Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಕಳೆದ ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳಿಗೆ ವಿಷ ಹಾಕಿ ಐದು ಹುಲಿಗಳನ್ನು ಕೊಲೆಗೈದಿದ್ದ ಪ್ರಕರಣ ನಡೆದಿತ್ತು. ಇದೀಗ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದೆ. ಹೌದು ಬಿ ಆರ್ ಹೆಲ್ತ್ ನಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೈ ಅಲರ್ಟ್ ಆಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಯಾರು ಕೂಡ ಒಬ್ಬರೇ ಓಡಾಡದಂತೆ ಅರಣ್ಯ ಸಿಬ್ಬಂದಿಗಳು ಮೈಕ್ ಮೂಲಕ ಜನರಲ್ಲಿ ಮನವಿ ಮಾಡಿದರು.
ರಾಯಚೂರು : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿ ಘಟನೆ ರಾಯಚೂರಿನಲ್ಲೂ ಸಹ ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ. ನಿನ್ನೆ (ಆಗಸ್ಟ್ 31_ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಇಂದು (ಸೆಪ್ಟೆಂಬರ್ 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ. ನಿನ್ನೆಯೂ ಸಹ ಮಂಡೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದರು.
ಬೆಂಗಳೂರು : ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಐದು ಲಕ್ಷ ರು. ಕೊಡುವುದಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಾಗಿರುವ ಎಫ್ಐಆರ್ ರದ್ದು ಕೋರಿ ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕೊಪ್ಪಳ ಟೌನ್ ಠಾಣಾ ಪೊಲೀಸರು ಮತ್ತು ದೂರು ನೀಡಿರುವ ಉಮರ್ ಜುನೈದ್ ಖುರೇಷಿ, ಮೈನು ದ್ದೀನ್ ಬೀಳಗಿ ಮತ್ತು ಅಬ್ದುಲ್ ಕಲಾಂ ಅವರನ್ನು ಪ್ರತಿವಾದಿ ಮಾಡಿದ್ದಾರೆ. ವಿಚಾರಣೆ ನಿಗದಿಯಾಗ ಬೇಕಿದೆ. ಕೊಪ್ಪಳದಲ್ಲಿ ಗವಿಸಿದ್ದಪ್ಪ ಎನ್ನುವ ಯುವಕ ಅನ್ಯ ಕೋಮಿನ ಯುವಕರಿಂದ ಕೊಲೆಯಾಗಿದ್ದ. ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಯತ್ನಾಳ್ ಕೊಪ್ಪಳಕ್ಕೆ ಬಂದಿದ್ದ ಈ ಹೇಳಿಕೆ ನೀಡಿದ್ದರು. ಬಳಿಕ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಶಾಸಕ ಯತ್ನಾಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಬೆಂಗಳೂರು : ನಿನ್ನೆ ತಾನೇ ಆಸ್ತಿ ನೋಂದಣಿ ಹಾಗು ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿತ್ತು. ಇದೀಗ ಹಲವು ವರ್ಷಗಳಿಂದತೆರಿಗೆ ಬಾಕಿ ಉಳಿಸಿಕೊಂಡಿರುವ 2.75 ಲಕ್ಷ ಆಸ್ತಿ ತೆರಿಗೆ ಸುಸ್ತಿದಾರರಿಗೆ ಬಿಬಿಎಂಪಿ ಡಿಮ್ಯಾಂಡ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿ ಮಾಡಲಾಗಿರುವ ಸುಸ್ತಿದಾರರಿಂದ 786 ಕೋಟಿ ರು. ತೆರಿಗೆ ಬಾಕಿ ಬರಬೇಕಿದೆ. ಸುಸ್ತಿದಾರರು ಕೂಡಲೇ www.BBMPtax.karnataka.gov. inನಲ್ಲಿ ಆನ್ಲೈನ್ ಮೂಲಕ ಬಾಕಿ ತೆರಿಗೆ ಪಾವತಿಸಬೇಕಿದೆ. ಇಲ್ಲದಿದ್ದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜತೆಗೆ ಚರ ಮತ್ತು ಸ್ಥಿರಾಸ್ತಿಗಳನ್ನು ಬಾಕಿ ತೆರಿಗೆ ವಸೂಲಿ ಮಾಡಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಸದ್ಯ ತೆರಿಗೆ ಬಾಕಿ ಉಳಿಸಿಕೊಂಡವರ ಪೈಕಿ ಮಹ ದೇವಪುರ ವಲಯದಲ್ಲಿ 65 ಸಾವಿರ ಸುಸ್ತಿದಾರರು 197 ಕೋಟಿ ರು., ದಕ್ಷಿಣ ವಲಯದ 25,162 ಸುಸ್ತಿದಾರರು 116 ಕೋಟಿ ರು., ಪೂರ್ವ ವಲಯ 37,574 ಸುಸ್ತಿದಾರರು 115 ಕೋಟಿ ರು., ಬೊಮ್ಮನಹಳ್ಳಿ ವಲಯ 45,293 ಸುಸ್ತಿದಾರರು 107 ಕೋಟಿ ರು.,…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ಮಂಗಳವಾರದಿಂದ ಚಾಲನೆಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಿರುವ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಹಾಗಾಗಿ ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಿತು. ಬಿಬಿಎಂಪಿ ಆಡಳಿತ ವ್ಯಾಪ್ತಿಯನ್ನು 5 ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಈ ನಗರ ಪಾಲಿಕೆಗಳ ಮೇಲೆ ನಿಗಾ ವಹಿಸಲು ಜಿಬಿಎ ರಚಿಸಲಾಗಿದ್ದು, ಮಂಗಳವಾರದಿಂದ ಬಿಬಿ ಎಂಪಿ ರದ್ದಾಗಿ ಜಿಬಿಎ ಆಡಳಿತ ಆರಂಭವಾಗಲಿದೆ. ಅದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ಅಧಿಸೂಚನೆ ಪ್ರಕಟವಾಗ ಲಿದೆ ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ನಾಮಫಲಕಗಳು ಮಂಗಳ ವಾರವೇ ಬದಲಾಗಲಿದೆ. ಅದಕ್ಕೂ ಮುನ್ನ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುವ ಚುನಾವಣೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ನಗರ ಪಾಲಿಕೆಯ ವಾರ್ಡ್ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವವರ ವೆಚ್ಚದ ಮಿತಿಯನ್ನು 5 ಲಕ್ಷ…
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬುರುಡೆ ಮೂಲ ಕೆದಕುತ್ತಿದ್ದು, ಈ ಒಂದು ಬುರುಡೆ ಎಲ್ಲಿಂದ ಬಂತು? ಹೇಗೆ ಬಂತು? ಯಾರು ಮೊದಲು ಈ ಬುರುಡೆ ಕಥೆ ಕಟ್ಟಿದ್ದಾರೆ ಎನ್ನುವುದನ್ನು ತನಿಖೆ ನಡೆಸುತ್ತಿದ್ದು ಈ ವೇಳೆ ಚಿನ್ನಯ್ಯ ಎಸ್ಐಟಿ ಅಧಿಕಾರಿಗಳ ಮುಂದೆ ಸ್ಪೋಟಕವಾದ ವಿಚಾರ ಬಾಯಿಬಿಟ್ಟಿದ್ದಾನೆ. ಹೌದು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದೆ, ಬುರ್ಡೆ ತಂದಿದ್ದು ಸೇಲಂನಿಂದಲೂ ಅಲ್ಲ ಮಂಡ್ಯದಿಂದಲೂ ಅಲ್ಲ. ನನಗೆ ಜಯಂತ್ ಬುರುಡೆ ಕೊಟ್ಟಿರುವುದು ಅಂತ ಚಿನ್ನಯ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾನೆ. ಜಯಂತ್ ಮನೆಯಲ್ಲಿ ನನಗೆ ಬುರುಡೆ ಮತ್ತು ಮೂಳೆ ಕೊಟ್ಟರು ಜಯಂತ್ ಮನೆಯಲ್ಲಿಯೇ ನಾನು ಮೊದಲು ಬುರುಡೆ ನೋಡಿದ್ದು ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾನೆ. ಟ್ರಾವೆಲ್ ಹಿಸ್ಟರಿ ಸಮೇತ ಚಿನ್ನಯ ಹೇಳಿಕೆ ನೀಡಿದ್ದು, ತಮಿಳುನಾಡಿನಿಂದ ನೇರವಾಗಿ ಬೆಂಗಳೂರಿಗೆ ಭೇಟಿ ನೀಡಿದ್ದೇನೆ. ಬಾಗಲಗುಂಟೆಗೆ ಪ್ರಯಾಣ ಬೆಳೆಸಿದ್ದೇನೆ ಮೂರು ದಿನ ಜಯಂತ್ ಮನೆಯಲ್ಲಿ ನಾನು ಉಳಿದಿದ್ದೇನೆ. ಮನೆ ಹಾಗೂ ಟೆರೇಸ್…
ಮೈಸೂರು : ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಲಾಭ ಸಿಗುತ್ತೆ ಅಂದುಕೊಂಡಿದ್ದಾರೆ ಆದರೆ ಸಿಗಲ್ಲ ಎಂದು ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಧರ್ಮಸ್ಥಳದ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಂದೂ ಅಂದರೆ ಅಪಪ್ರಚಾರ ಮಾಡುವುದಲ್ಲ. ಸುಳ್ಳು ಹೇಳೋದಲ್ಲ. ಧರ್ಮಸ್ಥಳ ವಿಚಾರದಲ್ಲಿ ರಾಜಕಾರಣ ಮಾಡಿದವರು ಯಾರು? ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನಾದರೂ ಬರುತ್ತದ? ಬಾನು ಮುಷ್ತಾಕ್ ಉದ್ಘಾಟನೆ ಮಾಡಿಸುತ್ತಿದ್ದೇವೆ. ದಸರಾ ನಾಡ ಹಬ್ಬ ಅಲ್ವಾ? ಹಿಂದೂ ಮುಸಲ್ಮಾನರು ಕ್ರಿಶ್ಚಿಯನ್ ಯಲ್ಲರು ಸೇರಿ ಎಲ್ಲರೂ ಆಚರಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಶಿವಮೊಗ್ಗ : ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹೋದರನಿಂದ ಹೇಯ ಕೃತ್ಯ! 15 ವರ್ಷದ ಬಾಲಕಿಯು ಗರ್ಭ ಧರಿಸಲು ಆಕೆಯ 16 ವರ್ಷದ ಅಣ್ಣನೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಬಾಲಕಿಯು 9ನೇ ತರಗತಿ ಓದಿದ್ದು, ಶಾಲೆ ಬಿಟ್ಟು ಮನೆಯಲ್ಲಿಯೇ ಇರುತ್ತಿದ್ದಳು. ಪೋಷಕರು ಕೆಲಸಕ್ಕೆ ಹೋದಾಗ ಸಹೋದರ ದುಷ್ಕೃತ್ಯ ಎಸಗಿದ್ದಾನೆ. ಬಾಲಕಿಯು ಏಳೂವರೆ ತಿಂಗಳಿಗೇ ಮಗುವಿಗೆ ಜನ್ಮ ನೀಡಿದ್ದಾಳೆ. ಈ…
ಹಾಸನ : ನಿನ್ನೆ ರಾಜ್ಯಾದ್ಯಂತ ಗಣೇಶ ಮೆರವಣಿಗೆ ವೇಳೆ ಹಲವು ಅವಗಡಗಳು ಸಂಭವಿಸಿದ್ದು, ಹಾಸನ ಮೈಸೂರು ಹಾಗೂ ಮಂಡ್ಯದಲ್ಲಿ ದುರಂತ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಹಾಸನ ಜಿಲ್ಲೆಯ ಆನಂದಪುರದ ಮಂಜುನಾಥ (30) ಎನ್ನುವವರು ಸಾವನ್ನಪ್ಪಿದ್ದಾರೆ. ಇನ್ನು ಮಂಡ್ಯದಲ್ಲೂ ಕೂಡ ಗಣೇಶ ವಿಸರ್ಜನೆ ಮಾಡುವಾಗಲೇ ಮಂಜುನಾಥ (55) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಕೆ ಆರ್ ಪೇಟೆ ತಾಲೂಕಿನ ಜೊಸ್ತನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಇನ್ನೂ ಮೈಸೂರಲ್ಲಿ ಮೆರವಣಿಗೆ ವೇಳೆ ಟ್ಯಾಕ್ಟರ್ ನಿಂದ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾರೆ ಡಾಕ್ಟರ್ ನಿಂದ ರಾಜು (34) ನಡೆದಿದೆ
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮದ್ದೂರು ಗ್ರಾಮದ ಬಳಿ ಲಾರಿ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಸ್ಥಳದಲ್ಲಿದ್ದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮದ್ದೂರುನಲ್ಲಿ ನಡೆದಿದೆ. ಉಡುಪಿ ಮೂಲದ ಲಾರಿ ಚಾಲಕ ಅನಂತಪದ್ಮನಾಭ (70) ಸಾವನ್ನಪ್ಪಿದ್ದು ಟ್ರ್ಯಾಕ್ಟರ್ ನಲ್ಲಿ ಗಂಭೀರವಾದ ಗಾಯಗಳಾಗಿವೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಅಪಘಾತ ಕುರಿತಂತೆ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.