Subscribe to Updates
Get the latest creative news from FooBar about art, design and business.
Author: kannadanewsnow05
ಕೋಲಾರ : ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಇದೀಗ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದ್ದು ಕೋಲಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ ಎರಡು ರೂಪಾಯಿ ಹೆಚ್ಚಳ ಮಾಡಿದೆ. ಈ ಹಿಂದೆ ಹಾಲು ಉತ್ಪಾದಕರಿಗೆ ಲೀಟರ್ಗೆ 35.40 ನೀಡಲಾಗುತ್ತಿತ್ತು. ಇದೀಗ 2ರೂಪಾಯಿ ಹೆಚ್ಚಳ ಮಾಡಿದ್ದರಿಂದ ಪ್ರತಿ ಲೀಟರ್ಗೆ 37.40 ಹಾಲು ಉತ್ಪಾದಿಕರಿಗೆ ಸಿಗಲಿದೆ ಜೊತೆಗೆ ಹಸಿರುಮವು ಬೆಳೆಯುವ ರೈತರಿಗೆ ಎಕರೆಗೆ ರೂ.3000 ಪ್ರೋತ್ಸಾಹ ಧನ ನೀಡಲಾಗುತ್ತದೆ ಹಸುಗಳಿಗೆ 70,000 ದಿಂದ 70,000 ವರೆಗೆ ವಿಮೆ ಹೆಚ್ಚಳ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ ವೈ ನಂಜೇಗೌಡ ಮಾಹಿತಿ ನೀಡಿದ್ದಾರೆ.
ನವದೆಹಲಿ : ಇತ್ತೀಚೆಗೆ ಇಬ್ಬರು ಯುವಕರು ರಸ್ತೆ ಬದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದರು ಈ ವೇಳೆ ನಿದ್ದೆ ಒಬ್ಬರಿನಲ್ಲಿ ಇದ್ದ ಲಾರಿ ಚಾಲಕನೊಬ್ಬ ಯುವಕನೊಬ್ಬನಿಗೆ ಬುದ್ಧಿದ ಪರಿಣಾಮ ಸ್ಥಳದಲ್ಲಿ ಯುವಕನುಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ಮತ್ತೊಂದು ಅಂಥದೇ ಘಟನೆ ನಡೆದಿದ್ದು, ಎದೆಗೆ ರಿವಾಲ್ವರ್ ಇಟ್ಟು ರೀಲ್ಸ್ ಮಾಡುವಾಗ ಮಿಸ್ಫೈರ್ ಆಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ದೆಹಲಿಯ ಯುವಕನೊಬ್ಬ ರಿವಾಲ್ವರ್ ಹಿಡಿದು ರೀಲ್ಸ್ ಮಾಡಲು ಹೊರಟಿದ್ದಾನೆ. ಸಿನಿಮಾ ಶೈಲಿಯಲ್ಲಿ ರೀಲ್ಸ್ ಮಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ನಡೆದಿದೆ. ರಿವಾಲ್ವರ್ ತೆಗೆದು ಬುಲೆಟ್ ಲೋಡ್ ಮಾಡಿದ್ದಾನೆ. ಬಳಿಕ ಲೋಡೆಡ್ ರಿವಾಲ್ವರ್ ಎದೆಗೆ ಇಟ್ಟು ಯಾವುದೇ ಭಯವಿಲ್ಲದಂತೆ ತೋರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಈ ಪ್ರಯತ್ನದಲ್ಲಿ ರಿವಾಲ್ವರ್ ಟ್ರಿಗರ್ ಅಚಾನಕ್ಕಾಗಿ ಒತ್ತಿದ್ದಾರೆ. ಗುಂಡು ಎದೆ ಸೀಳಿ ಮರುಕ್ಷಣದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಎದೆಗೆ ರಿವಾಲ್ವರ್ ಇಟ್ಟ ಬೆನ್ನಲ್ಲೇ ವಿಡಿಯೋ ಶೂಟ್ ಮಾಡುತ್ತಿದ್ದ ಗಳೆಯ ತಕ್ಷಣವೇ ಎಚ್ಚರಿಕೆ ಕೊಟ್ಟಿದ್ದಾನೆ. ಸಹೋದರು ಗುಂಡು…
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಯುವತಿಯೋರ್ವಳ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವತಿಯನ್ನು ಜೋಯಾ ಎಂದು ತಿಳಿದುಬಂದಿದ್ದು, ಆಕೆಯ ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು ಸದ್ಯ ಆರೋಪಿ ಪತ್ತೆಗಾಗಿ ಡಿಜೆ ಹಳ್ಳಿ ಠಾಣೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು : ಮಂತ್ರಿ ಡೆವೆಲಪರ್ಸ್ ಮೇಲೆ ಇಡಿ ದಾಳಿ ಮುಂದುವರಿಸಿದ್ದು, ಮಂತ್ರಿ ಡೆವಲಪರ್ಸ್ ಮಾಲೀಕ ಸುಶೀಲ ಮಂತ್ರಿ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಸುಶೀಲ್ ಮಂತ್ರಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ದಾಖಲೆ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ. ವಿಠಲ್ ಮಲ್ಯ ರಸ್ತೆಯ ಕಚೇರಿ ಮತ್ತು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಿಗ್ಗೆ 8 ಘಂಟೆಯಿಂದ ಇಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಈಡಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಕಾರ್ಮಿಕರು ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.. ಹುಬ್ಬಳ್ಳಿಯ ದೇಶಪಾಂಡೆ ನಗರದ ಕಟ್ಟಡ ಒಂದರಲ್ಲಿ ಈ ಒಂದು ಘಟನೆ ನಡೆದಿದೆ. ಅಸ್ವಸ್ಥಗೊಂಡ ಬೆಂಗಳೂರು ಮೂಲದ ನಾಲ್ವರು ಕಾರ್ಮಿಕರು ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸದ್ಯ ನಾಲ್ವರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ನಾಲ್ವರನ್ನು ಜಾಫರ್, ಅಮ್ಜದ್, ಜಬಿ ಹಾಗೂ ಹೈದರ್ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶ : ಐಸಿಸ್ ಆನ್ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಸಹರಾನ್ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ (19) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ನ ಆನ್ಲೈನ್ ಮಾಡ್ಯೂಲ್ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಈತನನ್ನು ಬಂಧಿಸಿದೆ. ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಬಿಎನ್ಎಸ್ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಮಾನ ಮನಸ್ಕ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಮತ್ತು ಐಸಿಸ್ ಬಗ್ಗೆ ಪ್ರಚಾರ ಮಾಡಲು ಹೆಸರುಗಳನ್ನು ಬದಲಾಯಿಸಿಕೊಂಡಿದ್ದರು. ವರ್ಚುವಲ್ ಖಾಸಗಿ ನೆಟ್ವರ್ಕ್ಗಳನ್ನು (VPN ಗಳು) ಬಳಸಿಕೊಂಡು ಹಲವಾರು ಗುಂಪುಗಳನ್ನು ರಚಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್ಲೈನ್ ನೆಟ್ವರ್ಕ್ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದೆ. ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವ…
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ ಇದೀಗ ನಿನ್ನೆ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಿಲ್ಲರ್ ಬಿಎಂಟಿಸಿಗೆ ಬೆಂಗಳೂರಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಬಿಎಂಟಿಸಿ ಬಸ್ ಗೆ ಗೃಹಿಣಿ ಒಬ್ಬರು ಬಲಿಯಾಗಿದ್ದಾರೆ. ಯಾದಗಿರಿ ಮೂಲದ 30 ವರ್ಷದ ಲಕ್ಷ್ಮಿ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಮೃತ ಲಕ್ಷ್ಮೀ ಗಾರ್ಮೆಂಟ್ಸ್ ಅಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ ಲಕ್ಷ್ಮಿ ಅವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಲಕ್ಷ್ಮಿ ಸಾವನಪ್ಪಿದ್ದಾರೆ. ಮಾದ ನಾಯಕನಹಳ್ಳಿ ಕಣಪೋಳಿಸಲು ಸ್ಥಳಕ್ಕೆ ಭೇಟಿ ನೀಡಿ ಬಸವ ಜಯಂತಿ ಕಳುಹಿಸಲಾಗಿದ್ದು ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ : ಇರಾನ್ ಡ್ರೋನ್ ದಾಳಿಗೆ ದುಬೈ ಏರ್ಪೋರ್ಟ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ವಿಮಾನ ನಿಲ್ದಾಣದ ಇಂಧನ ಟ್ಯಾಂಕರ್ ಮೇಲೆ ಭೀಕರವಾಗಿ ದಾಳಿ ಮಾಡಿದ್ದು ದುಬೈ ಏರ್ಪೋರ್ಟ್ ಬಳಿ ಇರುವ ತೈಲ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿದೆ. ಈ ಒಂದು ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಇರಾನ್ ದ್ರೋಣ ದಾಳಿ ಹಿನ್ನೆಲೆಯಲ್ಲಿ ದುಬೈ ಏರ್ಪೋರ್ಟ್ ಬಳಿ ಇರುವ ಇಂಧನ ಟ್ಯಾಂಕರ್ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದ್ದು ಸುಮಾರು ಹೊತ್ತು ಕಳೆದರೂ ಕೂಡ ಇನ್ನೂ ಬೆಂಕಿ ಆರಿಲ್ಲ. ಇನ್ನು ಇರಾನ್ ದಾಳಿ ಹಿನ್ನೆಲೆಯಲ್ಲಿ ದುಬೈ ನಿಂದ ತೆರಳಬೇಕಿದ್ದ ಹಾಗೂ ದುಬೈಗೆ ಆಗಮಿಸಬೇಕಿದ್ದ ಹಲವಾರು ವಿಮಾನಗಳ ಹಾರಾಟ ರದ್ದಾಗಿದೆ. https://twitter.com/RLehbib/status/2033651007792566625?t=V69oNtaGbExhSyGANkbsQw&s=19
ಬೆಂಗಳೂರು : ಬೇಸಿಗೆಯ ಬಿಸಿಯ ನಡುವೆ ಆರ್ಥಿಕ ಹೊರೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಜನತೆಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರದಲ್ಲಿ ಯಾವುದೇ ಹೆಚ್ಚಳವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕಳೆದ ಕೆಲವು ದಿನಗಳಿಂದ ಎಸ್ಕಾಂಗಳು (ESCOMs) ನಷ್ಟದ ನೆಪವೊಡ್ಡಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿತ್ತು. ಆದರೆ, ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಎನ್.ಎಸ್. ಬೋಸರಾಜು ಅವರು, “ಗೃಹಬಳಕೆಯ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ” ಎಂದು ತಿಳಿಸುವ ಮೂಲಕ ಈ ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ. ಏಪ್ರಿಲ್ನಿಂದ ವಿದ್ಯುತ್ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ)ದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪರವಾಗಿ ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ ಬೋಸ್ ರಾಜ್ ತಿಳಿಸಿದ್ದಾರೆ.ಪ್ರತಿ ವರ್ಷ ವಿದ್ಯುತ್ ಸರಬರಾಜು…
ದಕ್ಷಿಣಕನ್ನಡ : ಮಹೇಶ್ ಶೆಟ್ಟಿ ತಿಮರೊಡಿಗೆ ಇದೀಗ ಮೂರನೇ ಭಾರಿ ಗಡಿಪಾರು ಆದೇಶ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಎಸ್ಪಿ ಸ್ಟೇಲ್ಲಾ ವರ್ಗಿಸ್ ಮೂರನೇ ಬಾರಿ ಗಡಿಪಾರಿಗೆ ಆದೇಶ ಹೊರಡಿಸಿದ್ದಾರೆ. ತಿಮರೋಡಿ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಆದೇಶಿಸಿದ್ದಾರೆ. ಸೆಪ್ಟೆಂಬರ್ 16ರ ವರೆಗೆ ತಿಮರೊಡಿಗೆ ಗಡಿಪಾರು ಆದೇಶ ವಿಧಿಸಲಾಗಿದೆ. ನಿನ್ನೆ ರಾತ್ರಿ ತಿಮರೋಡಿ ಮನೆಗೆ ಡಿವೈಎಸ್ಪಿ ರೋಹಿಣಿ ನೋಟಿಸ್ ಅಂಟಿಸಿದ್ದಾರೆ. ನೋಟಿಸ್ ನೀಡುವ ವೇಳೆ ಮನೆಯಲ್ಲಿ ಇರಲಿಲ್ಲ. ತಿಮರೊಡಿ ಮನೆಯ ಗೋಡೆಗೆ ಪೊಲೀಸರು ನೋಟಿಸ್ ಅಂಟಿಸಿ ಬಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ತಿಮರೊಡಿ ಮನೆ ಇದೆ.














