Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸದ್ಯ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ ಇನ್ನು ಈ ಒಂದು ಪ್ರಕರಣದ ಕುರಿತು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಟಿ ರನ್ಯಾ ರಾವ್ ಕುರಿತು ಅವಾಚ್ಯ ಪದ ಬಳಸಿದ್ದು ಅವರ ತೇಜೋವಧೆ ಮಾಡಿದ್ದಾರೆ ಎಂದು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ನಟಿ ರನ್ಯಾ ಪರವಾಗಿ ಅಕೂಲ ಅನುರಾಧ ಎನ್ನುವವರು ದೂರು ನೀಡಿದ್ದಾರೆ. ರನ್ಯಾ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅನುರಾಧ ಅವರು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. BNS ಸೆಕ್ಷನ್ 79ರ ಅಡಿ ದೂರು ದಾಖಲಾಗಿದೆ. ಅನುರಾಧ ಅವರ ದೂರಿನ ಅನ್ವಯ ಹೈ…
ತುಮಕೂರು : ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಕೆರೆಯಲ್ಲಿ ಸಾವನ್ನಪ್ಪಿರುವ ಘಟನೆ ಘಟನೆ ತುಮಕೂರು ತಾಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ. ರಂಗನಹಳ್ಳಿ ಗ್ರಾಮದ ಹರ್ಷವರ್ಧನ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಹರ್ಷವರ್ಧನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಚಿತ್ರಕಲೆ ಪರೀಕ್ಷೆ ಬರೆದಿದ್ದ. ಮಧ್ಯಾಹ್ನ 1.30ಕ್ಕೆ ಶಾಲೆ ಬಿಟ್ಟ ನಂತರ ಸ್ನೇಹಿತರ ಜೊತೆಗೂಡಿ ಜಯಮಂಗಲಿ ಸಮೀಪದಲ್ಲಿರುವ ಸುಮಾರು 15ರಿಂದ 20 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಬೇಕು ಎಂದು ಹರ್ಷವರ್ಧನನ ಪೋಷಕರು ಪೊಲೀಸರನ್ನು ಒತ್ತಾಯಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಮರ್ಡರ್ ಆಗಿದ್ದು ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಗೊಂಡ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಚಾಮಾನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ರಾಜಮಾನ ಹಳ್ಳಿ ಗ್ರಾಮದ ಅನಿತಾ ಮೃತ ಗೃಹಿಣಿಯಾಗಿದ್ದು, ಬಾಬು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.ಬಾಬು ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರಾದ ಅನಿತಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದನು. ಅನಿತ ಬಾಬು ಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ಈ ಹಿಂದೆ ಅನಿತಾ ಗಂಡನ ಜೊತೆ ಜಗಳ ಮಾಡಿಕೊಂಡು ಒಂದು ತಿಂಗಳು ಮನೆ ಬಿಟ್ಟು ಹೋಗಿದ್ದಳು.ಕಳೆದ ವಾರ ಬಾಬು ಕುಟುಂಬಸ್ಥರು ವಾಪಾಸ್ ಕರೆದುಕೊಂಡು ಬಂದಿದ್ದರು. ಇದೆ ವಿಚಾರ ವಾಗಿ ಪದೇ ಪದೇ ಜಗಳವಾಡುತ್ತಿದ್ದರು. ನಿನ್ನೆ ಜಗಳವಾದಾಗ ಹೆಂಡತಿ ಹೊಡೆದಿದ್ದನು. ರಾತ್ರಿ ಮಲಗಿ ಬೆಳಗ್ಗೆ ಏಳುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದಂತಹ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಕಿನ್ನಿಗೋಳಿ ಬಳಿಯ ಭಟ್ಟಕೋಡಿಯಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು? ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ.ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಮಾತ್ರವಲ್ಲ,…
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಸ್ನೇಹಿತ ತರುಣ್ ರಾಜ್ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿ ತೀರ್ಪು ಆದೇಶವನ್ನು ನಾಳೆಗೆ ಕಾಯ್ದಿರಿಸಿ ಅದೇಶಿಸಿದರು. ವಿಚಾರಣೆ ಆರಂಭವಾದ ವೇಳೆ ಡಿ ಆರ್ ಐ ಪರವಾಗಿ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ತರುಣ್ ರಾಜ್ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಲಾಗಿತ್ತು. ಮಾರ್ಚ್ 8ರಂದು ಭಾರತದಿಂದ ಪರಾರಿ ಆಗಲು ತರುಣ್ ರಾಜ್ ಯತ್ನಿಸಿದ್ದ. ಬೇರೆ ವಿಧಿ ಇಲ್ಲದೆ ತರುಣ್ ರಾಜು ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದಾನೆ. ನಾವು ಲುಕ್ ಔಟ್ ಸರ್ಕ್ಯುಲರ್ ಹೊರಡಿಸುವುದರಿಂದ ಬೆಂಗಳೂರಿಗೆ ಬಂದಿದ್ದಾನೇ. ಬಂಧಿಸಲು ಕಾರಣ ಬಂಧನ ಪ್ರಕ್ರಿಯೆ ಕಾನೂನು ಪ್ರಕಾರ ಮಾಡಲಾಗಿದೆ. ತರುಣ್ ರಾಜ್ ಬಂಧನ ವಿಚಾರದಲ್ಲಿ ಯಾವುದೇ ರೀತಿ ನಿಯಮ ಉಲ್ಲಂಘಿಸಿಲ್ಲ. ತರುಣ್ ರಾಜ್…
ಮೈಸೂರು : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ, ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಡನಕೊಪ್ಪಲು ಬಳಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಅನಿಲ್ ಎಂಬುವನ ಮೇಲೆ ಬಿಯರ್ ಬಾಟಲಿಂದ ಅಭಿ ಎಂಬಾತ ಹಲ್ಲೆ ನಡೆಸಿದ್ದಾನೆ. ಅನಿಲ್ ಮೇಲೆ ಬಿಯರ್ ಬಾಟಲ್ ನಿಂದ ಸ್ನೇಹಿತ ಅಭಿ ಭೀಕರವಾಗಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ವಾಹನದ ಸರ್ವಿಸ್ ಸೆಂಟರ್ ನಲ್ಲಿ ಹಲ್ಲೆ ನಡೆಸಿದ್ದಾನೆ. ಅನಿಲ್ ಕತ್ತು ಹಾಗೂ ಬೆನ್ನು ಹೊಟ್ಟೆಗೆ ಬಿಯಟ್ ಬಾಟಲ್ ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಆರೋಪಿ ಅಭಿ ಹಲ್ಲೆ ನಡೆಸಿದ ನಂತರ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಅನಿಲನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಉದ್ಯಮಿಗಳು ರಾಜಕಾರಣಿಗಳ ವಿರುದ್ಧ ಹನಿಟ್ರ್ಯಾಪ್ ಮಾಡಿರುವ ಕುರಿತು ಹಲೋ ಪ್ರಕರಣಗಳು ನಡೆದಿದ್ದವು. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರು ಹನಿಟ್ರ್ಯಾಪ್ ಮಾಡುವವರಿಗೆ ಯಾವುದೇ ರೀತಿಯಾದ ಕ್ಷಮೆ ಇಲ್ಲ. ಕಾನೂನಿನ ಅಡಿ ಅವರಿಗೆ ಕಠಿಣವಾದ ಶಿಕ್ಷೆ ನೀಡಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನಿ ಟ್ರ್ಯಾಕ್ ಮಾಡುವವರಿಗೆ ಯಾವುದೇ ಕ್ಷಮೆ ಇಲ್ಲ. ಹನಿಟ್ರ್ಯಾಪ್ ಮಾಡುವವರಿಗೆ ಕಾನೂನಿದೆ. ಆ ಕಾನೂನಿನ ಅಡಿ ಕಠಿಣ ಶಿಕ್ಷೆ ನೀಡಲಾಗುತ್ತದೆ. ಹನಿಟ್ರ್ಯಾಪ್ ಅಸಹ್ಯವಾದ ಕೆಲಸ ಮತ್ತು ಡೇಂಜರಸ್ ಕೆಲಸವಾಗಿದೆ. ಯಾವುದೇ ವ್ಯಕ್ತಿ ಅಥವಾ ಲೇಡಿಯನ್ನು ಜೈಲಿಗೆ ಹಾಕುತ್ತೇವೆ. ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವ ವಿಚಾರವಾಗಿ, ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾತನಾಡಿ, ನಾಯಕರು ದೆಹಲಿಗೆ ಹೋಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಯಾವುದೊ ಇಲಾಖೆ ಕೆಲಸ ಮೇಲೆ ದೆಹಲಿಗೆ ಹೋಗಿರುತ್ತಾರೆ. ಸಿಎಂ ಕೆಪಿಸಿಸಿ ಅಧ್ಯಕ್ಷರ…
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ ಯಾವಾಗಲೂ ಆಪರೇಷನ್ ಕಮಲದ ಮೂಲಕವೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ತೀವ್ರವಾದ ವಿರೋಧ ವ್ಯಕ್ತಪಡಿಸಿತು. ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಬಿಜೆಪಿ ಯಾವಾಗಲು ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬಹುಮತ ಪಡೆದು ಎಂದಿಗೂ ಅಧಿಕಾರಕ್ಕೆ ಬಂದಿಲ್ಲ. 600 ಭರವಸೆಗಳನ್ನು ಕೊಟ್ಟು ಶೇಕಡ 10ರಷ್ಟು ಕೂಡ ಭರವಸೆಗಳನ್ನು ಈಡೇರಿಸಿಲ್ಲ.ಸಾಲ ಮನ್ನಾ ಮಾಡಲು ಹಣ ಪ್ರಿಂಟ್ ಮಾಡಲ್ಲ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು. ಮೋದಿ ಸಾಲ ಮನ್ನಾ ಮಾಡಿದ್ದು ಆದಾನಿ ಮತ್ತು ಅಂಬಾನಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.ಇದರಿಂದ ಬಿಜೆಪಿ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಈ ವೇಳೆ ಪರಿಷತ್ ಸದಸ್ಯ ಸಿಟಿ ರವಿ ಕ್ರಿಯಾಲೋಪ ಎತ್ತಿದರು. ಆಗ ಉತ್ತರ ಕೊಡುವಾಗ ಕ್ರಿಯಾಲೋಪ ಬರಲ್ಲ…
ಚಾಮರಾಜನಗರ : ಮದುವೆಯಾಗುವುದಕ್ಕೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದಿದ್ದ ಯುವಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಇದರಿಂದ ಕುಡಿತದ ಚಟಕ್ಕೂ ದಾಸನಾಗಿದ್ದ, ಇಂದು ತಾಯಿಯ ಕಣ್ಣು ಎದುರೇ ಹೈಟೆನ್ಷನ್ ವಿದ್ಯುತ್ ಕಂಬ ಏರಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಿಸಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಸಣಶೆಟ್ಟಿಗೆ 27 ವರ್ಷವಾದರೂ ಮದುವೆಗಾಗಿ ಹೆಣ್ಣು ಸಿಕ್ಕಿರಲಿಲ್ಲ ಎಂದು ತಿಳಿದುಬಂದಿದೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಮಸಣಶೆಟ್ಟಿ ಕುಡಿತದ ದಾಸನಾಗಿದ್ದ. ಮಸಣಶೆಟ್ಟಿಯದ್ದು ಚಿಕ್ಕ ಮನೆ ಮಾತ್ರ ಇದ್ದು, ಯಾವುದೇ ಜಮೀನು, ಆಸ್ತಿ ಪಾಸ್ತಿ ಇರಲಿಲ್ಲ. ಎರಡು ಬಾರಿ ಹಣ್ಣು ನೋಡಿಕೊಂಡು ಬಂದಿದ್ದರು ಸಹ ರಿಜೆಕ್ಟ್ ಚೆಕ್ ಮಾಡಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಮಸಣಶೆಟ್ಟಿ ಒಳಗಾಗಿದ್ದ ಇಂದು ಬೆಳಿಗ್ಗೆ ಹೈ ಟೆನ್ಶನ್ ವಿದ್ಯುತ್ ಟವರ್ ಏರಿದ್ದ ಮಸಣಶೆಟ್ಟಿ ತನ್ನ ತಾಯಿಯ ದೊರೆ ವಿದ್ಯುತ್ ವೈರ್ ಸ್ಪರ್ಶಿಸಿ ಸಾವನಪ್ಪಿದ್ದಾನೆ.ಮಗನ ಸಾಮನು ಕನ್ನಡ ತಾಯಿ ದಿಗ್ಭ್ರಾಂತಕ್ಕೆ ಒಳಗಾಗಿದ್ದಾರೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶಿವಾಗರದಲ್ಲಿ ಸದ್ಯ ಮಸಣಶೆಟ್ಟಿಯ…