Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ತುಳುವಿನಿಂದ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅಲ್ಲದೆ, ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಉದ್ಘಟತನ ತೋರಿದ್ದಾರೆ. ಈ ವಿಚಾರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿಗೆ ಅವರು, ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಚಲನಚಿತ್ರ ಬಿಡುಗಡೆಗೆ ಅವಕಾಶ ಕೊಡಲ್ಲ. ಕಮಲ್ ಹಾಸನ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಕಮಲ್ ಹಾಸನ್ ಕ್ಷಮೆ ಕೇಳಲ್ಲ ಅಂದರೆ ಬಿಡುವುದು ಯಾರು? ನಟ ಕಮಲ್ ಹಾಸನ್ ಅವರಿಂದ ಚಿತ್ರ ಮಾಡಿದವರಿಗೆ ಅನ್ಯಾಯ ಆಗಲ್ವೇ? ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ. ಇವತ್ತು ಕೊನೆಯ ದಿನ ನೋಡೋಣ. ಆದರೆ ನಾವು ಯಾವುದೇ ಕಾರಣಕ್ಕೂ ಸುಮ್ಮನೆ ಇರಲ್ಲ ಎಂದು ಕಿಡಿ ಕಾರಿದರು. ಕಮಲ್ ಹಾಸನ ಕ್ಷಮೆ ಕೇಳದಿದ್ದರೆ ಸಿನಿಮಾ ಬ್ಯಾನ್ ಮಾಡುತ್ತೇವೆ. ಕಮಲ್…
ಬೆಂಗಳೂರು : ಇಷ್ಟು ದಿನ ಬೆಂಗಳೂರು ಶಾಂತವಾಗಿತ್ತು ಇದೀಗ ಮತ್ತೆ ಬೆಂಗಳೂರಿನ ಜನತೆಗೆ ಚಿರತೆಯ ಕಾಟ ಶುರುವಾಗಿದೆ. ಹೌದು ಬೆಂಗಳೂರಿನ ತಲಘಟ್ಟಪುರ ಸಮೀಪ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಳಿಗ್ಗೆಯಿಂದ ಚಿರತೆಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಿರತೆ ಕಂಡು ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ಸಂಜೆಯ ಬಳಿಕ ಪಟಾಕಿ ಸಿಡಿಸಿ ಚಿರತೆಯನ್ನು ಸೆರೆ ಹಿಡಿಯಲು ಪ್ಲಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಕೇಸು ದಾಖಲಿಸುತ್ತಿದೆ. ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು ಮತ್ತು ದೂರುಗಳು ಬಂದಿವೆ. ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆಯಾಗುತ್ತಿದೆ. ಕುರಿಗಾಹಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುರಿಗಾಹಿಗಳ ರಕ್ಷಣೆಗೆ ಬಂದೂಕು ಪರವಾನಿಗೆ ಕೊಡಲು ಸೂಚಿಸಿದ್ದೆ. ಅದು ಇನ್ನೂ ಕೆಲವು ಕಡೆಗೆ ಜಾರಿಗೆ ಬಂದಿಲ್ಲ. ಕುರಿ ಕಳ್ಳತನ ಜೊತೆಗೆ ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳು ನಡೆದಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹೀಗಾಗಿ ಬಂದೂಕು ಪರವಾನಿಗೆ ಕೊಡುವುದನ್ನು ಸಮರ್ಪಗೊಳಿಸಬೇಕು. ಕುರಿಗಾಹಿಗಳ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಬೇಕು ಎಂದು ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಬೆಂಗಳೂರು : ಡಿಸಿಗಳು ಡೈರಿ ಬರೆಯಬೇಕು ಆಡೇರಿಗಳು ಸಿಎಸ್ಸಿಗೆ ತಲುಪಬೇಕು ಎಂದು ಡಿಸಿ ಮತ್ತು ಸಿಇಒಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುರಿಗಾಹಿಗಳ ಅರಣ್ಯ ಸಿಬ್ಬಂದಿ ಕೊಡುತ್ತಿರುವ ಕಿರುಕುಳ ನಿಲ್ಲಬೇಕು. ಯುವನಿಧಿ ಫಲಾನುಭವಿಗಳಿಗೆ ಉದ್ಯೋಗಕ್ಕಾಗಿ ತರಬೇತಿ ಸಿಗಬೇಕು. ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ ಉದ್ಯೋಗ ಸಿಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು ತರಬೇತಿಯನ್ನು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ತಿಳಿಸಿದರು. ಡಿಸಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು. ಆ ಡೈರಿಯಲ್ಲಿ ಫೀಲ್ಡ್ ವರ್ಕ್ ಅನುಭವಗಳು, ಸಮಸ್ಯೆಗಳು, ಪರಿಹಾರ ಎಲ್ಲದರ ಬಗ್ಗೆಯೂ ಉಲ್ಲೇಖ ಮಾಡಬೇಕು. ಡೈರಿ ಬರೆಯಲು ಎಲ್ಲಾ ಕೆಡಿಪಿ ಸಭೆಗಳಲ್ಲಿ ನಾನು ಸೂಚನೆ ನೀಡಿದ್ದೆ. ಇನ್ನೂ ಕೆಲವರು ಸಮರ್ಪಕವಾಗಿ ಡೈರಿ ಬರೆದಿಲ್ಲ ಎನ್ನುವ ಮಾಹಿತಿ ಇದೆ. ನೀವು ಬರೆದ ಡೈರಿಗಳು ಸಿಎಸ್ಗೆ ತಲುಪಿಸಿದರೆ ನಾನು ಗಮನಿಸಬಹುದು ಎಂದು ತಿಳಿಸದರು.
ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಬಸ್ ನಿಲ್ದಾಣದಲ್ಲಿ ಕಾಂಪೌಂಡ್ನ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಹೌದು ಬಸ್ ನಿಲ್ದಾಣದ ಕಾಂಪೌಂಡ್ ಸರಳಿಗೆ ತಲೆ ಸಿಕ್ಕಿಕೊಂಡಂತೆ ಯುವಕನ ಶವ ಪತ್ತೆಯಾಗಿದೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಎರಡು ಸರಳಿನ ಮಧ್ಯೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಮೃತದೇಹವಿತ್ತು. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಸಲಹೆ ಮಾಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ, ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಬಿಜೆಪಿ ನಾಯಕರು ಹಾಗೂ ಮಠಾಧೀಶರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಬಿಜೆಪಿ ಶಾಸಕರು ಮಠಾಧೀಶರು ರೈತರಿಂದ ಭಾರಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೆದ್ದಾರಿಗೆ ಮಣ್ಣು ಸುರಿದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದರು. ಆಕ್ರೋಶದ ಕಿಚ್ಚಿನ ಬಳಿಕ ಇದೀಗ ಹೇಮಾವತಿ ಕೆನಾಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ರಸ್ತೆಯಲ್ಲಿಯೇ ಅಡ್ಡಲಾಗಿ ಮಲಗಿ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದಾಗ್ಯೂ ಪ್ರತಿಭಟನೆ ಹಿಂಪಡೆಯದ ಹೋರಾಟಗಾರರು ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.
ಹಾಸನ : ಅನ್ನ ಹಾಕಿದ ಮಾಲೀಕನಿಗೆ ದ್ರೋಹ ಬಗೆದ ಕಾರ್ಮಿಕರು ಇದೀಗ ಆತನನ್ನೇ ಭೀಕರವಾಗಿ ಕೊಲೆ ಮಾಡಿ ಆತನ ಮೈಮೇಲಿದ್ದ ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಷ್ಟೆ ಅಲ್ಲದೇ ಕೊಲೆ ಮಾಡಿದ ಬಳಿಕ ವಿಜಯ್ ಮೈಮೇಲಿದ್ದ ಬಂಗಾರದ ಚಿನ್ನ ಹಾಗೂ ಕೈನಲ್ಲಿದ್ದ ಉಂಗುರಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಅಚ್ಚರಿ ಅಂದ್ರೆ ಉಂಗುರು ತೆಗೆಯಲು ಬರಲಿಲ್ಲವೆಂದು ಕೈ ಬೆರಳನ್ನೇ ಕಟ್ ಮಾಡಿಕೊಂಡು ಕೊಂಡೊಯ್ದಿದ್ದಾರೆ. ವಿಕ್ರಂನಿಗೆ ಮೊದಲಿನಿಂದಲೂ ವಿಜಯ್ ಕುಮಾರ್ ಮೈಮೇಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿತ್ತು. ಈ ಸಂಬಂಧ ಪತ್ನಿ ಹಾಗೂ ಮಕ್ಕಳನ್ನು ಊರಿನಲ್ಲಿ ಬಿಟ್ಟು…
ನವದೆಹಲಿ : ಉಗ್ರರ ಜೊತೆಗೆ ಸಂಪರ್ಕ ಹೊಂದಲಾಗಿದೆ ಎಂದು ಇದೀಗ ದೇಶದ 5 ರಾಜ್ಯಗಳಲ್ಲಿ 15 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಶೋಧ ನಡೆಸಲಾಗುತ್ತಿದೆ. ಹೌದು ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನ ಸಹಾಯಕ ಸಬ್-ಇನ್ಸ್ಪೆಕ್ಟರ್ (ASI) ಒಬ್ಬರನ್ನು ಬಂಧಿಸಿದ ಕೆಲವು ದಿನಗಳ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಹಲವಾರು ತಂಡಗಳು ಶನಿವಾರ ದೆಹಲಿ, ಚಂಡೀಗಢ ಮತ್ತು ಕೋಲ್ಕತ್ತಾದಲ್ಲಿ ಶೋಧ ನಡೆಸುತ್ತಿವೆ. ಎನ್ಐಎ ದೆಹಲಿಯಿಂದ ಸಿಆರ್ಪಿಎಫ್ ಎಎಸ್ಐ ಮೋತಿ ರಾಮ್ ಜಾಟ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದೆ. ಟಿವಿ ಪತ್ರಕರ್ತರಂತೆ ನಟಿಸಿದ ಪಾಕಿಸ್ತಾನಿ ಏಜೆಂಟ್ಗಳೊಂದಿಗೆ ಅವರು ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡರು ಮತ್ತು ಅವರಿಂದ ಹಣವನ್ನು ಪಡೆಯುತ್ತಿದ್ದರು ಎಂದು ಕೇಂದ್ರ ಸಂಸ್ಥೆ ಆರೋಪಿಸಿದೆ. ಅವರನ್ನು ಜೆ &…
ಮಂಗಳೂರು : ನಿನ್ನೆ ಮಂಗಳೂರಿನ ಮಂಜನಾಡಿಯ ಮೊಂಟೆಪದವು ಗುಡ್ಡ ಕುಸಿತ ಪ್ರಕರಣದಲ್ಲಿ ಮೂವರು ಸಾವನಪ್ಪಿದ್ದರು. ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ದುರಂತದಲ್ಲಿ ಮೃತಪಟ್ಟ ಬಾಲಕರ ತಾಯಿ ಅಶ್ವಿನಿ ಗಾಯಗೊಂಡಿದ್ದು ಇದೀಗ ಅಶ್ವಿನಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ. ಹೌದು ಮಂಗಳೂರಿನ ಮಂಜನಾಡಿಯ ಮೊಂಟೆಪದವು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಾಳು ಅಶ್ವಿನಿ ದುರಂತದಲ್ಲಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ. ಅಶ್ವಿನಿ ಸಂಪೂರ್ಣವಾಗಿ ಕಾಲಿನ ಸ್ವಾಧೀನವನ್ನು ಕಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿ ಅಶ್ವಿನಿಯ ಎರಡು ಕಾಲುಗಳನ್ನು ವೈದ್ಯರು ಇದೀಗ ತೆಗೆದಿದ್ದಾರೆ. ಅಶ್ವಿನಿ ಅವರ ಒಂದು ಕಾಲಿನ ಪಾದದ ಭಾಗ ಕಟ್ ಆಗಿದೆ. ಮತ್ತೊಂದು ಪೂರ್ತಿ ಕಾಲು ಕಟ್ ಮಾಡಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಶ್ವಿನಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು 24 ಗಂಟೆಗಳ ಕಾಲ ಅಬ್ಸರ್ವೇಷನ್ ನಲ್ಲಿ ಇಟ್ಟಿದ್ದಾರೆ.