Author: kannadanewsnow05

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿತ್ತು. ಇಂದು ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಹೆಚ್.ಡಿ ರೇವಣ್ಣ ಟೆಂಪಲ್ ರನ್ ನಲ್ಲಿ ತೊಡಗಿದ್ದಾರೆ. ಹೌದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹೆಚ್ ಡಿ ರೇವಣ್ಣ ಟೆಂಪಲ್ ರನ್ ಮಾಡುತ್ತಿದ್ದು ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಚಿವ ಎಚ್ ಡಿ ರೇವಣ್ಣ ಭೇಟಿ ನೀಡಿದ್ದಾರೆ. ಗರ್ಭಗುಡಿಯಲ್ಲಿ ಎಚ್ಡಿ ರೇವಣ್ಣ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಇದೆ ವೇಳೆ ಅವರ ಜೊತೆಗೆ ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು, ಎಂಎಲ್ಸಿ ಮಂಜೇಗೌಡ ಸಾಥ್ ನೀಡಿದ್ದಾರೆ. ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದ ಪ್ರತಿಯೊಬ್ಬರ ಹೆಸರು ನಕ್ಷತ್ರ ಹೇಳಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ.ಚಾಮುಂಡೇಶ್ವರಿ ಗೆ ಪೂಜಿ ಸಲ್ಲಿಸಿ, ಇದೀಗ ಎಚ್ಡಿ ರೇವಣ್ಣ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇದಕ್ಕೂ ಮುಂಚೆ ಬೆಂಗಳೂರಿನ ಪರಪ್ಪನ…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕೇಂದ್ರ ಸರ್ಕಾರದಿಂದ ಬರುವ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ಕೇಂದ್ರ ಒಪ್ಪದಿದ್ದಾಗ ಐದು ಕೆಜಿ ಬದಲಾಗಿ ಸರ್ಕಾರ ಪಡಿತರ ಖಾತೆಗೆ ಹಣ ನೀಡಿತು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಕೇಂದ್ರ ಆಹಾರ ನಿಗಮದಲ್ಲಿ ಅಕ್ಕಿ ಕೊಳೆಯುತ್ತಿದೆ.ಭಾರತ್ ಬ್ರಾಂಡ್ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿತಾ ಎಂದು ಪ್ರಶ್ನಿಸಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ.18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ…

Read More

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದು ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಂಗಳವಾರ ವರುಣಾರ್ಭಟ ಜೋರಾಗಿತ್ತು. ಉತ್ತರ ಕನ್ನಡದ ಸಿದ್ದಾಪುರದಲ್ಲಿ 52 ಮಿಮೀ, ಶೃಂಗೇರಿಯಲ್ಲಿ 50 ಮಿಮೀ ಮಳೆ ಸುರಿದಿದೆ.ಕೆಲವೆಡೆ ಸಾಧಾರಣ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಿದೆ ತಿಳಿದುಬಂದಿದೆ. ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಹಾಸನ, ಚಾಮರಾಜನಗರದಲ್ಲಿ ಮೇ 15ರಂದು, ದಣ ಕನ್ನಡ, ಉಡುಪಿಯಲ್ಲಿ ಮೇ 17ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ…

Read More

ತುಮಕೂರು : ಹಳ್ಳದಲ್ಲಿ ನೀರು ಕುಡಿದು ವಾಪಸ್ ಆಗುತ್ತಿದ್ದ ವೇಳೆ ರೈಲು ಹಳೆಯ ಮೇಲೆ ಕುರಿಮಂದೆ ಮೇಲೆ ರೈಲು ಹರಿದು ಸುಮಾರು 15 ಲಕ್ಷ ಮೌಲ್ಯದ 46 ಕುರಿಗಳು ಧಾರಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ನಿಡವಂದ ಗ್ರಾಮದ ಬಳಿ ರೈಲು ಹರಿದು 46 ಕುರಿಗಳ ಸಾವನ್ನಪ್ಪಿವೆ. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ರೈತ ದೇವರಾಜುಗೆ ಸೇರಿದ ಕುರಿಗಳು ಎಂದು ಹೇಳಲಾಗುತ್ತಿದೆ.ಕೆರೆಯಲ್ಲಿ ನೀರು ಕುಡಿದು ಹಿಂತಿರುಗುತ್ತಿದ್ದ ವೇಳೆ ಮಂದೆ ಮೇಲೆ ರೈಲು ಹರಿದಿದೆ. ಈ ವೇಳೆ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 46 ಕುರಿಗಳನ್ನು ರೈತ ದೇವರಾಜು ಕಳೆದುಕೊಂಡಿದ್ದಾನೆ. ಘಟನೆ ಕುರಿತಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ : ಇತ್ತೀಚಿಗೆ ಆಕಸ್ಮಿಕ ಹಾಗೂ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಉಡುಪಿಯಲ್ಲಿ ಕೂಡ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹೋಟೆಲ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಉಡುಪಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹಟ್ ಹೋಟೆಲ್ ಒಂದು ಹೊತ್ತಿ ಉರಿದಿದೆ. ಕರಾವಳಿಯ ಜಂಕ್ಷನ್ ಬಳಿ ಇರುವ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ, ಘಟನೆಯ ಕುರಿತಂತೆ, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಗದಗ : ಇತ್ತೀಚಿಗೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ ತಿಂಗಳು ಹುಬ್ಬಳ್ಳಿಯಲ್ಲಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದೆ ಕೊಡಗಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಗದಗ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಹೌದು ಗದಗದ ಬೆಡಗೇರಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬ ಒಂದು ಇದೀಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದೆ. ಮಹಿಳೆಯನ್ನು ಸೈನಾಜ್ ಎಂದು ಹೇಳಲಾಗುತ್ತಿದ್ದು, ಆಕೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ವೇಳೆ ಕಿಡಿಗೇಡಿಗಳು ಕುಟುಂಬದ ಮೇಲೆ ಹಲ್ಲೆ ಮಾಡುತ್ತಿರುವಾಗ ನನ್ನ ಕುಟುಂಬವನ್ನು ಕಾಪಾಡಿ ಎಂದು ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಇದನ್ನು ಪ್ರಶ್ನಿಸಿದ್ದಕ್ಕೆ ಆರೋಪಿಗಳಾದ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ತಾಯಿ, ಪುತ್ರ ಸದ್ಧಾಂ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು…

Read More

ಹಾಸನ : ಹಾಸನ ಸಂಸದ ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರನ್ನು ಎಸ್ಐಟಿ ಬಂಧಿಸಿದ್ದು, ಇದೀಗ ಎಸ್ಐಟಿ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್ಐಟಿ ದಾಳಿ ಮಾಡಿದೆ. ಹೌದು ಪ್ರಜ್ವಲ್ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎರಡು ಕಡೆಗಳಲ್ಲಿ ಸಾಕ್ಷಿ ಸಿಗಬಹುದಾ ಎನ್ನುವ ಉದ್ದೇಶದಿಂದ ಎಸ್ಐಟಿ ಅಧಿಕಾರಿಗಳು ಇದೀಗ ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಪ್ರೀತಮ್ ಗೌಡ ಆಪ್ತರ ಹೋಟೆಲ್ ಹಾಗೂ ಬಾರ್ ಗಳ ಮೇಲೆ ಎಸ್ಐಟಿ ದಾಳಿ ನಡೆಸಿದೆ. ಹಾಸನದ ಎರಡು ಕಡೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಹೋಟೆಲ್ ಹಾಗೂ ಬಾರ್ ಮೇಲೆ ಎಸ್ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ

Read More

ನವದೆಹಲಿ : ನಿನ್ನೆ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಇದೀಗ ಈ ಒಂದು ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣನಾದ 16 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಲಕ್ಷ್ಮಿ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಅರ್ಜುನ್ ಸಕ್ಸೇನಾ ಎಂದು ಹೇಳಲಾಗುತ್ತಿದ್ದು, ಮೂಲತಃ ಈತ ಉತ್ತರ ಪ್ರದೇಶದ ಇಟಾವಾದಿಂದ 12 ನೇ ತರಗತಿ ಪರೀಕ್ಷೆಯೊಂದಿಗೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಗೆ ಬಂದಿದ್ದ ಎಂದು ತಿಳಿದುಬಂದಿದೆ. ವಿದ್ಯಾರ್ಥಿಯ ದೇಹವು ಪೇಯಿಂಗ್-ಗೆಸ್ಟ್(PG) ವಸತಿಗೃಹದಲ್ಲಿ ಕೋಣೆಯೊಂದರಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿಬಿಎಸ್‌ಇ ಪಿಯು ಪರೀಕ್ಷೆಗಳಲ್ಲಿ ಅವರು ಎರಡು ವಿಷಯಗಳಲ್ಲಿ ಫೇಲ್​ ಆಗಿದ್ದು, ಖಿನ್ನತೆಗೆ ಒಳಗಾಗಿದ್ದ ಎಂದು ವಸತಿಗೃಹದಲ್ಲಿ ಉಳಿದುಕೊಂಡಿರುವ ಇತರರ ಹೇಳಿಕೆಗಳನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದ್ದಾರೆ. ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಘಟನೆಯ ಬಗ್ಗೆ ಸಕ್ಸೇನಾ ಅವರ ಕುಟುಂಬ ಸದಸ್ಯರಿಗೆ…

Read More

ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಒಂಟೆಯ ಬೆನ್ನು ಹತ್ತಿ ತೆರಳಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಯಾಗಿ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಮೇ 12 ರಂದು ಮನೆಯಿಂದ ಒಂಟೆ ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದಕ್ಕೆ ಮಹಾನಗರ ಪಾಲಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷವೇ ಕಾರಣ ಎಂದು ಮಕ್ಕಳ ಪೋಷಕರು ಆರೋಪಿಸಿದ್ದರು. ಈ ಹಿನ್ನಲೆ ಇದೀಗ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಆದರ್ಶ ನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಕಾಲ ಜೈಲುವಾಸ ಅನುಭವಿಸಿ ಎಂದು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಒಂದು ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ ಅವರ ಅಭಿಮಾನಿಗಳು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದು, ರೇವಣ್ಣ ಅವರ ಕ್ಷೇತ್ರದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೆ ಹಾಸನದಲ್ಲಿ ಎಚ್ ಡಿ ರೇವಣ್ಣ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ರೇವಣ್ಣ ನಾಳೆ ಹೊಳೆನರಸೀಪುರಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಹಾಸನಕ್ಕೆ ಬರುವ ವೇಳೆ ಗಡಿಯಲ್ಲಿಯೇ HD ರೇವಣ್ಣ ಸ್ವಾಗತಕ್ಕೆ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ.ರೇವಣ್ಣ ಬಂಧನದಿಂದ ಕಾರ್ಯಕರ್ತರು ಮಂಕಾಗಿದ್ದರು.ಇದೀಗ ರೇವಣ್ಣ ಅವರ ಬಿಡುಗಡೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ.

Read More