Author: kannadanewsnow05

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಸೂಳೆಮರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿ 29 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮರ್ಕಿ ಗ್ರಾಮದಲ್ಲಿ ಈ ಒಂದು ಅಪಘಾತ ನಡೆದಿದೆ. ಬಾದಾಮಿಯಿಂದ ಕೆಎಸ್ಆರ್ಟಿಸಿ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಇವನು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು. ಇದುವರೆಗೂ ಒಟ್ಟು ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ. ಹೌದು ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮಗಾಲಯದಲ್ಲಿ ಕೃಷ್ಣಮೃಗ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಗಿನ ಜಾವ ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ. ಮೃಗಾಲಯದಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಬೆಳಗಾವಿ ತಾಲೂಕಿನ ಭೂತರಾಮನ ಹಟ್ಟಿ ಬಳಿ ಇರುವ ಈ ಒಂದು ಮೃಗಾಲಯದಲ್ಲಿ ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಹಿಂದು ಬೆಳಿಗ್ಗೆ ವೈದ್ಯರ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ನಾಯಿ ಮುದ್ದು ಮಾಡು ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಪರಿಚಿತನಿಂದ ಯುವತಿಯ ಮೈ ಕೈ ಮುಟ್ಟಿ ವರ್ತನೆ ತೋರಿದ್ದಾನೆ. ಈ ಒಂದು ಘಟನೆ ನಡೆದಿದ್ದು ಬೆಂಗಳೂರಿನ ಜ್ಞಾನಭಾರತಿ ಬಳಿಯ ಉಪಕಾರ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ವಾಕಿಂಗ್ ಗೆ ಎಂದು ಯುವತಿ ತನ್ನ ಮುದ್ದಿನ ನಾಯಿಯೊಂದಿಗೆ ತೆರಳಿದ್ದಾಳೆ ಈ ವೇಳೆ ಅಪಚಿತ ಕಾಮುಕನೊಬ್ಬ ಬಂದು ನಾಯಿಯನ್ನು ಮುಟ್ಟಬಹುದಾ ಎಂದು ಕೇಳಿ ಯುವತಿಯ ಮೈಕೈ ಮುಟ್ಟಿಯ ಅಸಭ್ಯ ವರ್ತನೆ ತೋರಿದ್ದಾನೆ. ಇದರಿಂದ ಯುವತಿ ಆತನ ಕಪಾಳಕ್ಕೆ ಬಾರಿಸಿದ್ದಾಳೆ, ಆದರೂ ಕೂಡ ಆತ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಭಯಗೊಂಡು ಯುವತಿ ಓಡಿದ್ದಾಳೆ. ಓಡುವ ವೇಳೆ ಆಕೆಯ ಬಳಿದಂತಹ ಮೊಬೈಲ್ ಅನ್ನು ಕಸಿದು ಕಾಮುಕ ಪರಾರಿಯಾಗಿದ್ದಾನೆ.

Read More

ಮಂಡ್ಯ :- ಮದ್ದೂರು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನ.5 ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಕೃಷಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮದ್ದೂರು ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ವೇತಾ ( 38 ) ಎನ್ನಲಾಗಿದೆ. ಕಳೆದ ನ.5 ರಂದು ಮಧ್ಯಾಹ್ನದ ವೇಳೆ ಮದ್ದೂರು ನಗರದ ನ್ಯಾಯಾಲಯದ ಸಂಕೀರ್ಣದ ಮುಂಭಾಗ ಶ್ವೇತಾ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಶ್ವೇತಾ ಅವರ ತಲೆ, ಕೈ ಕಾಲು ಗಂಭೀರ ಗಾಯವಾಗಿತ್ತು. ತಕ್ಷಣವೇ ವಾಹನ ಸವಾರರು ಹಾಗೂ ಸ್ಥಳೀಯರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಡಿಎಂಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಹತ್ತು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ…

Read More

ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಗದಗ ಎಮ್.ಜಿ.ಆರ್.ಡಿ.ಪಿ.ಆರ್ ವಿಶ್ವ ವಿದ್ಯಾಲಯ ಬಳಿ ನಡೆದಿದೆ. 9 ವರ್ಷದ ಮನೋಜ್ ಕಮತರ ಹಾಗೂ 18 ವರ್ಷದ ಆನಂದ ವಾರದ ಮೃತ ಯುವಕರು. ಮೃತರು ಗದಗ ತಾಲೂಕಿನ ನಾಗಾವಿಯ ಗ್ರಾಮದ ನಿವಾಸಿಗಳು ಎನ್ನಲಾಗಿದೆ.ಮೃತರು ಗದಗ ಜಿಮ್ಸ್ ನಿಂದ ನಾಗಾವಿ ಗ್ರಾಮಕ್ಕೆ ಹೊರಟಿದ್ದರು. ಅತಿಯಾದ ವೇಗದಲ್ಲಿ ಓವರ್ ಟೆಕ್ ಮಾಡುವ ವೇಳೆ ಎದುರು ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಹೊಡೆದಿದ್ದಾರೆ. ಗದಗ ಟು ಹೊನ್ನಳ್ಳಿ-57 ರಾಜ್ಯ ಹೆದ್ದಾರಿ ಇದಾಗಿದ್ದು, ನಾಗಾವಿ ಬಳಿಯ ಮಹಾತ್ಮ ಗಾಂಧಿ ಗ್ರಾಮೀಣಭಿವೃದ್ಧಿ ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯದ ಗೇಟ್ ಬಳಿ ಅಪಘಾತ ನಡೆದಿದೆ.

Read More

ಚಾಮರಾಜನಗರ : ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟು ಕೊಡಲ್ಲ. ಡಿಕೆ ಶಿವಕುಮಾರ್ ಸುಮ್ಮನಿರಲ್ಲ. ಇವರಿಬ್ಬರ ತಿಕ್ಕಾಟದ ಮಧ್ಯೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ. ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ. ಚುನಾವಣೆಯನ್ನು ಎದುರಿಸಲು ಬಿಜೆಪಿ ಜೆಡಿಎಸ್ ಸಿದ್ಧವಿದೆ. ಬಿಜೆಪಿ ಜೆಡಿಎಸ್ ಒಟ್ಟಾಗಿ ಮುಂಬರುವ ಚುನಾವಣೆ ಎದುರಿಸಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಿಹಾರ್ ಚುನಾವಣೆ ಬಳಿಕ ರಾಹುಲ್ ಗಾಂಧಿ ಡಮ್ಮಿ ಆಗಿದ್ದಾರೆ. ಇನ್ಮೇಲೆ ರಾಜ್ಯದಲ್ಲಿ ಏನಿದ್ರೂ ಸಿಎಂ ಸಿದ್ದರಾಮಯ್ಯ ಅವರದ್ದೇ ಪ್ರಾಬಲ್ಯ. ಡಿಸಿಎಂ ಡಿಕೆ ಅಸ್ತ್ರ ಬಿಹಾರ್ ಚುನಾವಣೆಯಲ್ಲಿ ವರ್ಕ್ ಔಟ್ ಆಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಶಿವ ಹಾಗು ವಿಷ್ಣುವನ್ನು ನೋಡಿದ್ರು ಈಗ ಬ್ರಹ್ಮನನ್ನು ನೋಡುವುದೊಂದೇ ಬಾಕಿ ಎಂದು ತಿಳಿಸಿದರು. ಬಿಹಾರ್ ಚುನಾವಣೆ ಫಲಿತಾಂಶ ಎಲ್ಲವು ಉಲ್ಟಾ ಆಗೋಗಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮಾತ್ರ ಪ್ರಾಬಲ್ಯವಾಗಿದೆ. ಚುನಾವಣೆ ಫಲಿತಾಂಶ ಬಳಿಕ ಸಿದ್ದರಾಮಯ್ಯ ಪ್ರಾಬಲ್ಯರಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟು ಕೊಡಲ್ಲ. ಡಿಕೆ ಶಿವಕುಮಾರ್…

Read More

ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಿನ್ನೆ ಒಟ್ಟು 28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ಕುರಿತು ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು. ನಿನ್ನೆ ತಾನೆ ಈ ಒಂದು ಘಟನೆ ನಡೆದಿದ್ದು ಇದೀಗ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಹೌದು ಬೆಳಗಾವಿಯ ಕಿತ್ತೂರು ರಾಣಿ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ ಹಾಗಾಗಿ ಕೃಷ್ಣಮೂರ್ಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆ ಸಾವನಪ್ಪಿದ ಕೃಷ್ಣಮೃಗಗಳನ್ನು ಇಂದು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಯಿತು. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್…

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್ ಒಂದು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ಮಹಾಗವ್ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಮೃತರನ್ನ ಆಕಾಶ ಧನವಂತ ಮತ್ತು ಸುಶೀಲ್ ಎಂದು ತಿಳಿದುಬಂದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ಇಬ್ಬರು ಸಿರಗಾಪುರ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಮಹಾಗವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ ಪುರುಷರಿಗೂ ಕೂಡ ಕಳ್ಳರ ಕಾಟ ತಪ್ಪಿಲ್ಲ. ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ನಡೆಸಲಾಗಿದೆ. ಹೌದು ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆಕೋರರು ಅಡ್ಡಗಟ್ಟಿ ದರೋಡೆ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರದ ಚರ್ಚ್ ರಸ್ತೆಯಲ್ಲಿ ಮೂವರಿಂದ ಈ ಒಂದು ಕೃತ್ಯ ಎಸಗಲಾಗಿದೆ. ನಿನ್ನೆ ದರೋಡೆ ಮಾಡಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿರೋಧ ಒಡ್ಡಿದ ವ್ಯಕ್ತಿಯ ಮೇಲೆ ಮನ ಬಂದಂತೆ ಲಾಂಗ್ ನಿಂದ ದಾಳಿ ಸಹ ಮಾಡಿದ್ದಾರೆ. ಅಲ್ಲದೆ ಮೊಬೈಲ್ ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.ವಿಲ್ಸನ್ ಗಾರ್ಡನ್ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More