Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ, ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಆದಿಉಡುಪಿಯಲ್ಲಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಉಡುಪಿ ಭೇಟಿ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮಂಗಳೂರು : ಉಡುಪಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದೂ, ಇದೀಗ ನವದೆಹಲಿಯಿಂದ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮೀಸಿದ್ದಾರೆ. ಅಲ್ಲಿಂದ ಹೇಳಿಕ್ಯಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಪ್ರಧಾನಿ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ನಿಗದಿಗಿಂತಲೂ 40 ನಿಮಿಷ ಮುಂಚಿತವಾಗಿ ಅಂದರೆ, ಬೆಳಗ್ಗೆ 11.40ರ ಬದಲಿಗೆ 11 ಗಂಟೆಗೇ ಅವರು ಉಡುಪಿ ತಲುಪಲಿದ್ದಾರೆ. ಅವರ ಎಲ್ಲಾ ಕಾರ್ಯಕ್ರಮಗಳೂ 40 ನಿಮಿಷ ಮುಂಚಿತವಾಗಿ ನಡೆಯಲಿವೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಮತ್ತು ಅಲ್ಲಿಂದ ಉಡುಪಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲಿರುವ ಪ್ರಧಾನಿ, ಉಡುಪಿ ಹೆಲಿಪ್ಯಾಡ್ ನಿಂದ 20 ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ತಲುಪಲಿದ್ದಾರೆ. ಅಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಬಳಿಕ ಶ್ರೀಕೃಷ್ಣನ ದರ್ಶನ ದರ್ಶನ ಮಾಡಲಿದ್ದಾರೆ.
ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿತ್ತು. ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಹುಲಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯು, ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರ ಮೇಲೆ ಹುಲಿ ದಾಳಿಗೆ ಯತ್ನಿಸಿತ್ತು. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿಯಿಂದ ಪಾರಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳಿಗೆ ರೈತರು ಹುಲಿ ಹಿಡಿಯಲೇಬೇಕೆಂದು ಒತ್ತಾಯಿಸಿ ಮುತ್ತಿಗೆ ಹಾಕಿದ್ದರು. ಅಲ್ಲದೇ ಗ್ರಾಮಸ್ಥರು ಸ್ಥಳದಲ್ಲೇ ಬೀಡು ಬಿಟ್ಟಿದ್ದರು.
ಮಂಗಳೂರು : ಉಡುಪಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದೂ, ಇದೀಗ ನವದೆಹಲಿಯಿಂದ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮೀಸಿದ್ದಾರೆ. ಅಲ್ಲಿಂದ ಹೇಳಿಕ್ಯಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ನಂತರ ಉಡುಪಿಯಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಪ್ರಧಾನಿ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ನಿಗದಿಗಿಂತಲೂ 40 ನಿಮಿಷ ಮುಂಚಿತವಾಗಿ ಅಂದರೆ, ಬೆಳಗ್ಗೆ 11.40ರ ಬದಲಿಗೆ 11 ಗಂಟೆಗೇ ಅವರು ಉಡುಪಿ ತಲುಪಲಿದ್ದಾರೆ. ಅವರ ಎಲ್ಲಾ ಕಾರ್ಯಕ್ರಮಗಳೂ 40 ನಿಮಿಷ ಮುಂಚಿತವಾಗಿ ನಡೆಯಲಿವೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಮತ್ತು ಅಲ್ಲಿಂದ ಉಡುಪಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲಿರುವ ಪ್ರಧಾನಿ, ಉಡುಪಿ ಹೆಲಿಪ್ಯಾಡ್ ನಿಂದ 20 ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ತಲುಪಲಿದ್ದಾರೆ. ಅಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಬಳಿಕ ಶ್ರೀಕೃಷ್ಣನ ದರ್ಶನ ದರ್ಶನ ಮಾಡಲಿದ್ದಾರೆ. ಉಡುಪಿ ಭೇಟಿ ಬಗ್ಗೆ…
ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಏರಿಕೆ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ಜಾರಿಗೊಳಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ ಕಾಯ್ದೆ-2022 ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ವಿವಿಧ ಷರತ್ತು ವಿಧಿಸಿ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ. ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, ಕಾಯಿದೆ ಅನ್ವಯ ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಆರಂಭಿಸಿದ್ದು, ಅಂತಿಮ ಹಂತದಲ್ಲಿದೆ. ಒಟ್ಟು 3,644 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸುವುದಿಲ್ಲ. ಹೊಸ ಕಾಯಿದೆ ಅಡಿ ಈಗಾಗಲೇ ನೇಮಕಾತಿ ಮಾಡಿರುವುದಕ್ಕೆ ಮಧ್ಯಂತರ ಆದೇಶ ಅನ್ವಯಿಸಲ್ಲ ಎಂದು ಆದೇಶಿಸಬೇಕು. ಅರ್ಜಿದಾರರು ಸರ್ಕಾರದ ಅಧಿಸೂಚನೆಗಳನ್ನು ಪ್ರಶ್ನಿಸಿಲ್ಲ. ಹೀಗಾಗಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಮತ್ತು ಬಡ್ತಿ ನೀಡಲು ಸರ್ಕಾರಕ್ಕೆ ಅನುಮತಿಸಬೇಕು ಎಂದು ಕೋರಿದರು. ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮನೆಯ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಕಸವನ್ನು ಸುರಿದು ದಂಡ ಹಾಕುತ್ತಿದ್ದ ಅಧಿಕಾರಿಗಳು, ಇದೀಗ ಎಲ್ಲೆಂದರಲ್ಲಿ ಕಸ ಸುಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಹೌದು ನಗರದಲ್ಲಿ ಎಲ್ಲೆಂದರಲ್ಲಿ ಕಸ ಸುರಿದು ಬೆಂಕಿ ಹಾಕಲಾಗುತ್ತಿದೆ. ಇದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಈಗಾಗಲೇ ಕಸ ವಿಂಗಡಿಸಿ ಕೊಡಬೇಕು ಎಂಬ ನಿಯಮ ಜಾರಿಯಲ್ಲಿದೆ. ಆದರೂ ಕೂಡ ಜನ ಕಸ ಸುರಿದು ಬೆಂಕಿ ಇಡುತ್ತಿದ್ದಾರೆ. ಇದನ್ನು ತಡೆಗಟ್ಟಲು BSWML ಕಠಿಣ ಕ್ರಮಕ್ಕೆ ಮುಂದಾಗಿದ್ದು, ಒಂದು ವೇಳೆ ಕಸ ಸುರಿದು ಬೆಂಕಿ ಹಾಕಿದರೆ ಮೊದಲು ದಂಡ ಪ್ರಯೋಗ ಮಾಡಲಿದೆ. ನಂತರ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗಟ್ಟಲಿದೆ. ದಂಡ ಎಷ್ಟು? ಮೊದಲ ಬಾರಿ ಕಸಕ್ಕೆ ಬೆಂಕಿಯಿಟ್ಟರೆ 10 ಸಾವಿರ ರೂ. ದಂಡ. ಎರಡನೇ ಬಾರಿ 20 ಸಾವಿರ ರೂಪಾಯಿ ದಂಡ. ನಂತರ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಇದಕ್ಕೂ ಕ್ಯಾರೇ ಎನ್ನದಿದ್ದರೆ ಎಫ್ಐಆರ್…
ದಾವಣಗೆರೆ : ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ನಗರದ ಸಮೀಪದ ಹಳೇ ಚಿಕ್ಕನಹಳ್ಳಿಯ ತರುಣ್ (16) ಎಂದು ಗುರುತಿಸಲಾಗಿದೆ. ಏನೂ ಕೆಲಸವನ್ನೂ ಮಾಡದೇ ಮನೆಯಲ್ಲೇ ಇರುತ್ತಿದ್ದ ಬಾಲಕನಿಗೆ ಕೆಲಸಕ್ಕೆ ಹೋಗುವಂತೆ ಪೋಷಕರು ಗದರಿದ್ದರು. ಸುಮ್ಮನೆ ಹುಡುಗರ ಜೊತೆ ಸೇರಿ ಕೆಟ್ಟ ದಾರಿ ಹಿಡಿಯುವ ಬದಲು ಕೆಲಸಕ್ಕೆ ಹೋಗು ಎಂದು ತಿಳುವಳಿಕೆ ಹೇಳಿದ್ದರು. ಇದರಿಂದ ಮನನೊಂದು ತರುಣ್ ಮನೆ ಬಿಟ್ಟು ಹೋಗಿದ್ದ. ಆತನಿಗಾಗಿ ಕುಟುಂಬಸ್ಥರು ರಾತ್ರಿ ಹುಡುಕಾಟ ನಡೆಸಿದ್ದರು. ಬೆಳಗ್ಗೆ ರೈಲುಹಳಿ ಮೇಲೆ ರುಂಡ ಮುಂಡ ಬೇರೆಯಾಗಿ ತರುಣ್ ಮೃತದೇಹ ಪತ್ತೆಯಾಗಿತ್ತು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಗದಗ : ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದಿಂದಾಗಿ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ ಎಂಬುವರು ಅರುಣಕುಮಾರ ಕೋಟೆಗಲ್ ಮೇಲೆ ತಲ್ವಾರ್, ಚಾಕು ಹಾಗೂ ಬೀಯರ್ ಬಾಟಲ್ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ತಡರಾತ್ರಿ ಈ ಒಂದು ಘಟನೆ ನಡೆದಿದ್ದು, ಇಲ್ಲಿನ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್ ಸಮೀಪ ಈ ಘಟನೆ ನಡೆದಿದ್ದು, ಅರುಣಕುಮಾರ ಕೋಟೆಗಲ್ ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಲ್ಲಾ ಓಣಿ ಮತ್ತು ಒಕ್ಕಲಿಗರ ಓಣಿಯ ಯುವಕರ ನಡುವೆ ಹಳೆಯ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರುಣಕುಮಾರ್ ಅವರು ಹೋಟೆಲ್ ಒಂದರಲ್ಲಿ ಊಟಕ್ಕೆ ಕುಳಿತಿದ್ದಾಗ, ಏಕಾಏಕಿ ಹೋಟೆಲ್ಗೆ ನುಗ್ಗಿದ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ, ಅರುಣಕುಮಾರ್ ಮೇಲೆ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, 2028ರ ಚುನಾವಣೆಯ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಗಿದೆ. ಸ್ವಾಮೀಜಿಗಳು ಅವರ ಸಮುದಾಯದ ಪರವಾಗಿ ಮಾತಾಡ್ತಾರೆ. ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಚಳಿಗಾಲದ ಅಧಿವೇಶನದಲ್ಲಿ ಆವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ, ಆವಿಶ್ವಾಸ ನಿರ್ಣಯ ಮಂಡಿಸಬಹುದು ಅದ್ರಲ್ಲಿ ಏನಿದೆ ಅದರಿಂದ ಯಾವುದೇ ಪ್ರಯೋಜನ ಇಲ್ಲ. ನಮಗೆ ಮೆಜರಿಟಿ ಇದೆ ಎಂದರು.
ಉಡುಪಿ : ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಆಡಳಿತ ನಡೆಯುತ್ತಿಲ್ಲ ಶೇಕಡ 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತ ಆಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಆಗಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ ಯಾಚಿಸುತ್ತೇವೆ. NDA ಒಕ್ಕೂಟದಲ್ಲೂ ಈ ಬಗ್ಗೆ ಮಾತುಕತೆ ಮಾಡುತ್ತೇವೆ ರಾಜ್ಯದ ಹಿತ ಮರೆತಿರುವ ಸರ್ಕಾರವನ್ನು ಬಯಲಿಗೆ ಎಳೆಯುತ್ತೇವೆ. ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಗೊಂದಲದ ವಾತಾವರಣವನ್ನು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೃಷ್ಟಿ ಮಾಡಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಲಾಗಿದೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚಿಸಲು ಮುಂದಾಗಲ್ಲ ಕಾಂಗ್ರೆಸ್ ತನ್ನ ಭಾರದಿಂದಲೇ ಕುಸಿದು ಬೀಳಲೆಂದು ಕಾದು…














