Author: kannadanewsnow05

ಮಂಡ್ಯ : ಮಂಡ್ಯದಲ್ಲಿ ಒಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ದುಷ್ಕರ್ಮಿಗಳು ಸರ್ಕಾರದ ಲಾಂಛನ ಹಾಗೂ ಅಬಕಾರಿ ಇಲಾಖೆಯ ಚಿನ್ಹೆಯನ್ನು ಬಳಸಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಹೌದು ಮಂಡ್ಯದಲ್ಲಿ ಪ್ರತಿಷ್ಠಿತ ಕಂಪನಿ ಹೆಸರಿನಲ್ಲಿ ನಕಲಿ ಮದ್ಯ ತಯಾರಿಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮಂಡ್ಯ ನಗರದಲ್ಲಿ ನಕಲಿ ಮದ್ಯದ ದಂಧೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಸರ್ಕಾರದ ಲಾಂಛನ ಜಗು ಅಬಕಾರಿ ಇಲಾಖೆಯ ಚಿಹ್ನೆ ಬಳಸಿ ನಕಲಿ ಮದ್ಯ ತಯಾರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ದಾಳಿ ಮಾಡಿದ ಪೊಲೀಸರು ಸುಮಾರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ನಕಲಿ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗ್ಯಾಂಗೊಂದು ಮನೆಯೊಂದನ್ನು ಬಾಡಿಗೆ ಪಡೆದು ‘ಕಾಮಧೇನು ಕಂಫರ್ಟ್ಸ್’ ಅನ್ನೋ ಹೆಸರಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಮದ್ಯ ತಯಾರಿಕೆ ದಂಧೆ ನಡೆಸುತ್ತಿತ್ತು. ಮನೆಯಲ್ಲೇ ಮದ್ಯದ ಸ್ಯಾಚೆಟ್, ಸ್ಟಿಕ್ಕರ್ ತಯಾರಿಸುವ ಯಂತ್ರ ಇಟ್ಟುಕೊಂಡಿದ್ದರು. ಕರ್ನಾಟಕ ಸರ್ಕಾರದ ಲಾಂಛನ, ಅಬಕಾರಿ ಇಲಾಖೆ ಚಿಹ್ನೆಯನ್ನೂ ಬಳಕೆ ಮಾಡುತ್ತಿದ್ದರು ಎಂದು…

Read More

ಉಡುಪಿ : ಯುವ ಕ್ರಿಕೆಟಿಗನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಮೃತ ಯುವಕನನ್ನು ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ಎಂದು ತಿಳಿಸಿದರು. ಆದಿತ್ಯ ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ತನ್ನ ತಂಡದೊಂದಿಗೆ ಭಾಗವಹಿಸಿದ್ದ. ಬಳಿಕ ರವಿವಾರ ಮುಂಜಾನೆ 3 ಗಂಟೆಗೆ ಮನೆಗೆ ಬಂದ ಬಳಿಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇ ವೇಳೆ ಬೆಳಗ್ಗೆ 7.30ಕ್ಕೆ ಅಜ್ಜಿ ಬಾಗಿಲು ಬಡಿದಾಗ, ಬಾಗಿಲು ತೆರೆಯದೇ ಇದ್ದು ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಂದೆ ತಾಯಿ ಇಲ್ಲದೆ ಅಜ್ಜಿ ಮತ್ತು ಸಹೋದರನ ಹತ್ತಿರ ಬೆಳೆದಿರುವ ಆದಿತ್ಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತನ ಸಹೋದರ ಸಚಿನ್‌ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಶುಕ್ರವಾರ ಹೈಕೋರ್ಟ್ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಆದರೆ ಕೆಲವು ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಇಂದು ಡಿ ಗ್ಯಾಂಗ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಹೌದು ಕಳೆದ ಶುಕ್ರವಾರ ಕೊಲೆ ಆರೋಪಿಯಾಗಿರುವಂತಹ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಅನುಕುಮಾರ್, ಪ್ರದೋಷ್ ಜಗದೀಶ್, ಲಕ್ಷ್ಮಣ್ ಹಾಗೂ ನಾಗರಾಜುಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇತ್ತ ಬೆನ್ನು ನೋವಿನ ಸಮಸ್ಯೆ ತಿಳಿಸಿ ಬಳ್ಳಾರಿ ಜಿಲ್ಲೆಯ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಂದು ದಾಖಲಾಗಿದ್ದರು. ಈ ವೇಳೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿತ್ತು. ಈ ಒಂದು ಪ್ರಕರಣದಲ್ಲಿ ಜಾಮೀನು ಪಡೆದುಕೊಂಡ ಆರೋಪಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇದ್ದಾರೆ. ಪವಿತ್ರಾಗೌಡ ಅನು ಕುಮಾರ್ ಪ್ರದೋಷ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರೆ, ಇನ್ನೂ ಜಗದೀಶ್…

Read More

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಲಕರಣೆಗಳನ್ನು ಖರೀದಿ ಮಾಡುವ ಸಂದರ್ಭದಲ್ಲಿ ಸುಮಾರು 167 ಕೋಟಿ ರೂಪಾಯಿಗೂ ಅವ್ಯವಹಾರ ನಡೆದಿದೆ ಎಂದು ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮೊದಲ ಎಫ್ಐಆರ್ ದಾಖಲಾಗಿತ್ತು. ಇದೀಗ ಕೋವಿಡ್-19 ಸಂದರ್ಭದಲ್ಲಿನ ಅವ್ಯವಹಾರದ ಕುರಿತು ನ್ಯಾಯಮೂರ್ತಿ ಮೈಕಲ್ ಕುನ್ಹಾ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ ವರದಿ ಆಧರಿಸಿ ಬಿಬಿಎಂಪಿಯ 28 ಅಧಿಕಾರಿಗಳಿಗೆ ನೋಟಿಸ್‌ ಸಿದ್ದಪಡಿಸಿದೆ. ಈಗಾಗಲೇ ಕೋವಿಡ್ ನಿರ್ವಹಣೆ ವೇಳೆ ರಾಜ್ಯದಲ್ಲಿ ಮಾಸ್ಕ್, ಪಿಪಿಇ ಕಿಟ್ ಹಾಗೂ ಇತರೆ ಸಲಕರಣೆ ಖರೀದಿಯಲ್ಲಿ ಸುಮಾರು 167 ಕೋಟಿ ರೂ. ಅಕ್ರಮವಾಗಿದೆ ಎಂಬುದರ ಎಂಬುದರ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ. ಇದರ ಬೆನ್ನಲೇ ಇದೀಗ ಬಿಬಿಎಂಪಿಯ 28 ಅಧಿಕಾರಿಗಳಿಗೆ ನೋಟಿಸ್‌ ನೀಡುವುದಕ್ಕೆ ಅಂತಿಮ ತಯಾರಿ ಮಾಡಿಕೊಳ್ಳಲಾಗಿದೆ.ಸೋಮವಾರ ಅಥವಾ ಮಂಗಳವಾರದ ವೇಳೆಗೆ ನೋಟಿಸ್‌ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನೋಟಿಸ್‌ನಲ್ಲಿ ಏನಿದೆ?: ಅಧಿಕಾರಿಗಳ ಹೆಸರು, ಕೋವಿಡ್ ಅವಧಿಯಲ್ಲಿ ಬಿಬಿಎಂಪಿ ಯಾವ…

Read More

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಮಹಿಳೆ ಯನ್ನು ಬಂಧಿಸದಿದ್ದರೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಿಎಂಟಿಸಿ ಎಲೆಕ್ಟ್ರಿಕ್ ವೆಹಿಕಲ್ ಬಸ್ ಚಾಲಕರು 110ಕ್ಕೂ ಹೆಚ್ಚು ಬಸ್‌ಗಳನ್ನು ಪೀಣ್ಯ ಡಿಪೋದಲ್ಲಿ ನಿಲ್ಲಿಸುವ ಮೂಲಕ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಶನಿವಾರ ಬೆಂಗಳೂರಿನ ಸುಮ್ಮನಹಳ್ಳಿ ಬಳಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್ ಚಾಲಕನ ಮೇಲೆ ಮಹಿಳೆ ಅಟ್ಟಹಾಸ ಮೆರೆದಿದ್ದಳು. ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಬಸ್ ತಾಗಿದ್ದಕ್ಕೆ ಉಗ್ರರೂಪ ತಾಳಿದ ಮಹಿಳೆ ಬಸ್ಸಿಗೆ ನುಗ್ಗಿ ಪ್ರಯಾಣಿಕರ ಎದುರೇ ಹಿಗ್ಗಾಮುಗ್ಗಾ ಥಳಿಸಿದ್ದಳು.ಪ್ರಕರಣ ಸಂಬಂಧ, ಘಟನೆ ಖಂಡಿಸಿ ಡಿಪೋ 22 ಚಾಲಕರು ಬಸ್ ತೆಗೆಯದೇ ಪ್ರತಿಭಟನೆ ಮಾಡಿದರೆ ಅತ್ತ ಹಲ್ಲೆ ಮಾಡಿದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಬಿಎಂಟಿಸಿ ಚಾಲಕನದ್ದೇ ತಪ್ಪು ಎಂದು ಆರೋಪ ಮಾಡಿದ್ದಾಳೆ. ಚಾಲಕನ ಮೇಲೆ ಹಲ್ಲೆ ನಡೆದು ಒಂದು ದಿನ ಕಳೆದರೂ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ. ಹಲ್ಲೆ ಮಾಡಿದ ಮಹಿ ಳೆಯ ವಿರುದ್ದ ಕಾನೂನು ರೀತ್ಯ ಕ್ರಮಕೈಗೊಳ್ಳುವವರೆಗೂ ಬಸ್‌ಗಳನ್ನು…

Read More

ಬೆಳಗಾವಿ : ತಾನೇ ಹೆತ್ತಂತ ಮಗುವನ್ನು ಪಾಪಿ ತಾಯಿಯೊಬ್ಬಳು ಕೆರೆಗೆ ಎಸೆದಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಕೆರೆಗೆ ಎಸೆದಿರುವುದಕ್ಕೆ ಕಾರಣ ಏನೆಂದರೆ ಮಗುವಿಗೆ ಪಿಡ್ಸ್ ಮಗುವಿಗೆ ಪಿಡ್ಸ್‌ ಸಮಸ್ಯೆ ಇದೆ ಎಂದು ತಾಯಿ ಹೇಳಿಕೊಂಡಿದ್ದಾಳೆ. ಹೌದು ಮಗುವಿಗೆ ಪಿಡ್ಸ್​ ಬರುತ್ತೆ ಅಂತಾ ಹೆತ್ತ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ಎಂಬುವವರು ಈ ಕೃತ್ಯ‌ವೆಸಗಿದ್ದಾರೆ. ಮಗುವನ್ನು ಕೆರೆಗೆ ಎಸೆದು ಓಡಿ ಹೋಗುತ್ತಿದ್ದ ತಾಯಿಯನ್ನ ತಡೆದು ಸ್ಥಳೀಯರು ಬುದ್ದಿ ಹೇಳಿದ್ದಾರೆ. ಮಗುವನ್ನ ರಕ್ಷಣೆ ಮಾಡಿ ಅವಳ ಕೈಗೆ ನೀಡಿದ್ದಾರೆ. ಬಳಿಕ ಬೆಳಗಾವಿ ನಗರದ ಚಿಕ್ಕ ಮಕ್ಕಳ…

Read More

ನವದೆಹಲಿ: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್‌ ಔಲಿಯಾ ಸ್ಪಷ್ಟನೆ ನೀಡಿದ್ದು, ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಝಾಕಿರ್ ಹುಸೈನ್ ನಿಧನ ಕುರಿತ ವರದಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಸಹೋದರನ ಸ್ಥಿತಿ ಗಂಭೀರವಾಗಿದೆ. ಜಗತ್ತಿನಾದ್ಯಂತ ಇರುವ ಅವರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಖುರ್ಶಿದ್ ಹೇಳಿದ್ದಾರೆ. ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾದ ತಾಳವಾದ್ಯಗಾರ 1988 ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳನ್ನು…

Read More

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಸ್ಫೋಟದ ದೃಶ್ಯವನ್ನು ಚಿತ್ರಿಕರಣ ಮಾಡಿದ ಕ್ಯಾಮೆರಾ ಮ್ಯಾನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹೌದು ದೃಶ್ಯ ಚಿತ್ರೀಕರಿಸಿದ್ದ ಕ್ಯಾಮೆರಾ ಮ್ಯಾನ್ ವಶಕ್ಕೆ ಪಡೆದು ಇದೀಗ ವಿಚಾರಣೆ ನಡೆಸುತ್ತಿದ್ದಾರೆ. ಡ್ರೋನ್ ಪ್ರತಾಪ್ ಜೊತೆಗೆ ಕ್ಯಾಮೆರಾ ಮ್ಯಾನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಪೋಟದ ದೃಶ್ಯವನ್ನು ಚಿತ್ರಿಕರಣಕ್ಕೆ ಬಳಸಿದಂತಹ ಕ್ಯಾಮೆರಾ ಸಹ ಇದೀಗ ಪೊಲೀಸರು ಸೀಸ್ ಮಾಡಿದ್ದಾರೆ. ಬೆಂಗಳೂರಿನ ಜೆಪಿ ನಗರದ ಸಂಜು ಎಂಬುವವರ ಮನೆಯಲ್ಲಿದ್ದ ಕ್ಯಾಮೆರಾವನ್ನು ಸೀಜ್ ಮಾಡಲಾಗಿದೆ. ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿ ಮಾಡಲಾಗಿತ್ತು. ವಾಸ ಸೈಂಟಿಸ್ಟ್ ಶಾಪ್ ನಲ್ಲಿ ಡ್ರೋನ್ ಪ್ರತಾಪ್ ಸೋಡಿಯಂ ಖರೀದಿಸಿದ್ದ ಎಂದು ತಿಳಿದುಬಂದಿದೆ. 75 ವರ್ಷದಿಂದ ಅಧಿಕೃತವಾಗಿ ಸೋಡಿಯಂ ಕೆಮಿಕಲ್ ಶಾಪ್ ನಡೆಸುತ್ತಿದ್ದರು. ಶಾಲಾ ಕಾಲೇಜುಗಳ ಪ್ರಯೋಗಾಲಗಳಿಗೆ ಈ ಒಂದು ಸೋಡಿಯಂ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಅವರು ಚೇಸಿಂಗ್ ಮಾಡಿ ದಿಗಳು ಹಿಡಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ನಿಲ್ಲುತ್ತಿಲ್ಲ. ಲಾಂಗ್ ತೋರಿಸಿ ಮೊಬೈಲ್ ಕದ್ದು ಕಳ್ಳರು ಪರಾರಿಯಾಗಲು ಯತ್ನಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಬಂದು ಕಳ್ಳರು ಮೊಬೈಲ್ ಕದ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಮಾಜಿ ಕಾರ್ಪೊರೇಟರ್ ಕಳ್ಳರನ್ನು ಚೇಸಿಂಗ್ ಮಾಡಿದ್ದಾರೆ. ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಕಳ್ಳರನ್ನು ಚೇಸಿಂಗ್ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಚೇಸ್ ಮಾಡಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆ ಕುರಿತಂತೆ ಹೆಚ್…

Read More

ರಾಯಚೂರು : ಬಳ್ಳಾರಿ, ಬೆಳಗಾವಿ ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಇದರ ಬೆನ್ನಲ್ಲೇ ಇದೀಗ ರಾಯಚೂರಿನಲ್ಲೂ ಕೂಡ ಇಂದು ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾಳೆ. ರಾಯಚೂರು ಜಿಲ್ಲೆಯ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿ (32) ಎನ್ನುವ ಬಾಣಂತಿ ಸಾವನ್ನಪ್ಪಿದ್ದಾರೆ. ಹೌದು ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಮೂರು ತಿಂಗಳ ಅವಧಿಯಲ್ಲಿ ಒಟ್ಟು 10 ಬಾಣಂತಿಯರ ಸಾವಾಗಿದೆ. ಗಾರಲದಿನ್ನಿ ಗ್ರಾಮದಲ್ಲಿ ಬಾಣಂತಿ ಈಶ್ವರಿ ಸಾವನ್ನಪ್ಪಿದ್ದಾಳೆ. ಜ್ವರದಿಂದ ಈಶ್ವರಿ ಬಳಲುತ್ತಿದ್ದು ಇದೀಗ ಸಾವನ್ನಪ್ಪಿದ್ದಾರೆ ಡಿಸೆಂಬರ್ 8 ರಂದು ಈಶ್ವರಿಗೆ ನಾರ್ಮಲ್ ಹೆರಿಗೆ ಆಗಿತ್ತು. ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಶ್ವರಿಗೆ ಹೆರಿಗೆ ಆಗಿತ್ತು. ಹೆರಿಗೆಯ ನಂತರ ಮನೆಗೆ ಬಂದ ಬಳಿಕ ತೀವ್ರ ರಕ್ತಸ್ರಾವ ಹಾಗೂ ತೀವ್ರ ಜ್ವರದಿಂದ ಈಶ್ವರಿ ಬಳಲುತ್ತಿದ್ದರು. ಇದರಿಂದ ತೀವ್ರವಾಗಿ ನೋವು ಅನುಭವಿಸಿ ಸಾವನಪ್ಪಿದ್ದಾರೆ. ಮಟಮಾರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಇದೀಗ ಆರೋಪ ಕೇಳಿ ಬಂದಿದೆ.ಸರಿಯಾದ ಚಿಕಿತ್ಸೆ ನೀಡದ ಹಾಗೂ ಸ್ಪಂದಿಸದ ಆರೋಪ ಕೇಳಿ…

Read More