Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಇಂದು ಒಂದೇ ದಿನದಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ನಗರದ ಸತ್ಯಮಂಗಲ ಬಡಾವಣೆಯಲ್ಲಿ ಹೃದಯಾಘಾತದಿಂದ 35 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯದ ಕಿಕ್ಕೇರಿ ಮೂಲದ ಚೇತನ್, ಹಾಸನ ನಗರದ ಹಳೇ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ವಾಸವಿದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ಚೇತನ್ ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. “ಎದೆ ನೋಯುತ್ತಿದೆ” ಎಂದು ಪತ್ನಿಗೆ ತಿಳಿಸಿ ತಕ್ಷಣವೇ ಎದ್ದು ನಿಂತು ಕುಸಿದು ಬಿದ್ದಾರೆ. ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಚೇತನ್ ಮೃತಪಟ್ಟಿದ್ದರು. ಅದೇ ರೀತಿಯಾಗಿ ಬೇಲೂರು ಪಟ್ಟಣದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಜೀವನ ನಿರ್ವಹಣೆಗಾಗಿ ಪಟ್ಟಣದಲ್ಲಿ ಟೀ ಕ್ಯಾಂಟೀನ್ ಒಂದನ್ನು ನಡೆಸುತ್ತಿದ್ದರು. ಜೊತೆಗೆ ಸಮಾಜ ಸೇವಕ ಎಂದು…
ಹಾವೇರಿ : ಹಾವೇರಿಯಲ್ಲಿ ಅನುಮಾನಾಸ್ಪದವಾಗಿ CRPF ಕಾನ್ಸ್ಟೇಬಲ್ ಒಬ್ಬರ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಬಳಿ CRPF ಕಾನ್ಸ್ಟೇಬಲ್ ತಾರೇಶ್ ಎನ್ನುವವರ ಮೃತದೇಹ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ಬಳಿ ಇಟ್ಟಿಗೆ ಬಟ್ಟಿಯೊಂದು ಇದ್ದು, ಅದರ ಹಿಂಭಾಗದಲ್ಲಿ ತಾರೇಶ್ ಮೃತ ದೇಹ ಪತ್ತೆಯಾಗಿದೆ. ಮೂಲತಹ ತಾರೇಶ್ ಹಾಸನ ಜಿಲ್ಲೆಯ ತಾಳನಕೋಪ್ಪಲು ಗ್ರಾಮದ ನಿವಾಸಿಯಾಗಿದ್ದಾರೆ. ಸದ್ಯ ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ : ವಸತಿ ಯೋಜನೆಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಕುರಿತು ಕಲ್ಬುರ್ಗಿ ಜಿಲ್ಲೆಯ ಆಳಂದ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹಾಗೂ ಸಚಿವ ಜಮೀರ್ ಅಹ್ಮದ್ ಆಪ್ತ ಸರ್ಫರಾಜ್ ಖಾನ್ ಮಾತನಾಡಿರುವ ವೈರಲ್ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಡಾ. ಬಿ.ಆರ್ ಅಂಬೇಡ್ಕರ್ ವಸತಿ ನಿವಾಸ ಯೋಜನೆಯಲ್ಲೂ ಕೂಡ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಹೌದು ಡಾ.ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಮನೆ ಹಂಚಲು ಪ್ರತಿ ಫಲಾನುಭವಿಯಿಂದ 40,000 ಲಂಚ ನೀಡಬೇಕೆಂಬ ಆರೋಪ ಕೇಳಿ ಬಂದಿದೆ. ರಾಂಪುರ ಪಿ.ಎ ಗ್ರಾಮ ಪಂಚಾಯತಿ ಸದಸ್ಯರ ವಿರುದ್ಧ ಹಣ ವಸೂಲಿ ಆರೋಪ ಕೇಳಿ ಬಂದಿದ್ದು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಪಿಎ ಗ್ರಾಮ ಪಂಚಾಯತಿಯಲ್ಲಿ ಈ ಒಂದು ಭ್ರಷ್ಟಾಚಾರ ನಡೆದಿದೆ. ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗಣಿಹಾರ,ಗಣಿಹಾರ ತಾಂಡ, ರಾಂಪುರ ತಾಂಡ,ಬೆನಕವಟಗಿ, ಬೆನಕವಟಗಿ ತಾಂಡ, ಬಬಲೇಶ್ವರ ಗ್ರಾಮಗಳಲ್ಲಿನ ಫಲಾನುಭವಿಗಳಿಂದ…
ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದರಲ್ಲೂ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್ ಪಾಟೀಲ್ ಅವರು ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ಉಂಟು ಮಾಡಿದೆ. ಇದೀಗ ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್ ಪಾಟೀಲ್ ಅವರಿಗೆ ಬೆಂಗಳೂರಿಗೆ ಬಂದು ಭೇಟಿ ಮಾಡುವಂತೆ ಬುಲಾವ್ ನೀಡಿದ್ದಾರೆ. ಬಿ.ಆರ್ ಪಾಟೀಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಫೋನ್ ಮಾಡಿ ಜೂನ್ 25ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ ಎಂದು ಬಿಆರ್ ಪಾಟೀಲ್ ಆಪ್ತ ವಲಯಗಳಿಂದ ಮಾಹಿತಿ ತಿಳಿದು ಬಂದಿದೆ.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಕಳೆದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಜೂನ್ 15ರಂದು ನಾಪತ್ತೆಯಾಗಿದ್ದ ನೆಟ್ಟಗೋಡು ಗ್ರಾಮದ ಶೋಭಾ (35) ಇಂದು ಶವವಾಗಿ ಪತ್ತೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನೆಟ್ಟಗೋಡು ಗ್ರಾಮದ ನಿವಾಸಿ ಆಗಿರುವ ಶೋಭಾ ಕಳೆದ ಜೂನ್ 15ರಂದು ನಾಪತ್ತೆಯಾಗಿದ್ದರು. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಶೋಭಾ ಮನೆ ತೊರೆದಿದ್ದರು. ಹೊನ್ನಾವರ ತಾಲೂಕಿನ ಹೊಳೆಯಲ್ಲಿ ಇಂದು ಶೋಭಾ ಅವರ ಶವ ಪತ್ತೆಯಾಗಿದೆ. ಶೋಭಾ ಹನುಮಂತ ಗೌಡ ಸಾವಿಗೆ ಏನು ಕಾರಣ ಎನ್ನುವುದು ತಿಳಿದುಬಂದಿಲ್ಲ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಶೋಭಾ ಅವರು ಶವವಾಗಿ ಪತ್ತೆಯಾಗಿದ್ದಾರೆ.
ಧಾರವಾಡ : ಧಾರವಾಡದಲ್ಲಿ ಹಿಟ್ ಅಂಡ್ ರನ್ ಗೆ ASI ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ಬೈಕ್ ನಲ್ಲಿ ತೆರಳುವಾಗ ಈ ಒಂದು ಘಟನೆ ನಡೆದಿದ್ದು ಸ್ಥಳದಲ್ಲೇ ASI ಎಲ್ಲಪ್ಪ ಕುಂಬಾರ್ ಸಾವನಪ್ಪಿದ್ದಾರೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬೈಕಿನಲ್ಲಿ ತೆರಳುವಾಗ ಅಪಘಾತ ಸಂಭವಿಸಿದೆ. ಪರಿಣಾಮ ಪೊಲೀಸ್ ಅಧಿಕಾರಿಯ ತಲೆಗೆ ತೀವೃವಾದ ಪೆಟ್ಟು ಬಿದ್ದಿದೆ. ತೀವೃ ರಕ್ತಸ್ರಾವದಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ವಿಷಯ ತಿಳಿದು ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಮೇಲ್ನೋಟಕ್ಕೆಇದು ಹಿಟ್ ಆಂಡ್ ರನ್ ಪ್ರಕರಣವಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಂದೆಯನ್ನೇ ನೀಚ ಮಕ್ಕಳು ಮನೆಯಿಂದ ಹೊರ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆ 82 ವರ್ಷದ ವೃದ್ಧರು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು ವಯಸ್ಸಾದ ತಂದೆಯನ್ನೇ ಹೊರಹಾಕಿದ್ದಾರೆ. ನೆಲೆ ಇಲ್ಲದೆ 82 ವರ್ಷದ ವೃದ್ಧ ಬಸಪ್ಪ ಪರದಾಡುತ್ತಿದ್ದು, ಮಕ್ಕಳಾದ ಹನುಮಂತಪ್ಪ ಮತ್ತು ಜಯಪ್ಪ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ಬಸಪ್ಪ ವೃದ್ಧಾಶ್ರಮದಲ್ಲಿ ಇದ್ದರು. ತಂದೆ ಮನೆಯ ಬಳಿ ತೆರಳಿದರೂ ಕೂಡ ಮಕ್ಕಳು ತಂದೆಯನ್ನು ಮನೆಯಲ್ಲಿ ಸೇರಿಸಿಕೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವೃದ್ಧ ಬಸಪ್ಪ ಅವರು ಕಳೆದ 8-10 ವರ್ಷಗಳಿಂದ ಮನೆಯಿಂದ ಹೊರಗಡೆ ಇದ್ದೇನೆ. ಯಾರಾದರೂ ಅನ್ನ ಕೊಟ್ಟರೆ ಊಟ ಮಾಡುತ್ತೇನೆ. ಇಲ್ಲವಾದರೆ ಭಿಕ್ಷೆ ಬೇಡಿ ಜೀವಿಸುತಿದ್ದೇನೆ. ನನಗೆ ಸರಿಯಾಗಿ ಕಣ್ಣು…
ಬೆಂಗಳೂರು : ಎಮರ್ಜೆನ್ಸಿ ಸಂದರ್ಭದಲ್ಲಿ ಬಸ್ ಬೇರೆ ಮಾರ್ಗದಿಂದ ಓಡಿಸಿದಾಗ ಅಪಘಾತ ಉಂಟಾದರೆ ಅದಕ್ಕೆ ವಿಮಾ ಕಂಪನಿಯೇ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ತುರ್ತು ಸಂದರ್ಭಗಳಲ್ಲಿ ಪರ್ಯಾಯ ಬಸ್ ಓಡಿಸುವುದು ಷರತ್ತುಗಳ ಉಲ್ಲಂಘನೆಯಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹೌದು ತುರ್ತು ಸಂದರ್ಭಗಳಲ್ಲಿ ಪರ್ಯಾಯವಾಗಿ ಓಡಿಸುವ ಬಸ್ ಅನ್ನು ಮೂಲಭೂತ ಉಲ್ಲಂಘನೆಯಂತೆ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ಗಾಯಾಳುಗಳು ಮತ್ತು ಬಸ್ ಮಾಲೀಕರು ಸಲ್ಲಿಸಿದ ಮೇಲ್ಮನವಿಗಳನ್ನು ನ್ಯಾಯಾಲಯ ಅಂಗೀಕರಿಸಿ ಈ ತೀರ್ಪು ನೀಡಿದೆ. ಪ್ರಕರಣ ಹಿನ್ನೆಲೆ? 2014ರ ಜನವರಿ 21 ರಂದು ಬೆಳಿಗ್ಗೆ 11.45 ರ ಸುಮಾರಿಗೆ, ಗಣೇಶ್ ಮತ್ತು ಬಸವರಾಜ್ ಎಂಬುವರು ಮುದೂರಿನಿಂದ ಹಾವೇರಿಗೆ ಬೈಕ್ನಲ್ಲಿ ಹೋಗುತ್ತಿದ್ದರು. ಸಂಗೂರು ಗ್ರಾಮದ ಸಕ್ಕರೆ ಕಾರ್ಖಾನೆಯ ಬಳಿ, ಅತಿ ವೇಗದ ಬಂದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸವಾರರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಇಬ್ಬರೂ ಪರಿಹಾರ ಕೋರಿ ಅರ್ಜಿ ಸಲ್ಲಿಸಿದರು.…
ಕಲಬುರ್ಗಿ : ವಸತಿ ಯೋಜನೆಯ ಅಡಿ ಮನೆ ನೀಡಲು ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ. ಆಡಿಯೋ ವಿಚಾರದ ಬಗ್ಗೆ ಸಿಎಂ ಕರೆದಿಲ್ಲ ಆದರೆ ಕರೆದರೆ ಖಂಡಿತ ಹೋಗುತ್ತೇನೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಚರ್ಚೆಗೆ ಕರೆದರು ಹೋಗುತ್ತೇನೆ ಎಂದು ಕಲಬುರ್ಗಿಯಲ್ಲಿ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಈ ಕುರಿತು ಕರೆದಿಲ್ಲ ಕರೆದರೆ ಹೋಗಿ ಮಾತನಾಡುತ್ತೇನೆ. ಸಚಿವರ ಪಿ.ಎಸ್ ಜೊತೆಗೆ ಸಂಭಾಷಣೆ ಆಡಿಯೋ ಸೋರಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಸರ್ಫರಾಜ್ ಖಾನ್ ಗೆ ಒಂದು ಮನವಿ ಮಾಡಲು ನಾನು ಕರೆ ಮಾಡಿದ್ದೆ. ಈ ಹಿಂದೆ ನಾನು ಕೇಳಿದರು ಒಂದು ಮನೆಯನ್ನು ಮಂಜೂರು ಆಗಿರಲಿಲ್ಲ. ಆದ್ದರಿಂದ ನನ್ನ ಮೊಬೈಲ್ ನಿಂದಲೇ ಸರ್ಫರಾಜ್ ಗೆ ಕರೆ ಮಾಡಿದ್ದೆ. ಸಚಿವ ಕೃಷ್ಣ ಭೈರೇಗೌಡ ಹೇಳಿದ್ದು ಅಷ್ಟು ಸೀರಿಯಸ್ ಆಗಲಿಲ್ಲ ಆದರೆ ನನ್ನ ಆಡಿಯೋ ಯಾಕೆ ಇಷ್ಟು ಸೀರಿಯಸ್ ಆಗುತ್ತದೆ ಗೊತ್ತಾಗುತ್ತಿಲ್ಲ. ನಾನು ಬ್ಲಾಕ್…
ಬೆಂಗಳೂರು : ಕೃಷಿಹೊಂಡದಲ್ಲಿ ತಾಯಿ ಮತ್ತು ಮಗಳ ಶವಗಳು ಪತ್ತೆಯಾಗಿದ್ದು, ಪತಿಯೇ ತನ್ನ ಹೆಂಡತಿ ಮತ್ತು ಮಗಳನ್ನು ಕೊಂದು ಶವಗಳನ್ನು ಕೃಷಿ ಹೊಂಡಕ್ಕೆ ಎಸೆಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಒಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂಡ್ರಸನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಅನುಮಾನಾಸ್ಪದ ರೀತಿಯಲ್ಲಿ ಕೃಷಿ ಹೊಂಡದಲ್ಲಿ ತಾಯಿ ಮತ್ತು ಮಗಳ ಮೃತ ದೇಹಗಳು ಪತ್ತೆಯಾಗಿವೆ. ದೇವನಹಳ್ಳಿ ತಾಲೂಕಿನ ಇಂಡ್ರಸನಹಳ್ಳಿ, ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಜಮೀನು ಭಾಗ ಕೇಳಿದ್ದಕ್ಕೆ ಗಂಡನಿಂದಲೇ ತಾಯಿ ಮತ್ತು ಮಗಳ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಮಾಲ ಮತ್ತು ಮಗಳು ಅನುಶ್ರೀ ಮೃತದೇಹಗಳು ಪತ್ತೆಯಾಗಿವೆ. ಕೊಲೆ ಮಾಡಿ ಕೃಷಿ ಹೊಂಡಕ್ಕೆ ಎಸೆದಿರುವ ಆರೋಪ ಕೇಳಿ ಬರುತ್ತಿದೆ.ಮಗಳನ್ನು ಕಳೆದುಕೊಂಡು ಇದೀಗ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.