Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮೆಕ್ಕೆ ಜೋಳ ಖರೀದಿ ಮಾಡಲು ಸರ್ಕಾರ ಮುಂದಾಗಿದೆ. ಕೆಎಂಎಫ್ ಮೂಲಕ 50 ಸಾವಿರ ಮೆಟ್ರಿಕ್ ಟನ್ ಖರೀದಿಗೆ ನಿರ್ಧಾರಿಸಿದೆ. ಡಿ.1ರಿಂದ ರಾಜ್ಯದ ಐದು ಕಡೆ ಖರೀದಿ ಕೇಂದ್ರ ಓಪನ್ ಆಗಲಿದೆ. KMF ರೈತರಿಂದಲೇ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡಲಿದೆ. ತಲಾ ಒಬ್ಬ ರೈತನಿಂದ ಗರಿಷ್ಟ 25 ಟನ್ ಮೆಕ್ಕೆಜೋಳ ಖರೀದಿ ಮಾಡಲಿದೆ. ಪ್ರತಿ ಟನ್ 2,400 ರೂ. ದರ ನಿಗಧಿ ಮಾಡಿದ್ದು MSP ದರದಲ್ಲಿ ಮೆಕ್ಕೆ ಜೋಳ ಖರೀದಿಗೆ ಮುಂದಾಗಿದೆ. ಗುಣಮಟ್ಟದ ಹಿನ್ನೆಲೆ ದರ ವ್ಯತ್ಯಾಸ ಕಂಡುಬಂದಿದೆ. ಮೆಕ್ಕೆಜೋಳ ತೇವಾಂಶ 14 ಡಿಗ್ರಿ ಇದ್ರೆ ಖರೀದಿ ಮಾಡಲಾಗುತ್ತೆ. ಮೆಕ್ಕೆ ಜೋಳ ಮಾರಾಟ ಮಾಡುವ ರೈತರು ಮೊದಲು ನೊಂದಣಿ ಮಾಡಿಕೊಳ್ಳಬೇಕು.. ಕೃಷಿ ಇಲಾಖೆ, ಇ ಗರ್ವನೆನ್ಸ್, NIC ಮೂಲಕ ರೈತರು ನೋಂದಣಿ ಮಾಡಿಕೊಳ್ಳಬೇಕು. ರೈತರಿಗೆ ಖರೀದಿ ಕುರಿತು ಎಸ್ ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತೆ. ಆಗ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುರ್ಚಿ ಕಾದಾಟ ಜೋರಾಗಿ ನಡೆಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ಹೋಗುವುದು ಹೈಕಮಾಂಡವರನ್ನು ಭೇಟಿಯಾಗುವುದು, ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡೋದು ಇದೆಲ್ಲ ಇವತ್ತಿನವರೆಗೂ ನಡೆಯುತ್ತಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನನಗೆ ಏನೂ ಬೇಡ. ನನಗೇನು ಯಾವುದಕ್ಕೂ ಆತುರ ಇಲ್ಲ. ನನ್ನ ಪಕ್ಷ ಸಮಯಕ್ಕೆ ನಿರ್ಧಾರ ಮಾಡುತ್ತದೆ. ಒಂದು ಜಾತಿ ಆಧಾರದಲ್ಲಿ ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ನನ್ನ ಕಮ್ಯುನಿಟಿ. ನನ್ನ ಪ್ರೀತಿ ಎಲ್ಲಾ ಸಮುದಾಯದ ಮೇಲೆ ಇದೆ ಒಕ್ಕಲಿಗರು ಹಿಂದುಳಿದ ಜಾತಿಯವರು ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಇನ್ನು ಮಾಧ್ಯಮದವರು ದೆಹಲಿಗೆ ಹೋಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ದೆಹಲಿ ನಮಗೆ ದೇವಸ್ಥಾನ ಇದ್ದಂತೆ ದೆಹಲಿಗೆ ನಾವು ಹೋಗೆ ಹೋಗುತ್ತೇವೆ . ನಮ್ಮ ಪಕ್ಷದ ವರಿಷ್ಠರು ಒಂದು ವೇಳೆ ಕರೆದರೆ ದೆಹಲಿಗೆ ನಾನು ಮತ್ತು ಸಿದ್ದರಾಮಯ್ಯ ಹೋಗೆ…
ಬೆಂಗಳೂರು : ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಇಂದು ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲು ಆಗುವುದಿಲ್ಲ. ಒಟ್ಟಾರೆ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಈ ಹಿಂದೆ ನಾನೇ ಹೇಳಿದ್ದೇನೆ. ಅದರಲ್ಲಿ ದೈಹಿಕ ಶಿಕ್ಷಕರೂ ಸೇರಿದ್ದಾರೆ. ಆದಷ್ಟು ಬೇಗ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಶಿವಮೊಗ್ಗದ ದುರ್ಗಿಗುಡಿಯಲ್ಲಿ ಶಿಕ್ಷಕರ ಕೊರತೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ನೂರಾರು ವರ್ಷದ ಶಾಲೆ ಇದು. ಶೀಘ್ರವಾಗಿ ಶಿಕ್ಷಕರ ಕೊರತೆ ಪರಿಹರಿಸುವ ಕಾರ್ಯ ಮಾಡುತ್ತೇನೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶಿಕ್ಷಣ ಇಲಾಖೆಯ ಎರಡು ಮಸೂದೆಳನ್ನು ಮಂಡಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು ಎಂದು ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ ಗೇಟ್ NO 01 ರಲ್ಲಿ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಐಸಿಡಿಎಸ್ , ತಾಯಿ ಶಿಶು ಮರಣ…
ಬೆಂಗಳೂರು : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೊಬ್ಬಳು ತನ್ನ ಪತಿಗೆ ಚಟ್ಟ ಕಟ್ಟಿರುವ ಘಟನೆ ಇದೀಗ ಪೋಲೀಸರ ತನಿಖೆಯಲ್ಲಿ ಬಯಲಾಗಿದೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿ ಓರ್ವನಾದ ವೀರಭದ್ರ ತಂದೆ ಬಳಿ ಈ ದಂಪತಿ ಗಾರೆ ಕೆಲಸ ಮಾಡಿಕೊಂಡಿದ್ದು, ವೀರಭದ್ರ ಕೆಲಸಗಾರರನ್ನು ನೋಡಿಕೊಳ್ಳುತ್ತಿದ್ದ. ಈ ವೇಳೆ ವೀರಭದ್ರ ಮತ್ತು ಶರಣಮ್ಮ ನಡುವೆ ಸಲುಗೆ ಬೆಳೆದಿದೆ. ಆ ಸಲುಗೆ ಅಕ್ರಮ ಸಂಬಂಧದ ವರೆಗೆ ಹೋಗಿದೆ. ಹೀಗಾಗಿ ನ.19ರಂದು ಮದ್ಯ ಸೇವಿಸಿ ಬಸವರಾಜು ಮಲಗಿದ್ದ ವೇಳೆ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಶರಣಮ್ಮ ಕೊಲ್ಲಿಸಿದ್ದಾಳೆ. ತಲೆ ಮೇಲೆ ಕಲ್ಲು ಎತ್ತಿಹಾಕಿ, ನಂತರ ನೇಣು ಬಿಗಿದು ಬರ್ಬರವಾಗಿ ಬಸವರಾಜು ಕೊಲೆ ಮಾಡಲಾಗಿದೆ. ಬಳಿಕ ಶವವನ್ನ ಗಂಗೊಂಡಹಳ್ಳಿ…
ಬೆಂಗಳೂರು : ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ತಪ್ಪಿಲ್ಲ ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸರ್ವಜ್ಞನ ವಚನ ಉಲ್ಲೇಖಿಸಿ ಮಾತನಾಡಿದರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಸರ್ವಜ್ಞನ ವಚನ ದೊಂದಿಗೆ ಭಾಷಣ ಆರಂಭಿಸಿದರು. ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ಕಪ್ಪಿಲ್ಲ ದೇವರು ವರನೂ ಕೊಡಲ್ಲ ಶಾಪವೂ ಕೊಡಲ್ಲ ಆದರೆ ಅವಕಾಶ ಕೊಡುತ್ತಾನೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಭಾಷಣದಲ್ಲಿ ತಿಳಿಸಿದರು. ಇನ್ನು ನಿನ್ನೆಯೂ ಸಹ ಸಿಎಂ ಡಿಸಿಎಂ ನಡುವೆ ಟ್ವೀಟ್ ವಾರ್ ನಡೆದಿತ್ತು. ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ಜಡ್ಜ್ ಆಗಲಿ, ಅಧ್ಯಕ್ಷರಾಗಲಿ,…
ಚಿಕ್ಕಮಗಳೂರು : ಷೇರು ಮಾರುಕಟ್ಟೆ ಹೆಸರಿನಲ್ಲಿ 3ಕೋಟಿ 27 ಲಕ್ಷ ವಂಚನೆ ಎಸಗಲಾಗಿದ್ದು, ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ (ISRS) ಲೋಗೋ ನಂಬಿ ಚಿಕ್ಕಮಗಳೂರಿನ 72 ವರ್ಷದ ಶಂಕರ್ ನಟರಾಜನ್ ಎನ್ನುವವರು ಹಣ ಹೂಡಿಕೆ ಮಾಡಿದ್ದರು. ವಾಟ್ಸಪ್ ನಲ್ಲಿ ಬಂದ ಲೋಗವನ್ನು ಶಂಕರ ನಟರಾಜ ನಂಬಿದ್ದಾರೆ. ಬಳಿಕ ಹಂತ ಹಂತವಾಗಿ ಹಂತವಾಗಿ 3 ಕೋಟಿ 27 ಲಕ್ಷ ಹಣ ಹಾಕಿಸಿಕೊಂಡು ವಂಚನೆ ಎಸಗಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶಂಕರ ನಟರಾಜಗೆ ವಂಚನೆ ಎಸೆಗಲಾಗಿದೆ 72 ವರ್ಷದ ಶಂಕರ್ ನಟರಾಜನ್ ಹೂಡಿಕೆ ಹೆಸರಿನಲ್ಲಿ ಮೋಸ ಹೋಗಿದ್ದಾರೆ ನಿಮ್ಮ ಖಾತೆಯಲ್ಲಿ 9 ಕೋಟಿ ಹಣ ಇದ್ದು ಅದನ್ನು ಪಡೆಯಲು ಕಮಿಷನ್ 1 ಕೋಟಿ 9 ಲಕ್ಷ ಕಮಿಷನ್ ಹಾಕುವಂತೆ ವಂಚಕರು ಬೇಡಿಕೆ ಇಟ್ಟಿದ್ದರು. ಮಹಾರಾಷ್ಟ್ರದ ಐಎಸ್ಆರ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ವೇಳೆ ವಂಚನೆ ಬಯಲಾಗಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಿನಲ್ಲಿ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ ಶಂಕರ್ ನಟರಾಜನಿಗೆ 3.27…
ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಕೆಲವು ಕಾಲ ಎದ್ದು ಹೊರ ಹೋಗಿದ್ದರು. ಸಿಎಂ ಸಿದ್ದರಾಮಯ್ಯ ಎದ್ದು ಹೋದ ಬಳಿಕ ಆ ಚೇರ್ ಮೇಲೆ ಕುಳಿತು ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ ನಡೆಸಿದರು. ಮಾರ್ಗರೇಟ್ ಆಳ್ವ ಜೊತೆಗೆ ಶಿವಕುಮಾರ್ ಕೆಲ ಸಮ ಆಲೋಚನೆ ನಡೆಸಿದರು ಸಿಎಂ ಸಿದ್ದರಾಮಯ್ಯ ಕುಳಿತಿದ್ದ ಚೇರ್ನಲ್ಲಿ ಒಂದು ನಿಮಿಷ ಚರ್ಚೆ ನಡೆಸಿದ್ದಾರೆ ನಂತರ ತಾವು ಮೊದಲು ಕುಳಿತಿದ್ದ ಕುರ್ಚಿಗೆ ತೆರಳಿದರು ಅಷ್ಟರಲ್ಲಿ ಹೊರಹೋಗಿದ್ದ ಸಿಎಂ ಸಿದ್ದರಾಮಯ್ಯ ಮತ್ತೆ ಮರಳಿದರು.
ಬೆಂಗಳೂರು : ಹೈಕಮಾಂಡ್ ನಾಯಕರು ಕರೆದರೆ ದೆಹಲಿಗೆ ಹೋಗುತ್ತೇನ ಎಂದು ಬೆಂಗಳೂರು ಅರಮನೆ ಮೈದಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ದೆಹಲಿ ಕಾಂಗ್ರೆಸ್ ಕಚೇರಿ ನಮಗೆ ದೇವಾಲಯ ಇದ್ದ ಹಾಗೆ ನವದೆಹಲಿಯಲ್ಲಿ ನನಗೆ ಬಹಳ ಮುಖ್ಯವಾದ ಕೆಲಸಗಳು ಇವೆ. ಇನ್ನು ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಮೆಕ್ಕೆಜೋಳಕ್ಕೆ ಬೆಂಬಲ ವಿಚಾರ ಸಂಬಂಧ ಭೇಟಿಯಾಗುತ್ತೇನೆ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ಮಾಡಲು ಹೋಗುತ್ತೇವೆ ಎಂದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನನಗೆ ಯಾವುದೇ ಸಮುದಾಯದ ವ್ಯಾಖ್ಯಾನ ಬೇಕಿಲ್ಲ. ನನ್ನ ಸಮುದಾಯ ಕಾಂಗ್ರೆಸ್ ಕಾಂಗ್ರೆಸ್ಸೇ ನನ್ನ ಸಮುದಾಯ ಎಂದು ನಿರ್ಮಲಾನಂದನಾಥ ಶ್ರೀ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಒಂದು ಸಮುದಾಯ ನನ್ನ ಪರ ಇರುವುದು ಅದು ಬೇರೆ ವಿಚಾರ, ನಾನು ಎಲ್ಲ ಸಮುದಾಯಗಳನ್ನು ಇಷ್ಟಪಡುತ್ತೇನೆ ಗೌರವಿಸುತ್ತೇನೆ. ನಾನು ಎಲ್ಲಾ ಸಮುದಾಯವನ್ನು ಪ್ರೀತಿಸುತ್ತೇನೆ…
ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ. 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್ಮೆಂಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ. ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ…













