Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ತಕ್ಷಣ ಅವರು ಬೆಂಗಳೂರಿನ ನೆಲಮಂಗಲದಲ್ಲಿ ಇರುವಂತಹ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸರಳ ನಟ ಎಂದೇ ಖ್ಯಾತರಾದ ವಿನೋದ್ ರಾಜ್ ಅವರಿಗೆ ಅನಾರೋಗ್ಯದಿಂದ ನೆಲಮಂಗಲದಲ್ಲಿರುವ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಚಿಕಿತ್ಸೆ ಮೇಲೆ ಕರುಳಿನ ಸಮಸ್ಯೆ ಎಂದು ತಿಳಿದು ಬಂದಿದೆ. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಸದ್ಯ ವಿನೋದ್ ರಾಜ್ ಅವರಿಗೆ ಕರುಳಿನ ಆಪರೇಷನ್ ಮಾಡಲಾಗಿದೆ. ಕಳೆದ ಕೆಲವು ತಿಂಗಳಿನ ಹಿಂದೆ ತಾಯಿ ಲೀಲಾವತಿ ಅವರನ್ನು ಕಳೆದುಕೊಂಡಿದ್ದ ನಟ ವಿನೋದ ರಾಜ್, ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಾಯಿ ಲೀಲಾವತಿಯ ಹೆಮ್ಮೆಯ ಪುತ್ರರಾಗಿದ್ದಾರೆ. ಇದೀಗ ಅವರಿಗೆ ಕರುಳಿನ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರು : ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳು ಹೀಗೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನೆನ್ನೆ ಬೆಂಗಳೂರಿನ ಮೇಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ಈ ವೇಳೆ ಕೋರ್ಟ್ ನಿಂದ ಅನ್ನಪೂರ್ಣೇಶ್ವರಿ ಠಾಣೆಗೆ ಕರೆ ತಂದ ಪೊಲೀಸ್ ಸಿಬ್ಬಂದಿ ಅವರಿಗೆ ದೊನ್ನೆ ಬಿರಿಯಾನಿ, ತಿಂಡಿ ಕಾಫಿ ನೀಡಿ ರಾಜ್ಯಾತಿಥ್ಯ ನೀಡಿದ್ದಾರೆ.ಹೌದು ರೇಣುಕಾ ಸ್ವಾಮಿ ಎಂಬುವವರನ್ನು ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್, ವಿ. ವಿನಯ್, ಎಸ್. ಪ್ರದೋಶ್, ಎಂ. ಲಕ್ಷ್ಮಣ್, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಿನ್ನೆ ರಾತ್ರಿ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್ಗಳನ್ನು ತರಿಸಲಾಗಿದೆ. ಆದರೆ ರಾತ್ರಿ ಕೂಡ ಊಟ ಮಾಡದ ನಟ ದರ್ಶನ್ ಹಾಗೂ ಸಹಚರರು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 13 ಆರೋಪಿಗಳನ್ನು ಬಂಧಿಸಿದ್ದು ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 13 ಆರೋಪಿಗಳು ಅಷ್ಟೇ ಅಲ್ಲ ಇದರ ಮೇಲೆ ನಾಲ್ವರು ಆರೋಪಿಗಳು ಕೂಡ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಕೊಲೆ ಆರೋಪಿಗಳ ಸಂಖ್ಯೆ 13 ರಿಂದ 17ಕ್ಕೆ ಏರಿಕೆ ಕಂಡಿದೆ. ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಈಗಾಗಲೇ 13 ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಹತ್ಯೆ ಪ್ರಕರಣದ ನಾಲ್ವರು ಇದೀಗ ಆರೋಪಿಗಳು ನಾಪತ್ತೆಯಾಗಿದ್ದಾರೆಎಂದು ತಿಳಿದು ಬಂದಿದ್ದು, ನಾಪತ್ತೆಯಾಗಿರುವವರಿಗಾಗಿ ಪೊಲೀಸರಿಂದ ಇದೀಗ ಶೋಧ ಕಾರ್ಯ ಆರಂಭವಾಗಿದೆ. ನಟ ದರ್ಶನ್ ಗೆ ಈ ನಾಲ್ವರು ಆಪ್ತರು ಆಗಿದ್ದರು ಎಂದು ತಿಳಿದುಬಂದಿದೆ. ಹೌದು ಈಗಾಗಲೇ ರೇಣುಕಾ ಸ್ವಾಮಿ ಎಂಬುವವರನ್ನು ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್, ವಿ. ವಿನಯ್, ಎಸ್. ಪ್ರದೋಶ್, ಎಂ. ಲಕ್ಷ್ಮಣ್, ಆರ್. ನಾಗರಾಜು, ಕೆ. ಪವನ್ ಮುಂತಾದವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದೀಗ…
ಮೈಸೂರು : ಆಕೆಯ ಗಂಡ ತೀರಿ ಹೋಗಿ ಇನ್ನೂ ಒಂದು ತಿಂಗಳು ಕೂಡ ಕಳೆದಿರಲಿಲ್ಲ. ಆಗಲೇ ವಿವಾಹಿತ ಮಹಿಳೆಯೊಂದಿಗೆ ಆ ವ್ಯಕ್ತಿಯ ಪರಿಚಯವಾಗಿ, ಪರಿಚಯ ಸಲುಗೆಗೆ ಮುಂದುವರೆದಿದೆ. ಈ ವೇಳೆ ವಿವಾಹಿತ ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಅಕ್ಕ ತಮ್ಮ ಇಬ್ಬರು ಸೇರಿ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಹೌದು ಹೆಚ್.ಡಿ.ಕೋಟೆ ತಾಲೂಕಿನ ಸಿದ್ದಯ್ಯನಹುಂಡಿ ನಿವಾಸಿ ರಾಜೇಶ್(32) ಕೊಲೆ ಆದ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಕೊಳೆ ಮಾಡಿದವರನ್ನು ಪ್ರೇಮಾ ಹಾಗೂ ಆಕೆ ಸಹೋದರ ಶಿವು ಎಂದು ಹೇಳಲಾಗುತ್ತಿದೆ.15 ವರ್ಷದ ಹಿಂದೆ ಪ್ರೇಮಾಗೆ ಮದುವೆ ಆಗಿತ್ತು. ಮೈಸೂರಿನ ಕ್ಯಾತಮಾರನಹಳ್ಳಿಯ ನಿವಾಸಿಯಾಗಿರುವ ಪ್ರೇಮಾ ನಂಜನಗೂಡಿನ ಶ್ರೀರಾಂಪುರ ನಿವಾಸಿ ಜೊತೆ ಮದುವೆ ಮಾಡಿಕೊಂಡಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವೇಳೆ ಪ್ರೇಮಾ ಪತಿಯ ಸ್ನೇಹಿತ ರಾಜೇಶ್ ಪರಿಚಯ ಆಗಿತ್ತು. ಪರಿಚಯ ಮುಂದೆ ಸಲುಗೆಯಾಗಿ ಇಬ್ಬರು ಬಹಳ ಆತ್ಮೀಯವಾಗಿದ್ದರು. ಅದಾದ ಬಳಿಕ…
ಬೆಂಗಳೂರು : ನಟ ದರ್ಶನ್ ಹಾಗೂ ಅವರ ಗ್ಯಾಂಗ್ ನಿಂದ ಅಭಿಮಾನಿಯಾದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A1 ಆರೋಪಿ ಆಗಿರುವ ನಟಿ ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಹೌದು ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಗೆ ಒಳಗಾದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯಾಗಿರುವ ನಟಿ ಪವಿತ್ರ ಗೌಡಳನ್ನು ಇದೀಗ ನಿಮ್ಹಾನ್ಸ್ ಆಸ್ಪತ್ರೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಇತ್ತ ನಾಳೆ ಬೆಳಿಗ್ಗೆ ನಟ ದರ್ಶನ್ ಹಾಗೂ ಗ್ಯಾಂಗ್ ಅನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಪ್ರಾಥಮಿಕ ಹಂತದ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಿಗೆ ಬಿರಿಯಾನಿ ತರಿಸಿದ ಪೊಲೀಸರು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದರ್ಶನ್ ಮತ್ತು ಗ್ಯಾಂಗ್ ಇದ್ದು, ರೇಣುಕಾ ಸ್ವಾಮಿ ಹತ್ಯೆ ಕೇಸ್ ಆರೋಪಿಗಳಿಗೆ ಪೊಲೀಸ್ರಿಂದ ಬಿರಿಯಾನಿ ನೀಡಲಾಗಿದೆ. ಆರೋಪಿಗಳಿಗೆ ಪೊಲೀಸ್…
ಚಿತ್ರದುರ್ಗ : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಸಹಚರರು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರೇಣುಕಾ ಸ್ವಾಮಿ ಹೆಂಡತಿ ನಾಳೆ ನನಗೆ ಹುಟ್ಟೋ ಮಗ ಅಪ್ಪ ಎಲ್ಲಿ ಅಂತ ಕೇಳಿದರೆ ಏನು ಹೇಳಬೇಕು ಎಂದು ಕಣ್ಣೀರು ಹಾಕಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾ ಸ್ವಾಮಿ ಪತ್ನಿ ನಮಗೆ ಮದುವೆಯಾಗಿ ಒಂದು ವರ್ಷವಾಗಿದೆ. ಈಗ ನಾನು ತಾಯಿ ಆಗ್ತಿದ್ದೀನಿ. ನಂಗೆ ಮುಂದೆ ಹುಟ್ಟೋ ಮಗು ಅಪ್ಪ ಎಲ್ಲಿ ಎಂದು ಕೇಳಿದರೆ ಏನು ಹೇಳಬೇಕು? ಮೊನ್ನೆ ನನಗೆ ಕರೆ ಮಾಡಿ ಮಾತನಾಡಿದ್ದೇ ಕೊನೆ ಆಗೋಯ್ತು. ನನ್ನ ಮತ್ತು ನನ್ನ ಮುಂದಿನ ಜೀವನ ಹೇಗೆ ಮಾಡೋದು? ನೀವೇ ನ್ಯಾಯಾಲಯ ಕೊಡಿಸಿ ಎಂದು ರೇಣುಕಾಸ್ವಾಮಿ ಪತ್ನಿ ಸುಶೀಲ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ನಾನು ಗೃಹಿಣಿ ಇದಿನಿ ಹೀಗೆ ಆಗಬಾರದಿತ್ತು. ಮದುವೆಯಾಗಿ ಒಂದು ವರ್ಷ ಆಗಿದೆ. ತಾಯಿ…
ವಿಜಯಪುರ : ನ್ಯಾಯಾಲಯದ ಸಂಕೀರ್ಣದ ಮುಂದೆಯೇ ಅಪರಿಚಿತ ವ್ಯಕ್ತಿಯ ಮೇಲೆ ನಾಲ್ವರು ದುಷ್ಕರ್ಮಿಗಳು ರಾಡ್ ನಿಂದ ತಲೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಸಾರ್ವಜನಿಕರು, ಹಾಗೂ ವಕೀಲರು ಸೇರಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆಸಿ ನಾಲ್ವರು ಇದೀಗ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.ಘಟನೆ ಕುರಿತಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಿತ್ರದುರ್ಗ: ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ದರ್ಶನ ಹಾಗೂ ಆತನ ಸಹಚರರು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಮೃತ ರೇಣುಕಾ ಸ್ವಾಮಿ ಸಂಬಂಧಿಕರು ಈ ಒಂದು ಪ್ರಕರಣದ ತನಿಖೆಯನ್ನು ಸಿವಿಐಗೆ ವಹಿಸಿ ಎಂದು ಆಗ್ರಹಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ಚಿಕ್ಕಪ್ಪ ರೇಣುಕಾಸ್ವಾಮಿ ಕೊಲೆ ಕೇಸ್ ಅನ್ನು ಸಿಬಿಐಗೆ ವಹಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸುವುದರಿಂದ ನ್ಯಾಯ ಸಿಗುವ ಭರವಸೆ ಇದೆ. ಪ್ರಕರಣದಲ್ಲಿ ಯಾರೇ ಇದ್ದರೂ ತಕ್ಕ ಶಿಕ್ಷೆ ಆಗಲೇಬೇಕು ಎಂದು ರೇಣುಕಾಸ್ವಾಮಿ ಅವರ ಚಿಕ್ಕಪ್ಪ ಷಡಕ್ಷರಯ್ಯ ಒತ್ತಾಯಿಸಿದ್ದಾರೆ. ಈ ತಿಂಗಳು 26ಕ್ಕೆ ರೇಣುಕಾಸ್ವಾಮಿಗೆ ಮದುವೆಯಾಗಿ ಒಂದು ವರ್ಷ. ಪತ್ನಿ ಮೂರು ತಿಂಗಳ ಗರ್ಭಿಣಿ. ಯಾವುದೇ ಕುಟುಂಬಕ್ಕೂ ಈ ರೀತಿ ಅನ್ಯಾಯ ಆಗಬಾರದು. ಎಷ್ಟೇ ಪ್ರಭಾವಿ ಇದ್ದರೂ ತಕ್ಕ ಶಿಕ್ಷೆಯಾಗಲಿ. ಪೊಲೀಸರು ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ನಟಿ ಪವಿತ್ರ ಗೌಡ ಶ್ರೀದಂತೆ 13…
ಬೆಂಗಳೂರು : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ನಟ ದರ್ಶನ್, ನಟಿ ಪವಿತ್ರ ಗೌಡ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ ಆದೇಶ ಬಂದ ತಕ್ಷಣ ನಟ ದರ್ಶನ್ ಪವಿತ್ರ ಗೌಡ ಹಾಗೂ 13 ಆರೋಪಿಗಳನ್ನು ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ಹೋಗುವಾಗ ದರ್ಶನ್ ಪವಿತ್ರ ಗೌಡ ಹಾಗೂ ಎಲ್ಲಾ 13 ಆರೋಪಿಗಳು ಮುಖ ಮುಚ್ಚಿಕೊಂಡಿರುವ ಘಟನೆ ನಡೆಯಿತು. ಈ ಒಂದು ಪ್ರಕರಣದಲ್ಲಿ ನಟಿ ಪವಿತ್ರ ಗೌಡ ಎ1 ಆರೋಪಿಯಾಗಿದ್ದು, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇನ್ನು ದರ್ಶನ ಸಹಚರರು ಕೂಡ ಈ ಒಂದು ಕೊಲೆಯಲ್ಲಿ…
ಚಿತ್ರದುರ್ಗ : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಆತನ ಆಪ್ತರು ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಚಿತ್ರದುರ್ಗದಲ್ಲಿ ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿವೆ. ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದ್ದು, ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ. ರೇಣುಕಾ ಸ್ವಾಮಿ ಹತ್ಯೆಯನ್ನು ಈಗಾಗಲೇ ಜಿಲ್ಲಾ ವೀರಶೈವ ಸಮಾಜ ಖಂಡಿಸಿದ್ದು, ನಾಳೆ ಜಿಲ್ಲೆಯ ಪ್ರಮುಖ ವೀರಶೈವ ನೇತಾರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಮೃತ ರೇಣುಕಾಸ್ವಾಮಿ ಮೂಲತಃ ಚಿತ್ರದುರ್ಗದವರು. ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಅಪಾರವಾದಂತಹ ಬಂಧು ಬಳಗ ಹಾಗೂ ಸ್ನೇಹಿತರನ್ನು ಹೊಂದಿದ್ದಾರೆ. ಅವರು ಅಲ್ಲೇ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಕಳೆದ ವರ್ಷ ಅಷ್ಟೇ ಅವರ ಮದುವೆಯಾಗಿದ್ದು ಇದೀಗ ರೇಣುಕಾಸ್ವಾಮಿ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದಾರೆ. ಈಗ ಕುಟುಂಬದಲ್ಲಿ…












