Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣದಲ್ಲಿ ಸದ್ಯ ನಟಿ ರನ್ಯಾರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಡಿ ಆರ್ ಐ ಅಧಿಕಾರಿಗಳು ನಟಿ ರನ್ಯಾರಾವ್ ಅವರ ಪತಿ ಜತಿನ್ ಹುಕ್ಕೇರಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಜತಿನ್ ಹುಕ್ಕೇರಿ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಜತಿನ್ ಹುಕ್ಕೇರಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಹಾಗಾಗಿ ಜತಿನ್ ಹುಕ್ಕೇರಿಗೆ ಸದ್ಯಕ್ಕೆ ಈ ಒಂದು ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೇ ಇತ್ತೀಚಿಗೆ ನಟಿ ರನ್ಯಾ ರಾವ್ ದುಬೈಗೆ ತೆರಳಲು ಪತಿ ಜತಿನ್ ಹುಕ್ಕೇರಿ ಕ್ರೆಡಿಟ್ ಕಾರ್ಡ್ ಬಳಸಿ ಟಿಕೆಟ್ ಬುಕ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿರುವ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿರುವ ಜತಿನ್ ನಿವಾಸ ಪ್ರೆಸ್ಟೀಜ್ ಅಕ್ರಾಪೊಲಿಸ್ ಅಪಾರ್ಟ್ ಮೆಂಟ್ ನಿವಾಸದ…
ಕೋಲಾರ : ಕೋಲಾರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕ್ರಶರ್ನಲ್ಲಿ ಬಂಡೆ ಒಡೆಯಲು ಸ್ಫೋಟಿಸುವ ವೇಳೆ ಕಲ್ಲು ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ಮಾಲೂರು ತಾಲೂಕಿನ ಮಾಕಾರಹಳ್ಳಿ ಬಳಿ ನಡೆದಿದೆ. ಮೃತ ಕಾರ್ಮಿಕನನ್ನು ಆಂಧ್ರಪ್ರದೇಶ ಮೂಲದ ವೆಂಕಟೇಶ್ (60) ಎಂದು ತಿಳಿದುಬಂದಿದೆ. ಇನ್ನು ಇದೆ ಘಟನೆಯಲ್ಲಿ ಹರೀಶ್ ಮತ್ತು ಈಶ್ವರ್ ಎಂಬುವರಿಗೆ ಗಾಯಗಳಾಗಿವೆ. ಬಂಡೆಯನ್ನು ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಕಲ್ಲು ಬಂಡೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಈಗಾಗಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಪವರ್ ಶೇರಿಂಗ್ ಕುರಿತು ಕಾಂಗ್ರೆಸ್ ನಾಯಕರು ಹಲವಾರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಮಧ್ಯ ಆಗಾಗ ದಲಿತ ಸಿಎಂ ಕೂಗು ಕೂಡ ಕೇಳಿ ಬರುತ್ತದೆ. ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಜಾತ್ರೆಯಲ್ಲಿ ಬಾಳೆಹಣ್ಣಿನ ಮೇಲೆ ನೆಕ್ಸ್ಟ್ ಸಿಎಂ ಸತೀಶ್ ಜಾರಕಿಹೊಳಿ ಎಂದು ಬರೆದು ರಥೋತ್ಸವಕ್ಕೆ ಎಸೆದು ಘೋಷಣೆ ಕೂಗಿದ್ದಾರೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಜಾತ್ರೆಯಲ್ಲಿ ಅಭಿಮಾನಿಗಳಿಂದ ಸತೀಶ್ ಜಾರಕಿಹೊಳಿ ನೆಕ್ಸ್ಟ್ ಸಿಎಂ ಎಂದು ಘೋಷಣೆ ಕೂಗಲಾಯಿತು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋ ಪ್ರದರ್ಶಿಸಿ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಅಲ್ಲದೆ ಬಾಳೆಹಣ್ಣಿನ ಮೇಲೆ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಬರೆದು ರಥದ ಮೇಲೆ ಬಾಳೆಹಣ್ಣು ಎಸೆದಿದ್ದಾರೆಸಚಿವ ಸತೀಶ್ ಬೆಂಬಲಿಗರು. ಸ್ವೀಟ್ ಕಾರ್ನ್ ಗಾಡಿಗೆ ಬೆಂಕಿ ಇದೇ ಒಂದು ನಾಯಕನಹಟ್ಟಿ ಜಾತ್ರೆಯಲ್ಲಿ ರಥೋತ್ಸವದ ವೇಳೆ ಏಕಾಏಕಿ ಸ್ವೀಟ್ ಕಾರ್ನ್…
ಬೆಂಗಳೂರು : ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗುತ್ತೇನೆ ಅದಕ್ಕೆ ಸ್ವಲ್ಪ ಕಾಯಿರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಇದೀಗ ಈ ಒಂದು ಹೇಳಿಕೆ ಭಾರಿ ಸಂಚಲನ ಮೂಡಿಸಿದ್ದು ಪವರ್ ಶೇರಿಂಗ್ ಕುರಿತು ಡಿಕೆ ಶಿವಕುಮಾರ್ ಸುಳಿವು ನೀಡಿದ್ರಾ ಎನ್ನುವ ಕುತೂಹಲ ಮೂಡಿಸಿದೆ. ಹೌದು ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾರೂ ಬೇಕಾದರೂ ಕೆಪಿಸಿಸಿ ಜವಾಬ್ದಾರಿ ತೆಗೆದುಕೊಳ್ಳಬಹುದು ಎಂದು ಹೇಳುವ ಮೂಲಕ ಪವರ್ ಶೇರ್ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ. ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲಾ ಮಟ್ಟದಲ್ಲಿ ಎರಡು ಹುದ್ದೆಗಳ ಬಗ್ಗೆ ಪ್ರಸ್ತಾಪ ಮಾಡಿದರು. ಆಗ ಅಲ್ಲಿಯೇ ಇದ್ದ ಡಿಕೆಶಿ ತಕ್ಷಣವೇ, ನೋಡ್ರಪ್ಪ, ಸಮಯ, ಸಂದರ್ಭ ನೋಡಿಕೊಂಡು ನಮ್ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಕೆಪಿಸಿಸಿ…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಯಕನಹಟ್ಟಿ ರಥೋತ್ಸವದ ವೇಳೆ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ತಗುಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಆದರೆ ಸ್ಥಳೀಯ ಸೇವಾ ಕಾರ್ಯಕರ್ತರ ಸಭೆ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ. ಹೌದು ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ನಾಯಕನಹಟ್ಟಿ ರಥೋತ್ಸವದ ವೇಳೆ ಈ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಸ್ವೀಟ್ ಕಾರ್ನ್ ಗಾಡಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಜಾತ್ರೆಗೆಂದು ಸೇರಿದ ಭಕ್ತರು ದಿಕ್ಕಾಪಾಲಾಗಿ ಓಡಿ ಹೋಗಿ ಪ್ರಣ ಉಳಿಸಿಕೊಂಡಿದ್ದಾರೆ. ಈ ವೇಳೆ ಜಾತ್ರೆಯಲ್ಲಿನ ಸೇವಾ ಕಾರ್ಯಕರ್ತರು ತಕ್ಷಣ ಕಾರ್ಯ ಪ್ರವೃತ್ತರಾಗಿ ಸ್ವೀಟ್ ಕಾರ್ನ್ ಗಾಡಿಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಸೇವಾ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಘಟನೆ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಮೃತ ಬಾಲಕ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ ಕಾಗೆಪುರದಲ್ಲಿ ಈ ಒಂದು ಘಟನೆ ನಡೆದಿತ್ತು. ಗೋಕುಲ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಲಂಕೇಶ್, ಊಟ ಸಪ್ಲೈ ಮಾಡುತ್ತಿದ್ದ ಹೋಟೆಲ್ ಮಾಲೀಕ ಸಿದ್ದರಾಜು, ಮದನ್ ಕಲ್ಯಾಣ ಮಂಟಪದ ಮ್ಯಾನೇಜರ್ ಕೃಷ್ಣ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ ಮೂರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮಳವಳ್ಳಿಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ವೃದ್ಧ ಅತ್ತೆ ಮಾವನ ಮೇಲೆ ಹಲ್ಲೆ ನಡೆಸಿದ್ದ ವೈದ್ಯೆಗೆ ಇದೀಗ ಶೋಕಾಶ್ ನೋಟಿಸ್ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್ ಮೇರೆಗೆ ಕಾರಣ ಕೇಳಿ ಇದೀಗ ನೋಟಿಸ್ ನೀಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ಡಿಎಂಇ ಡಾ. ಸುಜಾತ ರಾಥೋಡ್ ಅವರಿಂದ ವೈದ್ಯೆ ಪ್ರಿಯದರ್ಶಿನಿಗೆ ನೋಟಿಸ್ ನೀಡಲಾಗಿದೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿಸೆ. ಹೌದು ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.…
ಮಂಗಳೂರು : ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಒಬ್ಬ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧಿನ ಕೈದಿಯನ್ನು ಪ್ರಕಾಶ್ ಮೂಲ್ಯ (48) ಎಂದು ತಿಳಿದುಬದಿದೆ. ಜೈಲಿನ ಶೌಚಾಲಯದಲ್ಲಿ ನೇಣಿಗೆ ಶರಣಾಗಿರುವ ಪ್ರಕಾಶ್ ಮೂಲ್ಯ ಮದ್ಯದ ವ್ಯಸನಿಯಾಗಿದ್ದ. ಪ್ರಕಾಶ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್ ನಲ್ಲಿ ಜೈಲು ಸೇರಿದ್ದ. 12 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಪ್ರಕಾಶ್ ಅತ್ಯಾಚಾರ ಎಸಗಿದ್ದ. ಮೂಡಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು. ಬೀಗ ಶೌಚಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಚಾಮರಾಜನಗರ : ಇತ್ತೀಚಿಗೆ ಪತ್ನಿಯರ ಕಾಟಕ್ಕೆ ಗಂಡಂದಿರು ತಮ್ಮ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚಾಮರಾಜನಗರದಲ್ಲಿ ಅಂತದ್ದೇ ಘಟನೆ ವರದಿಯಾಗಿದ್ದು, ತಲೆಯಲ್ಲಿ ಕೂದಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಪತಿಯನ್ನು ಹೀಯಾಳಿಸಿ ಕಿರುಕುಳ ನೀಡಿದ್ದಾಳೆ ಇದರಿಂದ ಮನನೊಂದು ಪ್ರತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹೌದು ಗಂಡನ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದಾಳೆ. ಇದರಿಂದ ಮನನೊಂದು ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಈ ಒಂದು ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪರಶಿವಮೂರ್ತಿ (30) ಎಂದು ತಿಳಿದು ಬಂದಿದೆ.ಎರಡು ವರ್ಷದ ಹಿಂದೆ ಕಳಕಿಪುರದ ಮಮತಾ ಜೊತೆಗೆ ಮದುವೆ ಆಗಿತ್ತು. ಮದುವೆ ಹಳಿಕ ಪರಶಿವಮೂರ್ತಿ ತಲೆಕೂದಲು ಉದುರಿತ್ತು. ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ ಎಲ್ಲರೂ ಅಪಹಾಸ್ಯ ಮಾಡುತ್ತಾರೆ ನನ್ನ ಗಂಡ ಎಂದು ಹೇಳೋಕೆ ಮುಜುಗರ ಆಗುತ್ತದೆ ಎಂದು ಕಿರುಕುಳ ನೀಡಿದ್ದಳು. ಇದೀಗ ಪರಶಿವಮೂರ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೂ ಮೊದಲು…
ವಿಜಯಪುರ : ಸಿದ್ದರಾಮಯ್ಯ ಇರುವವರೆಗೂ ನಮ್ಮನ್ನು ಯಾರಿಂದಲೂ ಏನೂ ಮಾಡಲಾಗದು ಎಂಬ ಧೈರ್ಯ ಮುಸ್ಲಿಮರಿಗೆ ಬಂದಿದೆ. ಇದನ್ನೆಲ್ಲ ವಿರೋಧಿಸಿ ಹೋರಾಟ ಮಾಡುವಲ್ಲಿ ಬಿಜೆಪಿಯೂ ವಿಫಲವಾಗಿದೆ. ಈ ಮೊದಲೇ ಸರಿಯಾಗಿ ಹೋರಾಟ ಮಾಡಿಕೊಂಡು ಬಂದಿದ್ದರೆ ಇದೆಲ್ಲಾ ಹೇಗೆ ಆಗುತ್ತಿತ್ತು. ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರ ಅಡ್ಜೆಸ್ಟ್ಮೆಂಟ್ ಗಿರಾಕಿ ಎಂದು ಶಾಸಕ ಬಸನಗೌಡ ಪಾಟೀಲ್ ವಾಗ್ದಾಳಿ ನಡೆಸಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ನಮ್ಮವರು ಕೂಡ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಹಿಂದೆ ಕೆಜೆ ಹಳ್ಳಿ ಡಿಜೆ ಹಳ್ಳಿ, ಹುಬ್ಬಳ್ಳಿ ಗಲಾಟೆಗಳ ಸಂದರ್ಭಗಳಲ್ಲಿ ನಾಲ್ಕಾರು ಎನ್ಕೌಂಟತರ್ ಮಾಡಿದ್ದರೆ ಸರಿಯಾಗಿರುತ್ತಿತ್ತು. ಇಂತಹ ಘಟನೆಗಳಲ್ಲಿ ನಮ್ಮವರು ದೊಡ್ಡದೇನೂ ಮಾಡಿಲ್ಲ. ನಮ್ಮವರು ಮಾಡಿದ ತಪ್ಪಿನಿಂದಲೇ ಹಿಂದೂ ಜನರು ಬೇಜಾರಾದರು. ಹಾಗಾಗಿ ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. 136 ಸ್ಥಾನಗಳು ಬರಲು ನಮ್ಮ ಮೇಲಿನ ಹಿಂದುಗಳ ಬೇಸರವೇ ಪ್ರಮುಖ ಕಾರಣ ಎಂದರು. ಸಾಮಾನ್ಯ ಶಿಕ್ಷಣ ಕಾಯ್ದೆ ಮದರಸಾಗಳಿಗೆ ಅನ್ವಯವಾಗಬೇಕು. ಅಲ್ಲಿ ರಾಷ್ಟ್ರಗೀತೆ ಹಾಡಿ ಗಣಿತ, ವಿಜ್ಞಾನ. ಸಮಾಜದಂತಹ ವಿಷಯಗಳ ಬೋಧನೆ ಆಗಬೇಕು. ಮದರಸಾಗಳಲ್ಲಿ…