Subscribe to Updates
Get the latest creative news from FooBar about art, design and business.
Author: kannadanewsnow05
ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಇದೀಗ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜು ಕುಮಾರ್ ಸೂಗೂರೆ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಸಂಜುಕುಮಾರ ಸುಗುರೆ 99 ಲಕ್ಷ ಹಣ ಕೊಟ್ಟಿದ್ದರು. ಚುನಾವಣೆ ಸಮಯದಲ್ಲಿ ಶರಣು ಸಲಗರ ಸಂಜು ಕುಮಾರ್ ಸುಗುರೆ ಬಳಿ 99 ಲಕ್ಷ ಹಣ ಪಡೆದಿದ್ದಾರೆ. ಖಾಲಿ ಚಕ್ ಪಡೆದು ಸಂಜು ಕುಮಾರ್ 99 ಲಕ್ಷ ರೂಪಾಯಿ ಹಣ ಕೊಟ್ಟಿದ್ದಾರೆ. ಆದರೆ ಹಣ ವಾಪಸ್ ಕೊಡದ ಹಿನ್ನೆಲೆಯಲ್ಲಿ ಸಂಜು ಕುಮಾರ್ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.
ಬಾಗಲಕೋಟೆ : ರಾಜಕಾರಣದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ ಏಕತೆ ಮುಖ್ಯವಾಗಿದೆ. ಬಸನಗೌಡ ಪಾಟೀಲ ಹಾಗೂ ನಾನು ಒಂದೇ ಜಿಲ್ಲೆಯವರು ಎಂದು ಮುರುಗೇಶ್ ನಿರಾಣಿ ಹೇಳಿಕೆ ನೀಡಿದರು. ಬಾಗಲಕೋಟೆ ಜಿಲ್ಲೆಯ ಅರಬಕವಿ ಬನಹಟ್ಟಿ ತಾಲೂಕಿನ ಎಲ್ಲಟ್ಟಿ ಗ್ರಾಮದಲ್ಲಿ ನಿನ್ನೆ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೇನೆ ಮಾಜಿ ಸಚಿವ ಮುರುಗೇಶ್ ನಿರಾಣಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಹಾಡಿ ಹೊಗಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಮುರುಗೇಶ್ ನಿರಾಣಿ ಹಾಡಿ ಹೊಗಳಿದ್ದಾರೆ. ಯತ್ನಾಳ ಗುಡ್ ಬ್ಯಾಟ್ಸ್ಮನ್ ಬೌಲರ್ ಮತ್ತು ವಿಕೆಟ್ ಕೀಪರ್ ಆಗಿದ್ದಾರೆ. ಶ್ರೇಷ್ಠ ಬ್ಯಾಟ್ಸಮನ್ ಆಗಿರುವ ನೀವು ಎಲ್ಲ ಬೌಲರ್ ಗಳಿಗೆ ಶಿಕ್ಷೆ ಹೊಡೆಯಬೇಡಿ. ಒಳ್ಳೆಯ ಬೌಲರ್ ಗೆ ಮಾತ್ರ ಸಿಕ್ಸ್ ಹೊಡೆಯಿರಿ. ರಾಜಕಾರಣದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ ಏಕತೆ ಮುಖ್ಯ ಬಸನಗೌಡ ಹಾಗೂ ನಾನು ಒಂದೇ ಜಿಲ್ಲೆಯವರು ಎಂದು ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು ಈ ಒಂದು ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SIT ಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಮತ್ತಷ್ಟು ಸ್ಪೋಟಕವಾದ ಅಂಶಗಳು ಬಯಲಾಗಿದೆ. ಜಯಂತ್ ರೈಲಿನಲ್ಲಿ ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದ ಫ್ಲೈಟ್ ನಲ್ಲಿ ಚಿನ್ನಯ್ಯ, ಗಿರೀಶ್ ಮಟಣ್ಣನವರ್ ಹಾಗು ಸುಜಾತ ಭಟ್ ತೆರಳಿದ್ದಾರೆ ಎಂದು ಕೋರ್ಟಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ಉಲ್ಲೇಖವಾಗಿದೆ.. ದೆಹಲಿಯಲ್ಲಿ ರಾತ್ರಿ ಮಲಗಿದ್ದಾಗ ಜಯಂತ್ ಗೆ ಕೆಟ್ಟ ಕನಸು ಬಿದ್ದಿತ್ತು. ಒಂದೇ ರೂಮ್ನಲ್ಲಿ ಚಿನ್ನಯ, ಮಟ್ಟಣ್ಣನವರ್ ಮತ್ತು ಜಯಂತ್ ಮಲಗಿದ್ದಾರೆ. ಕೆಟ್ಟ ಕನಸು ಬಿದ್ದು ಜಯಂತ್ ಕಿರುಚಿಕೊಂಡಿದ್ದಾನೆ. ಹಾಗಾಗಿ ಬುರುಡೆ ತರಲು ಒಪ್ಪದೇ ಆತ ಹೆದರಿ ವಾಪಸ್ ಆಗಿದ್ದಾನೆ. ದೆಹಲಿಯಲ್ಲಿಯೇ ಬುರುಡೆಯನ್ನು ಬಿಟ್ಟು ಬೆಂಗಳೂರಿಗೆ ಜಯಂತ ವಾಪಸ್ ಆಗಿದ್ದಾನೆ. ಬೆಂಗಳೂರಿಗೆ ಜಯಂತ್ ಗಿರೀಶ ಮಟ್ಟಣ್ಣನವರ್ ಹಾಗೂ ಸುಜಾತ ಭಟ್ ವಾಪಸ್ ಆಗಿದ್ದಾರೆ. ಮತ್ತೆ ವಿಮಾನದ ಮೂಲಕ ತೆರಳಿದ್ದಾನೆ. ನಂತರ ರೈಲಿನ ಮೂಲಕ ಬುರುಡೆಯನ್ನು ತಂದಿದ್ದಾನೆ. ದೆಹಲಿಯಿಂದ ನೇರವಾಗಿ ಜಯಂತ್ ಮಂಗಳೂರಿಗೆ ಬಂದಿದ್ದಾನೆ. ಬಳಿಕ…
ಬೆಂಗಳೂರು : ಬೆಂಗಳೂರಿನಲ್ಲಿ ನಕಲಿ ಗೋಲ್ಡ್ ಲೋನ್ ಸೃಷ್ಟಿ ಮಾಡಿ ಕೋಟಿ ಕೋಟಿ ಆಂಜನೇಯ ಸಿಗುವ ಪ್ರಕರಣ ಬೆಳಕಿಗೆ ಬಂದಿದೆ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸಿನ ಕೆನರಾ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ ಕೆನರಾ ಬ್ಯಾಂಕ್ ಹಿರಿಯ ಮ್ಯಾನೇಜರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಿರಿಯ ವ್ಯವಸ್ಥಾಪಕ ಮ್ಯಾನೇಜರ್ ಎನ್ ರಘು ವಿರುದ್ಧ ಈ ಒಂದು ವಂಚನೆ ಆರೋಪ ಕೇಳಿ ಬಂದಿದ್ದು, 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ವಂಚನೆ ಎಸಗಿದ್ದಾನೆ 3.11 ಕೋಟಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಸುಮಾರು 41 ಖಾತೆಗಳಿಂದ ನಕಲಿ ಗೋಲ್ಡ್ ಲೋನ್ ಮಾಡಿಸಿ ವಂಚನೆ ಎಸಗಿದ್ದಾನೆ.
ಬೆಂಗಳೂರು : ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ, ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವುಗಳು ಗೆಲ್ಲಲು ಸಾಧ್ಯವಿಲ್ಲ. ಏಕೆಂದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ಸಹ ಎಲ್ಲಾ ನಿಗದಿಯಾದಾಗ ಮಾಡುತ್ತೇನೆ ಎಂದರೆ, ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು. ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ. ಈ ಹಣವು…
ಪರಮೇಶ್ವರನು ಅಡ್ಡ ನಾಮಗಳನ್ನು ಧರಿಸುತ್ತಾನೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಶಿವನು ಅಡ್ಡ ನಾಮಗಳನ್ನು ಇಡುತ್ತಾನೆ. ಅದೇ ರೀತಿ, ವಿಷ್ಣುನು ನಿಲುವು ನಾಮಗಳನ್ನು ಧರಿಸುತ್ತಾನೆ. ಶಿವ–ಕೇಶವರಲ್ಲಿ ಭೇದವಿಲ್ಲವೆಂದಾಗ, ಈ ನಾಮಗಳಲ್ಲಿ ಮಾತ್ರ ಏಕೆ ಭೇದ? ಶಿವನು ಅಡ್ಡ ನಾಮಗಳನ್ನು, ವಿಷ್ಣುನು ನಿಲುವು ನಾಮಗಳನ್ನು ಏಕೆ ಧರಿಸುತ್ತಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜುವೆಲ್ಲರಿ ಶಾಪ್ ನಲ್ಲಿ ಕೇಜಿ ಕಟ್ಟಲೆ ಬಂಗಾರ ಹಾಗು ವಜ್ರ ಕಳ್ಳತನ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹುಣಸೂರಿನ ಸ್ಕೈಗೋಲ್ಡ್ ಅಂಡ್ ಡೈಮಂಡ್ ಶಾಪ್ ನಲ್ಲಿ ದರೋಡೆ ನಡೆದಿದ್ದು, ದರೋಡೆಕೋರರು ಪರಾರಿಯಾಗಿರುವ ದೃಶ್ಯ ಇದೀಗ ಸೆರೆಯಾಗಿದೆ. ದರೋಡೆಕೋರರು ಎಸ್ಕೇಪ್ ಆಗುತ್ತಿರುವ ದೃಶ್ಯ ಇದೀಗ ಲಭ್ಯವಾಗಿದೆ. ಲೂಟಿ ನಂತರ ಪಲ್ಸರ್ ಬೈಕ್ ನಲ್ಲಿ ದರೋಡೆಕೋರರು ಪರಾರಿಯಾಗಿದ್ದಾರೆ. ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಮೂವರು ಹಾಗೂ ಮತ್ತೊಂದು ಬೈಕ್ನಲ್ಲಿ ಇಬ್ಬರು ಒಟ್ಟು ಐವರು ಒಳಗೊಂಡ ಈ ಗ್ಯಾಂಗ್ ಕೆ ಆರ್ ನಗರ ಮಾರ್ಗವಾಗಿ ಪರಾರಿಯಾಗಿದ್ದಾರೆ. ದರೋಡೆಕೋರರು ಪಲ್ಸರ್ ಬೈಕ್ ನಲ್ಲಿ ಅತ್ಯಂತ ವೇಗವಾಗಿ ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಘಟನೆ ಹಿನ್ನೆಲೆ? ಭಾನುವಾರ ಮಧ್ಯಾಹ್ನ 12.30ಕ್ಕೆ 2 ಬೈಕ್ನಲ್ಲಿ ಆಗಮಿಸಿದ 5 ದರೋಡೆ ಕೋರರು ಕೃತ್ಯ ಎಸಗಿದ್ದಾರೆ. ಎಲ್ಲರ ಕೈಯಲ್ಲೂ ಗನ್ ಇತ್ತು. ಒಬ್ಬ ಹೆಲೈಟ್ ಧರಿಸಿದ್ದರೆ, ಮಿಕ್ಕವರು ಮಳಿಗೆಯೊಳಗೆ ಬಂದ ನಂತರ ಮಾಸ್ಕ್…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸ್ ಹೆಸರು ಆರೋಪಿ ಮುತ್ತು ಅಭಿಮನ್ಯುವನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಗೀತಾ ಮತ್ತು ಆಕೆಯ ಪುತ್ರಿ ಜೊತೆಗೆ ಆರೋಪಿ ಮುತ್ತು ವಾಸವಿದ್ದ. ಪುತ್ರಿ ಮದುವೆ ಮಾಡಿ ಕೊಡುವಂತೆ ಗೀತಾಗೆ ಮುತ್ತು ಒತ್ತಾಯಿಸಿದ್ದಾನೆ. ಮದುವೆಗೆ ಒಪ್ಪದಿದ್ದಕ್ಕೆ ಗೀತಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಸದ್ಯ ತಮಿಳುನಾಡಿನಲ್ಲಿ ಆರೋಪಿ ಮುತ್ತು ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೀದರ್ : ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಇದೀಗ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ. ಉದ್ಯಮಿ ಸಂಜು ಕುಮಾರ್ ಸೂಗೂರೆ ದೂರನ್ನು ಆಧರಿಸಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಉದ್ಯಮಿ ಸಂಜುಕುಮಾರ ಸುಗುರೆ 99 ಲಕ್ಷ ಹಣ ಕೊಟ್ಟಿದ್ದರು. ಚುನಾವಣೆ ಸಮಯದಲ್ಲಿ ಶರಣು ಸಲಗರ 99 ಲಕ್ಷ ಹಣ ಪಡೆದಿದ್ದಾರೆ. ಖಾಲಿ ಚಕ್ ಪಡೆದು ಸಂಜು ಕುಮಾರ್ 99 ಲಕ್ಷ ರೂಪಾಯಿ ಹಣ ಕೊಟ್ಟಿದ್ದಾರೆ. ಆದರೆ ಹಣ ವಾಪಸ್ ಕೊಡದ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.
ಉತ್ತರಕನ್ನಡ : ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿದರು. ನಿನ್ನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ. ಇದೆ ವೇಳೆ ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ…














