Author: kannadanewsnow05

ಬೆಂಗಳೂರು : ಬೆಂಗಳೂರು ನಗರಕ್ಕೆ ಹೊಸ ರೂಪ ತರಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹಲವು ತೀರ್ಮಾನಗಳನ್ನು ಬಿಬಿಎಂಪಿ ಸಭೆಯಲ್ಲಿ ಡಿಕೆ ಶಿವಕುಮಾರ್‌ ಕೈಗೊಂಡಿದ್ದಾರೆ. ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್‌ ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಸೋಮವಾರ ವಿಕಾಸಸೌಧದಲ್ಲಿಸಭೆ ನಡೆಸಿ ಸಲಹೆ, ಸೂಚನೆಗಳನ್ನು ಪಡೆದರು. ನಗರದ ಕೆಲ ಬಡಾವಣೆಗಳು ಯೋಜಿತವಾಗಿ ನಿರ್ಮಾಣಗೊಂಡಿದ್ದು, ಉಳಿದ ಪ್ರದೇಶಗಳು ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ, ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿವೆ. 2013 ರಿಂದ ಕುಡಿಯುವ ನೀರಿನ ದರ ಹೆಚ್ಚಳ ಮಾಡಿಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ಸಮರ್ಪಕವಾಗಿ ತೆರಿಗೆ ಪಾವತಿಯಾಗುತ್ತಿಲ್ಲ. ಶೇ 50ರಷ್ಟು ಮಂದಿ ತಮ್ಮ ಆಸ್ತಿ ವಿಸ್ತೀರ್ಣಕ್ಕೆ ಅನುಗುಣವಾಗಿ ತೆರಿಗೆ ಪಾವತಿಸದಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿಆಸ್ತಿ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. 2020ರಲ್ಲಿ ಬಿಬಿಎಂಪಿ ಕಾಯಿದೆಗೆ…

Read More

ಬೆಂಗಳೂರು : ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ರೈತರ ಕೊಬ್ಬರಿಗೆ ಬೆಂಬಲ ಬೆಲೆ ಒದಗಿಸಲು ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಅನ್ವಯ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ ಕೇಂದ್ರದ 12,000 ರು. ಜತೆಗೆ ರಾಜ್ಯದಿಂದ 1,500 &. 93.73 ಕೋಟಿ ರು. ಬಿಡುಗಡೆ ಮಾಡಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ. ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮ ನಗರ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ವಿಂಟಲ್ ಕೊಬ್ಬರಿಗೆ ಕೇಂದ್ರದ 12,000 ರು. ಬೆಂಬಲ ಬೆಲೆ ಜತೆಗೆ ರಾಜ್ಯ ಸರ್ಕಾರದಿಂದ 2022-23ರಲ್ಲಿ ಘೋಷಿಸಿದ್ದ 1,250 ರು. ಜತೆಗೆ ಪ್ರಸಕ್ತ ಸಾಲಿನಲ್ಲಿ 250 ರು. ಸೇರಿಸಿ 1,500 ರು.ಗಳಂತೆ ನೀಡಲು 93.73 ಕೋಟಿ ರು. ಬಿಡುಗಡೆಗೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಮಂಜೂರಾತಿ ನೀಡಲಾಗಿದೆ. ರಾಜ್ಯದಲ್ಲಿ ಕೊಬ್ಬರಿ ಬೆಳೆವ ಅವರಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯಾಧ್ಯಕ್ಷ HD ಕುಮಾರಸ್ವಾಮಿಯವರು ಈ ಹಿಂದೆ…

Read More

ಬೆಂಗಳೂರು : ಬಿಎಂಟಿಸಿ ತನ್ನ ಸೇವೆಯನ್ನು ಉತ್ತಮಗೊಳಿ ಸಲು ಹೊಸದಾಗಿ 1,500ಕ್ಕೂ ಹೆಚ್ಚಿನ ಬಸ್‌ಗಳ ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ ಬಹು ತೇಕ ಬಸ್‌ಗಳನ್ನು ಗ್ರಾಸ್ ಕಾಸ್ಟ್ ಕಾಂಟ್ಯಾಕ್ಟ್ (ಜಿಸಿಸಿ) ಮಾದರಿ ಯಲ್ಲಿ ಪಡೆಯಲಿದೆ. ಹೊಸ ಬಸ್ ಗಳ ಸೇರ್ಪಡೆ ಮೂಲಕ ಬಿಎಂ ಟಿಸಿಯ ಟ್ರಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ ಹೊಸದಾಗಿ 1,500ಕ್ಕೂ ಹೆಚ್ಚಿನ ಬಸ್‌ಗಳನ್ನು ಸೇರ್ಪಡೆ ಮಾಡಲಿದೆ. ಪ್ರಮುಖವಾಗಿ 400 ಬಿಎಸ್ – 6ಬಸ್ ಗಳನ್ನು ಖರೀದಿಸಲಾಗುತ್ತಿದೆ. ಅದರ ಜತೆಗೆ 20 ಮಿಡಿ ಬಸ್ ಗಳು, 10 ಡಬ್ಬಲ್ ಡೆಕ್ಕರ್ ಬಸ್, 921 ಎಲೆಕ್ನಿಕ್ ಬಸ್‌ಗಳನ್ನು ಜಿಸಿಸಿ ಆಧಾರದಲ್ಲಿ ಪಡೆಯಲು ನಿರ್ಧರಿ ಸಲಾಗಿದೆ. ಎಲೆಕ್ನಿಕ್ ಬಸ್‌ಗಳ ಪೈಕಿ ಈಗಾಗಲೇ 100 ಬಸ್‌ಗಳು ಪೂರೈಕೆ ಯಾಗಿದ್ದು, ಉಳಿದ ಬಸ್‌ಗಳ ಈ ಆರ್ಥಿಕ ವರ್ಷದ ಅಂತ್ಯದೊಳಗೆ ಬಿಎಂಟಿಸಿ ಪಡೆಯಲಿದೆ. ಕೊರೋನಾ ಪೂರ್ವದಲ್ಲಿ ಬಿಎಂಟಿಸಿ 6,185 ಬಸ್‌ಗಳ ಮೂಲಕ ಸೇವೆ ನೀಡುತ್ತಿತ್ತು. ಆದರೆ, ಕೊರೋನಾ ನಂತರ ಆ ಸಂಖ್ಯೆ 5,587ಕ್ಕೆ ಇಳಿದಿದೆ. ಒಟ್ಟು…

Read More

ಬೆಳಗಾವಿ : ಅಪಾರ್ಟ್ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಬಸವನಗಲಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಉಡುಪಿ ಮೂಲದ ಕಾಮಾಕ್ಷಿ ಭಟ್ (80), ಹೇಮಂತ್ ಭಟ್ (27) ಮೃತ ದುರ್ದೈವಿಗಳು. ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭೀಕರ ಅಪಘಾತ ನಡೆದಿದ್ದು, ಮನೆಯಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಂಡ್ಯದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಡ್ಯ ಸೇರಿದಂತೆ ಬೆಂಗಳೂರಿನಲ್ಲೂ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದ್ದು ಬಿಜೆಪಿ ನಾಯಕರಿಂದ ಮಂಡ್ಯದ ಕೆರೆಗೋಡು ಗ್ರಾಮಕ್ಕೆ ಪಾದಯಾತ್ರೆ ಮಾಡೋ ಮೂಲಕ ಪ್ರತಿಭಟನೆಯ ಕಾವಿಗೆ ಕಿಚ್ಚು ಹತ್ತಿದಂತಾಗಿದೆ. ಇದರ ಮಧ್ಯ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರತಿಕ್ರಿಯೆ ನೀಡಿದ್ದು, ರಾಮಭಕ್ತರು ಒಟ್ಟಾಗಿ ಸೇರಿ ಹನುಮ ಧ್ವಜ ಹಾರಿಸಿದ್ದಾರೆ. ಆದರೆ ಮುಸ್ಲಿಂರ ಓಟಿಗಾಗಿ ರಾಜ್ಯ ಸರ್ಕಾರ ಧ್ವಜ ತೆಗೆದಿದೆ. ಈ ಘಟನೆಯನ್ನು ವಿ‌ಹೆಚ್​ಪಿ, ಬಜರಂಗದಳ ಖಂಡಿಸುತ್ತೆ. ಹನುಮ ಧ್ವಜ ಕೆಳಗಿಳಿಸಿದ ರೀತಿ ಮತ್ತೆ ಹನುಮ ಧ್ವಜ ಹಾರಿಸಬೇಕು. ಇಲ್ಲದಿದ್ದರೆ ಇಡೀ ರಾಮಭಕ್ತರಿಗೆ ಕರೆ ನೀಡುತ್ತೇವೆ. ರಾಜ್ಯದಲ್ಲಿ ಹನುಮ ಧ್ವಜ ಅಭಿಯಾನ ಮಾಡುತ್ತೇವೆ. ರಸ್ತೆ, ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ ಎಂದರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾವು ಈ ಮೂಲಕ ಹನುಮ ಭಕ್ತಿಯನ್ನು ಸರ್ಕಾರಕ್ಕೆ ತೋರಿಸುತ್ತೇವೆ. ಹಿಂದೂ ಸಮಾಜಕ್ಕೆ, ರಾಮ-ಹನುಮ ಭಕ್ತರ…

Read More

ತುಮಕೂರು : ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಗಳಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಿಕೆಟ್ ನೀಡಿದ್ದು ನಾನು ಹಿಂದೂ ಧರ್ಮ ಸೇರಿದಂತೆ ಎಲ್ಲಾ ಧರ್ಮ ಹಾಗೂ ವರ್ಗಗಳನ್ನು ಪ್ರೀತಿಸುತ್ತೇನೆ ಎಂದು ತಿಳಿಸಿದರು. ಈ ಕುರಿತಂತೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅವರಿಗೆ ನನ್ನ ಬಗ್ಗೆ ಮಾತನಾಡಲು ಯಾವುದೇ ವಿಚಾರಗಳು ಇಲ್ಲ. ಹಾಗಾಗಿ ಅವರು ನನ್ನನ್ನು ಹಿಂದೂ ವಿರೋಧಿ ಎಂದು ಕರೆಯುತ್ತಾರೆ ಎಂದರು. ನಾನು ಹಿಂದೂ ಹಾಗೂ ಎಲ್ಲಾ ಧರ್ಮ ವರ್ಗದವರನ್ನು ಕೂಡ ನಾನು ಪ್ರೀತಿಸುತ್ತೇನೆ ಜಾತ್ಯಾತೀತ ಎಂದರೇನು,? ಸಂವಿಧಾನದಲ್ಲಿ ಏನು ಹೇಳಿದ್ದಾರೆ? ಸಹಬಾಳ್ವೆ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟವನು ನಾನು ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದರು. ತುಮಕೂರಿನ ಸರ್ಕಾರಿ ಬಸ್ ನಿಲ್ದಾಣದ ಮೊದಲ ಹಂತವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಬಸ್ ನಿಲ್ದಾಣ ನಿರ್ಮಿಸಸಲಾಗಿತ್ತು. ಇದೀಗ ಮೊದಲ ಅಂತ…

Read More

ಬೆಂಗಳೂರು : ಮಂಡ್ಯ ಜಿಲ್ಲೆಯ ಕೆರೆಗೆಡು ಗ್ರಾಮದಲ್ಲಿ ಹನುಮಂತನ ಧ್ವಜ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟಲ್ಲಿ ಕಾಂಗ್ರೆಸ್ ಬಿಜೆಪಿ ನಾಯಕ ಆರ್ ಅಶೋಕ್ ಹಾಗೂ ಮಾಜಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದು, ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ? ಧಾರ್ಮಿಕ ಧ್ವಜಕ್ಕೋ?ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದೆ ರಾಜ್ಯ ಬಿಜೆಪಿಯು ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ. ಆರ್. ಅಶೋಕ ಹಾಗೂ hd ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಸವಾಲು ಕಾಂಗ್ರೆಸ್ ಬಿಜೆಪಿ ನಾಯಕರಿಗೆ ಸವಾಲು ಹಾಕಿದೆ. ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ.ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ ಬೇಡವೇ? ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು…

Read More

ಬೆಂಗಳೂರು : ರಾಷ್ಟ್ರಪತಿ ಮುರ್ಮು ಸಿಎಂ ಏಕವಚನದಲ್ಲಿ ಸಂಬೋಧಿಸಿದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು,ಸಿಎಂ ಸಿದ್ದರಾಮಯ್ಯ ಮಂಡಿಸಿರುವ 14 ಬಜೆಟ್ ಎಷ್ಟು ಶೋಷಿತ ವರ್ಗಕ್ಕೆ ನೆರವಾಗಿದೆ ಎಂದು ಹೇಳಲಿ ಅಂತ ಸವಾಲು ಹಾಕಿದರು. ಮುಖ್ಯಮಂತ್ರಿಗಳು ರಾಷ್ಟ್ರಪತಿ ಬಗ್ಗೆ ಮಾಡಿದ್ದಾರೆ ಶೋಷಿತ ವರ್ಗದ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದು ಖಂಡನೀಯವಾಗಿದೆ. ಸಂವಿಧಾನದ ಅಹಿಂದ ಅಂತ ಹೇಳಿಕೊಳ್ಳುವ ವ್ಯಕ್ತಿ ಹೀಗೆ ಹೇಳಿದ್ದಾರೆ. ಕುರಿ ಕಾಯುವ ಸಮುದಾಯದವನು 14 ನೀಡಿದ್ದೇನೆ ಎನ್ನುತ್ತಾರೆ ಇವರಿಗೆ ಎಷ್ಟು ಶೋಷಿತ ವರ್ಗಕ್ಕೆ ಬಜೆಟ್ ನೆರವಾಗಿದೆ ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ. ರಾಷ್ಟ್ರಪತಿ ಬಗ್ಗೆ ಹಲವುರವ ತೋರಿ ಸಂವಿಧಾನಕ್ಕೆ ಅಪಚಾರ ಎಸಿಗಿದ್ದಾರೆ ಗ್ರಾಮೀಣ ಸೊಗಡಿನಲ್ಲಿ ಹಾಗೆ ಮಾತಾಡಿದ್ದೇನೆ ಎಂದು ಹೇಳಿದ್ದಾರೆ. ಈಗ ಅಚಾತುರ್ಯದಿಂದ ಆದ ಪ್ರಮಾದಕ್ಷೆ ವಿಷಾದ ಎಂದಿದ್ದೀರಿ ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ ಆದರೆ ನಿಮ್ಮ ನಂಜಿನ ವಿಷ ರಾಜ್ಯ ಅಷ್ಟೆ ಅಲ್ಲ ದೇಶವನ್ನೆಲ್ಲ ವ್ಯಾಪಿಸಿದೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಕಾರ್ಯ ವೈಖರಿಯಿಂದ ನೊಂದಿರುವ ಸಂತ್ರಸ್ತರ ಪರವಾಗಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ ಎಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಗೃಹ ಕಚೇರಿಗೆ ಸುಮಾರು 150ಕ್ಕೂ ಅಧಿಕ ಸಂಖ್ಯೆಯ ಯುವಕರು ಮತ್ತು ಯುವತಿಯರು ಬಂದಿದ್ದರು. ಇವರೆಲ್ಲರೂ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ (KPSC ) ಕಾರ್ಯ ವೈಖರಿಯಿಂದ ನೊಂದಿರುವ ಸಂತ್ರಸ್ತ ಯುವ ಜನತೆ. ಅವರೆಲ್ಲರನ್ನು ನೊಂದ, ಆತಂಕದ ಸ್ಥಿತಿಯಲ್ಲಿ ನೋಡಿ ನನಗೆ ನಿಜಕ್ಕೂ ವೇದನೆಯಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಸಂತ್ರಸ್ತರ ಪರಿಸ್ಥಿತಿ ವಿವರಿಸಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಎರಡು ಪತ್ರ ಬರೆದಿದ್ದೇನೆ. ಖುದ್ದಾಗಿ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಆಯೋಗದ ಕಾರ್ಯದರ್ಶಿಗಳ ಜೊತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಗಳ ಜೊತೆ ಈ ವಿಚಾರ ತಿಳಿಸಿದ್ದೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.ರಾಜ್ಯದ ಹಿರಿಯ ಸಚಿವರಲ್ಲಿ ಒಬ್ಬರಾದ ಕೆ.ಜೆ.ಜಾರ್ಜ್ ಅವರೊಂದಿಗೂ ಇವರ…

Read More

ಬೆಂಗಳೂರು : ಕಾರ್ತಿಕ್ ಮಹೇಶ್ ಅಧಿಕೃತವಾಗಿ ಬಿಬಿ 10 ಕನ್ನಡದ ಚಾಂಪಿಯನ್ ಕಿರೀಟವನ್ನು ಪಡೆದರು. ಅವರು ಟ್ರೋಫಿಯನ್ನು ಗೆದ್ದುಕೊಂಡಿದ್ದಲ್ಲದೆ 50 ಲಕ್ಷ ರೂಪಾಯಿ ನಗದು ಬಹುಮಾನ, ಐಷಾರಾಮಿ ಕಾರು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಗೆದ್ದರು. ಬಿಬಿ ಮನೆಯಲ್ಲಿದ್ದಾಗ ಕಾರ್ತಿಕ್ ಹಲವಾರು ಸವಾಲುಗಳನ್ನು ಎದುರಿಸಿದರು. ಇನ್ನು ಮಾಧ್ಯಮಗಳೊಂದಿಗೆ ತಮ್ಮ ಗೆಲುವಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಯೊಂದು ವಿಷಯದಲ್ಲೂ ನನ್ನ ಅಭಿಮಾನಿಗಳು ತುಂಬಾ ಧನ್ಯವಾದಗಳು ಪ್ರತಿಯೊಂದಕ್ಕೂ ನನಗೆ ಹಾಗೂ ಬೇಜಾರಲ್ಲಿ ಇದ್ದಹಾಗಲು ನೀವು ಧೈರ್ಯಾಕ್ ಕಳ್ಕೋಬೇಡಿ ಅಂತ ಹೇಳ್ಬಿಟ್ಟು ಅಭಿಮಾನಿಗಳು ಪ್ರೋತ್ಸಾಹ ನೀಡಿದ್ದಾರೆ ಅವರನ್ನು ಸಾಕಷ್ಟ ಗಮನಿಸಿದ್ದೆನೆ ಎಂದರು. ನಾನು ಯಾವಾಗಲೂ ಹೇಳುವುದು ಒಂದೇ ತಪ್ಪಿದ್ದಾಗ ಒಪ್ಪಿಕೊಳ್ಳೋಣ ಕ್ಷಮೆ ಕೇಳಿದ್ರಲ್ಲೂ ಏನು ತಪ್ಪಿಲ್ಲ. ನಾವು ಕ್ಷೇಮ ಕೇಳೋದ್ರಿಂದ ನಾವು.ಯಾವತ್ತು ಚಿಕ್ಕವರು ಆಗುವುದಿಲ್ಲ ತಪ್ಪಿಲ್ಲ ಅಂದ್ರೆ ನನ್ನನ್ ನಾನು ಬಿಟ್ಟು ಕೊಡುವುದಿಲ್ಲ ಅದು ನನ್ನ ವ್ಯಕ್ತಿತ್ವವಾಗಿದೆ. ಒಳಗಡೆಯಿಂದ ನಾನು ಕಷ್ಟಪಟ್ಟೆ ನನ್ನ ಗೆಲುವು ಗೋಸ್ಕರ ಹೊರಗಿನ ಅಭಿಮಾನಿಗಳು ನನಗೆ ಪ್ರೋತ್ಸಾಹ ನೀಡಿದ್ದಾರೆ. ನಾನು…

Read More