Subscribe to Updates
Get the latest creative news from FooBar about art, design and business.
Author: kannadanewsnow05
ರಾಮನಗರ : ಹಠ ಮಾಡುತ್ತೆ ಅಂತ ಮಗುವಿನ ಡೈಪರ್ ಒಳಗೆ ಖಾರ ಹಾಕಿ, ಕೈಗೆ ಬರೆ ಎಳೆದು ವಿಕೃತಿ ಮರೆದಿದ್ದ ಅಂಗನವಾಡಿ ಸಹಾಯಕಿಯನ್ನು ಇದೀಗ ಅಮಾನತು ಮಾಡಲಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜಕಟ್ಟೆಯಲ್ಲಿ ಇಂದು ಈ ಒಂದು ಘಟನೆ ನಡೆದಿತ್ತು, ಘಟನೆ ಸಂಭಂದ ಮಗುವಿನ ಪೋಷಕರು ಠಾಣೆಗೆ ದೂರು ನೀಡಿದ್ದರು ದೂರಿನ ಅನ್ವಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಅಂಗನವಾಡಿ ಸಹಾಯಕಿಯನ್ನು ಅಮಾನತು ಮಾಡಿದ್ದಾರೆ. ಮಹಾರಾಜಕಟ್ಟೆ ಅಂಗನವಾಡಿಯಲ್ಲಿ ಈ ಒಂದು ಘಟನೆ ನಡೆದಿದ್ದು, ರಾಮನಗರದ ಕನಕಪುರ ತಾಲೂಕಿನ ಮಹಾರಾಜಕಟ್ಟೆ ಅಂಗನವಾಡಿಯಲ್ಲಿ ರಮೇಶ್ ಮತ್ತು ಚೈತ್ರ ದಂಪತಿಯ ಮಗು ಹಠ ಮಾಡುತ್ತೆ ಅಂತ ಡೈಪರ್ ನಲ್ಲಿ ಅಂಗನವಾಡಿ ಸಹಾಯಕಿ ಚಂದ್ರಮ್ಮ ಖಾರದ ಪುಡಿ ಹಾಕಿದ್ದಾಳೆ ಅಲ್ಲದೆ ಕೈಗೆ ಬರೆ ಎಳೆದು ವಿಕೃತಿ ಮೆರೆದಿದ್ದಾಳೆ. ವಿಕೃತಿ ಮೆರೆದ ಅಂಗನವಾಡಿ ಸಹಾಯಕಿಯನ್ನು ಇದೀಗ ಅಮಾನತು ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಸಹಾಯಕಿಯನ್ನು ಸಸ್ಪೆಂಡ್ ಮಾಡಲಾಗಿದೆ. ಕನಕಪುರ ಟೌನ್…
ಹಾವೇರಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ನಡೆದಿದ್ದವು. ಆದರೆ ಹಾವೇರಿಯಲ್ಲಿ ಸಾಲ ಕೊಟ್ಟ ವ್ಯಕ್ತಿಯೇ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ನಗರದ ನಗರದ ಇಜಾರಿ ಲಕಮಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕನನ್ನು ವಿನಾಯಕ್ ಸುರೇಶ ಕಂಬಾಳಿಮಠ (34) ಎಂದು ತಿಳಿದುಬಂದಿದೆ. ವಿನಾಯಕ್ ಆತ್ಮಹತ್ಯೆಗು ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದಾರೆ.ಸ್ನೇಹಿತರು ಹಾಗೂ ಇತರರು ನನ್ನ ಬಳಿ ಸಾಲ ಪಡೆದಿದ್ದರು. ಅದನ್ನು ವಾಪಸು ಕೊಟ್ಟಿಲ್ಲ. ಅದನ್ನು ವಸೂಲಿ ಮಾಡಿ ನನ್ನ ಮನೆಯವರಿಗೆ ಕೊಡಿಸಿ ಎಂದು ವಿನಾಯಕ್ ವಿಡಿಯೊದಲ್ಲಿ ಹೇಳಿರುವುದಾಗಿ ಗೊತ್ತಾಗಿದೆ. ವಿನಾಯಕ್ ಅವರು ತಮ್ಮ ಆಸ್ತಿಯನ್ನು ಈ ಹಿಂದೆ ಮಾರಾಟ ಮಾಡಿದ್ದರು. ಅದರಿಂದ ಲಕ್ಷಾಂತರ ರೂಪಾಯಿ ಹಣ ಬಂದಿತ್ತು. ಅದೇ ಹಣವನ್ನು ಕೆಲವರಿಗೆ ನೀಡಿದ್ದರು. ಹಣ ಪಡೆದವರು ವಾಪಸು ನೀಡದೇ ವಂಚಿಸಿದ್ದರು. ಇದರಿಂದ ವಿನಾಯಕ್ ನೊಂದಿದ್ದರೆಂದು ಹೇಳಲಾಗುತ್ತಿದೆ. ಸೆಲ್ಫಿ ವಿಡಿಯೊ ಚಿತ್ರೀಕರಿಸಿ ಹಾಗೂ ಮರಣ…
ಉತ್ತರಪ್ರದೇಶ : ಪ್ರಯಾಣಿಕನೊಬ್ಬ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆದ ಕೂಡಲೇ ಹಠಾತ್ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖನೌ ವಿಮಾನ ನಿಲ್ದಾಣದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಹಠಾತ್ತನೆ ಸಾವನ್ನಪ್ಪಿದ್ದಾನೆ. ನವದೆಹಲಿಯಿಂದ ಲಖನೌಗೆ ಆಗಮಿಸಿದ್ದ ವಿಮಾನದಲ್ಲಿ ಪ್ರಯಾಣಿಕ ಆಸಿಫುಲ್ಲ ಅನ್ಸಾರಿ ಸಾವನಪ್ಪಿದ್ದಾರೆ. ವಿಮಾನ ಲ್ಯಾಂಡ್ ಆದ ಬಳಿಕ ಆಸಿಫುಲ್ಲ ಸಾವನಪ್ಪಿದ್ದಾರೆ. ಮಾರ್ಗ ಮಧ್ಯ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆಸೀಫುಲ್ಲಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಆಸಿಫುಲ್ಲ ಶವ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ನಾಳೆ ಕನ್ನಡ ಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಾರಿಗೆ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ನೀಡಿದ್ದು ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬೇಕು ಎಂದು ಸಾರಿಗೆ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹೌದು ಸಾರಿಗೆ ಸಂಘಟನೆಗಳಿಗೆ ಬೆಂಗಳೂರು ಕಮಿಷನರ್ ಬಿ ದಯಾನಂದ್ ನೋಟಿಸ್ ನೀಡಿದ್ದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ಮಾಡಬಹುದು. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆ ಮಾಡಂಗಿಲ್ಲ. ಬೇರೆ ಕಡೆ ಪ್ರತಿಭಟನೆ ಮೆರವಣಿಗೆಗಳನ್ನು ಮಾಡುವಂತಿಲ್ಲ.ಅಕಸ್ಮಾತ್ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ. ಹೈ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ನೋಟಿಸ್ ನೀಡಲಾಗಿದೆ. ಸಾರಿಗೆ ಸಂಘಟನೆಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೂಚನೆ ನೀಡಿದ್ದಾರೆ.
ಕೊಪ್ಪಳ : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಕೊಪ್ಪಳದಲ್ಲೊಂದು ಹೃದಯವಿದ್ರ ಘಟನೆ ನಡೆದಿದ್ದು, ತಾಯಿಯ ನಿಧನದ ನೋವಿನಲ್ಲಿ ಕೂಡ ವಿದ್ಯಾರ್ಥಿ ಒಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾನೆ. ಹೌದು ತಾಯಿಯ ಅಗಲಿಕೆಯ ನೋವಿನ ಮಧ್ಯೆಯೂ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ.ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವಾನ ಹೇಳಿದರು. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾದರು. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ. ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ ಹತ್ತನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗಿನ ಸಮಯದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಕಳೆದ ಕೆಲ ದಿನಗಳ…
ಬೆಂಗಳೂರು : ಬೆಂಗಳೂರಿನಲ್ಲಿ ವ್ಯಕ್ತಿಯ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ FIR ದಾಖಲಾಗಿದೆ. ಹೌದು ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ಕೂಡಲೇ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಸದ್ಯಆರೋಪಿ ಅಬ್ದುಲ್ ರೆಹಮಾನ್ ವಿರುದ್ಧ FIR ದಾಖಲಾಗಿದೆ.
ಚಿಕ್ಕಮಗಳೂರು : ಎಲ್ಲದಕ್ಕೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಆದರೆ ಇಂದಿನ ಯುವಜನತೆ ಸಣ್ಣ ಪುಟ್ಟ ವಿಷಯಕ್ಕೂ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಇದೀಗ ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, 9ನೇ ತರಗತಿಯಲ್ಲಿ ಫೇಲ್ ಆಗುತ್ತೇನೆ ಎಂದು ಆತಂಕಗೊಂಡ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ವರ್ಷಿಣಿ (15) ಎಂದು ತಿಳಿದುಬಂದಿದೆ. ವರ್ಷಿಣಿ ಈ ವರ್ಷ 9ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿಯ ಬೋವಿ ಕಾಲನಿ ಗ್ರಾಮದಲ್ಲಿ ನಡೆದಿದೆ. ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುವ ಆತಂಕದಿಂದ ಮನನೊಂದು ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಇಬ್ಬರು ಬಾಲಕಿಯರು ಓರ್ವ ಮಹಿಳೆಗೆ ಕಚ್ಚಿದ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. 4 ವರ್ಷದ ಆರಾಧ್ಯ ರಮೇಶ್ ಕಿವಿಯನ್ನು ಹುಚ್ಚು ನಾಯಿ ತುಂಡರಿಸಿದೆ. ಅಲ್ಲದೆ 10 ವರ್ಷದ ನಿದಾ ಆಶಿಫ್ ಸಂಶೇದ್ ಮುಖಕ್ಕೆ ನಾಯಿ ಕಚ್ಚಿದೆ. 35 ವರ್ಷದ ಲಕ್ಷ್ಮಿ ಎನ್ನುವ ಮಹಿಳೆಗೆ ಕೈ, ಮತ್ತು ಕಾಲಿಗೆ ಕಚ್ಚಿ ಹುಚ್ಚುನಾಯಿ ಎಳೆದಾಡಿದೆ. ಮೂವರು ಗಾಯಾಳುಗಳನ್ನು ತಕ್ಷಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಚ್ಚುನಾಯಿಯನು ಸೆರೆಹಿಡಿವಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಿ ಜನರು ಮನವಿ ಮಾಡಿದ್ದಾರೆ. ಆದರೆ ಎಷ್ಟು ಬಾರಿ ಜನರ ಮನವಿ ಮಾಡಿದರು ಕೂಡ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ ವಹಿಸಿದ್ದಾರೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಸಚಿವರ ವಿರುದ್ಧ ಹನಿಟ್ರ್ಯಾಪ್ ವಿಷಯ ಗಂಭೀರವಾಗಿ ಚರ್ಚೆಯಾಯಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ನೇರವಾಗಿ ಹೇಳಿಕೆ ನೀಡಿದರು. ಬಳಿಕ ಕೆ.ಎನ್ ರಾಜಣ್ಣ ಇದಕ್ಕೆ ಪ್ರತಿಕ್ರಿಯೆ ನೀಡಿದರು. ಅಲ್ಲದೆ ಆರ್ ಆರ್ ಕ್ಷೇತ್ರದ ಶಾಸಕ ಮುನಿರತ್ನ ಅವರು ಕೂಡ ಆಕ್ರೋಶ ಹೊರಹಾಕಿದರು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿದ್ದು, ಬಿಜೆಪಿಯಲ್ಲಿ ಪ್ರಭಾವಿ ಸಚಿವರನ್ನು ಸಿಡಿ ಮೂಲಕ ಬೆದರಿಕೆ ಹಾಕಿದ್ದರು ಎಂದಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ವರಿಷ್ಠರಿಗೆ ತಲುಪಿಸುವ ಪ್ರಯತ್ನ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಗಮನಸೆಳೆಯುವ ಪ್ರಯತ್ನ ಮಾಡುತ್ತೇವೆ. ರಮೇಶ್ ಜಾರಕಿಹೊಳಿ, ಕೆ.ಎನ್ ರಾಜಣ್ಣ ಮೂಲಕ ಪ್ರಕರಣ ಹೊರ ಬಂದಿದೆ. ಈ ಎಪಿಸೋಡ್ ಇಲ್ಲಿಗೆ ಕೊನೆಯಾಗಬೇಕು. ಬಿಜೆಪಿಯಲ್ಲಿ ಪ್ರಭಾವಿ ಸಚಿವರನ್ನು ಸಿಡಿ ಮೂಲಕ ಬೆದರಿಕೆ ಹಾಕಿದ್ದರು. ಸಿಡಿ ಮೂಲಕ ಸರ್ಕಾರದಲ್ಲಿ ಲಾಭ ಪಡೆಯುವ ಪ್ರಯತ್ನ ಆಗಿದೆ. ತನಿಖೆ…
ಮೈಸೂರು : ಸರ್ಕಾರಿ ಆಂಬುಲೆನ್ಸ್ ಸೇವೆಗಳ ಕುರಿತು ಆಗಾಗ ಕಂಪ್ಲೇಂಟ್ ಗಳು ಬರುತ್ತಲೇ ಇರುತ್ತೆ ಇದೀಗ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಸರ್ಕಾರಿ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ 3 ದಿನದ ಹಸುಗೂಸು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ನಡೆದಿದೆ. ಹೌದು ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಎನ್ನುವರ ಮಾರ್ಚ್ 17ರಂದು ಹೆರಿಗೆಗಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಹೆರಿಯಾದ ಬಳಿಕ ಮಗು ನೀಲಿ ಬಣ್ಣಕ್ಕೆ ತಿರುಗಿದೆ. ಇದರಿಂದ ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ತೆರಳುತ್ತಿದ್ದರು. ಆದ್ರೆ, ದುರದೃಷ್ಟವಶಾತ್ ಮೈಸೂರು ತಲುಪುವ ಮುನ್ನವೇ ಮಗು ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ. ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ಇದೆ ಎಂದು ಸಿಬ್ಬಂದಿಗಳಿಗೆ ತಿಳಿದಿದ್ದರು ಕೂಡ ಮಗುವನ್ನು ಹಾಗೆ ಶಿಫ್ಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮಗು ಸಾವನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ.ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳ…