Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳಿಗೆ ಇದೀಗ ಬಿಬಿಎಂಪಿ ಶಾಕ್ ನೀಡಿದೆ ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ಮಾಹಿತಿ ನೀಡಿದರು. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು,ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳ ಮಾಲೀಕರು ನಿಗದಿತ ದೊರಕಿಂತ ಹೆಚ್ಚು ಹಣ ವಸಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ , ಟ್ಯಾಂಕರ್ ಮಾಫಿಯಾಗಿ ಕಡಿವಾಣ ಹಾಕಲು ಇದೀಗ ಬಿಬಿಎಂಪಿ ತಯಾರಿ ಮಾಡಿಕೊಂಡಿದೆ. ಬೇಸಿಗೆನೇ ಬಂಡವಾಳ ಮಾಡಿ ಕೊಂಡು ಖಾಸಗಿ ಟ್ಯಾಂಕರ್ ಮಾಲೀಕರು ಬೇಸಿಗೆ ಮೊದಲೇ ಟ್ಯಾಂಕರ್ ಮಾಲೀಕರು ಇದೀಗ ವಸೂಲಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.ಒಂದು ಟ್ಯಾಂಕರ್ ಗೆ 500 ರಿಂದ 600 ದರ ಇತ್ತು. ಇದೀಗ ಟ್ಯಾಂಕರ್ 1000,1200 ದರ ವಸೂಲಿ ಮಾಡುತ್ತಿದ್ದಾರೆ. ಇಂದಿರಾನಗರ, ರಾಜಾಜಿನಗರ,…
ರಾಯಚೂರು : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಬ್ಬರು ಮಹಿಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ, ಇದರಿಂದ ಓರ್ವ ಮಹಿಳೆ ಮನನೊಂದು ಜಮೀನಿನಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ಕೋಠಾ ಗ್ರಾಮದ ನಿವಾಸಿ ದೇವಮ್ಮ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ.ಹೊನ್ನಟಗಿ ಗ್ರಾಮದ ಬಸನಗವಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ದೇವಮ್ಮ ಹಾಗೂ ಆರೋಪಿ ದುರುಗಮ್ಮ ಅವರ ನಡುವೆ ವಿನಾಕಾರಣಕ್ಕೆ ಜಗಳ ಶುರುವಾಗಿದ್ದು, ಇದರಿಂದ ಮನನೊಂದ ದೇವಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾವಿಯಿಂದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಗೆ ಸಾಗಿಸಿದರು. ಘಟನೆಗೆ ಸಂಬಂಧಿಸಿದಂತೆ ಮೃತ ದೇವಮ್ಮಳೊಂದಿಗೆ ಜಗಳವಾಡಿದ ಆರೋಪಿ ದುರುಗಮ್ಮ ಹಾಗೂ ಆಕೆಯ ಪತಿ ಸಿದ್ದಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಠಾಣೆಯಲ್ಲಿ ಪ್ರಕರಣ…
ತಿರುವನಂತಪುರ : 201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ. ಡಿಸಿಎಂ ಡಿಕೆ ಹೂಡಿಕೆ ಮಾಡಿದ್ದಾರೆ ಎನ್ನಲಾದ ಕೇರಳದ ನ್ಯೂಸ್ ಚಾನಲ್ವೊಂದರ ಬ್ಯಾಂಕ್ ಖಾತೆಗಳನ್ನು ತೆರಿಗೆ ಇಲಾಖೆ ಶನಿವಾರ ಸ್ಥಗಿತಗೊಳಿಸಿದೆ. ‘ಜೈ ಹಿಂದ್ ಟೀವಿ’ ಚಾನೆಲ್ನ ಮಾತೃ ಸಂಸ್ಥೆಯಾದ ‘ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ’ಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್ಟಿ ಮಂಡಳಿ ಬ್ಯಾಂಕ್ಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಭಾರತ್ ಬ್ರಾಡ್ಕಾಸ್ಟಿಂಗ್ ಕಂಪನಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಈ ಚಾನೆಲ್ನಲ್ಲಿ ಡಿ.ಕೆ. ಶಿವಕುಮಾರ್ ಅವರ ಹೂಡಿಕೆಗೆ ಸಂಬಂಧಿಸಿ ದಂತೆ ಮಾಹಿತಿ ಕಲೆ ಹಾಕಲು ಇತ್ತೀಚೆಗೆ ಸಿಬಿಐ ನೋಟಿಸ್ ನೀಡಿತ್ತು.ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪ್ರಕರಣ ಹೈಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿರುವಾಗ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಚಾನೆಲ್…
ಹುಬ್ಬಳ್ಳಿ : ಕಳೆದ ವರ್ಷ ಇಡೀ ದೇಶದಲ್ಲಿ ಸದ್ದು ಮಾಡಿದ್ದ ಟೊಮ್ಯಾಟೋ ದರದಿಂದ ಗ್ರಾಹಕರು ಟೊಮ್ಯಾಟೋ ಕೊಂಡುಕೊಳ್ಳಲು ಹಿಂದೆ ಮುಂದೆ ವಿಚಾರ ಮಾಡುತ್ತಿದ್ದರು. ಅಲ್ಲದೆ ಹಲವು ತೋಟಗಳಲ್ಲಿ ಟೊಮ್ಯಾಟೋ ಕದ್ದಿರುವ ಪ್ರಕರಣ ಕೂಡ ನಡೆದಿದೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು ಕಳ್ಳರು ನೀರನ್ನು ಸಹ ಬಿಟ್ಟಿಲ್ಲ. ನೀರಿನ ಟ್ಯಾಂಕನ್ನು ಕದ್ದುಯ್ದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಮನೆ ಮುಂದೆ ನಿಲ್ಲಿಸಿದ ನೀರನ್ನು ಟ್ಯಾಂಕರ್ ಅನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕದ್ದ ಟ್ಯಾಂಕರ್ ಶಿವಲಿಂಗಪ್ಪ ರೇವಣಕರ ಅವರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ನೀರಿನ ಟ್ಯಾಂಕರ್ ಅನ್ನು ಜಮೀನಿಗೆ ನೀರು ಹಾಯಿಸಲು ಟ್ಯಾಂಕರ್ ಮಾಡಿಸಿದರು. ಸುಮಾರು 2, ಮೌಲ್ಯದ ನೀರಿನ ಟ್ಯಾಂಕ್ಕರನ್ನು ಟ್ರಾಕ್ಟರ್ ಬಿಡಿಸಿ ಕದ್ದು ಪರಾರಿಯಾಗಿದ್ದಾರೆ.ನೀರಿನ ಟ್ಯಾಂಕರ್ ಕದಿಯುತ್ತಿರುವ ದೃಶ್ಯ ಇದೀಗ ಸಿಸಿಟಿವಿಯಲ್ಲಿ ಸೇರೆಯಾಗಿದೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/ccb-arrests-three-accused-in-case-of-demanding-money-by-sending-obscene-photos/ https://kannadanewsnow.com/kannada/basava-bhavana-shamanur/
ಬೆಂಗಳೂರು : ಅಶ್ಲೀಲ ಫೋಟೋ ಕಳಿಸಿ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ಮಹಿಳೆಯ ತಾಯಿಗೆ ಆರೋಪಿ ಫೋಟೋ ಕಳುಹಿಸಿದ್ದ. ಫೋಟೋ ಕಳುಹಿಸಿ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಹಣ ಪಡೆದಿದ್ದ ಮತ್ತೆ ಫೋಟೋ ಕಳುಹಿಸಿ ಆರೋಪಿ ಮನೋಜ್ 5ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದರಿಂದ ಬೇಸತ್ತು ಮಹಿಳೆಯ ತಾಯಿಯಿಂದ ಪೊಲೀಸ್ ಸರಿಗೆ ದೂರು ನೀಡಲಾಗಿತ್ತು.ಯಲಹಂಕ ನ್ಯೂಟನ್ ಠಾಣೆಗೆ ತಾಯಿ ದೂರು ನೀಡಿದ್ದರು.ಪ್ರಕರಣ ಸಿಸಿಬಿಗೆ ವರ್ಗಾವಣೆ ಹಿನ್ನೆಲೆ ಇದೀಗ ಆರೋಪಿಗಳು ಸಿಸಿಬಿ ವಶಕ್ಕೆ ಒಳಗಾಗಿದ್ದಾರೆ.ಬಾಡಿ ವಾರೆಂಟ್ ಮೇಲೆ ಮನೋಜ್ ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/deadline-till-april-10-to-return-organs-of-wild-animals-failing-which-complaint-will-be-lodged-khandre/ https://kannadanewsnow.com/kannada/basava-bhavana-shamanur/ https://kannadanewsnow.com/kannada/jaishankar-russia-india/
ಬೀದರ್ : ಕೆಲವರಿಗೆ ಕಾನೂನು ಬಗ್ಗೆ ತಿಳುವಳಿಕೆ ಇಲ್ಲದಿರುವುದು ದಾರಿಂದ ವನ್ಯಜೀವಿಗಳ ಅಂಗಾಂಗಗಳನ್ನು ನಿಯಮಬಾಹಿರವಾಗಿ ಸಂಗ್ರಹಿಸಿರುತ್ತಾರೆ. ಆದ್ದರಿಂದ ಅವರು ತಕ್ಷಣ ವನ್ಯಜೀವಿಗಳ ಅಂಗಗಳನ್ನು ವಾಪಸ್ ನೀಡಬೇಕು. ಇದಕ್ಕೆ ಏಪ್ರಿಲ್ 10 ರವರೆಗೆ ಸಮಯ ಅವಕಾಶವಿದ್ದು, ತಪ್ಪಿದ್ದಲ್ಲಿ ಅಂತವರ ವಿರುದ್ಧ ದೂರು ದಾಖಲಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೀದರ್ನಲ್ಲಿ ಭೇಟಿಯಾದ ಸುದ್ದಿಗಾರರಿಗೆ ಮಾತನಾಡಿ, ಕಾನೂನು ಗೊತ್ತಿಲ್ಲದೆ ವನ್ಯಜೀವಿಗಳ ಅಂಗಾಂಗಗಳನ್ನಿಟ್ಟುಕೊಂಡಿರುವ, ಅವುಗಳನ್ನು ಅರಣ್ಯ ಇಲಾಖೆ ಸುಪರ್ದಿಗೆ ನೀಡಿದ್ರೆ ಯಾವುದೇ ಪ್ರಕರಣ ದಾಖಲಾಗಲ್ಲ ಆದರೆ ನಿರ್ಲಕ್ಷಿಸಿದ್ದೆಯಾದಲ್ಲಿ ಅಂಥವರ ಮೇಲೆ ದೂರು ದಾಖಲಾಗುವದು ಪಕ್ಕಾ ಎಂದರು. https://kannadanewsnow.com/kannada/watch-video-siddaramaiah-govts-rs-2000-cash-in-front-of-sons-body-mother-remembered-video-goes-viral/ ವನ್ಯಜೀವಿಗಳ ಅಂಗಾಂಗಳ ಸಂಗ್ರಹದ ಕುರಿತಾಗಿ ಇತ್ತೀಚಿಗೆ ಅರಣ್ಯ ಇಲಾಖೆಯ ಕಾರ್ಯಾಚರಣೆ ಹಲವರ ನಿದ್ದೆಗೆಡಿಸಿತ್ತಲ್ಲದೆ ಖ್ಯಾತನಾಮರೂ ಸೇರಿದಂತೆ ಅನೇಕರ ಮೇಲೆ ದೂರು ದಾಖಲಾಗುವಂತೆ ಆಗಿ ಕೊನೆಗೆ ಕಾನೂನಿನ ಅರಿವಿಲ್ಲದೆ ಸಂಗ್ರಹ ಮಾಡಿದ್ದವರ ಮೇಲೆ ಸರ್ಕಾರ ಅನುಕಂಪ ತೋರಿ ವಾಪಸ್ ನೀಡುವಿಕೆಗೆ ಗಡುವು ನಿರ್ಧರಿಸುವ ಮಾತನಾಡಿದ್ದು, ಇದೀಗ ಗಡುವು ನಿರ್ಧರಿತವಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. https://kannadanewsnow.com/kannada/basava-bhavana-shamanur/…
ಬೆಂಗಳೂರು : ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ಚಾಕುವಿನಿಂದ ಪತ್ನಿಯನ್ನು ಇರಿದು ಗಾಯಗೊಳಿಸುರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನದ ಬಳಿ ನಡೆದಿದೆ. ಪತಿ ಜಯಪ್ರಕಾಶ್ (32) ನಿಂದ ಪತ್ನಿ ದಿವ್ಯಶ್ರೀ (27) ಗೆ ಚಾಕುವಿನಿಂದ ಇರಿದಿದ್ದಾನೆ. ನಿನಗೆ ಅಕ್ರಮ ಸಂಬಂಧ ಇದೆ ಎಂದು ನಿತ್ಯ ಪತಿ ಗಲಾಟೆ ಮಾಡುತ್ತಿದ್ದ ಎನ್ನಲಾಗುತ್ತಿದೆ. ಈ ನಡುವೆ ತಂಗಿಯ ಎಂಗೇಜ್ಮೆಂಟ್ ನಲ್ಲಿ ಬರಲಿಲ್ಲ ಎಂದು ನೆಪವಡ್ಡಿ ಗಲಾಟೆ ಮಾಡಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿಗೆ ಚಾಕುವಿನಿಂದ ಇರದಿದ್ದಾನೆ.ಕಾಲಿಗೆ ಗಾಯ ಆಗಿದ್ದು ದಿವ್ಯಶ್ರೀ ಎಂಟು ಹೊಲಿಗೆ ಹಾಕಿಸಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/jaishankar-russia-india/ https://kannadanewsnow.com/kannada/bigg-news-muslim-population-to-increase-in-many-countries-by-2030-study-report/ https://kannadanewsnow.com/kannada/breaking-elderly-man-dies-in-davangere-after-mosquito-net-fire-breaks-out/
ದಾವಣಗೆರೆ : ಸೊಳ್ಳೆ ಓಡಿಸಲು ಹಚ್ಚಿದ್ದ ಸೊಳ್ಳೆ ಬತ್ತಿ ಹೊತ್ತಿದ ಬೆಂಕಿಯಿಂದ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದಲ್ಲಿ ನಡೆದಿದೆ. ಎ.ಮಲ್ಲಪ್ಪ (85) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕುಟುಂಬಸ್ಥರೆಲ್ಲಾ ಸೇರಿ ಬೆಂಕಿ ನಂದಿಸುವಷ್ಟರಲ್ಲಿ ತೀವ್ರ ಸುಟ್ಟ ಗಾಯಗಳಿಂದ ಮಲ್ಲಪ್ಪ ಜರ್ಜರಿತಾಗಿದ್ದರು. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಸಂಜೆ ನಿಧನರಾಗಿದ್ದಾರೆ.ಸೊಳ್ಳೆ ಬತ್ತಿಯಿಂದ ಹೊತ್ತಿದ ಬೆಂಕಿಯಿಂದ ಗಾಯಗೊಂಡು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನ್ನಪ್ಪಿದ್ದಾರೆ. ಫೆ.10ರ ಶನಿವಾರ ರಾತ್ರಿ ಎಂದಿನಂತೆ ರಾತ್ರಿ ಮಲಗುವಾಗ ಸೊಳ್ಳೆ ಓಡಿಸಲೆಂದು ಸೊಳ್ಳೆ ಬತ್ತಿಕೊಂಡು ಮಲಗಿದ್ದರು. ಹಚ್ಚಿದ್ದ ಸೊಳ್ಳೆ ಬತ್ತಿಯಿಂದ ಮಧ್ಯರಾತ್ರಿ ಆಕಸ್ಮಿಕ ಬೆಂಕಿ ತಾಗಿ ಬಟ್ಟೆಗೆ ಹತ್ತಿಕೊಂಡು ಹೊತ್ತಿ ಉರಿದಿದೆ. ಈ ಸಂಬಂಧ ದಾವಣಗೆರೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sumalatha-hints-at-contesting-lok-sabha-elections-from-mandya-constituency/ https://kannadanewsnow.com/kannada/good-news-for-scheduled-caste-students-application-invitation-for-incentives/
ಮಂಡ್ಯ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಂದನವನಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆ ಸಕ್ಕರೆನಾಡು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ಬೆಳ್ಳಿಹಬ್ಬ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ರೆಬಲ್ ಲೇಡಿ ಸುಮಲತಾ ಅವರು ಮತ್ತೆ ಸುಳಿವು ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡುತ್ತ, 2019ರ ಚುನಾವಣೆ ನೆನೆದು, ಆ ಸಂದರ್ಭದಲ್ಲಿ ದರ್ಶನ್, ಯಶ್ ನನಗೆ ಧೈರ್ಯ ತುಂಬಿದ್ರು. ಕಳೆದ 5 ವರ್ಷ ಮಂಡ್ಯ ಜನರ ಪ್ರೀತಿಗಳಿಸಿದ್ದೇನೆ. ಮಂಡ್ಯದ ಮಣ್ಣಿನ ತಿಲಕವಿಟ್ಟು ಅಂಬರೀಶ್ಗೆ ಬೀಳ್ಕೊಟ್ಟೆವು. ಯಾವುದೇ ಕಾರಣಕ್ಕೂ ನಾನು ಕೂಡ ಈ ಮಣ್ಣನ್ನ ಬಿಡೋದಿಲ್ಲ. ನನ್ನ ಹಿಂದೆ ನನ್ನ ಮಕ್ಕಳಿದ್ದಾರೆ. ಈ ಚುನಾವಣೆಯಲ್ಲಿಯೂ ದರ್ಶನ್ ತನ್ನ ಜೊತೆ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎನ್ನುವ ಮೂಲಕವೇ ಸುಳಿವು ಕೊಟ್ಟಿದ್ದಾರೆ. https://kannadanewsnow.com/kannada/lion-akbar-seeta-vhp/ https://kannadanewsnow.com/kannada/janaspandana-programme-to-be-held-by-deputy-cm-dk-in-rr-nagar-today-bjp-mla-munirathna/ https://kannadanewsnow.com/kannada/cm-siddaramaiah-to-visit-mandya-district-today-participate-in-various-government-programmes/
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಬೆಂಗಳೂರಿನ ಆರ್ ಆರ್ ನಗರದ ವಿವಿಜ್ಞಾನಭಾರತಿ ಮೈದಾನದಲ್ಲಿ ಈ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಒಂದು ಜನಸ್ಪಂದನಾ ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಬಿಜೆಪಿಯ ಶಾಸಕರಾದ ಮುನಿರತ್ನ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಾಗೂ ಸಹವಾಲನ್ನು ಡಿಸೆಂಬ್ಕೆ ಶಿವಕುಮಾರ್ ಸ್ವೀಕರಿಸಿ ಸ್ಥಳದಲ್ಲಿ ಪರಿಹಾರ ನೀಡಲಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇನ್ನೂ ಒಂದೇ ಸೂರಿನಡಿ ವಿವಿಧ ಇಲಾಖೆಗಳು ಭಾಗಿಯಾಗಲಿದ್ದು ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಆರ್ಸಿಎಲ್, ಬಿಎಂಆರ್ಡಿಎ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳು ಭಾಗಿ ಆಗಲಿದ್ದಾರೆ. https://kannadanewsnow.com/kannada/17-loksabha-pariliament-mp/ https://kannadanewsnow.com/kannada/cm-siddaramaiah-to-visit-mandya-district-today-participate-in-various-government-programmes/ https://kannadanewsnow.com/kannada/only-0-8-per-cent-of-minorities-in-the-state-were-given-only-0-8-per-cent-in-the-budget-cm/