ ಬಳಿಕ ಇದೀಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ. ಹೌದು ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನು ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಧರ್ಮದರ್ಶಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಣಗವಾಡಿ ಬಳಿ ಇರುವ ಪಂಚಮಸಾಲಿ ಪೀಠ ದಿಂದ ಇದೀಗ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿ ಧರ್ಮದರ್ಶಿ ಸಮಿತಿ ಸದಸ್ಯ ಬಸವರಾಜ ದಿಂಡೂರು ಮಾಹಿತಿ ನೀಡಿದ್ದಾರೆ. ಒಟ್ಟು 15 ಜನರ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ದಿನ ನಡೆದ ಧರ್ಮದರ್ಶಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಲೆಕ್ಕ ಕೊಡಿ ಅಭಿಯಾನ ಕಳೆದ ಅನೇಕ ತಿಂಗಳುಗಳಿಂದ ನಡೆಸಲಾಗುತ್ತಿತ್ತು. ಆದರೆ ಇದೀಗ ಈ ಒಂದು ಅಭಿಯಾನ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಕೂಡ ಇಂದು ಮಠದ ಗೇಟ್ ಬಳಿ ಮಠದಲ್ಲಿ ನುಗ್ಗುಲು…

Read More

ಬೆಂಗಳೂರು : ಸಚಿವ ಸ್ಥಾನ ಬೇಡಿಕೆಗೆ ಆಗ್ರಹಿಸಿ ಕಾಂಗ್ರೆಸ್ಸಿನ ಕೆಲವು ಶಾಸಕರು ದೆಹಲಿಗೆ ತೆರಳಿದ್ದಾರೆ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ಶಿಸ್ತನ್ನು ಯಾರು ಮೀರಬೇಡಿ ಪಕ್ಷದ ಚೌಕಟ್ಟಿನ ಒಳಗೆ ಎಲ್ಲರೂ ಮಾತನಾಡಬೇಕು. ಇದು ಸಂಪುಟ ಪುನಾರಚನೆ ಕೇಳುವಂತ ಟೈಂ ಅಲ್ಲ ಎಂದು ಶಾಸಕರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಗೆ ಸಚಿವ ಸ್ಥಾನ ಬೇಡಿಕೆಗಾಗಿ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು ಪಕ್ಷಕ್ಕೆ ಗೌರವ ಕೊಡಬೇಕು. ಕೇವಲ ಮಾಧ್ಯಮಗಳ ಮುಂದೆ ಕುಳಿತು ಪಕ್ಷದ ಹೆಸರು ಹಾಳು ಮಾಡಬಾರದು. ಮುಂದಿನ ದಿನಗಳಲ್ಲಿ ಎಲ್ಲರ ಭವಿಷ್ಯ ಪಕ್ಷದಲ್ಲಿದೆ ಮಾಧ್ಯಮಗಳಲ್ಲಿ ಇಲ್ಲ ಎಂದು ದೆಹಲಿಗೆ ತೆರಳಿದ ಶಾಸಕರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

Read More

ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು  : ಸಾರ್ವಜನಿಕವಾಗಿ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಏನಾಗುತ್ತದೆ? ಸದ್ಯ ಸ್ಯಾಂಡಲ್‌ವುಡ್‌ನ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಅಂತಹದ್ದೇ ಒಂದು ವಿವಾದಕ್ಕೆ ಸಿಲುಕಿದ್ದಾರೆ. ಘಟನೆಯ ವಿವರ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ. ಅದರಲ್ಲಿ ನಟಿ ರಚಿತಾ ರಾಮ್ ಅವರು ರಾಯಲ್ ಎನ್‌ಫೀಲ್ಡ್ ಬುಲೆಟ್ ವಾಹನದ ಹಿಂಬದಿಯಲ್ಲಿ ಕುಳಿತು ಸಂಚರಿಸುತ್ತಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, ಬೈಕ್ ಚಲಾಯಿಸುತ್ತಿರುವ ಯುವತಿ ಹಾಗೂ ಹಿಂಬದಿಯಲ್ಲಿ ಕುಳಿತಿರುವ ರಚಿತಾ ರಾಮ್ ಇಬ್ಬರೂ ಹೆಲ್ಮೆಟ್ ಧರಿಸಿಲ್ಲ. ಬೆಂಗಳೂರಿನ ಪ್ರಮುಖ ರಸ್ತೆಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ‘ನಿರೂಪ್ ಡಿಬಾಸ್’ ಎಂಬುವವರ ಫೇಸ್‌ಬುಕ್ ಖಾತೆಯಲ್ಲಿ ಈ ದೃಶ್ಯ ಹಂಚಿಕೆಯಾಗಿದೆ. ಸಾರ್ವಜನಿಕರ ಆಕ್ರೋಶ ಮತ್ತು ಚರ್ಚೆ: ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಟಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿಯಮ ಉಲ್ಲಂಘನೆ: ಸಂಚಾರ ನಿಯಮಗಳ ಪ್ರಕಾರ ಸವಾರ ಹಾಗೂ ಹಿಂಬದಿ ಸವಾರ ಇಬ್ಬರಿಗೂ ಹೆಲ್ಮೆಟ್ ಕಡ್ಡಾಯ. ಇದನ್ನು ಪಾಲಿಸದ ನಟಿಯ…

Read More

ಬೆಂಗಳೂರು : ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಇಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯವೇ ಆಗಿಲ್ಲ ಅಂತ ಮಹಿಳೆ ಹೇಳಿಕೆ ನೀಡಿದ್ದಾಳೆ. ಈ ವಿಚಾರವಾಗಿ ಮಹಿಳೆ ವಿಡಿಯೋ ರಿಲೀಸ್ ಮಾಡಿ ಸ್ಪಷ್ಟನೆ ಕೊಟ್ಟಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಡಿಯೋದಲ್ಲಿ ನನ್ನ ಅವರ ನಡುವಿನ ಸಂಬಂಧ ಭಕ್ತೆ ಹಾಗೂ ಗುರುವಿನ ಸಂಬಂಧ ಇದೆ. ನಾನು ಸ್ವಾಮೀಜಿ ವಿರುದ್ಧ ಯಾವುದೇ ದೂರು ನೀಡಿಲ್ಲ.ನನ್ನ ಹೆಸರಿನಲ್ಲಿ ಬೇರೆ ಯಾರು ದೂರು ನೀಡಿದ್ದಾರೆ. ಗುರುಗಳು ನನ್ನ ಜೊತೆ ಅಸಭ್ಯವಾಗಿ ವರ್ತನೆ ಮಾಡಿಲ್ಲ. ನಾವು ಕೂಡ ಗುರುಗಳಿಗೆ ಕೆಟ್ಟ ಶಬ್ದದಿಂದ ಬೈದಿಲ್ಲ. ವಿಜಯಪುರದಲ್ಲಿ ಗಲಾಟೆ ವೇಳೆ ಮಾತಾಡಬೇಕು ಎಂದು ಕರೆದಿದ್ದು. ಅದನ್ನು ಬಿಟ್ಟು ನಾವು ಗಲಾಟೆ ಮಾಡಿಲ್ಲ. ಸ್ವಾಮೀಜಿ ಬಳಿ ನಾವು ಯಾವುದೇ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ. ಹಣ ಕೇಳುವ ಪರಿಸ್ಥಿತಿ ನಮಗೆ ಬಂದಿಲ್ಲ ನಮ್ಮ ನಡುವೆ ಇರುವುದು ಕೇವಲ ಭಕ್ತೆ ಹಾಗೂ ಗುರುವಿನ ಸಂಬಂಧ. ಏಪ್ರಿಲ್ 9 ರಂದು…

Read More