Author: kannadanewsnow05

ಬೆಂಗಳೂರು : ಕರ್ನಾಟಕದಲ್ಲಿ ನಾಪತ್ತೆಯಾಗುತ್ತಿರುವ ಮಹಿಳೆಯರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು ಪೊಲೀಸ್ ಇಲಾಖೆಗೂ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. 2021ರಿಂದ ಈವರೆಗೆ 3 ವರ್ಷಗಳಲ್ಲಿ ಒಟ್ಟು 42,237 ಮಹಿಳೆಯರು ನಾಪತ್ತೆಯಾಗಿರುವ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದು, ಅವರಲ್ಲಿ 39389 ಮಹಿಳೆಯರಷ್ಟೇ ಪತ್ತೆಯಾಗಿದ್ದಾರೆ ಎಂದು ಗೃಹ ಇಲಾಖೆ ಸ್ಪೋಟಕ ಮಾಹಿತಿ ಬಹಿರಂಗಗೊಳಿಸಿದೆ. ವಿಧಾನಸಭೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್ ಕೇಳಿರುವ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಇಲಾಖೆ ಈ ಆತಂಕಕಾರಿ ಮಾಹಿತಿಯನ್ನು ಒದಗಿಸಿದೆ. ಗೃಹ ಇಲಾಖೆ ನೀಡುವ ಮಾಹಿತಿಯ ಆಧಾರದಲ್ಲಿ ರಾಜ್ಯದಲ್ಲಿ ಇನ್ನೂ ಅಧಿಕೃತವಾಗಿ ಸುಮಾರು 2848 ಮಹಿಳೆಯರು ಎಲ್ಲಿದ್ದಾರೆ ಎಂಬುದೇ ಪತ್ತೆಯಾಗಿಲ್ಲ. ನಾಪತ್ತೆ ಆಗಿರುವವರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮಾನವ ಕಳ್ಳ ಸಾಗಣೆ ದಂಧೆ ಮೇಲೂ ನಿಗಾ ಇಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.ಕಳೆದ ಮೂರುವರೆ ವರ್ಷದಲ್ಲಿ ಒಟ್ಟು 42,237 ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 39389 ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ. ಉಳಿದ ಮಹಿಳೆಯರು ಎಲ್ಲಿದ್ದಾರೆ…

Read More

ದಾವಣಗೆರೆ : ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಕಳೆದ ಕೆಲವು ದಿನಗಳಿಂದ ದಾವಣಗೆರೆ ಜಿಲ್ಲೆಯ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿದ್ದು, ತುಂಗಾಭದ್ರಾ ನದಿ ತುಂಬಿ ಹರಿಯುತ್ತಿದೆ. ನದಿ ದಡದಲ್ಲಿರುವ ಗ್ರಾಮವೊಂದರ ಸ್ಮಶಾನವೂ ಜಲಾವೃತಗೊಂಡಿದೆ. ಜನರು ನದಿಯಲ್ಲೇ ಮೃತದೇಹ ಹೊತ್ತು ಸಾಗಿ ಅಂತ್ಯಸಂಸ್ಕಾರ ಮಾಡಿದರು. ಗುತ್ತೂರು ಗ್ರಾಮದ ಎಚ್​.ಎಂ.ಸಿ.ಮಂಜಪ್ಪ (70) ಎಂಬವರು ಗುರುವಾರ ಅಕಾಲಿಕವಾಗಿ ಸಾವನ್ನಪ್ಪಿದ್ದರು. ನದಿ ದಡದಲ್ಲೇ ಸ್ಮಶಾನವಿದೆ. ಆದರೆ ನದಿ ನೀರು ಇಡೀ ಸ್ಮಶಾನವನ್ನು ಆವರಿಸಿಕೊಂಡಿದೆ.ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಶವಸಂಸ್ಕಾರಕ್ಕೂ ಸ್ಥಳವಿಲ್ಲದ ಪರಿಸ್ಥಿತಿ ಇದೆ. ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗ್ರಾಮದ ಸ್ಮಶಾನ ಜಲಾವೃತವಾಗಿದೆ. ಇದರ ನಡುವೆ, ಗ್ರಾಮಸ್ಥರು ನೀರಿನಲ್ಲೇ ಶವ ಹೊತ್ತು ಸಾಗಿ ಹರಸಾಹಸಪಟ್ಟು ಶವಸಂಸ್ಕಾರ ಮಾಡಿದರು. ಮಳೆಗಾಲದಲ್ಲಿ ಈ ಗ್ರಾಮದಲ್ಲಿ ಯಾರಾದರೂ ಸಾವನ್ನಪ್ಪಿದರೆ ಅಂತ್ಯಸಂಸ್ಕಾರ ಮಾಡುವುದು ಜನರಿಗೆ ದೊಡ್ಡ ತಲೆನೋವು. ಗುರುವಾರ ಜಲಾವೃತವಾದ ಸ್ಮಶಾನದಲ್ಲೇ ತೆರಳಿ ಅಂತ್ಯಸಂಸ್ಕಾರ ಮಾಡುವ ಮೂಲಕ ಗುತ್ತೂರು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೋರಾಟರಿ ಧರಣಿ ನಡೆಸಿ ವಿರೋಧ ಪಕ್ಷದ ನಾಯಕರು ತಾವೇ ತೋಡಿದ ಬಾವಿಯಲ್ಲಿ ಬೀಳಲು ಅಣಿಯಾಗುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಅಧಿಕಾರಿಗಳಿಂದ ಅವ್ಯವಹಾರ ನಡೆದಿದ್ದು ₹89 ಕೋಟಿಗಳಷ್ಟಾದರೆ ಸದನದಲ್ಲಿ ವಿರೋಧ ಪಕ್ಷದ ನಾಯಕರು ₹187 ಕೋಟಿ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿದ ದುರುಪಯೋಗಪಡಿಸಿಕೊಳ್ಳಲಾಗಿದ್ದ ಹಣವನ್ನು ವಾಪಸ್ಸು ಪಡೆಯಲಾಗಿದೆ. ಎಸ್ಐಟಿ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದರೂ ಈಡಿ ಮತ್ತು ಸಿಬಿಐಗೆ ದೂರು ನೀಡಿದ್ದಾರೆ. ಸದನದಲ್ಲಿ ಪ್ರಕರಣದ ಚರ್ಚೆಯಾಗುವಾಗ, ಅರ್ ಅಶೋಕ ಮತ್ತು ಪರಿಷತ್ ನಲ್ಲಿ ಸಿಟಿರವಿ ಅವರಿಗೆ ಮುಕ್ತವಾಗಿ ಮಾತಾಡುವ ಅವಕಾಶ ಕಲ್ಪಿಸಲಾಗಿದೆ ಎಂದರು. ಆದರೆ ಮುಖ್ಯಮಂತ್ರಿಯವರು ಮಾತಾಡಲು ಎದ್ದು ನಿಂತಾಗ ಅವರ ಪ್ರತಿಮಾತಿಗೆ ಕೊಕ್ಕೆ ಹಾಕುತ್ತಿದ್ದಾರೆ…

Read More

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಗಳ ಸಮೇತ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರ್ಗೀಟು ನೀಡಿದ್ದು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಇದೆ ವೇಳೆ ಆಗ್ರಹಿಸಿದರು. ಮಾಧ್ಯಮದ ಸಂದರ್ಶನ ಒಂದರಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಬಡವರಿಗೆ ಕೊಡಬೇಕಿದ್ದ ನೀವೇಶನವನ್ನು ಬೇಕಾದವರಿಗೆ ಕೊಟ್ಟಿದ್ದಾರೆ. ಮುಡಾ ನಿವೇಶನವನ್ನು ತಮ್ಮ ಕುಟುಂಬದವರಿಗೆ ಹಂಚಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರಾಜಕೀಯ ಮುಖಂಡರಿಗೆ ಸೈಟ್ ಹಂಚಿಕೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 1931 ಇದರಲ್ಲಿ ಹರಾಜಿನಲ್ಲಿ ನಿಂಗ ಎಂಬ ಕುಟುಂಬ ಜಮೀನು ಪಡೆದಿದ್ದರು. ನಿಂಗ ಎಂಬುವವರಿಗೆ ಮೂವರು ಮಕ್ಕಳು ಇದ್ದಾರೆ. ನಿಂಗ ಎಂಬುವವರ ಮೂರನೇ ಮಗ ದೇವರಾಜನಿಂದ ಜಮೀನು ಖರೀದಿಸಿದ್ದಾರೆ. ಸಿಎಂ ಬಾಮೈದ ನಿಂಗ ಎಂಬುವವರ ಮೂರನೇ ಮಗನಿಂದ…

Read More

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದಕ್ಕೆ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು ಸಹಿಸಲು ಆಗುತ್ತಿಲ್ಲ. ಮತ್ತೆ ನಾನು ಸಿಎಂ ಆಗಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ ಕುರಿತಂತೆ ದಾಖಲೆಗಳ ಸಮೇತ ಮಾತನಾಡಿದ ಅವರು, 1983 ರಲ್ಲಿ ಶಾಸಕನಾದೆ 1984 ರಲ್ಲಿ ನಾನು ಮಂತ್ರಿಯಾದವನು. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೂ ನನ್ನ ವಿರುದ್ಧ ಒಂದು ಕಪ್ಪು ಚುಕ್ಕೆ ಕೂಡ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಬಿಜೆಪಿ ಜೆಡಿಎಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಜೆಡಿಎಸ್ ನವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು ಎರಡು ವಾರಗಳ ಕಾಲ ಮುಂಗಾರು ಅಧಿವೇಶನವನ್ನು…

Read More

ಹುಬ್ಬಳ್ಳಿ : ಕಳ್ಳತನ ಆರೋಪ ಹೊತ್ತಿರುವ ಓರ್ವನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಮಹಿಳಾ PSI ಒಬ್ಬರು ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಕಳ್ಳನನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗಳ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿ ಕೇಶ್ವಾಪುರ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿ ಕಳ್ಳತನ ಮಾಡಿದ್ದ. ಈತನನ್ನು ಗುರುವಾರ ಬಂಧಿಸಲಾಗಿತ್ತು. ಅಲ್ಲದೇ ವಿವಿಧ ರಾಜ್ಯಗಳಲ್ಲಿ ನಡೆದ ಕೊಲೆ, ಡಕಾಯಿತಿ ಮತ್ತು ದರೋಡೆ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಫರ್ಹಾನ್‌ಗೆ ಸಹಕಾರ ನೀಡಿದ ಇತರೆ ಆರೋಪಿಗಳನ್ನು ಬಂಧಿಸಲು ಗಾಮನ ಗಟ್ಟಿ ರಸ್ತೆಯ ತಾರಿಹಾಳ ಕ್ರಾಸ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾನ್ಸ್ಟೇಬಲ್ ಸುಜಾತ ಹಾಗೂ ಮಹೇಶ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‌ಐ ಕವಿತಾ ಅವರು ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.…

Read More

ಮೈಸೂರು : ತನ್ನ ಅತ್ತೆಯ ಮಗಳು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದನ್ನು ನೋಡಿ ಮನನೊಂದು ಯುವಕನೊಬ್ಬ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಮೈಸೂರಿನ ಮಂಡಕಳ್ಳಿಯ ನಿವಾಸಿ ನಾಗರಾಜು ಮತ್ತು ಮಂಜುಳಾ ದಂಪತಿ ಪುತ್ರಿ ಮೋನಿಕಾಳನ್ನು (20) ಜ್ಯೋತಿ ನಗರದ ಎಂಸಿಸಿ ಕಾಲೋನಿಯ ನಿವಾಸಿ ಮನು(22) ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದನು. ಇಬ್ಬರ ಕುಟುಂಬದವರು ಸಹ ಅವರ ಪ್ರೀತಿಗೆ ಒಪ್ಪಿ ಮದುವೆ ಮಾಡಲು ಸಹ ಒಪ್ಪಿಕೊಂಡಿದ್ದರು. ಆದರೆ ಬುಧವಾರ ರಾತ್ರಿ ಮೋನಿಕಾ ಮತ್ತು ಮನು ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳವಾಗಿದ್ದು, ಇದರಿಂದ ಮನನೊಂದ ಮೋನಿಕಾ ಕೆಲಸ ಮಾಡುತ್ತಿದ್ದ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಹೊತ್ತಾದರೂ ಕೋಣೆಯಿಂದ ಮೋನಿಕಾ ಹೊರ ಬಾರದೇ ಇರುವುದನ್ನ ಗಮನಿಸಿ ಮನೆ ಮಾಲೀಕರು ಮೋನಿಕಾ ಅವರ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಮೋನಿಕಾ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಮನು ಕೂಡ ಆಸ್ಪತ್ರೆಗೆ ಬಂದಿದ್ದು, ಅಲ್ಲಿ ವೈದ್ಯರು…

Read More

ಹೆಣ್ಣು ಒಂದು ಕುಟುಂಬದ ಕಣ್ಣು ಎನ್ನುತ್ತಾರೆ, ಹೆಣ್ಣನ್ನು ಮನೆಯ ನಂದಾದೀಪ ಎಂದು ಕರೆಯುತ್ತಾರೆ, ಮನೆಯ ಮಹಾಲಕ್ಷ್ಮಿ , ಹೆಣ್ಣು ಜೀವನದಲ್ಲಿ ಬರುವುದೇ ಸೌಭಾಗ್ಯ ಎನ್ನುತ್ತಾರೆ. ಹೆಣ್ಣು ಮಕ್ಕಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ, ಸಹೋದರಿ ರೂಪದಲ್ಲಿ ಬದುಕಿನಲ್ಲಿ ಬರುತ್ತಾರೆ. ಈ ರೀತಿ ಒಂದು ಹೆಣ್ಣು ನಿಮ್ಮ ಜೀವನದಲ್ಲಿ ಬರಬೇಕು ಎಂದರೆ ಅದಕ್ಕೆ ಋಣ ಇರಬೇಕು, ಅದೃಷ್ಟ ಇರಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More

ಚಿತ್ರದುರ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿನೋದ್ ರಾಜ್ ಇಂದು ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ರೇಣುಕಾ ಸ್ವಾಮಿ ಅವರ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾರೆ. ಹೌದು ಇಂದು ರೇಣುಕಾ ಸ್ವಾಮಿ ಮನೆಗೆ ವಿನೋದ್ ರಾಜ್ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದ ವಿ ಆರ್ ಎಸ್ ಬಡಾವಣೆಯ ಮನೆಗೆ ಭೇಟಿ ನೀಡಲಿದ್ದಾರೆ.ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ವಿನೋದ್ ರಾಜ್ ಸಾಂತ್ವನ ಹೇಳಲಿದ್ದಾರೆ. ಹಾಗಾಗಿ ಖುದ್ದು ವಿನೋದ್ ಅವರೇ ಕಾರು ಚಾಲನೆ ಮಾಡಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದಾರೆ. ರೇಣುಕಾ ಸ್ವಾಮಿ ಕುಟುಂಬ ಭೇಟಿ ಮಾಡಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದಾರೆ. ಇತ್ತ ನಟ ದರ್ಶನ್ ಜೈಲಿನಿಂದ ಬಿಡುಗಡೆಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.ಇಂದು ಬೆಳಿಗ್ಗೆ ಅವರು ನವಚಂಡಿಕಾ ಹೋಮ, ಪಾರಾಯಣ, ಸೇರಿದಂತೆ ಹಲವು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗಿದ್ದಾರೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್​​ಗೆ ಪಂಚೆ ಧರಿಸಿ ಬಂದ ರೈತ ಫಕೀರಪ್ಪರನ್ನು ಒಳಗೆ ಬಿಡದ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಆಸ್ತಿತೆರಿಗೆ ಕೂಡ ಬಾಕಿ ಉಳಿಸಿಕೊಂಡಿದ್ದ ಜಿಟಿ ಮಾಲ್​​ಗೆ ಬೀಗ ಬಿದ್ದಿತ್ತು. ಇದೀಗ ಈ ಘಟನೆಯಿಂದ ಎಚ್ಚೆತ್ತುಕೊಂಡ ಬಿಬಿಎಂಪಿ ಹೊಸದೊಂದು ಆದೇಶ ಹೊರಡಿಸಲು ಸಜ್ಜಾಗಿದೆ. ಹೌದು ಪಂಚೆ ಧರಿಸಿದ್ದ ವ್ಯಕ್ತಿಯನ್ನ ಒಳಗೆ ಬಿಡಲು ನಿರಾಕರಿಸಿದ್ದಕ್ಕಾಗಿ ಮಾಲ್ ಮಾಲೀಕರು ರೈತರ ಬಳಿ ಕ್ಷಮೆ ಕೂಡ ಕೇಳಿದ್ದರು. ಇದೀಗ ಈ ಘಟನೆ ಬಳಿಕ ಎಚ್ಚೆತ್ತ ಪಾಲಿಕೆ, ಬೆಂಗಳೂರಿನ ಮಾಲ್​​ಗಳಿಗೆ ಹೊಸ ನಿಯಮ ರೂಪಿಸಲು ಹೊರಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಒಂದಷ್ಟು ನಿಯಮಗಳನ್ನ ರೆಡಿಮಾಡುತ್ತಿರುವ ಬಿಬಿಎಂಪಿ, ಇನ್ಮುಂದೆ ಮಾಲ್​​ಗಳಲ್ಲಿ ಬಟ್ಟೆ, ಜಾತಿ, ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದರೆ ಬಿಸಿ ಮುಟ್ಟಿಸಲು ಮುಂದಾಗಿದೆ. ಬೆಂಗಳೂರಿನ ಬಹುತೇಕ ಮಾಲ್​ಗಳಲ್ಲಿ ಉಡುಗೆ-ತೊಡುಗೆ ನೋಡಿ ಸಿಬ್ಬಂದಿ ವರ್ತನೆ ಬದಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಇನ್ಮುಂದೆ ತಾರತಮ್ಯ ಮಾಡಿದರೆ…

Read More