Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಂಗವಿಕಲ ನಕಲಿ ಪ್ರಮಾಣ ಪತ್ರ ನೀಡಿದ್ದ ಆರೋಗ್ಯ ಅಧಿಕಾರಿಯನ್ನು ಇದೀಗ ಪೊಲೀಸರ ಅರೆಸ್ಟ್ ಮಾಡಿದ್ದಾರೆ. ಸುಧಾಕರ್ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರಾಧಿಕಾರಿಯಾಗಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಪಿ ಎಚ್ ಸಿ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರಿಂದ ಸುಧಾಕರ್ ಬಂಧನವಾಗಿದೆ. ಸುಮಾರು 21 ಜನರಿಗೆ ಸುಧಾಕರ್ ನಕಲಿ ಪ್ರಮಾಣ ಪತ್ರ ನೀಡಿದ್ದಾನೆ ಕಳೆದ ನಾಲ್ಕು ದಿನಗಳ ಹಿಂದೆ ಪೊಲೀಸರು ಸುಧಾಕನನ್ನು ಬಂಧಿಸಿದ್ದಾರೆ ಎಂಬಿಬಿಎಸ್ಸಿ ಪಡೆದವರ ದಾಖಲಾತಿ ಪರಿಶೀಲನೆ ವೇಳೆ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 21 ವಿದ್ಯಾರ್ಥಿಗಳು ಅಂಗವಿಕಲರ ಕೋಟದಲ್ಲಿ ಸೀಟ್ ಪಡೆದಿದ್ದರು. ಅಂಗವಿಕಲರ ಪ್ರಮಾಣ ಪತ್ರ ಯುಡಿಐಡಿ ಕಾರ್ಡ್ ಒಂದೇ ರೀತಿ ಸಹಿ ಮಾಡಲಾಗಿತ್ತು. ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ವೇಳೆ ಅಕ್ರಮ ನಡೆದಿದ್ದು ಬೆಳಕೆಗೆ ಬಂದಿದೆ. ಸರ್ಕಾರಿ ನೌಕರಿಗು ಕೂಡ ಆತ ನಕಲಿ ಪ್ರಮಾಣ ಪತ್ರ ನೀಡಿರುವ ಅನುಮಾನ ವ್ಯಕ್ತವಾಗಿದೆ. ಈ ವೇಳೆ ಪೊಲೀಸರು ಆರೋಗ್ಯ ಇಲಾಖೆ…
ನವದೆಹಲಿ : 2025 ರ ಏಷ್ಯಾ ಕಪ್ ಮತ್ತೊಂದು ನಾಟಕೀಯ ತಿರುವು ಪಡೆದುಕೊಂಡಿದ್ದು, ಪಾಕಿಸ್ತಾನ ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧದ ತನ್ನ ಅಂತಿಮ ಗ್ರೂಪ್ ಎ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಕ್ರಿಕ್ಬಜ್ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಜೊತೆ “ಮತ್ತಷ್ಟು ಚರ್ಚೆಗಳ” ಅಗತ್ಯವನ್ನು ಉಲ್ಲೇಖಿಸಿ ಪಂದ್ಯಾವಳಿಯ ಆಯೋಜಕರಿಗೆ ಪಂದ್ಯಾವಳಿಯ ಆರಂಭವನ್ನು ಒಂದು ಗಂಟೆ ವಿಳಂಬಗೊಳಿಸುವಂತೆ ಕೇಳಿಕೊಂಡಿದೆ. ಇದರ ಮಧ್ಯ ಭಾರತದ ಜೊತೆಗಿನ ಪಂದ್ಯದ ವೇಳೆ ಅವಮಾನ ಆರೋಪ ಹಿನ್ನೆಲೆ ಇದೀಗ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಪಾಕಿಸ್ತಾನಕ್ಕೆ ಕ್ಷಮೆಯಾಚಿಸಿದ್ದಾರೆ. ಈ ವಿಚಾರವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿ ಮೊರೆ ಹೋಗಿತ್ತು. ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ವಜಾಗೊಳಿಸುವಂತೆ ಪಿಸಿಬಿ ಒತ್ತಾಯಿಸಿತ್ತು. UAE ಜೊತೆಗೆ ಆಡಲ್ಲವೆಂದು ಪಾಕಿಸ್ತಾನ ತಂಡ ಪಟ್ಟು ಹಿಡಿದಿತ್ತು. ಹಾಗಾಗಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಕ್ಷಮೆ ಕೊರಿದ್ದು ಈ ಹಿನ್ನೆಲೆ ಪಾಕಿಸ್ತಾನ ಪಂದ್ಯ ಆಡಲು…
ಉತ್ತರಪ್ರದೇಶ : ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರು ಪೊಲೀಸ್ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾರೆ. ಯುಪಿ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಮತ್ತು ದೆಹಲಿ ಪೊಲೀಸರ ಜಂಟಿ ತಂಡಗಳು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಕಾರ್ಯಾಚರಣೆ ನಡೆಸಿವೆ. ಪೊಲೀಸರು ಸ್ಥಳದಿಂದ ಗ್ಲಾಕ್ ಮತ್ತು ಜಿಗಾನಾ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ರವೀಂದ್ರ ಅಲಿಯಾಸ್ ಕಲ್ಲು ಮತ್ತು ಅರುಣ್ ಎಂದು ಗುರುತಿಸಲಾಗಿದೆ. ಗಾಜಿಯಾಬಾದ್ ನಲ್ಲಿ ಪೊಲೀಸರು ಮತ್ತು ಆರೋಪಿಗಳ ನಡುವೆ ಎನ್ ಕೌಂಟರ್ ನಡೆದಿದೆ. ಆರೋಪಿಗಳ ಬಗ್ಗೆ ಹೇಳುವುದಾದರೆ, ಯುಪಿ ವಿಶೇಷ ಕಾರ್ಯಪಡೆ ಅವರು ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ ಗಳ ಸದಸ್ಯರು ಎಂದು ಹೇಳಿದೆ.ರವೀಂದ್ರ ಈ ಹಿಂದೆ ಹಲವಾರು ಅಪರಾಧ ಘಟನೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಘಟನಾ ಸ್ಥಳದಿಂದ ಗ್ಲಾಕ್, ಜಿಗಾನಾ ಪಿಸ್ತೂಲ್ ಮತ್ತು ಹಲವಾರು ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಸೆ.11 ರಂದು ದಾಳಿ ದಿಶಾ…
ಸಂಚಾರ ದಟ್ಟಣೆ ನಿಯಂತ್ರಣ ಹಿನ್ನೆಲೆ : ಸೆ.19 ರಿಂದ 26ರವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನಗಳಿಗೆ ಪ್ರವೇಶ ನಿರ್ಬಂಧ
ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ರಿಂಗ ರಸ್ತೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 19 ರಿಂದ 26ರವರೆಗೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಲಾಗಿದೆ ಲೇ ಅರೇಬಿಯಾ, ಬಿರಿಯಾನಿ ಜೋನ್ ಕ್ರೋಮ್ ಜಂಕ್ಷನ್ ನಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಅವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ರಿಂಗ್ ರೋಡ್ ನಲ್ಲಿ ಎಲ್ಲ ಮಾದರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಮಹದೇವಪುರ, ಕಾರ್ತಿಕ ನಗರ ಕಡೆಯಿಂದ ವಾಹನ ಪ್ರವೇಶ ಸಹ ನಿರ್ಬಂಧಿಸಲಾಗಿದೆ. ಕಾಡುಬಿಸನಹಳ್ಳಿ ಸರ್ವಿಸ್ ರಸ್ತೆಗೆ ವಾಹನಗಳ ಪ್ರವೇಶ ನಿರ್ಭಂಧಿಸಿದ ಸಂಚಾರಿ ಪೊಲೀಸರು. ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತಹಳ್ಳಿ ಬಳಿ ಯೂಟರ್ನ ತೆಗೆದುಕೊಂಡು ಮಾರತಹಳ್ಳಿಯ ಅಂಡರ್ ಪಾಸ್ ಬಳಿ ಯೂಟರ್ನ್ ತೆಗೆದುಕೊಂಡು ಮಾರಾತಹಳ್ಳಿ ಸೇತುವೆ ಬಳಿ ಎಡಕ್ಕೆ ತಿರುಗಿ ಮುನೇನಕೊಳಲು, ಕಾಡು ಬೀಸನಹಳ್ಳಿ ಜಂಕ್ಷನ್, ಪಣತ್ತೂರು, ಕರಿಯಮ್ಮನ ಅಗ್ರಹಾರಕ್ಕೆ ಪ್ರಯಾಣ ಬೆಳೆಸಬಹುದು.
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುವ ಸಂದರ್ಭದಲ್ಲಿ, ಮಹೇಶ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಬಂದೂಕು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಮಹೇಶ್ ಶೆಟ್ಟಿ ತಿಮರೊಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಐ ಟಿ ಎಸ್ಪಿ ಸೈಮನ್ ಅವರ ದೂರು ಆಧರಿಸಿ ಮಹೇಶ ಶೆಟ್ಟಿ ತಿಮರೊಡಿ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆ 25(1), 25(1-A), 24(1-B), (A) ರಡಿ ಕೇಸ್ ದಾಖಲಾಗಿದೆ. ಮಹೇಶ ಶೆಟ್ಟಿ ತಿಮ್ಮರೊಡಿ ಮನೆಯಲ್ಲಿ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಆಗಸ್ಟ್ 26ರಂದು ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು. ಈ ವೇಳೆ 2ತಲ್ವಾರ್, ಬಂದೂಕು ಸೇರಿದಂತೆ ಹಲವು ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಎಸ್ಪಿ…
ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ನಿನ್ನೆ ಆದೇಶ ಹೊರಡಸಿತ್ತು.ಬಳಿಕ ನಂಜೇಗೌಡ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೆಂಜ್ ಎಂದು ಹೇಳಿ ಮನವಿ ಮಾಡಿದರು. ಬಳಿಕ ಹೈಕೋರ್ಟ್ 30 ದಿನಗಳ ಕಾಲ ಅವಕಾಶ ನೀಡಿ ತನ್ನದೇ ತೀರ್ಪಿಗೆ ತಡೆ ನೀಡಿತು. ಇದೀಗ ಈ ವಿಚಾರವಾಗಿ ಮರು ಮತಎಣಿಕೆಗೆ ಕೋರ್ಟ್ ಆದೇಶ ನೀಡಿದ್ದು, ಸದ್ಯ ಮಾಲೂರು ಶಾಸಕ ಕೆವೈ ನಂಜೇಗೌಡ ಶಾಸಕಸ್ಥಾನವನ್ನು ಅಸಿಂಧುಗೊಳಿಸಲಾಗಿದೆ. ಹೀಗಾಗಿ ಒಂದು ವೇಳೆ ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ದರೆ ತಾವು ರಾಜಕೀಯ ಬಿಡುವುದಾಗಿ ಮಾಲೂರು ಶಾಸಕ ಕೆವೈ ನಂಜೇಗೌಡ ಸವಾಲು ಹಾಕಿದ್ದಾರೆ. ನಮ್ಮ ಕ್ಷೇತ್ರದ ಮರು ಮತಎಣಿಕೆಗೆ ಹೈಕೋರ್ಟ್ ತೀರ್ಪು ನೀಡಿದೆ. ನನ್ನ ವಿರುದ್ಧ ಚುನಾವಣೆ ಸೋತ ಅಭ್ಯರ್ಥಿ ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು.ಹೀಗಾಗಿ ರೀ ಕೌಂಟಿಂಗ್ ಕೊಟ್ರೆ ನಾನು ಬದ್ಧ.ಆದ್ರೆ ಈಗ ಶಾಸಕ ಸ್ಥಾನವನ್ನೇ ಅಸಿಂಧುಗೊಳಿಸಲಾಗಿದೆ. ಹೈಕೋರ್ಟ್ ತೀರ್ಪು…
ಕಲಬುರ್ಗಿ : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ ಒಟ್ಟು 8 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳು ಇರುವುದು ಪತ್ತೆಯಾಗಿದೆ. ಈ ಹಿನ್ನಲೆ ಆಹಾರ ಇಲಾಖೆ, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಮುಂದಾಗಿದೆ. ಈ ವಿಚಾರವಾಗಿ ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಸೂಚನೆ ನೀಡಿದ್ದಾರೆ. ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇದ್ದು, ಅನರ್ಹರನ್ನು ಬಿಪಿಎಲ್ ಕಾರ್ಡ್ ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ…
ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ದಾಖಲಾಗಿದ್ದ ಖಾಸಗಿ ದೂರು ಇದೀಗ ವಜಾಗೊಂಡಿದೆ. ಎನ್ ಕಿರಣ್ ಎಂಬುವವರು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ 42ನೇ ACMM ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಖಾಸಗಿದೂರು ವಜಾಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು : ಚಾಮುಂಡಿ ತಾಯಿಗೆ ಹೂ ಮೂಡಿಸುವ ವಿಚಾರವಾಗಿ ವಿಜಯಪುರ ನಗರ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾಮಾನ್ಯ ದಲಿತ ಮಹಿಳೆಗೂ ಇದಕ್ಕೆ ಅವಕಾಶ ಇಲ್ಲ. ಕೇವಲ ಸನಾತನ ಧರ್ಮದವರಿಗೆ ಮಾತ್ರ ಚಾಮುಂಡಿ ತಾಯಿಗೆ ಹೂ ಮುಡಿಸುವ ಅವಕಾಶ ಇದೆ ಎಂದು ಹೇಳಿಕೆ ನೀಡಿದ್ದರು. ಇವರ ಈ ಒಂದು ಹೇಳಿಕೆಯಿಂದ ಕೊಪ್ಪಳ ನಗರದಲ್ಲಿ ದಲಿತ ವಿಮೋಚನೆಯ ಮಾನವ ಹಕ್ಕುಗಳ ಕಾರ್ಯಕರ್ತ ಮಲ್ಲು ಪೂಜಾರ್ ಎಂಬಾತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿತ್ತು ಈ ಒಂದು ಎಫ್ಐಆರ್ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಯ ನಡೆಸಿದ ಹೈಕೋರ್ಟ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ಹಿನ್ನೆಲೆಯಲ್ಲಿ ಅಟ್ರಾಸಿಟಿ ಕಾಯ್ದೆ ಯಡಿ ಅರ್ಜಿ ಸಲ್ಲಿಸಿದ್ದಾರೆ. ಸನಾತನ ಧರ್ಮದ ಹೆಣ್ಣು ಮಕ್ಕಳಿಗೆ ಚಾಮುಂಡಿ…
ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬೆಂಗಳೂರಿನ ಯಶವಂತಪುರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿತು. ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ಒಪ್ಪಿಕೊಳ್ಳಲಾಗಿದೆ. ಹೀಗಾಗಿ, ಅರ್ಜಿಯು ಅಸ್ತಿತ್ವ ಕಳೆದುಕೊಂಡಿದ್ದು, ಅವುಗಳನ್ನು ವಜಾ ಮಾಡಲಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು. ಸಿಒಡಿ-ಎಸ್ಟಿಯ ಪರವಾಗಿ ಹಾಜರಾಗಿದ್ದ ಸರ್ಕಾರಿ ವಕೀಲರು, ಎಸ್ಐಟಿಯು ವಿಚಾರಣಾಧೀನ ನ್ಯಾಯಾಲಯಕ್ಕೆ ಪ್ರಕರಣದ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದು,…