Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕ ಬಜೆಟ್ 2024ರ ಬಜೆಟ್ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ನೀಡಿದ್ದಾರೆ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅಲ್ಲದೆ ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ತೋ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಆರಂಭದಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಬಜೆಟ್ ಆರಂಭಕ್ಕೂ ಮುನ್ನ ಆಗದು ಎಂದು ಕೈಕಟ್ಟಿ ಕುಳಿತರೆ ಸಾಗು ಕೆಲಸದು ಮುಂದೆ ಎಂಬ ಬಂಗಾರದ ಮನುಷ್ಯ ಚಲನಚಿತ್ರದ ಹಾಡಿನ ಮೂಲಕ ಆರಂಭಿಸಿದರು. ಇದೆ ವೇಳೆ ಗ್ಯಾರೆಂಟಿ ವಿಷಯದ ಕುರಿತಾಗಿ ಕೇಂದ್ರ ಸರ್ಕಾರ ಆರೋಪಿಸಿದಕ್ಕೆ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು. ಇದೆ ವೇಳೆ ವಿಪಕ್ಷಗಳು ಗಲಾಟೆ ಗದ್ದಲಗಳನ್ನು ಆರಂಭಿಸಿದವು ಈ ವೇಳೆ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸೇರಿದಂತೆ ವಿಪಕ್ಷಗಳು ಧಿಕ್ಕಾರ ಕೂಗಿ ವಿರೋಧ ವ್ಯಕ್ತಪಡಿಸಿದವು. ಆದರೆ ಸಿದ್ದರಾಮಯ್ಯ ಇದು ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಬಜೆಟ್ ಭಾಷಣ ಮುಂದುವರಿಸಿದ್ದರು. https://kannadanewsnow.com/kannada/breaking-opposition-slams-centre-for-criticising-centre/ https://kannadanewsnow.com/kannada/state-govt-to-hike-beer-prices-again/
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು, ಬಹಳಷ್ಟು ರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಬಜೆಟ್ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಕುರಿತು ಕೇಳಿಬಂದಿದೆ ಎಂದರು. ರಾಜ್ಯದಲ್ಲಿ ಕೋಟ್ಯಾಂತರ ಜನರಿಗೆ ಅನ್ನಭಾಗ್ಯ ಸಿಕ್ಕಿದೆ.ಗ್ಯಾರಂಟಿ ಜಾರಿಯಿಂದ ನಮ್ಮತ್ತ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ.ಕೆಲಸದ ಬಗ್ಗೆ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಶ್ಲಾಘನೆ ಕೇಳಿಬಂದಿದೆ. ಮಹಿಳೆಯರು ಯುವಕರಿಂದ ಗ್ಯಾರಂಟಿಗಳ ಮೇಲೆ ನಂಬಿಕೆ ಇದೆ. ಆದರೆ ಗ್ಯಾರಂಟಿ ಬಿಟ್ಟೆ ಭಾಗ್ಯ ಎಂದು ಸುಳ್ಳು ಸುದ್ದಿ ಹರಡಿದರು. ನಮ್ಮ ಗ್ಯಾರಂಟಿ ಕದ್ದು ಅವರಿಗೆ ಗ್ಯಾರಂಟಿ ಎಂದು ಬಿಂಬಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರು ವಿರುದ್ಧ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿ ಕೋಟ್ಯಾಂತರ ಜನರಿಗೆ ಅನ್ನಭಾಗ್ಯ ಸಿಕ್ಕಿದೆ. ಗ್ಯಾರಂಟಿ ಜಾರಿಯಿಂದ ನಮ್ಮತ್ತ ಮೆಚ್ಚುಗೆ ಬಂದಿದೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿ ಹರಡಿದರು ಆದರೆ ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ನಮ್ಮ ದೂರ ದೃಷ್ಟಿ ಗ್ಯಾರಂಟಿ ನೀಡುವುದಲ್ಲ ಎಂದರು. ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಜನತೆ ನೀಡಲಾಗುತ್ತದೆ.ಮುಂದಿನ ದಿನದಲ್ಲಿ ಸೂಪರ್…
ಬೆಂಗಳೂರು : ಇತ್ತೀಚೆಗೆ, ಬೆಂಗಳೂರು ನಗರದಲ್ಲಿ ಮೊಬೈಲ್ ಸ್ನ್ಯಾಚಿಂಗ್ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಶ್ರಮವಹಿಸಿ ಮೊಬೈಲ್ ಕಳ್ಳರನ್ನ ಬಂಧಿಸುತ್ತಲೇ ಇದ್ದಾರೆ. ಆದರೆ ಮೊಬೈಲ್ ಸ್ನ್ಯಾಚರ್ಸ್ ಹಾವಳಿ ಕಡಿಮೆಯಾಗುತ್ತಿಲ್ಲ. ಹೀಗಾಗಿ ನಗರ ಪೊಲೀಸರು ಹೊಸ ವಿಧಾನ ಕಂಡುಕೊಂಡಿದ್ದಾರೆ. ಹೌದು ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕಳ್ಳರಿಗೂ ಬೆಂಗಳೂರು ಪೊಲೀಸರು ಒಂದು ಅವಕಾಶವನ್ನು ನೀಡಿದ್ದು ತಾವು ಕಳ್ಳತನ ಮಾಡಿರುವ ಮೊಬೈಲ್ ಗಳನ್ನು ಠಾಣೆಗಳಿಗೆ ಪೋಸ್ಟ್ ಮಾಡಿದರೆ ಸಾಕು ಅವರ ಮೇಲೆ ಕೇಸ್ ದಾಖಲಿಸದಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಬಾಕಿ ಟ್ರಾಫಿಕ್ ದಂಡ ಪಾವತಿಗಾಗಿ ಪ್ರಯೋಗಿಸಿದ ಡಿಸ್ಕೌಂಟ್ ಆಫರ್ ಯಶಸ್ವಿ ಬೆನ್ನಲ್ಲೇ,ಇದೀಗ ಇಂತಹ ಪ್ರಯೋಗಕ್ಕೆ ಮುಂದಾಗಿದ್ದು, ವಿಶೇಷವಾಗಿದೆ.ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಪೊಲೀಸರು ಕಳ್ಳರಿಗೂ ಒಂದು ಅವಕಾಶವನ್ನು ನೀಡಿದ್ದಾರೆ. ತಪ್ಪನ್ನು ಅರಿತು ಮೊಬೈಲ್ ಪೋಸ್ಟ್ ಬಾಕ್ಸ್ಗೆ ಹಾಕಬೇಕು. ಆದರೆ ಕಳ್ಳತನ ಮಾಡಿಯೂ ಪೊಲೀಸರು ಕೊಟ್ಟ ಅವಕಾಶವನ್ನ ಮಿಸ ಯೂಸ್ ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಅಕಸ್ಮಾತ್, ಮೊಬೈಲ್ ರಸ್ತೆಯಲ್ಲಿ ಸಿಕ್ಕಿದರೂ ಕೂಡ ಪೊಲೀಸ್…
ಬೆಂಗಳೂರು : ಪ್ರತಿ ಬಾರಿ ಬಜೆಟ್ ನಲ್ಲಿ ಬಜೆಟ್ ಪ್ರತಿಗಳನ್ನು ಸೂಟ್ಕೇಸ್ನಲ್ಲಿ ತರುತಿದೆ ಸಂಸಿದ್ರಾಮಯ್ಯ ಇದೀಗ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು ಲೀಡ್ಕರ್ ಸಂಸ್ಥೆಯ ಬ್ಯಾಗಿನಲ್ಲಿ ತೆಗೆದುಕೊಂಡು ಬರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎನ್ನಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟನ್ನು ಮಂಡಿಸಲಿದ್ದಾರೆ.ಈಗಾಗಲೇ ವಿಧಾನಸೌಧಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಇಂದು ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದಾರೆ, ಬಜೆಟ್ಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ಪಡೆಯಲಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಸಂಪ್ರದಾಯಕ್ಕೆ ನಾದಿ ಹಾಡಿದ್ದಾರೆ. ಸೂಟ್ಕೇಸ್ ಬಿಟ್ಟು ಬ್ಯಾಗನಲ್ಲಿ ಬಜೆಟ್ ಪ್ರತಿ ತೆಗೆದು ಕೊಂಡು ಬಂದಿದ್ದಾರೆ ಎನ್ನಲಾಗುತ್ತಿದೆ ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆ ಬ್ಯಾಂಕ್ ನಲ್ಲಿ ಬಜೆಟ್ ಪ್ರತಿ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. https://kannadanewsnow.com/kannada/bengaluru-driver-steals-owners-cheque-draws-rs-45-lakh/ https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/
ಬೆಂಗಳೂರು : ಮಾಲೀಕನ ಚೆಕ್ಗಳನ್ನು ಕದ್ದಿರುವ ಕಾರು ಚಾಲಕ, ನಕಲಿ ಸಹಿ ಮಾಡಿ ಸುಮಾರು 45 ಲಕ್ಷ ರೂ. ಲಪಟಾಯಿಸಿದ್ದಾನೆ. FIR ದಾಖಲಾಗಿ 5 ತಿಂಗಳು ಕಳೆದರೂ ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಲೋಕೋಪಯೋಗಿ ಇಲಾಖೆ ನಿವೃತ್ತ ಸಹಾಯಕ ಇಂಜಿನಿಯರ್ ಕೆ. ಪುಟ್ಟಿನರಸಪ್ಪ ಕಳೆದುಕೊಂಡವರು ಎಂದು ಹೇಳಲಾಗುತ್ತಿದೆ.ಪುಟ್ಟನರಸಪ್ಪ ಬಳಿ ನಿತಿನ್ಕುಮಾರ್ ಎಂಬಾತ ಕಾರು ಚಾಲಕನಾಗಿ 8 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ. ಆತನಿಗೆ 15 ಸಾವಿರ ರೂ. ಸಂಬಳ ನೀಡುತ್ತಿದ್ದರು. ಆರಂಭದಲ್ಲಿ ಒಳ್ಳೆಯವನಂತೆ ನಟಿಸಿ ಮಾಲೀಕರ ವಿಶ್ವಾಸ ಗಳಿಸಿಕೊಂಡಿದ್ದ.ಹೀಗಾಗಿ ಮಾಲೀಕರು ಆತನಿಗೆ ತಮ್ಮ ಬ್ಯಾಂಕಿನ ಚೆಕ್ಗಳನ್ನು ಹಾಕುವುದು ಮತ್ತು ಹಣ ಡ್ರಾ ಮಾಡಲು ಹೇಳುತ್ತಿದ್ದರು. 2023ರ ಫೆಬ್ರವರಿಯಲ್ಲಿ ನಿತಿನ್ಕುಮಾರ್, ಮಾಲೀಕರಿಗೆ ಗೊತ್ತಿಲ್ಲದಂತೆ 15 ಚೆಕ್ ಗಳನ್ನು ಕಳವು ಮಾಡಿದ್ದ. ಮಾಲೀಕರ ಸಹಿಯನ್ನು ಫೋರ್ಜರಿ ಮಾಡಿ, ಅವರ ಮೊಬೈಲ್ ತೆಗೆದುಕೊಂಡು ಬ್ಯಾಂಕಿನ ಯಾವುದೇ ಮೆಸೇಜ್ ಬಾರದ ರೀತಿಯಲ್ಲಿ ಬ್ಲಾಕ್ ಮಾಡಿದ್ದ. ನಂತರ ಆತನ ಸ್ನೇಹಿತರಾದ ವಿಜೇತ್, ರಘು ಹಾಗೂ ಇತರರ ಅಕೌಂಟ್ಗಳಿಗೆ 45…
ಬೆಂಗಳೂರು : ಹಿಂದೂ ವಿವಾಹ ಕಾಯ್ದೆ, 1955 ರ ಅಡಿಯಲ್ಲಿ ರಾಜ್ಯ ಸರ್ಕಾರ ವಿವಾಹದ ಆನ್ಲೈನ್ ನೋಂದಣಿ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್ಲೈನ್ ಮಾಡಲಾಗಿದೆ. ಮಲ್ಲೇಶ್ವರಂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಒದಗಿಸಿದ ನಂತರ, ಸಬ್ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ. ಅಲ್ಲದೆ ಈ ಒಂದು ಆನ್ಲೈನ್ ನೋಂದಣಿ ಸೌಲಭ್ಯವನ್ನು ಅತ್ಯಂತ ಶೀಘ್ರದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿರುವ ಉಪ ನೊಂದಣಾಧಿಕಾರಿಗಳ ಕಚೇರಿಗಳಿಗೂ ವಿಸ್ತರಿಸಲಾಗುತ್ತದೆ.ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು. https://kannadanewsnow.com/kannada/breaking-dgci-summons-flights/ https://kannadanewsnow.com/kannada/chief-minister-siddaramaiah-welcomes-supreme-courts-decision-to-cancel-electoral-bonds/ https://kannadanewsnow.com/kannada/ksrtc-bags-tender-for-10000-machines-for-digital-payment-system/
ಬೆಂಗಳೂರು : ಚುನಾವಣಾ ಬಾಂಡ್ಗಳು ಅಸಾಂವಿಧಾನಿಕ ಎಂದು ನಿನ್ನೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ತೀರ್ಪನ್ನು ಸ್ವಾಗತಿಸಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚುನಾವಣಾ ಬಾಂಡ್ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ.ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು. ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ.ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್ಗಳನ್ನು ತಂದಿದ್ದು ಹಾಗೂ ಇದಕ್ಕಾಗಿ…
ಬೆಂಗಳೂರು: ಡಿಜಿಟಲ್ ಪಾವತಿ ಸಿಸ್ಟಂಗೆ ಕೆಎಸ್ಆರ್ಟಿಸಿ ಕೂಡಾ ತೆರೆದುಕೊಳ್ಳಲಿದೆ. ಇನ್ನು ನಾಲ್ಕು ತಿಂಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ಮಷಿನ್ಗಳು ನಿರ್ವಾಹಕರ ಕೈಯಲ್ಲಿ ಇರಲಿವೆ. ಬಿಎಂಟಿಸಿ ಬಸ್ಗಳಲ್ಲಿ ಎರಡು ವರ್ಷಗಳ ಹಿಂದೆ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಪದ್ಧತಿಯನ್ನು ಜಾರಿಗೊಳಿಸಿದ್ದರೂ ಬಳಿಕ ಸ್ಥಗಿತಗೊಂಡಿತು. ಪಾಸ್ ಇರುವವರಿಗಷ್ಟೇ ಸೀಮಿತವಾಗಿದೆ. ವಾಯವ್ಯ ಸಾರಿಗೆ ನಿಗಮವು ಡಿಜಿಟಲ್ ಪಾವತಿ ಪದ್ಧತಿಯನ್ನು ಇತ್ತೀಚೆಗೆ ಅಳವಡಿಸಿಕೊಂಡಿತು. ಇದೀಗ ಕೆಎಸ್ಆರ್ಟಿಸಿ ಕೂಡಾ ಈ ಪದ್ಧತಿ ಅಳವಡಿಸಿಕೊಳ್ಳಲು ಮುಂದಾಗಿದೆ.ಎನ್ಡಬ್ಲ್ಯುಆರ್ಟಿಸಿ ಯಲ್ಲಿರುವಂತೆ ಕ್ಯೂ ಆರ್ ಕೋಡ್ ಅನ್ನು ನಿರ್ವಾಹಕ ಪ್ರತ್ಯೇಕವಾಗಿ ಕುತ್ತಿಗೆಗೆ ನೇತು ಹಾಕಿಕೊಳ್ಳುವ ಬದಲು ಸ್ಕ್ಯಾನಿಂಗ್ ಮತ್ತು ಟಿಕೆಟ್ ನೀಡುವ ಒಂದೇ ಮಷಿನ್ ಅನ್ನು ಕೆಎಸ್ಆರ್ಟಿಸಿ ಪರಿಚಯಿಸಲಿದೆ. ನಮ್ಮ ನಿಗಮದಲ್ಲಿ 83 ಘಟಕಗಳಿವೆ. ಸದ್ಯ ಎಲೆಕ್ಟ್ರಿಕ್ ಟಿಕೆಟ್ ಮಷಿನ್ಗಳನ್ನು (ಇಟಿಎಂ) ಬಳಸಲಾಗುತ್ತಿದೆ. ಡಿಜಿಟಲ್ ಪೇಮೆಂಟ್ ಎನೇಬಲ್ (ಡಿಪಿಇ) ಇರುವ ಇಟಿಎಂಗಳ ಪೂರೈಕೆಯಾಗಬೇಕಿದೆ. 10 ಸಾವಿರ ಮಷೀನ್ಗಳು ಬೇಕಾಗಿದ್ದು, ಅದಕ್ಕಾಗಿ ಟೆಂಡರ್ ಕರೆಯಲಾಗಿದೆ. ಬಿಡ್ ಮಾಡಲು ಫೆ.18 ಕೊನೇ ದಿನವಾಗಿದೆ. ಬಳಿಕ…
ಉಡುಪಿ : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ.ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ. ಉಡುಪಿ ಹಾಗೂ ಚಿಕ್ಕಮಂಗಳೂರು ಕ್ಷೇತ್ರಗಳಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಈ ಹಿನ್ನೆಲೆಯಲ್ಲಿ ಇದರ ಆಧಾರದ ಮೇಲೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಉಡುಪಿ ಮತ್ತು ಚಿಕ್ಕಮಗಳೂರು ಜನರು ಆಶೀರ್ವಾದ ಮಾಡಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ…