Author: kannadanewsnow05

ಬೆಳಗಾವಿ : ಕಳೆದ ಕೆಲವು ತಿಂಗಳಿನ ಹಿಂದೆ  ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಬಾರಿ ಸದ್ದು ಮಾಡಿತ್ತು. ಇರಲ್ಲದೆ ಇತ್ತೀಚಿಗೆ ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ಬಳಿಕ ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ ಗೆಲ್ಲುತ್ತಿದ್ದಂತೆ ಪಾಕ್ ಘೋಷಣೆ ಕೂಗಲಾಗಿತ್ತು. ಇದೀಗ ಬೆಳಗಾವಿಯ ಜಿಲ್ಲಾ ಕೋರ್ಟ್ ದಲ್ಲಿ ವ್ಯಕ್ತಿಯೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲಾ ಕೋರ್ಟ್ ನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಬೆಳಗಾವಿ ಜಿಲ್ಲಾ ಕೋರ್ಟ್ ನಲ್ಲಿ ಪಾಕಿಸ್ತಾನ ಪರ ಘೋಷಣೆ ಹೋಗಿದ್ದಾನೆ. ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಂತೆ ಅಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರು ಆರೋಪಿ ಜಯೇಶ್ ಪೂಜಾರಿಗೆಧರ್ಮದೇಟು ನೀಡಿದ್ದಾರೆ.ಕೂಡಲೆ ಆರೋಪಿ ಜಯೇಶ್ ನನ್ನು ರಕ್ಷಿಸಿ ಪೊಲೀಸರು ಆತನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಆರೋಪಿ ಜಯೇಶ್ ಪೂಜಾರಿ ಪೂಜಾರಿ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಅಲೋಕ್ ಕುಮಾರ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿಗೂ ಜೀವ ಬೆದರಿಕೆ ಮಾಡಿದ್ದ ಎನ್ನಲಾಗುತ್ತಿದ್ದು, ಹಿಂಡಲಗಾ…

Read More

ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ರತ್ನಪ್ರಭಾ ನಟ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಮೇಲ್ನೋಟಕ್ಕೆ ಎಷ್ಟು ಶಬ್ದನಂತೆ ಕಾಣುತ್ತಾನೆ ಆದರೆ ಅಂತಹ ಕಂತ್ರಿ ಕೆಲಸ ಮಾಡಿದ್ದಾನೆ ಎಂದು ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ಆ ತರಹ ಒಂದು ತಪ್ಪು ಕೆಲಸ ಮಾಡಿದರೆ, ಕರೆದು ಬುದ್ಧಿ ಹೇಳಬೇಕಾಗಿತ್ತು, ಆದರೆ ಕೊಲೆ ಮಾಡುವಂಥದ್ದು ಏನಾಗಿತ್ತು? ನನ್ನ ಮಗ ಯಾವ ರೀತಿ ಕೊಲೆಯಾಗಿದ್ದಾನೋ ಅವರನ್ನು ಕೊಂದಂತಹ ಪಾಪಿಗಳಿಗೆ ಅದೇ ರೀತಿ ಶಿಕ್ಷೆ ಕೊಡಿ ಎಂದು ಕಿಡಿ ಕಾರಿದರು. ಮಗನನ್ನು ಕಳೆದುಕೊಂಡ ತಾಯಿ ಆಕ್ರೋಶ ಮುಗಿಲು ಮುಟ್ಟಿದ್ದು ದರ್ಶನ್‌ ಎಲ್ಲಾ ಫಿಲ್ಮ್ನ ಗಳನ್ನು ಬ್ಯಾಣ್‌ ಮಾಡಬೇಕು ಅತನನ್ನು ಚಿತ್ರರಂಗದಿಂದ ನಿಷೇಧಿಸಬೇಕು, ದರ್ಶನ್‌ ಮತ್ತು ಗ್ಯಾಂಗ್‌ ಕಠಿಣ ಶಿಕ್ಷೆಯಾಗಬೇಕು. ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಸಾಯಬೇಕು. ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಹಿಡಿಶಾಪ ಹಾಕಿದ್ದಾರೆ. ನನ್ನ ಸೊಸೆಗೆ ಅನ್ಯಾಯ…

Read More

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಂತ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆಯನ್ನು ಚುರುಕುಗೋಳಿಸಿದ್ದು, ಅಕ್ರಮ ಹಣ ವರ್ಗಾವಣೆಯಾಗಿದ್ದ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿಯನ್ನು ಹೈದರಾಬಾದ್​ನಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ. ಬಂಧಿತನನ್ನು ಸತ್ಯನಾರಾಯಣ ವರ್ಮ ಎಂದು ತಿಳಿದುಬಂದಿದ್ದು, ಆತನಿಂದ 16 ಕೆಜಿ ಚಿನ್ನ, 10 ಕೋಟಿ ರೂಪಾಯಿ ನಗದು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಬಹುಕೋಟಿ ರೂಪಾಯಿ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ SIT ಮತ್ತೊಂದು ಬೇಟೆಯಾಡಿದ್ದು, ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್​ಐಟಿ, ಆತನ ಪತ್ತೆಗೆ ಬಲೆ ಬೀಸಿತ್ತು. ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ,…

Read More

ಈ ಜಗತ್ತಿನಲ್ಲಿ ಜನಿಸಿದ ಪ್ರತಿಯೊಬ್ಬ ವ್ಯಕ್ತಿಯು ಅವನ ಜನ್ಮ ಸಮಯಕ್ಕೆ ಅನುಗುಣವಾಗಿ ಅವನ ರಾಶಿ ಮತ್ತು ನಕ್ಷತ್ರವನ್ನು ಹೊಂದಿದ್ದಾನೆ. ಈ ರಾಶಿ ನಕ್ಷತ್ರದ ಆಧಾರದ ಮೇಲೆ ಅನೇಕ ಜನರು ತಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಪರಿಹಾರಗಳನ್ನು ತೆಗೆದುಕೊಳ್ಳುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಯಾವ ರಾಶಿಚಕ್ರದವರು ಯಾವ ದೇವರಿಗೆ ಯಾವ ಹೂವುಗಳನ್ನು ಅರ್ಪಿಸುತ್ತಾರೆ ಮತ್ತು ಅವರು ಪೂಜಿಸಿದರೆ ಅವರ ಜೀವನವು ಸುಧಾರಿಸುತ್ತದೆ ಎಂಬುದನ್ನು ನಾವು ನೋಡಲಿದ್ದೇವೆ. ನಾವು ದೇವರನ್ನು ಪೂಜಿಸಿದರೆ ಆ ದೇವರಿಗೆ ಏನನ್ನಾದರೂ ಖರೀದಿಸಬೇಕು. ನಾವು ಖರೀದಿಸುವ ಪ್ರಮುಖ ವಸ್ತುಗಳಲ್ಲಿ ಹೂವುಗಳು ಒಂದು. ಒಂದೊಂದು ಬಗೆಯ ಹೂವುಗಳು ಒಂದೊಂದು ದೇವತೆಗಳಿಗೂ ವಿಶೇಷ. ಇದರಲ್ಲಿ ಒಬ್ಬರ ರಾಶಿಯ ಆಧಾರದ ಮೇಲೆ ಯಾವ ಹೂವುಗಳನ್ನು ಅರ್ಪಿಸಬೇಕೆಂದು ತಿಳಿದುಕೊಂಡು ಆ ಹೂವುಗಳನ್ನು ನಿರ್ದಿಷ್ಟ ದೇವತೆಗೆ ಪೂಜಿಸುವುದರಿಂದ ಅವರ ಜೀವನವು ಉತ್ತಮವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು…

Read More

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಇಂದು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ತಾವು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸ ಆಗಿದೆ. ಎಫ್ಐಆರ್ ದಾಖಲಾದ ನಂತರ ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ನಾನು ಹಾಜರಾಗಿದ್ದೆ ಎಂದು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಸಿಸಿದ್ದಾರೆ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಆರೋಪಿಗಳಾದ ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಕರೆದುಕೊಂಡು ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು ನಡೆಸುತ್ತಾರೆ ಎಂದು ತಿಳಿದುಬಂದಿದೆ. ಹೌದು ಇಂದು ನಟ ದರ್ಶನ್ ಅವರನ್ನು ಪೊಲೀಸರು ಕರೆದೋಯ್ದು ಸ್ಥಳ ಮಹಜರು ನಡೆಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಆರೋಪಿಗಳಿಂದ ಹೇಳಿಕೆಯನ್ನ ಪಡೆದಿದ್ದರು. ಇಂದು ಕೃತ್ಯ ಎಸಗಿರುವ ಸ್ಥಳದಲ್ಲಿ ಅವರನ್ನು ಕರೆದುಕೊಂಡು ಹೋಗಿ ಮಹಜರು ನಡೆಸಲಾಗುತ್ತದೆ. ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ನಲ್ಲಿ ಸ್ಥಳ ಮಹಜರು ನಡೆಸಲಾಗುತ್ತದೆ. ಕೊಲೆ ಕೇಸ್ ಸಂಬಂಧ ನಿನ್ನೆ ಎಫ್ ಎಸ್ ಎಲ್ ತಂಡ ಮತ್ತು ಸೋಕೋ ಟೀಮ್ ನಿಂದ ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ದರ್ಶನ್ ಪವಿತ್ರ ಗೌಡ ಸೇರಿ ಆರೋಪಿಗಳಿಂದ ಸ್ಥಳ ಮಹಜರು ನಡೆಸಲಾಗುತ್ತದೆ. ಅತಿಯಾದ ರೇಣುಕಾ ಸ್ವಾಮಿಯನ್ನು ಎಲ್ಲಿ ಕೊಲೆ ಮಾಡಿದರು ಯಾವ ವಸ್ತುಗಳಿಂದ ಹತ್ಯೆ ಮಾಡಿದ ಎಂಬುದರ ಕುರಿತು…

Read More

ಬೆಂಗಳೂರು : ನಟ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಒಂದು ಪ್ರಕರಣಕ್ಕೆ ಗೃಹ ಇಲಾಖೆಯ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಾನಾಗಲಿ, ದರ್ಶನ್ ಅಗಲಿ ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಆಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮ ಆಗುತ್ತದೆ. ನಾನಾಗಲಿ ದರ್ಶನಾಗಲಿ ಕಾನೂನು ಎಲ್ಲರಿಗೂ ಒಂದೇ. ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ಹೇಳಲಾಗುತ್ತಿದ್ದು ಅದಕ್ಕೆ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ಅವರನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಅದು ತಪ್ಪು. ಈಗಾಗಲೇ ಆತನ ಪ್ರಾಣ ಹೋಗಿದೆ ಯಾರು ಏನು ಮಾಡೋಕೆ ಆಗುವುದಿಲ್ಲ. ಆದರೆ ಕಾನೂನು ಪ್ರಕಾರ ಏನು ತೆಗೆದುಕೊಳ್ಳಬೇಕು ಪೋಲಿಸ್ ಇಲಾಖೆ ತೆಗೆದುಕೊಳ್ಳುತ್ತದೆ. ನನಗೆ ಗೊತ್ತಿದ್ದಂಗೆ ಯಾರು ದರ್ಶನ್ ನನ್ನು ರಕ್ಷಿಸಲು ಪ್ರಯತ್ನ…

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳು ಕೊಲೆ ಮಾಡುವ ಸಂದರ್ಭದಲ್ಲಿ ಬಳಸಿದ್ದ ಎರಡು ಕಾರುಗಳನ್ನು ಸೀಸ್ ಮಾಡಿದ್ದಾರೆ ಒಂದು ಜೀಪ್ ಹಾಗೂ ಇನ್ನೊಂದು ಸ್ಕಾರ್ಪಿಯೋ ಕಾರ್ ಎಂದು ಹೇಳಲಾಗುತ್ತಿದೆ. ಆದರೆ ಸ್ಕಾರ್ಪಿಯೋ ಕಾರಿನಲ್ಲಿ ಒಂದು ಲೇಡೀಸ್ ಬ್ಯಾಗ್ ಸಿಕ್ಕಿದ್ದು ಅದು ಪವಿತ್ರ ಗೌಡದ್ದೆಯ ಎಂದು ತನಿಖೆಯ ವೇಳೆ ಬಯಲಾಗಬೇಕಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆಗೆ ಬಳಸಿದ ಕಾರುಗಳು ಇದೀಗ ಸೀಸ್ ಮಾಡಲಾಗಿದೆ. ಒಂದು ಕಪ್ಪು ಬಣ್ಣದ ಸ್ಕಾರ್ಪಿಯೋ ಹಾಗೂ ಕೆಂಪು ಬಣ್ಣದ ಥಾರ್ ಜೀಪ್ ಕಾರುಗಳನ್ನು ಪೊಲೀಸರು ಇದೀಗ ಸೀಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾ ಸ್ವಾಮಿ ಮೃತದೇಹವನ್ನು ಇದೆ ಕಾರಿನಲ್ಲಿ ಶಿಫ್ಟ್ ಮಾಡಿದ್ದರು. ಜೀಪ್ ಮತ್ತು ಸ್ಕಾರ್ಪಿಯೋ ಕಾರನ್ನು ಇದೀಗ ಪೊಲೀಸರು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆಂಪು ಬಣ್ಣದ ಜೀಪ್ ನಲ್ಲಿ ಒಂದು ಮಧ್ಯದ ಬಾಟಲ್ ಕೂಡ ಪತ್ತೆಯಾಗಿದೆ. ಆರೋಪಿ ವಿನಯ್, ಪ್ರದೋಷ್ ಹೆಸರಿನಲ್ಲಿ ಈ ಕಾರುಗಳು ನೋಂದಣಿಯಾಗಿವೆ…

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಕಸ್ಟರ್ಡಿಯಲ್ಲಿರುವ ನಟಿ ಪವಿತ್ರ ಗೌಡ ನಟ ದರ್ಶನ್ ಸೇರಿ 13 ಆರೋಪಿಗಳನ್ನು ಪೊಲೀಸರು ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಇತ್ತ ನಟಿ ಪವಿತ್ರ ಗೌಡ ಅತ್ತ ಅವರ ಮನೆಗೆ ಬೀಗ ಹಾಕಲಾಗಿದೆ ಮನೆಯಲ್ಲಿ ಸದ್ಯ ಯಾವುದೇ ಸದಸ್ಯರು ಇಲ್ಲ ಎಂದು ಹೇಳಲಾಗುತ್ತಿದ್ದು ಅರೆಸ್ಟ್ ಆದ ಬೆನ್ನಲ್ಲೇ ಮನೆಯಲ್ಲಿದ್ದ ಸದಸ್ಯರು ಮನೆಗೆ ಬೀಗ ಹಾಕಿ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಆರ್ ಆರ್ ನಗರದಲ್ಲಿರುವ ಪವಿತ್ರ ಗೌಡ ಮನೆಯಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಹಾಗೂ ತನಿಖೆಗೆ ಯಾವುದೇ ಸಮಸ್ಯೆ ಆಗಬಾರದು ಎಂದು ಪೋಲಿಸ್ ನಿಯೋಜನೆ ಮಾಡಲಾಗಿದೆ. ಮನೆಯ ಬಳಿ ಆರ್ ಆರ್ ನಗರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ಪವಿತ್ರ ಗೌಡ ಅರೆಸ್ಟ್ ಆದ ಬಳಿಕ ಇದೀಗ ಮನೆಗೆ ಬೀಗ ಹಾಕಲಾಗಿದೆ ಮನೆಯಲ್ಲಿ ಯಾರು ಸದ್ಯಕ್ಕೆ ಇಲ್ಲ ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹದಿಮೂರು ಆರೋಪಿಗಳು ಇದೀಗ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇತ್ತ ಇನ್ಸ್ಟಾಗ್ರಾಮ್ ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನ್ ಫಾಲೋ ಮಾಡಿದ್ದೂ ಅಲ್ಲದೆ ದರ್ಶನ್ ಜೊತೆಗಿದ್ದ ಡಿಪಿಯನ್ನು ಕೂಡ ತೆಗೆದಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಫೋನ್ನಲ್ಲಿ ಪತ್ನಿಗೆ ಕರೆ ಮಾಡಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನಟ ದರ್ಶನ್ ವಿಜಯಲಕ್ಷ್ಮಿಗೆ ತಿಳಿಸಿದರು. ಇದರ ಬೆನ್ನಲ್ಲೇ ಇದೀಗ ವಿಜಯಲಕ್ಷ್ಮಿ ದರ್ಶನ್ ಅವರನ್ನು ಅನ್ ಫಾಲೋ ಮಾಡಿ ಅವರ ಜೊತೆಗಿದ್ದ ಡಿಪಿ ಕೂಡ ತೆಗೆದಿದ್ದಾರೆ. ಈ ಒಂದು ಘಟನೆಯಿಂದ ದರ್ಶನ್ ಮತ್ತು ಪತ್ನಿ ವಿಜಯ್ ಲಕ್ಷ್ಮಿ ದಾಂಪತ್ಯದಲ್ಲಿ ಮತ್ತೆ ಬಿರುಕು ಮೂಡುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

Read More