Author: kannadanewsnow05

ಬೆಂಗಳೂರು: ಕೇಂದ್ರ ಸರ್ಕಾರವು ಬಾಕಿ ಇರಿಸಿಕೊಂಡಿರುವ ₹ 2,300 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ಪಾವತಿಸುವಂತೆ ಜಿಎಸ್‌ಟಿ ಮಂಡಳಿ ಸಭೆಯಲ್ಲೇ ಆಗ್ರಹಿಸಲು ರಾಜ್ಯ ಸರ್ಕಾರ ಸಿದ್ಧತೆ ನಡಸಿದೆ ಎಂದು ತಿಳಿದು ಬಂದಿದೆ. 2022 ಹಾಗೂ ಅದರ ಹಿಂದಿನ ವರ್ಷಗಳಲ್ಲಿ ರಾಜ್ಯಕ್ಕೆ ಬರಬೇಕಿದ್ದ ಜಿಎಸ್‌ಟಿ ಪರಿಹಾರದಲ್ಲಿ ₹ 2,300 ಕೋಟಿಯಷ್ಟು ಬಾಕಿ ಉಳಿದಿದೆ. ಮಹಾಲೇಖಪಾಲರಿಂದ (ಸಿಎಜಿ) ಲೆಕ್ಕಪರಿಶೋಧನೆಯೂ ಪೂರ್ಣಗೊಂಡಿದೆ. ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರ ಬಾಕಿ ಉಳಿದಿರುವುದನ್ನು ಸಿಎಜಿ ವರದಿಯಲ್ಲೂ ದೃಢಪಡಿಸಲಾಗಿದೆ. ಆ ಬಳಿಕವೂ ಬಾಕಿ ಪಾವತಿಗೆ ಕ್ರಮ ಕೈಗೊಂಡಿಲ್ಲ. ಈ ಕಾರಣದಿಂದ ಮಂಡಳಿಯ ಸಭೆಯಲ್ಲೇ ವಿಷಯ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಜಿಎಸ್‌ಟಿ ಮಂಡಳಿ ಸಭೆ ಶನಿವಾರ ನಡೆಯಲಿದೆ. ಮಂಡಳಿಯಲ್ಲಿ ರಾಜ್ಯದ ಪ್ರತಿನಿಧಿಯಾಗಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ್ದು, ಜಿಎಸ್‌ಟಿ ಪರಿಹಾರದ ಬಾಕಿ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಹಳೆಯ ಘಟನೆಗಳ ವಿಚಾರಗಳನ್ನ ಉದ್ದೇಶಿಸಿ ಆ ರೀತಿ ಹೇಳಿಕೆ ಕೊಟ್ಟಿದ್ದೇನೆ ಹೊರತು ಶಿವಮೊಗ್ಗ ಘಟನೆಯನ್ನ ಆಧರಿಸಿ ಹೇಳಿಕೆ ನೀಡಿಲ್ಲ. ಶಿವಮೊಗ್ಗ ಗಲಾಟೆ ಪ್ರಕರಣದಲ್ಲಿ ಯಾರೇ ಇದ್ದರು ಅವರಿಗೆ ಕಠಿಣ ಶಿಕ್ಷೆ ಆಗಲಿ ಎಂದು ಸಾರಿಗೆ ಸಚಿವ ಸ್ಪಷ್ಟನೆ ನೀಡಿದರು. ನಿನ್ನೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಿಜೆಪಿಯ ಕಾರ್ಯಕರ್ತರು ವೇಷ ಮರೆಸಿಕೊಂಡು ಕಿಡಿಗೇಡಿತನ ಮಾಡಿ ಗಲಾಟೆ ಸೃಷ್ಟಿಸುತ್ತಾರೆ ಎಂದು ಹೇಳಿಕೆ ನೀಡಿದ್ದರು ಈ ಹೇಳಿಕೆ ಬೆನ್ನಲ್ಲೇ ಬಿಜೆಪಿ ನಾಯಕರು ವಿರೋಧವನ್ನು ವ್ಯಕ್ತಪಡಿಸಿದರು. ಇದೀಗ ಸಚಿವರು ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ, ತಪ್ಪು ಮಾಡಿದವರ ಮೇಲೆ ಕ್ರಮವಾಗಬೇಕು. ಈ ಹಿಂದೆ ಪುಲಿಕೇಶಿ ನಗರ ಗಲಾಟೆಯಲ್ಲೂ ನಾನು ಅದನ್ನೇ ಹೇಳಿದ್ದೆ. ನಾನು ಗೃಹಮಂತ್ರಿ ಆಗಿದ್ದವನು, ನನಗೆ ಕಾನೂನು ಗೊತ್ತಿಲ್ವಾ? ಎಂದು ಪ್ರಶ್ನಿಸಿದ ಸಚಿವರು, ಕೆಲವು ಕೇಸ್‌ಗಳಲ್ಲಿ ಅವುಗಳನ್ನು ಹಿಂಪಡೆಯುವಿಕೆ ಪ್ರಯತ್ನಗಳು ನಡೆಯುತ್ತವೆ ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಆ ತರಹದ್ದು ನೂರಾರು…

Read More

ಬೆಂಗಳೂರು : ಗಲಭೆ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆ ಎಲ್ಲಾ ಸರಕಾರಗಳ ಕಾಲದಲ್ಲಿಯೂ ನಡೆಯುತ್ತಾ ಬಂದಿದೆ. ಅಮಾಯಕರ ವಿರುದ್ಧ ದಾಖಲಾಗಿದ್ದರೆ, ಅವರ ಮೇಲಿನ ಪ್ರಕರಣವನ್ನು ಹಿಂಪಡೆಯುವುದು ಸಾಮಾನ್ಯ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವ‌ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯು ವುದು ಸಾಮಾನ್ಯ. ಈ ಹಿಂದಿನ ಸರಕಾರದಲ್ಲಿ ಎಷ್ಟು ಪ್ರಕರಣ ಗಳನ್ನು ಹಿಂಪಡೆಯಲಾಗಿತ್ತು ಎನ್ನುವ ಬಗ್ಗೆ ಮಾಹಿತಿಯಿದೆ. ಅಗತ್ಯವಿದ್ದರೆ ಅದನ್ನು ಬಹಿ ರಂಗಪಡಿಸಲು ಸಿದ್ಧ ಎಂದರು. ಅಮಾಯಕರು ಹೋರಾಟಗಾರರು ಸಾಮಾನ್ಯ ಜನರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಶಾಸಕರು ಸಂಸದರು ಸಚಿವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದು ಸಹಜ ಅಂತಹ ವೇಳೆ ಅವು ಗೃಹ ಇಲಾಖೆಗೆ ರವನೆಯಗುತ್ತವೆ. ಈ ಅರ್ಜಿಗಳನ್ನು ಸಚಿವ ಸಂಪುಟದ ಉಪಸಮಿತಿಯ ಮುಂದೆ ಮಂಡಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಅವುಗಳನ್ನು ವಾಪಸ್ ಪಡೆಯಬಹುದೇ, ಇಲ್ಲವೇ? ಎನ್ನುವ ಬಗ್ಗೆ ಚರ್ಚೆ ನಡೆಯುತ್ತವೆ.ಅಮಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಾದರೆ ಅವುಗಳನ್ನು ಪಡೆಯುವಂತೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು. ಅಲ್ಲದೆ…

Read More

ಬೆಳಗಾವಿ : ಪ್ರತಿಯೊಬ್ಬರ ಆರೋಗ್ಯ ತಪಾಸಣೆಗಾಗಿ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸುವ ಗೃಹ ಆರೋಗ್ಯ ಯೋಜನೆ ಮತ್ತು ಆಶಾಕಿರಣ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಅಂತ್ಯದೋಳಗೆ ಪ್ರಮುಖವಾದಂತಹ ಗೃಹ ಆರೋಗ್ಯ ಹಾಗೂ ಆಶಾಕಿರಣ ಯೋಜನೆಯನ್ನ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತದೆ.ನಂತರ ಎಲ್ಲ ಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗುವುದು. ಅದಕ್ಕಾಗಿ ಪ್ರತ್ಯೇಕ ವೈದ್ಯಕೀಯ ಸಿಬ್ಬಂದಿ ತಂಡ ಕೂಡ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ದಕ್ಷಿಣ ಭಾರತ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ಆರೋಗ್ಯ ವಲಯದಲ್ಲಿ ಬಹಳ ಹಿಂದೆ ಉಳಿದಿದೆ. ಆರೋಗ್ಯ ಕ್ಷೇತ್ರ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲಾ, ತಾಲೂಕು, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುತ್ತಿದೆ. ಅಲ್ಲದೆ, ಖಾಲಿ ಉಳಿದಿರುವ ಹುದ್ದೆಗಳು, ತಜ್ಞ, ಎಂಬಿಬಿಎಸ್ ವೈದ್ಯರು ನೇಮಕ ಮಾಡಿಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು. ಅಲ್ಲದೆ ರಾಜ್ಯದಲ್ಲಿ ಎಲ್ಲೆಲ್ಲಿ…

Read More

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಲ್ಲಿನ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ. ಮೊಹಮ್ಮದ್ ಇಕ್ಬಾಲ್ ಮತ್ತು ಎಂ.ಶಾಹೀದ್ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿಗಳಾದ ಎಚ್‌.ಬಿ. ಪ್ರಭಾಕರ್ ಶಾಸ್ತ್ರಿಮತ್ತು ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ. ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವ ಬಗ್ಗೆ ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸುವ ಪಿತೂರಿ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ್ದರು. ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Read More

ಬೆಂಗಳೂರು : ಬರ ಸಮೀಕ್ಷೆ ಗಾಗಿ ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರದ ತಂಡವು, ರಾಜ್ಯದಲ್ಲಿ ಐದು ದಿನ ಮೂರು ಕೇಂದ್ರದ ತಂಡಗಳು ಪ್ರವಾಸ ಮಾಡಲಿವೆ.ಪ್ರವಾಸಕ್ಕೂ ಮುನ್ನ ಕೇಂದ್ರ ತಂಡಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬರಗಾಲದ ಕುರಿತು ಕೇಂದ್ರ ತಂಡಗಳಿಂದ ವಿವಿಧ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಾಗುತ್ತೆ.195 ತಾಲೂಕುಗಳು ಪರಪೀಡಿತ ಎಂದು ಈಗಾಗಲೇ ರಾಜ್ಯ ಸರ್ಕಾರ ಘೋಷಿಸಿದೆ.ಬರ ಕುರಿತಾಗಿ ಕೇಂದ್ರದ ಬಳಿ 6,000 ಕೋಟಿ ಪರಿಹಾರವನ್ನು ರಾಜ್ಯ ಸರ್ಕಾರ ಕೇಳಿದೆ. ಇಂದಿನಿಂದ ಅಕ್ಟೋಬರ್ 9ರವರೆಗೆ 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಬೆಳಗಾವಿ ವಿಜಯಪುರ ಬಾಗಲಕೋಟೆ ಧಾರವಾಡ ಚಿತ್ರದುರ್ಗ ಹಾವೇರಿ ಗದಗ ಕೊಪ್ಪಳ ವಿಜಯನಗರ ಚಿಕ್ಕಬಳ್ಳಾಪುರ ತುಮಕೂರು ದಾವಣಗೆರೆ ಜಿಲ್ಲೆಗಳಲ್ಲಿ ಕೇಂದ್ರ ತಂಡದಿಂದ ಅಧ್ಯಯನ ನಡೆಸುತ್ತದೆ.

Read More

ಹಾಸನ : ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ಸಮರ್ಪಕ ವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಿದ್ದೇವೆ. ವಿದ್ಯುತ್ ಕೊರತೆ ಯಾದರೆ ನೆರೆ ರಾಜ್ಯಗಳಿಂದಲೂ ಪಡೆಯಲು ಪ್ರಯತ್ನ ನಡೆಸುತ್ತೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ತಾಲೂಕಿನ ದಾಸೇನಹಳ್ಳಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಈಗಾಗಲೇ ಸೌರಶಕ್ತಿಯಿಂದ ಸೌರಶಕ್ತಿ ಇಂದ 1,300 ಮೆಗಾವ್ಯಾಟ್ ವಿದ್ಯುತ್ ಪಡೆದಿದ್ದೇವೆ.ವಿದ್ಯುತ್‌ ಬೇಡಿಕೆ ಸರಿದೂಗಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೂ ಮಾತುಕತೆ ನಡೆಸುತ್ತಿದ್ದೇವೆ. ಬೇರೆ ರಾಜ್ಯಗಳಿಂದ ವಿದ್ಯುತ್ ಪಡೆದು 2024 ಜೂನ್ ವೇಳೆಗೆ ಅವರಿಗೆ ವಾಪಸ್ ಕೊಡುವ ಕುರಿತು ಮಾತುಕತೆ ನಡೆಯುತ್ತಿದೆ. ಆಕಸ್ಮಾತ್ ಆಗಲೂ ವಿದ್ಯುತ್‌ ಕೊರತೆಯಾದರೆ ಗ್ರಿಡ್‌ನಿಂದ ಪಡೆಯಬೇಕಾಗುತ್ತದೆ,ಆ ನಿಟ್ಟಿನಲ್ಲೂ ಪ್ರಯತ್ನ ಮಾಡುತ್ತೇವೆ ಎಂದರು. ಇದೇ ವೇಳೆ ರಾಜ್ಯದಲ್ಲಿ 4 ಲಕ್ಷ ಅಕ್ರಮ ಪಂಪ್‌ಸೆಟ್ ಸಕ್ರಮಕ್ಕೆ ಅರ್ಜಿ ಬಂದಿದೆ ಎಂದು ಸಚಿವ ಮಾಹಿತಿ ನೀಡಿದರು.

Read More

ಬೆಂಗಳೂರು : ರಾಜ್ಯದ ಯುವಕರಲ್ಲಿ ಕೌಶಲ್ಯಾಭಿವೃದ್ಧಿಗಾಗಿ 50ಕ್ಕೂ ಹೆಚ್ಚಿನ ಅಲ್ಪಾವಧಿ ಕೋರ್ಸ್‌ಗಳೊಂದಿಗೆ ಏಳು ಕೌಶಲ್ಯ ವಲಯಗಳಲ್ಲಿ ತರಬೇತಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಇಲಾಖೆ ಸಚಿವ ಡಾ. ಶರಣಪ್ರಕಾಶ ಆರ್.ಪಾಟೀಲ್‌ ತಿಳಿಸಿದರು. ಬೆಂಗಳೂರಿನಲ್ಲಿ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಮತ್ತು ಕೌಶಲ್ಯಾಭಿ ವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಪಾನ್‌ನ ಕಿಮುರಾ ಫೌಂಡ್ರಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾಸ್ಟಿಂಗ್ ಟೆಕ್ನಾಲಿ ಲ್ಯಾಬ್ ಉದ್ಘಾಟನಾ ಕಾರ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ-ಜರ್ಮನ್ ಮಲ್ಟಿಸ್ಟಿಲ್ ಡೆವೆಲಪ್ ಮೆಂಟ್ ಸೆಂಟರನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ಕೇಂದ್ರಗಳಲ್ಲಿ ಸ್ಥಾಪಿಸಲಾಗಿದೆ. ವಿದ್ಯೆಯ ಜತೆಗೆ ಕೌಶಲ್ಯ ಇದ್ದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ. ಅರೆ ಕಾಲಿಕ ಮತ್ತು ಪೂರ್ಣ ಪ್ರಮಾಣದ ಕೌಶಲ್ಯಾಭಿವೃದ್ಧಿ ತರಬೇತಿ ಕೋರ್ಸ್‌ಗಳಿದ್ದು ವಿಶ್ವದ ಪ್ರಮುಖ ಸಂಸ್ಥೆಗಳು ನಮ್ಮೊಂದಿಗೆ ಸಹಯೋಗವನ್ನು ಹೊಂದಿವೆ ಎಂದು ತಿಳಿಸಿದರು.

Read More

ಬೆಂಗಳೂರು : ರಾಜ್ಯದಲ್ಲಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ 2020 -21ನೇ ಸಾಲಿನಿಂದ ಪರಿಚಯಿಸಿರುವ ಸಿ-20 ಪಠ್ಯಕ್ರಮದ ಬಗ್ಗೆ ನನಗೂ ಕೆಲವು ಆಕ್ಷೇಪಗಳು ಬಂದಿವೆ. ಈ ಬಗ್ಗೆ ವಿದ್ಯಾರ್ಥಿಗಳು, ಇನ್ನಷ್ಟು ಅಧ್ಯಾಪಕ ವರ್ಗದ ಅಭಿಪ್ರಾಯ ಪಡೆದು ಪಠ್ಯ ಪರಿಷ್ಕರಿಸುವ ಅಗತ್ಯವಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ತಾಂತ್ರಿಕ ಶಿಕ್ಷಣ ಇಲಾಖೆಯು ಬುಧವಾರ ವಿಕಾಸಸೌಧ ದಲ್ಲಿ ಆಯೋಜಿಸಿದ್ದ ‘ತಾಂತ್ರಿಕ ಶಿಕ್ಷಣದಲ್ಲಿ ಉದ್ಯೋಗಾ ವಕಾಶ ವರ್ಧನೆ’ ಕುರಿತು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸಚಿವರು, ಕಾರ್ಯಕ್ರಮದಲ್ಲಿ ಇದು ಡಿಪ್ಲೊಮಾ ವ್ಯಾಸಂಗದ ಬಳಿಕ ಉನ್ನತ ವ್ಯಾಸಂಗಕ್ಕೆ ಪೂರಕವಾಗಿಲ್ಲ. ಈ ಪಠ್ಯಕ್ರಮ ಪರಿಷ್ಕರಿಸುವ ಅಗತ್ಯವಿದೆ ಎಂದು ವಿವಿಧ ಕಾಲೇಜಿನ ಪಾಲಿಟೆಕ್ನಿಕ್ ಅಧ್ಯಾಪಕರು, ಪ್ರಾಂಶುಪಾಲರು ಸರ್ಕಾರವನ್ನು ಒತ್ತಾಯಿಸಿದರು. ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ-20 ಪಠ್ಯ ಕ್ರಮದ ಬಗೆಗಿನ ಆಕ್ಷೇಪದ ಬಗ್ಗೆ ಪ್ರಶ್ನಿಸಿದಾಗ, ಹೊಸ ಪಠ್ಯಕ್ರಮದ ಬಗ್ಗೆ ನನಗೂ ಕೆಲವು ದೂರುಗಳು ಬಂದಿವೆ. ರಾಜ್ಯ ದಲ್ಲಿ 102 ಸರ್ಕಾರಿ, 44 ಅನುದಾನಿತ ಮತ್ತು 196 ಖಾಸಗಿ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕಾವೇರಿ ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಯರಿಸಬೇಕಿತ್ತು. ಆದರೆ ಸಮಸ್ಯೆ ಬಗೆಹರಿಸದೆ ಪ್ರಧಾನಮಂತ್ರಿ ತಮಾಷೆ ನೋಡ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಕಾವೇರಿ ವಿವಾದದಲ್ಲಿ ಮಧ್ಯೆ ಪ್ರವೇಶ ಮಾಡ್ತಿಲ್ಲ ಎಂದು ಎಂದು ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಗಣತಿ ಮತ್ತು ಜಾತಿ ಗಣತಿ,ಪ್ರಾದೇಶಿಕ ವಿವಾದಗಳು ಮೋದಿಯವರನ್ನು ಸುತ್ತಿಕೊಳ್ಳುತ್ತಿವೆ. ಹಿಂದುಳಿದ ವರ್ಗಗಳು ಅವರ ಪಕ್ಷದ ವಿರುಧ್ದ ತಿರುಗಿ ಬೀಳುತ್ತವೆ. ನಮ್ಮ ಪಕ್ಷಕ್ಕೆ ಮತಕೊಡಲ್ಲ ಅನ್ನೋ ಕಾರಣಕ್ಕೆ ಜಾತಿ ಗಣತಿ ಬಿಡುಗಡೆ ಮಾಡುತಿಲ್ಲ ಎಂದು ಮೊಯ್ಲಿ ವಿಮರ್ಶಿಸಿದರು. ಪ್ರಧಾನಿ ನರೇಂದ್ರ ಮೋದಿ ಜಾತಿ ಜನಗಣತಿ ಬಿಡುಗಡೆ ಮಾಡಲು ಹಿಂದೇಟು ಹಾಕುತಿದ್ದಾರೆ. ಬಿಹಾರ ಸಿಎಂ ಬಿಡುಗಡೆ ಮಾಡಿರುವ ಜಾತಿ ಗಣತಿಯಲ್ಲಿ ಒಬಿಸಿ ಮೇಲುಗೈ ಸಾದಿಸಿದೆ. ದೇಶದ ಎಲ್ಲ ಕಡೆಯೂ ಹಿಂದುಳಿದ ದಲಿತರ ಸಂಖ್ಯೆ ಹೆಚ್ವಿದೆ. ಅಧಿಕೃತವಾದ ಜಾತಿ ಗಣತಿ ಬಿಡುಗಡೆ ಗೊಳಿಸಿದರೆ ಬಿಜೆಪಿಗೆ ಬರುವ ಮತಗಳು ಶೂನ್ಯವಾಗುತ್ತವೆ…

Read More