Author: kannadanewsnow05

ಮಂಡ್ಯ : ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ ಪತ್ರ ಬರೆದಿದ್ದಾರೆ, ಸ್ವಾಗತ ಕೋರುತ್ತೇನೆ. ಇದು ಸುಮಲತಾ ಎಂಪಿ ಆಗಿದ್ದಾಗ ಬಂದಂತಹ ಕಾರ್ಯಕ್ರಮ. ಮಂಡ್ಯದ ಆಸ್ಪತ್ರೆಯ ಪಕ್ಕದಲ್ಲೇ ಜಾಗ ಕೊಡಲು ಸಿದ್ದ ಇದ್ದೇವೆ. ಕೇಂದ್ರ ಸರ್ಕಾರ ಕುಂಟುತ್ತಾ ಇದಕ್ಕೆ ಒಪ್ಪಲಿಲ್ಲ. ನೂರೆಂಟು ಸಬೂಬೂ ಹೇಳಿ ಸ್ಟಾಪ್ ಮಾಡಿದ್ರು. ನಮ್ಮ ಪ್ರಭಾವಿ ಕೇಂದ್ರ ಸಚಿವ ಹೆಚ್ಡಿಕೆ ಅವರು ಜಾಗ ಕೇಳಿದ್ದಾರೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ ಎಂದು ಗಣಿಗ ರವಿಕುಮಾರ್ ತಿಳಿಸಿದರು. ಕಳೆದ ಕೆಡಿಪಿ ಸಭೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಅನ್ನ ಮದ್ದೂರಿಗೆ ಶಾಸಕರು ಕೇಳಿದ್ರು. ಸಚಿವ ಚಲುವರಾಯಸ್ವಾಮಿ ಕೂಡ ಒಪ್ಪಿಗೆ ಸೂಚಿಸಿದ್ರು. ಆದ್ರೇ ಕೇಂದ್ರ ಸಚಿವರು ಮದ್ದೂರಿಗೆ ನಿರಾಕರಿಸಿದ್ರೆ ನಾವು ಜಾಗ ಕೊಡಲು ರೆಡಿ ಇದ್ದೇವೆ. ಟ್ರಾಮಾ ಕೇರ್ ಸೆಂಟರ್ ಗೆ ಡಿಎಚ್ಓ ಕಚೇರಿ ಜಾಗದಲ್ಲೇ ನಾವು ಜಾಗ ಕೊಡ್ತೇವೆ. ಕೇಂದ್ರ ಸಚಿವ ರಿಗೆ ಪತ್ರ ಬರೆದಿದ್ದೇನೆ.…

Read More

ಬೆಳಗಾವಿ : ರಾಜ್ಯದಲ್ಲಿ ಕುರ್ಚಿ ಕದನದ ನಡುವೆ ಡಿನ್ನರ್ ಪಾಲಿಟಿಕ್ಸ್ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದ್ದು, ಇದರ ಮಧ್ಯ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಡಿಸೆಂಬರ್ 19 ರಂದು ದೆಹಲಿಗೆ ಹೋಗುತ್ತೀರಾ ವರಿಷ್ಟರು ನಿಮಗೆ ಕರೆ ಮಾಡಿದ್ದಾರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಯಾರೂ ಕರೆದಿಲ್ಲ ಮಾಡಿಲ್ಲ ಯಾಕೆ ಸುಮ್ಮನೆ ಪ್ರಶ್ನೆ ಕೇಳುತ್ತೀರಾ? ನಿಮಗೆ ಹೇಳಿದ್ದಾರೆ ಹೇಳಿದ್ದಾರೆ ಏನ್ರಿ ಎಂದು ಮಾಧ್ಯಮದವರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದರು.

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗಿದ್ದು, ಸಿದ್ದರಾಮಯ್ಯ ಪುತ್ರ ಯತೀಂದ್ರ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದರು. ಇಂದು ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಇದರ ಮಧ್ಯ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಡಿಕೆ ಶಿವಕುಮಾರ್ ಸಿಎಂ ಯಾಕೆ ಆಗಬಾರದು ಎಂದು ಡಿಕೆಶಿ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಡಿಸಿಎಂ ಡಿಕೆ ಶಿವಕುಮಾರ್, ಯಾಕೆ ಸಿಎಂ ಆಗಬಾರದು? ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ವಾ,? ಪಕ್ಷ ಗೋಸ್ಕರ ಶ್ರಮಪಟ್ಟಿಲ್ವಾ? ಶ್ರಮಕ್ಕೆ ಅವರು ಕೂಲಿ ಕೇಳುತ್ತಿದ್ದಾರೆ. ನನ್ನ ಹಣೆಯಲ್ಲಿ ಬಿಜೆಪಿಗೆ ಹೋಗಿ ಮಂತ್ರಿ ಆಗಬೇಕು ಅಂದು ಇತ್ತು. ಅದೇ ರೀತಿ ಡಿಕೆ ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗೇ ಆಗುತ್ತಾರೆ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಿಯಾ ಸೆಲ್ಟೋಸ್ ಕಾರ್ ನಲ್ಲಿ ಬಂದು ವ್ಯಕ್ತಿ ಒಬ್ಬ ಕಸ ಸುರಿದಿದ್ದಾನೆ ಕಸ ಸುರಿದು ಹೋದ ವ್ಯಕ್ತಿಗೆ ಇದೀಗ ಪಾಲಿಕೆ ಸಿಬ್ಬಂದಿಗಳು 5000 ದಂಡ ವಿಧಿಸಿದ್ದಾರೆ. ವಾರ್ಡ್ ನಂಬರ್ 29ರಲ್ಲಿ ಪಾಲಿಕೆ ಸಿಬ್ಬಂದಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಸರ್ವಜ್ಞ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಕಾರ್ ನಲ್ಲಿ ವ್ಯಕ್ತಿಗಳಿಬ್ಬರು ಕಾರಿನ ಡಿಕ್ಕಿಯಲ್ಲಿ ಕಸ ತೆಗೆದುಕೊಂಡು ಬಂದು ಕಸ ಸುರಿದು ಹೋಗಿದ್ದಾನೆ ಈ ಒಂದು ವಿಡಿಯೋ ವೈರಲ್ ಆಗಿದ್ದು ವಿಡಿಯೋ ಆಧರಿಸಿ ವ್ಯಕ್ತಗೆ 5 ಸಾವಿರ ರೂಪಾಯಿ ದಂಡ ಹಾಕಿ ಬಿಸಿ ಮುಟ್ಟಿಸಿದ್ದಾರೆ. ಇನ್ನು ಈ ವಿಚಾರವಾಗಿ ಮಜೂಮ್ದಾರ್ ಶಾ ಆಕ್ರೋಶ ಅವರ ಹಾಕಿದ್ದು ಈ ದುಷ್ಕರ್ಮಿಗಳಿಗೆ 50,000 ತಂಡ ವಿಧಿಸಬೇಕಿತ್ತು ದಂಡ ಹೆಚ್ಚಿಲ್ಲದಿದ್ದರೆ ಯಾರು ತಲೆಕೆಡಿಸಿಕೊಳ್ಳಲ್ಲ ದಂಡ ಪಾವತಿಸುವವರಿಗೆ ವಾಹನ ಸೀಜ್ ಮಾಡಬೇಕಿತ್ತು ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳನ್ನು ಕೊಡ ಬಂದಿಸಬೇಕಿತ್ತು ಎಂದು ಕಿರಣ್ ಮಜುಮ್ದಾರ್ ಶಾ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. https://twitter.com/kiranshaw/status/1999120899782635752?t=IGgp0Jp-_7iebcuR5_fpIQ&s=19

Read More

ಬೆಂಗಳೂರು : ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಒಡೆತನದ ಕಾರು ಅಪಘಾತಗಿದ್ದು, ಹೆಚ್ ಎಂ ರೇವಣ್ಣ ಪುತ್ರನಿಗೆ ಸೇರಿದ ಕಾರು ಡಿಕ್ಕಿಯಾಗಿ 27 ವರ್ಷದ ಯುವಕ ಸಾವನಪ್ಪಿದ್ದಾನೆ . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡಿಮರನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. Hm ರೇವಣ್ಣ ಪುತ್ರ ಶಶಾಂಕ್ ಗೆ ಈ ಒಂದು ಕಾರು ಸೇರಿದೆ ತಡರಾತ್ರಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಾಜೇಶ್ (27) ಸಾವನಪಿದ್ದಾನೆ.ಮೃತ ಯುವಕ ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದ ಮಾಹಿತಿ ತಿಳಿದು ಬಂದಿದೆ. ಕಕಾ 51 MQ 0555 ನಂಬರ್ ಶಶಾಂಕ್ ಮಾಲೀಕತ್ವದ ಕಾರು ಎಂದು ತಿಳಿದು ಬಂದಿದೆ. ಮಾಗಡಿ ಇಂದ ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಇಂದು ಬೆಳಿಗ್ಗೆ ತಾನೇ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಕುದುರು ಪೊಲೀಸ್ ಠಾಣೆಯಲ್ಲಿ…

Read More

ಬೆಳಗಾವಿ : ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಸ್ವಪಕ್ಷದ ಸಚಿವರು ಶಾಸಕರುಗಳೇ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ನಾನು ಏನು ಹೇಳಬೇಕು ಅದನ್ನು ಹೇಳಿ ಆಗಿದೆ ನನ್ನ ಹೇಳಿಕೆ ಕುರಿತು ಬೇರೆಯವರು ಏನು ಹೇಳುತ್ತಾರೋ ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮತ್ತೆ ತಮ್ಮ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೆ ವಿಚಾರವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರನ ಜೊತೆಗೆ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸುಮಾರು ಒಂದು ಗಂಟೆಗಳ ಸುದೀರ್ಘವಾಗಿ ಚರ್ಚೆ ನಡೆಸಿದರು. ಆ ರೀತಿ ಹೇಳಿಕೆ ನೀಡಬೇಡ ಅಂತ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಹೇಳಿದರು ಕೂಡ ಯತೀಂದ್ರ ಮಾತ್ರ ತಂದೆಯ ಮಾತಿಗೂ ಬಗ್ಗದೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.

Read More

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಿತ್ತಾಟ ಜೋರಾಗಿತ್ತು ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ನಾವು ಸಹೋದರರು ಇದ್ದಂತೆ ಇದ್ದೇವೆ ಎಂದು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದರು. ಆದರೆ ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ಯಾವುದೇ ರೀತಿಯಾಗಿ ನಾಯಕತ್ವ ಬದಲಾವಣೆ ಇಲ್ಲ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಇವರ ಒಂದು ಹೇಳಿಕೆಗೆ ಸ್ವಪಕ್ಷದ ಹಲವು ಶಾಸಕರು ಸಚಿವರು ಯತೀಂದ್ರ ವಿರುದ್ಧ ಆಕ್ರಶ ಹೊರಹಾಕಿದ್ದು ನಾವು ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡಿದರೆ ನೋಟಿಸ್ ಕೊಡುತ್ತಾರೆ ಆದರೆ ಯತಿಂದ್ರ ವಿರುದ್ಧ ಯಾಕೆ ಇನ್ನು ನೋಟಿಸ್ ನೀಡುವ ಕ್ರಮ ಆಗಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಮಧ್ಯ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತ ಸಚಿವರು ಹಾಗೂ ಶಾಸಕರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದು…

Read More

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ ಮಹೇಂದ್ರ ರೆಡ್ಡಿ ಅರ್ಜಿ ವಜಾ ಗೊಳಿಸಿದೆ. ಜಾಮೀನು ಅರ್ಜಿ ವಜಾ ಗೊಳಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಅನಸ್ತೇಶಿಯಾ ಖರೀದಿಗೆ ಪತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದಾನೆ. ನಂತರ ಮನೆಗೆ ಬಂದು ಪತ್ನಿ ಕೃತಿಕಾ ರೆಡ್ಡಿಗೆ ಅನೆಸ್ಥೆಶಿಯ ನೀಡಿದ್ದಾನೆ. ಮೃತಪಟ್ಟ ಬಳಿಕ ಮರಣೋತ್ತರ ಪರೀಕ್ಷೆಗೆ ವಿರೋಧಿಸಿದ್ದಾನೆ. ಪತ್ನಿ ಕೊಂದಿದ್ದಾಗಿ ಸ್ನೇಹಿತರಿಗೆ ಫೋನ್ ಪೇ ಸಂದೇಶ ನೀಡಿದ್ದಾನೆ ಎಂದು ವಾದ ಮಂಡಿಸಿದರು. ಬಳಿಕ ವಾದ ಆಲಿಸಿದ ನಂತರ ಸೇಷನ್ಸ್…

Read More

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ಹೌದು ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ…

Read More

ಕೊಪ್ಪಳ : ಕೊಪ್ಪಳದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಘಟನೆಯಲ್ಲಿ ರಾಜು, ದುರ್ಗಪ್ಪ, ಸುರೇಶ್, ಹುಸೆನಮ್ಮ, ನಾಗರಾಜ್, ವಿಷ್ಣು, ಹುಲಿಗೆಮ್ಮ ಹಾಗೂ ಶ್ರೀಕಾಂತ್ ಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನೂ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಹೊಸ ಗ್ಯಾಸ್ ಸಿಲಿಂಡರ್ ಅಳವಡಿಸುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More