Subscribe to Updates
Get the latest creative news from FooBar about art, design and business.
Author: kannadanewsnow05
ಹರ್ಯಾಣ : ರಾಜ್ಯಪಾಲರು ವಿವಿ ಕಾರ್ಯಕ್ರಮಕ್ಕೆ ಬರುವ ದಿನವೇ ಮಹಿಳಾ ಸ್ವಚ್ಚತಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದರು ಎಂಬ ಕಾರಣಕ್ಕೆ, ಪುರುಷ ಮೇಲ್ವಿಚಾರಕ ಸ್ತ್ರೀಯರ ಬಟ್ಟೆ ಬಿಚ್ಚಿಸಿ, ಮುಟ್ಟು ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದೆ. ಅ.26ರಂದು ರಾಜ್ಯಪಾಲ ಅಸೀಮ್ ಕುಮಾರ್ ಘೋಷ್ 3 ದಿನಗಳ ಭೇಟಿಗಾಗಿ ಮಹರ್ಷಿ ದಯಾನಂದ್ ವಿವಿಗೆ ಆಗಮಿಸಿದ್ದರು. ಅದೇ ದಿನದಂದು ಕೆಲ ಮಹಿಳಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದಿದ್ದಾರೆ. ತಾವು ಮುಟ್ಟಾಗಿದ್ದ ಕಾರಣ ಕೆಲಸಕ್ಕೆ ತಡವಾಯಿತು ಎಂದು ಕಾರಣ ಕೊಟ್ಟಿದ್ದಾರೆ. ಇದನ್ನು ಒಪ್ಪದ ವಿಚಾರಕ, ಬೇರೆ ಮಹಿಳೆಯರಿಂದ ಹೆಂಗಸರ ವಸ್ತ್ರ ತೆಗೆಸಿ, ಅವರು ನಿಜವಾಗಿಯೂ ಮುಟ್ಟಾಗಿದ್ದಾರೆಯೇ ಎಂದು ಪರೀಕ್ಷೆ ನಡೆಸಿ, ಸ್ಯಾನಿಟರಿ ಪ್ಯಾಡ್ಗಳ ಫೋಟೋ ತೆಗೆದುಕೊಂಡಿದ್ದಾನೆ. ಮೇಲ್ವಿಚಾರಕ ವಶಕ್ಕೆ: ಈ ಒಂದು ಅಮಾನವೀಯ ಘಟನೆಯಿಂದ ತೀವ್ರ ಅವಮಾನಿತರಾದ ಸಂತ್ರಸ್ತರು ಮೇಲ್ವಿಚಾರಕನ ವಿರುದ್ಧ ವಿವಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಮಂಗಳೂರಿನ ಬಜ್ಜೆಯ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್ಫ್ರಂಟ್ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಸಂಘಟನೆಯಲ್ಲಿ ಸುಹಾಸ್ ಸಕ್ರಿಯವಾಗಿದ್ದ. ಈ ಚಟುವಟಿಕೆಗೆ ಕಡಿವಾಣ ಹಾಕಲು ಆರೋಪಿಗಳು ಸಂಚು ರೂಪಿಸಿ ಸುಹಾಸ್ ಅವರನ್ನು ಕಳೆದ ಮೇ.1 ರಂದು ಆತನ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಈ ಕೃತ್ಯದ ಮೂಲಕ ಸಮಾಜದಲ್ಲಿ ಭೀಕರ ಭೀತಿಯನ್ನು ಸೃಷ್ಟಿಸಿ ಸಮಾಜದ ಗಮನ ಸೆಳೆಯುವುದಾಗಿತ್ತು ಎಂದು ಎನ್ಐಎ ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸುವ ಕುರಿತು ನೂತನ ಕಾಯ್ದೆ ಜಾರಿ ಸಂಬಂಧ ಕರಡು ನಿಯಮಗಳಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳಮೀಸಲಾತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಮಾಜ ಕಲ್ಯಾಣ ಸಚಿವರು ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಜತೆಗೂಡಿ ಚರ್ಚಿಸಿ ಗುರುವಾರದ ಸಂಪುಟ ಸಭೆಯಲ್ಲಿ ಕರಡು ಮಂಡಿಸಲು ನಿರ್ಧರಿಸಲಾಗಿತ್ತು. ಆದರೆ ಬುಧವಾರ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ವಿಷಯ ಮುಂದೂಡಲಾಗಿದೆ’ ಎಂದು ಹೇಳಿದರು. ಮುಂದಿನ ಸಂಪುಟ ಸಭೆ ವೇಳೆಗೆ ಕರಡು ನಿಯಮಗಳನ್ನು ಸಿದ್ಧಪಡಿಸಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು. ಬಳಿಕ ಕಾಯ್ದೆ ಜಾರಿ ಮಾಡಲಾಗುವುದು ಎಂದರು. ಬೆಳಗಾವಿ ಚಳಿಗಾಲದ ಅಧಿವೇಶನ ದಿನಾಂಕ ನಿಗದಿ ಕುರಿತ ಪ್ರಶ್ನೆಗೆ, ಅಧಿವೇಶನ ದಿನಾಂಕ ಇನ್ನೂ ನಿಗದಿ ಮಾಡಿಲ್ಲ ಎಂದಷ್ಟೇ ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಇಂದಿಗೆ ಕೊನೆಗೊಳ್ಳಲಿದೆ. ಆದರೇ ವಿವರ ದಾಖಲಿಸದೇ ಇರುವವರು ದಿನಾಂಕ 10-11-2025ರವರೆಗೆ ಆನ್ ಲೈನ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ ಎಂದಿದ್ದಾರೆ. ಇನ್ನೂ ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಒಟ್ಟು 51,000 ಶಿಕ್ಷಕರ ಕೊರತೆ ಇದ್ದು, 32 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 32 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡುತ್ತಿದ್ದೇವೆ. ಈಗಾಗಲೇ 13,000 ಶಿಕ್ಷಕರನ್ನು ನೇಮಕ ಮಾಡಿದ್ದೇವೆ. ಒಟ್ಟು ರಾಜ್ಯದಲ್ಲಿ 51,000 ಶಿಕ್ಷಕರ ಕೊರತೆ ಇದೆ. ಅಲ್ಲದೆ ಕಾಯಂ ಶಿಕ್ಷಕರನ್ನು ಸಹ ನೇಮಕ ಮಾಡುತ್ತಿದ್ದೇವೆ. ಒಂದನೇ ತರಗತಿ ಮಕ್ಕಳಿಗೆ ಗಣಕಯಂತ್ರದ ತರಬೇತಿ ನೀಡುತ್ತೇವೆ. ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಇಂದ ಅನುಕೂಲ ಆಗಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರ ಕೊರತೆ ಹಿನ್ನೆಲೆ : ಪ್ರತ್ಯೇಕ ಕೇಡರ್ ರೂಪಿಸಿ ವೈದ್ಯರ ನೇಮಕಕ್ಕೆ ಸಚಿವ ಖಂಡ್ರೆ ಸೂಚನೆ
ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಪಶು ವೈದ್ಯರ ಕೊರತೆಯ ಹಿನ್ನೆಲೆಯಲ್ಲಿ ಪಶು ವೈದ್ಯರ ನೇಮಕಕ್ಕೆ ರೂಪರೆಷೆ ಸಿದ್ಧಪಡಿಸಲು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ACS ಗೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ವಿವಿಧ ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ಮತ್ತು ವನ್ಯಜೀವಿ ಪುನರ್ವಸತಿ ಕೇಂದ್ರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದೆ. ಪಶು ವೈದ್ಯರನ್ನು ನಿಯೋಜನೆ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಈಗಾಗಲೇ ಅರಣ್ಯ ಇಲಾಖೆಗೆ ಪ್ರತಿಭ ಈಶ್ವರ ಕಂಡ್ರೆ ಸೂಚನೆ ನೀಡಿದ್ದಾರೆ ಸಕ್ಕರೆ ಬೈಲುಕಿ ಬರದಲ್ಲಿ ಕಾಯಿಲೆಯಿಂದ ನಾಲ್ಕು ಆನೆಗಳು ನರಳುತ್ತಿವೆ ಬಾಲಣ್ಣ ಎಂಬ ಹಣೆಗೆ ಸೋಂಕು ಹಿನ್ನೆಲೆಯಲ್ಲಿ ವೈದ್ಯರು ಆನೆಯ ಕಿವಿಯನ್ನು ತೆಗೆದಿದ್ದಾರೆ. ಅಲ್ಲದೇ ಶಿವಮೊಗ್ಗ ದಸರಾ ಮಹೋತ್ಸವದಲ್ಲಿ ಬಾಲಣ್ಣ ಎಂಬ ಆನೆ ಪಾಲ್ಗೊಂಡಿತ್ತು. ಕಾರ್ಯಾಚರಣೆ ವೇಳೆ ಅರವಳಿಕೆ ಚುಚ್ಚು ಮದ್ದು ನೀಡಲು ವೈದ್ಯರ ಕೊರತೆ ಉಂಟಾಗಿದೆ ಹೀಗಾಗಿ ಪ್ರತ್ಯೇಕ ಕೇಡರ ರೂಪಿಸಿ ವನ್ಯಜೀವಿ ವೈದ್ಯರ ನೇಮಕ ಅಗತ್ಯವಾಗಿದೆ. ತಜ್ಞ ವನ್ಯಜೀವಿ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಪ್ರತ್ಯೇಕ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ದುರಂತದಿಂದ ಪಾರಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಬೊಮ್ಮನಹಳ್ಳಿಯ ಸಮೀಪದ ರೂಪೇನ ಅಗ್ರಹಾರ ಬಳಿಯ ರಸ್ತೆಯಲ್ಲಿ ಹೊರಟಿದ್ದ ಎಸ್ಯುವಿ ಕಾರು ಒಮ್ಮೆಗೆ ನಿಂತುಕೊಂಡಿತು. ತಾಂತ್ರಿಕ ಸಮಸ್ಯೆ ಇರಬಹುದು ಎಂದು ಚಾಲಕ ಕಾರನ್ನು ಪುನರಾರಂಭಿಸಲು ಹೋದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕ ಅಲರ್ಟ್ ಆಗಿದ್ದು, ಕಾರಿನಿಂದ ಹೊರಗಡೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಅಲ್ಲೇ ಇದ್ದಂತ ಸಂಚಾರಿ ಪೊಲೀಸರು ಘಟನೆಯನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಬಂದ ಅಗ್ನಿ ಶಾಮಕ ದಳ ಸುಮಾರು ಅರ್ಧ ಗಂಟೆಯವರೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿತು. ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಯಾದಗಿರಿ : ರಾಜ್ಯದಲ್ಲಿ RSS ಪಥ ಸಂಚಲನ ಕುರಿತಂತೆ ಈಗಾಗಲೇ ಹಲವು ಘಟನೆಗಳು ನಡೆದಿದ್ದು, ಇದೀಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕರ್ಮಭೂಮಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ನಲ್ಲಿ ನಾಳೆ RSS ಪಥ ಸಂಚಲನ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಧಿಕಾರಿ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. RSS ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಅನುಮತಿ ನೀಡಿದೆ. ಹೌದು ಗುರುಮಠಕಲ್ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ, ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದೆ. ಷರತ್ತುಗಳೇನು? ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ…
ಹಾಸನ : ದನ ಮೆಯಿಸಲು ತೆರಳಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಹೋದರರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ದುದ್ದ ಸಮೀಪದ ವಳಗೆರಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ದರ್ಶನ್ (17) ಹಾಗೂ ಲಕ್ಷ್ಮಿಕಾಂತ್ (5) ಮೃತ ಸಹೋದರರು ಎಂದು ತಿಳಿದುಬಂದಿದೆ. ಹಾಸನ ತಾಲೂಕಿನ ವಳಗೇರಹಳ್ಳಿಯ ಅರ್ಚಕ ರಾಮಚಂದ್ರ ಹಾಗೂ ರತ್ನ ದಾಂಪತ್ಯ ಪುತ್ರರಾಗಿದ್ದು ಧನಮಹಿಸಲು ತೆರಳಿದ ವೇಳೆ ದರ್ಶನ್ ಹಾಗೂ ಲಕ್ಷ್ಮೀಕಾಂತ ಮನೆಗೆ ವಾಪಸ್ ಆಗಿರಲಿಲ್ಲ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಶೋಧ ನೆಡೆಸಿದಾಗ ಇಬ್ಬರು ಸಹೋದರ ಶವ ಪತ್ತೆಯಾಗಿದೆ ಘಟನೆ ಕುರಿತಂತೆ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಕೇಸ್ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದದೆ. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದರು. 9 ಬಾರಿ ಈಗಾಗಲೇ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ. ಎಫ್ಐಆರ್ ನಲ್ಲಿ ನಮ್ಮನ್ನು ಆರೋಪಿಗಳು ಎಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೆ ವಾಟ್ಸಾಪ್ ಮತ್ತು ಇ-ಮೇಲ್ ನಲ್ಲಿ ನೋಟಿಸ್ ನೀಡಿದ್ದಾರೆ. ಬಿಎನ್ಎಸ್ ಸೆಕ್ಷನ್ 35 (3) ಅಡಿಯಲ್ಲಿ ಸಮನ್ಸ್ ನೀಡಿದ್ದಾರೆ. ಎಸ್ಐಟಿ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳು ಅಲ್ಲ ಸಾಕ್ಷಿಗಳು ಅಲ್ಲ. ರಾಜಕೀಯ, ಧಾರ್ಮಿಕ, ಸಂಘಟನಾತ್ಮಕ ವೈರತ್ವದಿಂದ…














