Author: kannadanewsnow05

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 18ರ ವರೆಗೆ ಎಸ್ಐಟಿ ಕಷ್ಟಡಿಗೆ ನೀಡಿ ಬೆಂಗಳೂರಿನ 42ನೇ ಎಸ್ಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೊಳೆನರಸೀಪುರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೆ ACMM ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೈಬರ್ ಕ್ರೈಂ ಠಾಣೆ ನಂಬರ್ 02/ 2024 ರಲ್ಲಿ ಕಸ್ಟಡಿಗೆ ನೀಡಿ ಎಂದು ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಮನವಿ ಮಾಡಿದ್ದರು. ಹೀಗಾಗಿ ಮನವಿ ಪುರಸ್ಕರಿಸಿ ಕೋರ್ಟ್ ಬಾಡಿ ವಾರೆಂಟ್ ಜಾರಿಗೊಳಿಸಿದೆ ಈ ಹಿನ್ನೆಲೆಯಲ್ಲಿ ಜೂನ್ 18 ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕರ್ತರಿಗೆ ನೀಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

Read More

ಮಂಗಳೂರು : ಹಣ ಸುಲಿಗೆಗೆ ಇದೀಗ ಸೈಬರ್ ಖದೀಮರು ಹೊಸ ತಂತ್ರ ಅನುಸರಿಸುತ್ತಿದ್ದೂ, ನಗರ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಕೆಲ ವಿದ್ಯಾರ್ಥಿಗಳ ಪೋಷಕರಿಗೆ ಕಳೆದೆರಡು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ನಗರದ ಸೈಬ‌ರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಶಾಲಾ ಅವಧಿಯಲ್ಲಿ ಪೋಷಕರನ್ನು ಬೆದರಿಸಿ ಹಣ ದೋಚುವ ಖದೀಮರ ಕುತಂತ್ರ ಇದಾಗಿದ್ದು, ಇಂತಹ ಕರೆಗಳ ಬಗ್ಗೆ ಪೋಷಕರು ಅಥವಾ ಶಿಕ್ಷಣ ಸಂಸ್ಥೆಗಳು ಭಯ ಪಡಬೇಕಾಗಿಲ್ಲ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ವಾಟ್ಸಾಪ್ ಮೂಲಕ ಸ್ವೀಕರಿಸಲಾದ ಈ ಕರೆಗಳು ಪೋಲೆಂಡ್ ಮತ್ತು ಪಾಕಿಸ್ತಾನದ ವಿದೇಶಿ ಸಂಖ್ಯೆಗಳನ್ನು ಹೊಂದಿದ್ದು, ಕರೆ ಮಾಡಿದಾತ ತಾನು ಪೊಲೀಸ್‌ ಅಧಿಕಾರಿ ಎಂದು ಹೇಳಿಕೊಂಡಿದ್ದಾನೆ. ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ, ಕರೆ ಸ್ವೀಕರಿಸಿದ ಪೋಷಕರಿಗೆ, ತಮ್ಮ ಮಗ/ಮಗಳನ್ನು ಬಂಧಿಸಿದ್ದು, ಬಿಡುಗಡೆ ಮಾಡಲು ಹಣ ನೀಡುವಂತೆ ಒತ್ತಾಯಿಸಿದ್ದಾನೆ. ಸೈಬರ್ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕರೆಗಳನ್ನು ಪರಿಶೀಲಿಸಿದಾಗ ಇವುಗಳು ನಕಲಿಯಾಗಿದ್ದು, ವಿದ್ಯಾರ್ಥಿಗಳು ಸುರಕ್ಷಿತವಾಗಿರುವುದು ಕಂಡು…

Read More

ಶಿವಮೊಗ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರನ್ನು ಈಗಾಗಲೇ ಬಂಧಿಸಲಾಗಿದೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವರು ಈಗಾಗಲೇ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದರು ಇದೀಗ ನಿರ್ದೇಶಕರಾದ ಇಂದ್ರಜಿತ್ ಲಂಕೇಶ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ. ಸಿನಿಮಾ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ನಟ ದರ್ಶನ್‌ ಬಂಧನ ವಿಚಾರವಾಗಿ ಮಾತನಾಡಿ, ನಟ ದರ್ಶನ್​ ವಿರುದ್ಧದ ಕೂಲೆ ಆರೋಪ ಪ್ರಕರಣದ ತನಿಖೆ ನಡೆಯುತ್ತಿದೆ. ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಇಂತಹ ಸಮಯದಲ್ಲಿ ನಾನು ಕಾಮೆಂಟ್ ಮಾಡಿದರೆ ತಪ್ಪಾಗುತ್ತದೆ. ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ಕ್ಷಣಕ್ಷಣದ ವರದಿಯನ್ನು ನಾನೊಬ್ಬ ವೀಕ್ಷಕನಾಗಿ ನೋಡುತ್ತಿದ್ದೇನೆ ಎಂದರು. ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ. ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ನೆರೆಯವರ ದು:ಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ’ ಎಂದು ಬಸವಣ್ಣನವರ ವಚನ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A2 ಆರೋಪಿಯಾಗಿರುವ ನಟ ದರ್ಶನವರನ್ನು ಸ್ಥಳ ಮಹಜರುಗಾಗಿ ಪೊಲೀಸರು ಆರ್ ಆರ್ ನಗರದ ಪಟ್ಟಣಗೆರೆ ಶೆಡ್ಡಿಗೆ ಕರೆದು ತಂದಿದ್ದಾರೆ. ರೇಣುಕಾ ಸ್ವಾಮಿ ಹತ್ಯೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಪಟ್ಟಣಗೆರೆ ಇದೀಗ ಪೊಲೀಸರು ನಟ ದರ್ಶನ್ ಅವರನ್ನು ಕರೆತಂದಿದ್ದಾರೆ. ಶೆಡ್ನಲ್ಲಿ ದರ್ಶನ್ ಕರೆ ತಂದು ಸ್ಥಳ ಮಹಜರು ನಡೆಸಲಿದ್ದಾರೆ. ಈಗಾಗಲೇ ದರ್ಶನ್ ಅವರನ್ನು ಹೊರತುಪಡಿಸಿ ಅದಕ್ಕೂ ಮುನ್ನ ಪ್ರಕರಣದ ಎಲ್ಲಾ ಆರೋಪಿಗಳನ್ನು ಕರೆ ತಂದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನಟ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಬಂದಿದ್ದು ಸ್ಥಳ ಮಹಜರು ನಡೆಸಲಿದ್ದಾರೆ.

Read More

ಬೆಳಗಾವಿ : ಇತ್ತೀಚಿಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ಮುಗಿಸಿಕೊಂಡು ರಜೆಯ ಮೇಲೆ ಇದ್ದ ಕಾನ್ಸ್ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನನೊಂದು ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೈಲಹೊಂಗಲ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆಯನ್ನು ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಎಂದು ಹೇಳಲಾಗುತ್ತಿದ್ದು, ಈತ ಅತಿಯಾಗಿ ಕುಡಿದಿದ್ದರಿಂದ, ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೃತ ಪೊಲೀಸ್ ಪೇದೆಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.ಕುಡಿಯೋದ ಬಿಡಿ, ಮಕ್ಕಳು, ಮಡದಿ ಬಗ್ಗೆ ಗಮನ ಕೊಡಿ, ಮಕ್ಕಳ ಶಾಲೆ ಫೀ ತುಂಬಬೇಕು ಎಂದು ಹೇಳಿದ್ದೆ ಅಷ್ಟೇ ಎಂದು ಮೃತ ಪೇದೆ ಪತ್ನಿ ಪೊಲೀಸರ ಎದುರು ತಿಳಿಸಿ ದುಃಖಿತರಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಬೆಂಗಳೂರು : ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪಾಲಕರು ವಾಹನ ಚಲಾಯಿಸಲು ಅವಕಾಶ ಮಾಡಿಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ. ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ, ವಾಹನದ ಮಾಲೀಕರು ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಹೌದು ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ಕುಮಾರ್ ಈ ತೀರ್ಪು ನೀಡಿದ್ದಾರೆ. ಆ ಮೂಲಕ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಪುರಸ್ಕರಿಸಿದ್ದಾರೆ. 2014ರ ಆಗಸ್ಟ್ 11ರಂದು ತೀರ್ಪು ನೀಡಿದ್ದ ಟ್ರಿಬ್ಯೂನಲ್, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನೆಲೆಸಿರುವ ಮೃತರ ಕುಟುಂಬದ ಸದಸ್ಯರಾದ ಬೀಬಿ ನೈಸಾ ಮತ್ತು ಹಕ್ಕುದಾರರಿಗೆ ವಾರ್ಷಿಕ ಶೇ 8ರ ಬಡ್ಡಿಯೊಂದಿಗೆ 2.56 ಲಕ್ಷ ರೂ.ಗಳ ಪರಿಹಾರ ನೀಡುವಂತೆ ವಿಮಾ ಕಂಪನಿಗೆ ಆದೇಶ ನೀಡಿತ್ತು. ಮೃತರ ಕುಟುಂಬ ಸದಸ್ಯರಿಗೆ 2.56 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ವಿಮಾ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ರಸ್ಟ್ ನಡೆದು ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ಸೆಕ್ಯೂರಿಟಿ ಗಾರ್ಡ್ ವಿಷ್ಣು ಸ್ಪೋಟಕ ವಾದಂತಹ ಹೇಳಿಕೆ ನೀಡಿದ್ದು, ರೇಣುಕಾ ಸ್ವಾಮಿ ಕರೆದುಕೊಂಡು ಬಂದು ಥಳಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ಸ್ಪೋಟಕ ವಾದಂತ ಹೇಳಿಕೆ ನೀಡಿರುವ ಶೆಡ್ ಸೆಕ್ಯೂರಿಟಿ ಗಾರ್ಡ ವಿಷ್ಣು ರೇಣುಕಾ ಸ್ವಾಮಿಯನ್ನು ಇಲ್ಲಿಗೆ ಕರೆದುಕೊಂಡು ಥಳಿಸಿದ್ದರು. ರೇಣುಕಾಸ್ವಾಮಿ ಕರ್ಕೊಂಡು ಬಂದಾಗ ಗೇಟ್ ತೆಗೆದಿದ್ದು ನಾನೇ. ದರ್ಶನ್ ಸೇರಿ ಎಲ್ಲ ಆರೋಪಿಗಳು ಷಡ್ ಗೆ ಬಂದಿದ್ದರು. ಶೆಡ್ ನಲ್ಲಿರುವ ಕೊಠಡಿಗೆ ಕರೆದುಕೊಂಡು ರೇಣುಕಾ ಸ್ವಾಮಿಯನ್ನು ಕರೆದುಕೊಂಡು ಬಂದಿದ್ದರು ಎಂದು ಪಟ್ಟಣಗೆರೆ ಸೆಕ್ಯೂರಿಟಿ ಕಾರ್ಡ್ ವಿಷ್ಣು ಸ್ಪೋಟಕ ಮಾಹಿತಿ ನೀಡಿದ್ದಾನೆ. ಇದೀಗ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ಡಿಗೆ ಎಫ್ ಎಲ್ ತಂಡ ಮತ್ತೊಮ್ಮೆ ಭೇಟಿ ನೀಡಿದ್ದು ನಿನ್ನೆ ಕೂಡ ಎಫ್ ಎಸ್ ಎಲ್ ತಂಡ ಇಲ್ಲಿ ಭೇಟಿ ನೀಡಿ ಹಲವು…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು  ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾ ಸ್ವಾಮಿ ಕೊಲೆಯಾದ ಬಳಿಕ ಆದನಂತರ ದೇಹವನ್ನು ಶಿಫ್ಟ್ ಮಾಡಲು ನಟ ದರ್ಶನ್ ಆರೋಪಿ ಪ್ರದೋಷ್ ಗೆ 30 ಲಕ್ಷ ನೀಡಿದ್ದರು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಕೊಲೆಯ ಬಳಿಕ ಮೃತ ದೇಹ ರವಾನಿಸಲು ಪ್ರದೊಷ್ ಗೆ ದರ್ಶನ್ 30 ಲಕ್ಷ ನೀಡಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಹಣ ಕೊಟ್ಟಿದ್ದೇ, ಕೊಲೆ ಕೇಸ್ಗೆ ಸಿಕ್ಕ ಬಿಗ್ ಎವಿಡೆನ್ಸ್ ಎಂದು ಹೇಳಲಾಗುತ್ತಿದೆ. ಈಗ ನೀವು ಅರೆಸ್ಟ್ ಆಗಿ ಬೆಲ್ ಕೊಟ್ಟು ಬಿಡಿಸಿಕೊಳ್ಳುತ್ತೇನೆ. ಕೋರ್ಟ್ ಖರ್ಚು ಬೇಲ್ ಖರ್ಚು ಎಲ್ಲಾ ನೋಡಿಕೊಳ್ಳುತ್ತೇನೆ. ನಂತರ ಹಣವನ್ನು ನೀಡುತ್ತೇವೆ ಎಂದು ನಟ ದರ್ಶನ್ ಕೂಡ ಹೇಳಿದ್ದರು ಎಂದು ಹೇಳಲಾಗುತ್ತಿದೆ. ಈಗ ನಟ ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳನ್ನು ಸ್ಥಳ ಮಹಾಜರಿಗಾಗಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಆರ್ ಆರ್ ನಗರದ ಬಳಿ ಇರುವ ಶೆಡ್ಗೆ ಹಾಗೂ ರೇಣುಕಾ…

Read More

ಬೆಳಗಾವಿ : ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈಗ ಈ ಒಂದು ನೋಟಿಸ್ ಗೆ ಪ್ರತಿಕ್ರಿಯೆ ನೀಡಿದ, ಬಿಎಸ್ ಯಡಿಯೂರಪ್ಪ ನಾನು ದೆಹಲಿಗೆ ತೆರಳುತ್ತಿದ್ದೂ, ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮಕ್ಕೆ ದೆಹಲಿಗೆ ತೆರಳುತ್ತಿದ್ದೇನೆ. ಜೂನ್ 17 ರಂದು ವಿಚಾರಣೆಗೆ ಹಾಜರಾಗುತ್ತೇನೆಂದು. ಈ ಹಿಂದೆಯೂ ನಾನು ತನಿಖೆಗೆ ಹಾಜರಾಗಿ ಸಹಕರಿಸಿದ್ದೇನೆ.ಇಂದಿನ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ತಾವು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸ ಆಗಿದೆ. ಎಫ್ಐಆರ್ ದಾಖಲಾದ ನಂತರ…

Read More