Author: kannadanewsnow05

ಬೆಂಗಳೂರು : ಒಂದು ಕಾಲದಲ್ಲಿ ನಾನು ಸಿಗರೇಟ್ ಹೆಚ್ಚು ಸೇದುತ್ತಿದ್ದೆ. ಆದರೆ ಸಿಗರೇಟ್ ಹೆಚ್ಚು ಸೇದುವುದರಿಂದ ಆಯಸ್ಸು ಕಡಿಮೆ ಆಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಂಗು ಸಿಗರೇಟ್ ಸೇದುವ ಅಭ್ಯಾಸವಿತ್ತು. ಹಾರ್ಟ್ ಸಮಸ್ಯೆ ಬಂತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದೆ ಎಂದು ಅವರ ಅನುಭವ ಸ್ಮರಿಸಿದರು. ಸಿಗರೇಟ್ ಆರೋಗ್ಯಕ್ಕೆ ಮಾರಕ, ಕ್ಯಾನ್ಸರ್ ಬರುತ್ತದೆ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ನಮ್ಮ ಜೀವನ ಶೈಲಿಯ ಜೊತೆಗೆ ಆಹಾರ ಪದ್ಧತಿ ಬದಲಾಯಿಸಿಕೊಳ್ಳಿ, ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ರೋಗಿಯ ಪ್ರಾಣ ಉಳಿಸಿದರೆ…

Read More

ಬೆಂಗಳೂರು : ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು. ರಾಜೀನಾಮೆ ಕೊಡುವುದಕ್ಕೂ ಹಿಂದೆಮುಂದೆ ನೋಡುವುದಿಲ್ಲ ಎಂದು ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ವಿನಯ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಸೇರಿದರೆ ಅವರು ಸಚಿವರು‌. ಅವರೇನು ಮೇಲಿಂದ ಬಂದಿಲ್ಲ. ಸಚಿವರು ಮೊದಲು ಶಾಸಕರೇ ಅಲ್ವಾ? ಅದನ್ನು ಅರ್ಥ ಮಾಡಿಕೊಳ್ಳಿ ಅವರಿಗೂ ನೋಟಿಸ್​ ಕೊಡಲೇಬೇಕಾಗುತ್ತದೆ. ಪ್ರಸಂಗ ಬಂದರೆ ದಾಖಲೆ ಕೊಡುತ್ತೇನೆ. ನಾನು ಭಯಪಡುವುದಿಲ್ಲ ಬಹಿರಂಗವಾಗಿಯೇ ಹೇಳುತ್ತೇನೆ. ಗೌರವ ಇಲ್ಲದ ಕಡೆ ನಾವು ಯಾಕೆ ಇರಬೇಕು ಎಂದು ಭೈರತಿ ಸುರೇಶ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಅನುದಾನ ಸಂಬಂಧ ಸಚಿವ ಬೈರತಿ ಸುರೇಶ್ ಜೊತೆಗೆ ಉಂಟಾಗಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯೆ ನೀಡಿದರು. ಅಸಮಾಧಾನ ವ್ಯಕ್ತಪಡಿಸಿಲ್ಲ, ಪ್ರಸಂಗ ಬಂದರೆ ವ್ಯಕ್ತಪಡಿಸುತ್ತೇನೆ. ನಾನು ದುರಾಡಳಿತವನ್ನು ಸಹಿಸೋದಿಲ್ಲ. ನಮ್ಮ ಬೋರ್ಡ್​​ನಲ್ಲಿ ದುರಾಡಳಿತ ನಡೆಯುತ್ತಿದೆ. ಆ ಬೋರ್ಡ್​​ಗೆ ನಾನು ಹೆಡ್. ಆದರೆ ಅಲ್ಲಿ ವ್ಯವಸ್ಥೆ ಸರಿಯಿಲ್ಲ ಎಂದು ವಾಗ್ದಾಳಿ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವಂತೆ ಮತ್ತೊಂದು ಘಟನೆ ನಡೆದಿದ್ದು, ಜ್ಯೂಸ್ ಕುಡಿದು ಪಿಜಿಗೆ ವಾಪಸ್ ಆಗುತ್ತಿದ್ದ ವೇಳೆ ದುರುಳರು ಯುವತಿಯ ಮೈಮುಟ್ಟಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯದ ಎಚ್ ಎಂ ಟಿ ಲೇಔಟ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಬೆಂಗಳೂರಲ್ಲಿ ಇತ್ತೀಚ್ಚಿಗೆ ರೋಡ್ ರೋಮಿಯೋ ಗಳ ಹುಚ್ಚಾಟಕ್ಕೆ ಯುವತಿಯರು ಬೆಚ್ಚಿ ಬಿದ್ದಿದರೆ. ಬೆಂಗಳೂರಿನ ಪಿನ್ಯಾದ ಹೆಚ್ ಎಂ ಟಿ ಲೇಔಟ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ. ಜ್ಯೂಸ್ ಕುಡಿದು ವಾಪಸ್ ಆಗುತ್ತಿದ್ದ ಯುವತಿಯ ವೈ ಮುಟ್ಟಿ ವಿಕೃತಿ ಮೆರೆದಿದ್ದಾರೆ. ಹೌದು ಕಾಲೇಜು ಮುಗಿಸಿಕೊಂಡು ಯುವತಿಯ ಜ್ಯೂಸ್ ಕುಡಿದು ವಾಪಸ್ ಆಗುತ್ತಿದ್ದ ಯುವತಿಯ ಮೈಮುಟ್ಟಿ ದುರುಳರು ವಿಕೃತಿ ಮೆರೆದಿದ್ದಾರೆ.ಯುವತಿ 8ನೇ ಮೈಲಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಯುವತಿ ಬಿಬಿಎ ಓದುತ್ತಿದ್ದಾಳೆ. ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ಈ ಒಂದು ಘಟನೆ ನಡೆದಿದೆ.ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ನಂತರ ಯುವತಿ ಜೋರಾಗಿ ಕಿರುಚಿಕೊಂಡಿದ್ದಾಳೆ. ವಿಕೃತಿ ಮೆರೆದು ಬೈಕ್ ನಲ್ಲಿ ಪರಾರಿಯಾದ…

Read More

ಬೆಂಗಳೂರು : ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಮಡಿವಾಳ ಠಾಣೆಯ ಕಾನ್ಸ್ಟೇಬಲ್ ಶಿವರಾಜ್ (29) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕೆ ವ್ಯಕ್ತವಾಗುತ್ತಿದೆ. ಹೌದು ಜೂನ್ 26ರಂದು ಮನೆಯಿಂದ ಕಾನ್ಸ್ಟೇಬಲ್ ಶಿವರಾಜ್ ನಾಪತ್ತೆಯಾಗಿದ್ದ ಎನ್ನಲಾಗಿದೆ. ನಂತರ ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಮೂರು ತಿಂಗಳ ಹಿಂದೆ ಶಿವರಾಜ್ ದಾವಣಗೆರೆ ಮೂಲದ ವಾಣಿ ವಿವಾಹವಾಗಿದ್ದ. ನಂತರ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಶಿವರಾಜ್ ವಾಣಿ ದೂರವಾಗಿದ್ದರು. ಇದಾದ ಬಳಿಕ ಪತಿ ಶಿವರಾಜ್ ಮತ್ತು ಕುಟುಂಬದ ವಿರುದ್ಧ ಪತ್ನಿ ವಾಣಿ ದೂರು ನೀಡಿದ್ದಳು. ದಾವಣಗೆರೆಯಲ್ಲಿ ವರದಕ್ಷಿಣೆ ಕಿರುಕುಳ ಬಗ್ಗೆ ವಾಣಿ ದೂರು ನೀಡಿದ್ದಳು. ದಾವಣಗೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದಾದ ಬಳಿಕ ಶಿವರಾಜ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.

Read More

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ಕುರಿತಂತೆ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿತು. ನಾನು ಕನ್ನಡದ ಪರವಾಗಿ ಇದ್ದೀನಿ ಅಂತ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಕಾನೂನು ಸಜ್ಞರ ಜೊತೆ ನಾಳೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಖುಷಿಯಿಂದ ಸಿಎಂ ಸಿದ್ದರಾಮಯ್ಯ ಅವರು ಮನವಿ ಸ್ವೀಕಾರ ಮಾಡಿದ್ದಾರೆ ಎಂದರು. ಮುಂದೆ ಮಾಡಬೇಕಾದ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಿದ್ದಾರೆ. ಸಿಎಂ ಗೆ ಕನ್ನಡದ ನಾಡು ನುಡಿ ಬಗ್ಗೆ ಇರುವ ಕಳಕಳಿ ವ್ಯಕ್ತವಾಗಿದೆ. ಕಾದು ನೋಡಿ ನಂತರ ಮುಂದಿನ ಹೋರಾಟವನ್ನು ರೂಪಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದರು. ಕನ್ನಡಿಗರ ಉದ್ಯೋಗಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದ್ದು, ಸರೋಜಿನಿ ಮಹಿಷಿ ವರದಿಗಾಗಿ 40 ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ವರದಿ ಕುರಿತ…

Read More

ಬೆಂಗಳೂರು : ಹಿಂದೆ ಮುಂದೆ AK-47 ಗನ್ ಹಿಡಿದುಕೊಂಡಿರುವ ಗನ್ ಮ್ಯಾನ್ ಗಳು, ಐಷಾರಾಮಿ ಕಾರುಗಳು, ಮೈ ತುಂಬ ಬಂಗಾರ ಹಾಕಿಕೊಂಡು ಕೈಯಲ್ಲಿ ಎಕೆ47 ಇಟ್ಕೊಂಡು ಕೆಶೋ ಕೊಡುತ್ತಿದ್ದ ಅಸಾಮಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೌದು ರೀಲ್ಸ್​​ಗಾಗಿ ಫುಲ್​ ರಿಚ್​ ಆಗಿ ಕಾಣಿಸಿಕೊಳ್ಳಲು ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿಕೊಂಡು ಶೋ ಕೊಡಲು ಹೋಗಿ ಈಗ ರೀಲ್ಸ್ ಸ್ಟಾರ್ ಜೈಲುಪಾಲಾಗಿದ್ದಾನೆ. ಗನ್ ಮ್ಯಾನ್, ಐಷಾರಾಮಿ ಕಾರು, ಕಂತೆ ಕಂತೆ ಹಣ, ಕೆಜಿಗಟ್ಟಲೆ ಚಿನ್ನಾಭರಣ ಹಾಕಿಕೊಂಡು ಶೋ ಮಾಡುತ್ತಿದ್ದವ ಶೋಕಿವಾಲಾನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಶೋ ಕೊಡಲು ಹೋಗಿ ಜೈಲು ಪಾಲಾದ ಯುವಕನ ಕಥೆ ಇದು. ಅರುಣ್ ಕಟಾರೆ ಎನ್ನುವ ಯುವಕನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. AK-47 ಮಾದರಿ ನಕಲಿ ಗನ್ ಹಿಡಿದು ರಸ್ತೆಯಲ್ಲಿ ಶೋ ಕೊಡುತ್ತಿದ್ದ. ಈತನ ಬಿಲ್ಡಪ್ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಅರುಣ್ ಕಟಾರೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ವಿಚಾರಣೆ…

Read More

ಹಾವೇರಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಭಾರಿ ಚರ್ಚೆಯಾಗುತ್ತಿದ್ದು, ಈ ವಿಷಯವಾಗಿ ಸಚಿವ ಶಿವಾನಂದ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಬಹಿರಂಗ ವೇದಿಕೆಯಲ್ಲಿ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗಳು ಸಿಎಂ ಸ್ಥಾನದ ಕುರಿತು ಮಾತನಾಡಿದರು. ಈ ವಿಷಯವಾಗಿ ಪ್ರತಿಕ್ರಿಯಿಸಿದ ಶಿವಾನಂದ ಪಾಟೀಲ್ ಸೇಮ್ ಬದ್ಲಾವಣೆ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳುತ್ತೀರ ಅದೇನು ಆಗೋದ ಹೋಗುವುದ ಎಂದು ತಿಳಿಸಿದರು. ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಾರೋ ಒಬ್ಬರು ಮಾತನಾಡಿದರು ಎಂದು ಅದಕ್ಕೆ ಯಾಕೆ ಪ್ರತಿಕ್ರಿಯೆ ಕೊಡಬೇಕು? ಒಬ್ಬರು ಸ್ವಾಮೀಜಿ ಮಾತನಾಡಿದರೆ ರಾಜಕಾರಣ ಆಗುತ್ತಾ? ಸ್ವಾಮೀಜಿಗಳ ಮಾತು ಅಲ್ಲೇ ಕೇಳಿ ಅಲ್ಲೇ ಬಿಡಬೇಕು. ಅದು ಯಾರು ಅವರನ್ನು ಬಳಸಿಕೊಂಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು. ಸಿಎಂ ಸ್ಥಾನದ ಬದಲಾವಣೆ ಕುರಿತಂತೆ ಸ್ವಾಮೀಜಿಗಳು ಮಾತನಾಡಿದ್ದಾರೆ. ರಾಜಕಾರಣಿಗಳು ಆ ವಿಷಯದ ಬಗ್ಗೆ ಮಾತನಾಡಿದರೆ ಅದಕ್ಕೊಂದು ಬೆಲೆ ಇರುತ್ತದೆ ಆದರೆ…

Read More

ನವದೆಹಲಿ : ಅಗ್ನಿವೀರ್ ಯೋಜನೆಯು ಇದು ಸರ್ಕಾರ ಯೋಜನೆಯಲ್ಲ ಇದು ಮೋದಿ ಯೋಜನೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಸದನದಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಮಾತನಾಡಿದ ಅವರು, ಅಗ್ನಿವೀರ್ ಸರ್ಕಾರದ ಯೋಜನೆ ಎಲ್ಲಾ ಮೋದಿ ಯೋಜನೆ. ಅಗ್ನಿವೀರ ಯೋಜನೆಯಲ್ಲಿ ಉಪಯೋಗಿಸಿಕೊಂಡು ಕೈಬಿಡುತ್ತಾರೆ.ಅಗ್ನಿವೀರ್ ಯೋಧರನ್ನು ಹುತಾತ್ಮರಾಗಿ ಪರಿಗಣಿಸುವುದಿಲ್ಲ .ಅಗ್ನಿ ವೀರ ಯೋಧರಿಗೆ ಪಿಂಚಣಿ ವ್ಯವಸ್ಥೆ ಸಹ ಮಾಡಿಲ್ಲ. ಹುತಾತ್ಮರಾದ ಅಗ್ನಿವೀರ ಯೋಧರಿಗೆ ಪರಿಹಾರ ನೀಡಬೇಕು. ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ನನ್ನನ್ನು ದೇವರು ಕಳಿಸಿದ್ದಾನೆಂದು ಮೋದಿ ಹೇಳಿಕೊಂಡಿದ್ದರು. ನೋಟ್ ಬ್ಯಾನ್ ಮಾಡಲು ಮೋದಿಗೆ ದೇವರೇ ಹೇಳಿರಬೇಕು ಎಂದು ಪ್ರಧಾನಮಂತ್ರಿ ಮೋದಿ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಅವೈಜ್ಞಾನಿಕ ಜಿಎಸ್​ಟಿ ನಿಯಮಗಳಿಂದ ಜನರಿಗೆ ಸಮಸ್ಯೆಯಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು…

Read More

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶದ ಜನತೆಗೆ ಅಷ್ಟೇ ಅಲ್ಲ ಬಿಜೆಪಿಯವರಿಗೂ ಕೂಡ ಭಯ ಹುಟ್ಟಿಸಿದ್ದಾರೆ ಎಂದು ಲೋಕಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಇಡಿ ದೇಶದಲ್ಲಿ ನರೇಂದ್ರ ಮೋದಿ ಭಯ ಹುಟ್ಟಿಸಿದ್ದಾರೆ. ಬೆಳಗ್ಗೆ ಸದನಕ್ಕೆ ಬಂದಾಗ ರಾಜನಾಥ್ ಸಿಂಗ್ ಗೆ ಅತ್ಯಂತ ನಗುಮುಖದಿಂದ ಸ್ವಾಗತಿಸಿದರು. ಆದರೆ ಮೋದಿ ಮುಖದಲ್ಲಿ ನಗುವಿರು ಇಲ್ಲ ನಗು ಮಾಯವಾಗಿದೆ. ನಿತಿನ್ ಗಡ್ಕರಿ ಪರಿಸ್ಥಿತಿ ಸಹ ಇದೇ ರೀತಿ ಆಗಿದೆ ಎಂದರು. ಮೋದಿಯವರು ಕೇವಲ ದೇಶದ ಜನತೆಗೆ ಮಾತ್ರ ಭಯ ಹುಟ್ಟಿಸಿಲ್ಲ. ಬಿಜೆಪಿಯವರಿಗೂ ಮೋದಿ ಭಯ ಹುಟ್ಟಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಮಾತಿಗೆ ಸ್ಪೀಕರ್ ಓಂ ಬಿರ್ಲಾ ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. ಸದನದ ಗೌರವ ಉಳಿಸಿ ವ್ಯಕ್ತಿಗತ ದಾಳಿ ಬೇಡ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡಿ ಎಂದು…

Read More

ಬಳ್ಳಾರಿ : ಸಿಎಂ ಹಾಗೂ ಡಿಸಿಎಂ ವಿಚಾರವಾಗಿ ಯಾರೂ ಬಾಯಿ ಬಿಡಬಾರದು. ಒಂದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಶಾಸಕ ಶಿವಗಂಗಾ ಬಸವರಾಜು ಡಿಕೆ ಶಿವಕುಮಾರ್ ಅವರು ಸಿಎಂ ಆಗಲೇಬೇಕು ಹಾಗೆ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 9 ಸ್ಥಾನ ಬರಲು ಡಿಕೆ ಶಿವಕುಮಾರ್ ಅವರೇ ಕಾರಣರಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದರು. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಬಳಿಕ ಡಜನ್ಗಟ್ಟಲೆ ಡಿಸಿಎಂ ಮಾಡಲಿ ಬೇಡ ಅನೋದಿಲ್ಲ. ಕೆಲ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಸಿಎಂ ಮಾಡಿದೆ. ಡಿಸಿಎಂ ಹುದ್ದೆ ಬೇಕೆಂದವರು ಹೈಕಮಾಂಡ್ ಬಳಿ ತೆರಳಿ ಚರ್ಚಿಸಬೇಕು ಎಂದರು. ಸಿಎಂ…

Read More