Author: kannadanewsnow05

ಬೆಂಗಳೂರು : ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದವರೇ ನಿಜವಾದ ನಾಯಕ. ನನ್ನ ಸುತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುತ್ತ ಗಿರಗಿಟ್ಲೆ ತರ ತಿರುಗಿದರೆ ನಾಯಕರಾಗಲ್ಲ. ಬ್ಯಾನರ್ ಫೋಟೋ ಹಾಕಿದವರು ನಾಯಕರಾಗಲ್ಲ. ಕಾಂಗ್ರೆಸ್ ಪಕ್ಷವನ್ನು ಯಾರು ಅಧಿಕಾರಕ್ಕೆ ತರುತ್ತಾರೆ ಅವರೇ ನಿಜವಾದ ನಾಯಕ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಎಚ್.ಎಸ್ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದವರೇ ನಿಜವಾದ ನಾಯಕ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶಿಸ್ತಿನ ಪಾಠ ಮಾಡಿದ್ದಾರೆ. ನನ್ನ ಮುಂದೆ ಸಿದ್ದರಾಮಯ್ಯ ಮುಂದೆ ಪೋಸ್ಟರ್ ಹಾಕಿದರೆ ನಾಯಕ ಆಗಲ್ಲ. ಪೋಸ್ಟರ್ ಬ್ಯಾನರ್ ಹಾಕಿದ ಮೇಲೆ ಯಾರು ನಾಯಕರು ಆಗುವುದಿಲ್ಲ. ಶಿಸ್ತು ಇರಬೇಕು ಯಾರು ಬೂತ್ ಮಟ್ಟದಲ್ಲಿ ಹೆಚ್ಚು ಮತ ಕೊಡುತ್ತಾನೋ ಅವನೇ ನಿಜವಾದ ನಾಯಕ. ನನ್ನ ಮುಂದೆ ಸಿದ್ದರಾಮಯ್ಯ ಮುಂದೆ ಗಿರಗಿಟ್ಲೆ ತರ ತಿರುಗಿದರೆ ನಾಯಕನಾಗಲ್ಲ. ನಿಮ್ಮ ಬೂತ್…

Read More

ಬೆಳಗಾವಿ : ಯುವಕನೊಬ್ಬ ಬಾಲಕಿಗೆ ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಇದರಿಂದ ಬೇಸತ್ತು ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೌದು ಚಿಕಿತ್ಸೆ ಫಲಿಸಿದೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಬೆಳಗಾವಿಯ ಘಟಪ್ರಭಾ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ಬಿಮ್ಸ್ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಪ್ರೀತಿಸುವಂತೆ ಬಾಲಕಿಯನ್ನು ಸಿದ್ದಲಿಂಗ ಪೂಜಾರಿ (21) ಎನ್ನುವ ಯುವಕ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ಬಾಲಕಿ ಬೆಂಕಿ ಹಚ್ಚಿಕೊಂಡು…

Read More

ಮಂಗಳೂರು : ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದರು. ಇದೀಗ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ ದೂರು ಆಧರಿಸಿ FIR ದಾಖಲಾಗಿದೆ. ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು. ಮಾ.9ರಂದು ನಡೆದ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಭಾಷಣ ಮಾಡಿದ್ದರು. ಕಳೆದ ಮಾರ್ಚ್ 9ರಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ…

Read More

ಮೈಸೂರು : ಕಳೆದ ಮಾರ್ಚ್ 12 ರಂದು ಮೈಸೂರು ತಾಲೂಕಿನ ಅನಗಹಳ್ಳಿಯಲ್ಲಿ ತೋಟದ ಮನೆಯಲ್ಲಿ ಪ್ರಿಯತಯ ಜೊತೆಗೆ ಇದ್ದಾಗಲೇ ಸೂರ್ಯ ಎನ್ನುವ ವ್ಯಕ್ತಿಯ ಭೀಕರವಾದ ಕೊಲೆ ಆಗಿತ್ತು. ಈಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ತಾಲೂಕಿನ ಜಯಪುರ ಠಾಣೆ ಪೊಲೀಸರು ಕೇವಲ 48 ಗಂಟೆಗಳಲ್ಲಿ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಕೊಲೆ ನಡೆದ 48 ಗಂಟೆಯಲ್ಲಿ 8 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರು ತಾಲೂಕಿನ ಜಯಪುರ ಠಾಣೆ ಪೋಲೀಸರು 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಎಸ್ ರಾಜು, ಕಿರಣ್ ಅಲಿಯಾಸ್ ಚಡ್ಡಿ, ಬಿ ಮನು, ಚಂದ್ರಶೇಖರ್ ಅಲಿಯಾಸ್ ಮಂಗೂ, ಸುನಿಲ್ ಕುಮಾರ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಅಲ್ಲದೇ ಇಬ್ಬರು ಬಾಲಕರು ಸೇರಿದಂತೆ 8 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೋಗಾದಿಯ ಶರತ್ ಗ್ಯಾಂಗ್ ನಿಂದ ಈ ಒಂದು ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಬೇರೊಂದು ಕೇಸ್ ನಲ್ಲಿ ಜೈಲು…

Read More

ಚಾಮರಾಜನಗರ : ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಉರುಳಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಬಳಿ ರಸ್ತೆ ತಿರುವಿನಲ್ಲಿ ವಾಹನ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಉರುಳಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 10 ಮಂದಿಗೆ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಪ್ರಾಥಮಿಕ ಚಿಕಿತ್ಸೆ ಪಡೆದು ಗಾಯಾಳುಗಳು ಸದ್ಯ ಮನೆಗೆ ತೆರಳಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು ಬಳಿಕ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿತು. ಆದರೂ ಕೂಡ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಆತ್ಮಹತ್ಯೆಗಳು ನಿಲ್ಲುತ್ತಿಲ್ಲ. ಈಗ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿ ಒಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ ಜಾಲಹಳ್ಳಿಯ ಮಂಜುನಾಥ್ (34) ನೇಣಿಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಾಲಹಳ್ಳಿಯಲ್ಲಿ ಮಂಜುನಾಥ್ ಅವರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಎಲ್ & ಟಿ ಫೈನಾನ್ಸ್ ಸೇರಿದಂತೆ ಐದಾರು ಕಡೆಗೆ ಮಂಜುನಾಥ್ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೆ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಮಂಜುನಾಥ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿ ಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…

Read More

ವಿಜಯಪುರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಸ್ವಿಫ್ಟ್ ಡಿಸೈರ್ ಕಾರು KA 28 Z 0379 ನಂಬರ್ ಕಾರು ಅಪಘಾತ ಆಗಿದೆ. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ವಿಜಯಪುರ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕಾರು ಪಾರ್ಕ್ ಮಾಡಿ ಹೋಗುವವರೇ ಹುಷಾರ್.ಯಾಕೆ ಈ ಮಾತು ಹೇಳಲಾಗುತ್ತಿದೆ ಅಂದರೆ, ಬೆಳಗಾಗೋದ್ರೊಳಗೆ ನಿಮ್ಮ ಕಾರಿನ ಚಕ್ರಗಳೇ ಇರಲ್ಲ. ಹಾಗಾಗಿ ಪಾರ್ಕ್ ಮಾಡೋಕು ಮುನ್ನ ಸ್ವಲ್ಪ ಎಚ್ಚರದಿಂದ ಇರಿ. ಇದೀಗ ಪಾರ್ಕ್ ಮಾಡಿದ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳರು ಕದ್ದಿದ್ದಾರೆ. ಗಾಂಧಿನಗರ ಹೋಟೆಲ್ ಬಳಿ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಹುಬ್ಬಳ್ಳಿ ಮೂಲದ ಗೋವಿಂದ ಗೌಡರಿಗೆ ಈ ಒಂದು ಕಾರು ಸೇರಿದ್ದು ಕೆಲಸದ ನಿಮಿತ್ತ ಗೋವಿಂದ ಗೌಡ ಅವರು ಶನಿವಾರ ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿನಗರದ ಹೋಟೆಲ್ ಬಳಿ ತಮ್ಮ ಕಾರು ಪಾರ್ಕ್ ಮಾಡಿದ್ದರು.ಆದರೆ ಬೆಳಿಗ್ಗೆ ನೋಡುವಷ್ಟರಲ್ಲಿ ಕಾರಿನ ನಾಲ್ಕು ಚಕ್ರಗಳು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಕಾರಿನ ನಾಲ್ಕು ಚಕ್ರಗಳು ಮಾಯ ಆಗಿದ್ದನ್ನು ನೋಡಿ ಗೋವಿಂದ ಗೌಡ ದಂಗಾಗಿದ್ದಾರೆ.

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷನ ಗುಂಡಾಗಿರಿ ನಡೆದಿದ್ದು, ರಾತ್ರಿ 1 ಗಂಟೆಗೆ ಎಣ್ಣೆ ಕೊಡಲಿಲ್ಲ ಎಂದು ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ವಿರುದ್ಧ ಈ ಒಂದು ಆರೋಪ ಕೇಳಿ ಬರುತ್ತಿದೆ. ಸದಸ್ಯ ರಾಶ್ವೀಕ್ ಸೇರಿದಂತೆ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಲಾಗಿದೆ. ರಾತ್ರಿ 1 ಗಂಟೆಗೆ ಎಣ್ಣೆ ಕೊಡಲಿಲ್ಲ ಎಂದು ಗುಂಪು ಕಟ್ಟಿಕೊಂಡು ಹಲ್ಲೆ ಮಾಡಿದ್ದಾರೆ. ಮರುದಿನ ಬೆಳಗ್ಗೆ ಬಂದು ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕ್ಯಾಶಿಯರ್ ಮೇಲೆ ಹಲ್ಲಿಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ ಹಲ್ಲೆ ಮಾಡಿದರೂ ಕೂಡ ಕ್ಯಾಶಿಯರ್ ದೂರು ನೀಡಿಲ್ಲ. ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಎಂದು ಪೊಲೀಸರು ಹೇಳುತ್ತಿದ್ದಾರೆ ಆದರೆ ಕ್ಯಾಶರ್ ಮಾತ್ರ ದೂರು ನೀಡಿಲ್ಲ.

Read More

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಷರತ್ತು ಸಡಿಲಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಹೈಕೋರ್ಟ್ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಷರತ್ತು ಸಡಿಲಿಸಿ ಕೋರಿ ಹೈಕೋರ್ಟಿಗೆ ಬಿಎಸ್ ಯಡಿಯೂರಪ್ಪ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಪಿ ಪಿ ಕಾಲಾವಕಾಶ ಕೋರಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ಅವರು ಕೋರ್ಟ್ ಷರತ್ತು ಉಲ್ಲಂಘಿಸಿದ್ದಾರೆ. ಕೋರ್ಟ್ ಅನುಮತಿ ಪಡೆಯದೆ ವ್ಯಾಪ್ತಿ ಬಿಟ್ಟು ಪ್ರಯಾಣಿಸಿದ್ದಾರೆ ಎಂದು ಹೈಕೋರ್ಟ್ ಗೆ ಎಸ್‌ಪಿಪಿ ಅಶೋಕ್ ನಾಯಕ್ ಹೇಳಿಕೆ ನೀಡಿದರು. ಈಗಾಗಲೇ ಕೇಸ್ ಸಂಬಂಧ ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು. ಅಲ್ಲದೇ ಕಳೆದ ಮಾರ್ಚ್ 14 ರಂದು ಪೋಕ್ಸೋ ಕೇಸ್’ ನಲ್ಲಿ ಮಾಜಿ ಸಿಎಂ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕಾಗ್ನಿಜೆನ್ಸ್,…

Read More