Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…
ಜಮ್ಮುಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 10 ಯಾತ್ರಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ತಕ್ಷಣ ತಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಬಲವರ್ಧನೆಯು ಸ್ಥಳಕ್ಕೆ ಧಾವಿಸಿತು. ದಾಳಿ ನಡೆಸಿದ್ದರಿಂದ ಈ ಪ್ರದೇಶವು ಇದೀಗ ಉದ್ವಿಗ್ನವಾಗಿದೆ, ಸಾವುನೋವುಗಳ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಮಾಹಿತಿ ನೀಡಲಿದ್ದಾರೆ.
ನವದೆಹಲಿ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಸಂಸದರಾಗಿ ಸಂಸತ್ ಪ್ರವೇಶಿಸಿರುವ ಪ್ರಹ್ಲಾದ ಜೋಶಿ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಹ್ಲಾದ್ ಜೋಶಿ ಅವರು ಸತತವಾಗಿ 5 ಬಾರಿ ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ. 2004ರಲ್ಲಿ ಧಾರವಾಡ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದು, 2009 ರಂದು ಮತ್ತೆ ಎರಡನೇ ಬಾರಿಗೆ ಸಂಸದರಾಗಿದ್ದಾರೆ. 2014 ರಂದು ಧಾರವಾಡ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿದ್ದು, 2019 ರಂದು ಧಾರವಾಡ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರದ ವ್ಯವಹಾರ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…
ನವದೆಹಲಿ : ಕೇಂದ್ರ ಸಚಿವರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮೊದಲಿಗರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ನವದೆಹಲಿ: ಇಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಒಂದೆಡೆಯಾದರೆ, ಇನ್ನೊಂದೆಡೆ ಮಿತ್ರಪಕ್ಷ ಎನ್ಸಿಪಿ ಸಚಿವ ಸ್ಥಾನದ ವಿಷಯದಲ್ಲಿ ಅಸಮಾಧಾನ ಹೊರಹಾಕಿದೆ. ಹೌದು ಈ ಕುರಿತಂತೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಪ್ರಫುಲ್ ಪಟೇಲ್ ಅವರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ಸ್ವತಂತ್ರ ಖಾತೆ ರಾಜ್ಯ ಸಚಿವ ಸ್ಥಾನ ನೀಡುವುದಾಗಿ ಹೇಳುತ್ತಿದ್ದಾರೆ. ಇದುಸೂಕ್ತವಲ್ಲ. ಹಾಗಾಗಿ, ಕೆಲ ದಿನಗಳ ಕಾಲ ನಾವು ಕಾಯಲು ಸಿದ್ಧವಿದ್ದೇವೆ. ನಮಗೆ ಸಂಪುಟ ದರ್ಜೆಯೇ ಬೇಕು ಎಂದು ಎನ್ಸಿಪಿ ಅಧ್ಯಕ್ಷ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. ಇದೇವೇಳೆ, ಇಂದಿನ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ ಅವರು, ಸದ್ಯ ನಾವು ಒಂದು ಲೋಕಸಭಾ ಮತ್ತು ಒಂದು ರಾಜ್ಯಸಭಾ ಸ್ಥಾನ ಹೊಂದಿದ್ದೇವೆ. ಮುಂದಿನ 2-3 ತಿಂಗಳಲ್ಲಿ ರಾಜ್ಯಸಭೆಯಲ್ಲಿ ನಮ್ಮ ಸಂಖ್ಯೆ 3ಕ್ಕೆ ಏರಲಿದೆ. ಒಟ್ಟಾರೆ ನಮ್ಮ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 4ಕ್ಕೆ ಏರಲಿದೆ. ಹಾಗಾಗಿ,…
ಹಾವೇರಿ : ಹಾವೇರಿ ರೈಲು ನಿಲ್ದಾಣದ ಬಳಿ ಇರುವ ಓವರ್ ಬ್ರಿಡ್ಜ್ನಲ್ಲಿ ಅಕ್ರಮವಾಗಿ ಸುಮಾರು 7.91 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ನಗರ ಠಾಣೆಯ ಪೊಲೀಸರು ದಾಳಿ ಮಾಡಿ, ಗಾಂಜಾವನ್ನು ಜಪ್ತಿ ಮಾಡಿಕೊಂಡಿದ್ದು ನಾಲ್ವರನ್ನು ಇದೆ ವೇಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಿಳ್ಳೆಪ್ಪ ಮಲ್ಲಪ್ಪ ಅಳಲಗೇರಿ, ಫಾರೂಕ್ ಅಹ್ಮದ್ ಕುಂಚೂರು, ಇಸ್ಮಾಯಿಲ್ ನದಾಫ್ ಮತ್ತು ಸಾಹಿಲ್ ಕರ್ಜಗಿ ಎಂದು ಗುರುತಿಸಲಾಗಿದೆ. ಹಾವೇರಿ ರೈಲು ನಿಲ್ದಾಣದ ಬಳಿ ಇರುವ ಓವರ್ ಬ್ರಿಡ್ಜ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದಾಗ ನಾಲ್ವರು ಆರೋಪಿಗಳು ಪೊಲೀಸರಿಗೆ ಸೆರೆಸಿಕ್ಕಿದ್ದಾರೆ. ಹಾವೇರಿಯ ನಾಲ್ವರು ಆರೋಪಿಗಳು ಒಡಿಶಾದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಚಿಲ್ಲರೆ ಗ್ರಾಹಕರಿಗೆ ಮಾರಾಟ ಮಾಡಲು ಗಾಂಜಾವನ್ನು ರೈಲಿನ ಮೂಲಕ ಹಾವೇರಿಗೆ ತಂದಿದ್ದರು. ಖಚಿತ ಮಾಹಿತಿ ಮೇರೆಗೆ ಹಾವೇರಿ ನಗರ ಪೊಲೀಸ್ ಠಾಣೆಯ ಸಿಪಿಐ ಮೋತಿಲಾಲ್ ಪವಾರ್ ಮತ್ತು ತಂಡ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿತ್ತು. ಅಲ್ಲದೆ ನಾಲ್ವರು ಆರೋಪಿಗಳನ್ನು ಬಂಧಿಸಿ…
ಮಹಾರಾಷ್ಟ್ರ : 3ನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿಯಲು ನರೇಂದ್ರ ಮೋದಿ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7:00 15 ನಿಮಿಷಕ್ಕೆ ಮೋದಿಯವರು ಪ್ರಧಾನಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಇದರ ಮಧ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಭೀ ನಡೆಯುತ್ತಿದ್ದು ಈ ಬಾರಿ ಬಿಜೆಪಿ ಅಜಿತ್ ಪವಾರ್ ಬಣದ ಎನ್ ಸಿಪಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿಲ್ಲ. ಅಜಿತ್ ಪವಾರ್ ಬಣ್ಣದ ಎನ್ ಸಿ ಪಿ ಗೆ ಸಚಿವ ಸ್ಥಾನ ನೀಡದ ವಿಚಾರವಾಗಿ ಎನ್ಸಿಪಿ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿಕೆಯನ್ನು ನೀಡಿದ್ದು, ರಾಜ್ಯ ದರ್ಜೆಯ ಸಚಿವ ಸ್ಥಾನ ನೀಡುವುದಾಗಿ ನೆನ್ನೆ ರಾತ್ರಿ ಹೇಳಿದ್ದರು. ನಾನು ಹಿಂದೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿದ್ದೆ ಅದರಿಂದ ಇದು ನನಗೆ ಹಿನ್ನಡೆಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ನಾವು ಕೇಳಿದ್ದೇವೆ ಕೆಲದಿನ ಕಾಯುವಂತೆ ಬಿಜೆಪಿ ಹೈಕಮಾಂಡ್ ಹೇಳಿದೆ. ಬಿಜೆಪಿ ನಾಯಕರು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಎಂಸಿಪಿ ಹಿರಿಯ ನಾಯಕ…
ಹುಬ್ಬಳ್ಳಿ : ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು 2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಶುರಾಮ್ ದಾವಣಗೆರೆ ಅವರಿಗೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆ ಹಿನ್ನೆಲೆ? ಕಳೆದ 2023 ಡಿಸೆಂಬರ್ 30ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು.ಈ ವೇಳೆ…
ಬೆಂಗಳೂರು : ದೇಶವನ್ನು ಮುನ್ನಡೆಸಲು ದೇಶವನ್ನು ಅಭಿವೃದ್ಧಿ ಕಡೆ ಕರೆದೋಯ್ಯಲು ಹಾಗೂ ಸಂವಿಧಾನದ ಆಶಯವನ್ನು ಅನುಷ್ಠಾನಕ್ಕೆ ತರುವುದು ಮೋದಿಯವರ ಅಜೆಂಡವಾಗಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿಟಿ ರವಿ ಅವರು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಿಂದ ಐವರಿಗೆ ಸಚಿವರಾಗೋದಕ್ಕೆ ಅವಕಾಶ ಸಿಕ್ಕಿದೆ. ಮೋದಿಯವರ ಸಂಪುಟದಲ್ಲಿ ಸಚಿವರಾಗುವುದು ಎಂದರೆ ಅವರಿಗೂ ಒಂದು ಗೌರವ. ರಾಜಕೀಯವನ್ನು ಗೌರವ ಹಾಗಾಗಿ ನಾನು ಅವರಿಗೆ ಶುಭ ಹಾರೈಸುತ್ತೇನೆ.ರಾಜ್ಯ ಮತ್ತು ದೇಶದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ನಿಮ್ಮ ಸಮರ್ಥ್ಯವನ್ನು ಉಪಯೋಗಿಸಿ ಅಭಿವೃದ್ಧಿ ಕೆಲಸಗಳಲ್ಲಿ ದೇಶಕ್ಕೆ ಒಳ್ಳೆಯದಾಗಲಿ ಅಂತ ನಿರೀಕ್ಷೆ ಇಟ್ಕೊಂಡು ಶುಭ ಹಾರೈಸುತ್ತೇನೆ. ಇನ್ನೂ ಮೈತ್ರಿ ಕುರಿತಂತೆ ಮಾತನಾಡಿದ ಅವರು, ರಾಜಕಾರಣ ದೃಷ್ಟಿಯಿಂದ ಅಷ್ಟೇ ನೋಡೋಕೆ ಬಯಸುವುದಿಲ್ಲ. ಅವರಿಂದ ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಬೇಕು. ಪಕ್ಷದ ರಾಜಕಾರಣ ಚುನಾವಣೆ ಬಂದಾಗ ಮಾಡೋಣ ಈಗ ನಾವು ಮಾಡಬೇಕಾಗಿರುವುದು ರಾಷ್ಟ್ರದ ರಾಜಕಾರಣ ರಾಜ್ಯ ಹಿತದ ರಾಜಕಾರಣ ರಾಜ್ಯ ಹಿತ ಮತ್ತು ರಾಷ್ಟ್ರ ಹಿತ ರಾಜಕಾರಣ ಎರಡು ಆಗಲಿ…
ಒಡಿಶಾ : ಒಡಿಶಾ ವಿಧಾನ ಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ (ಬಿಜೆಡಿ) ಗೆ ಸೋಲು ಹಿನ್ನೆಲೆಯಲ್ಲಿ ಇದೀಗ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಸಕ್ರಿಯ ರಾಜಕೀಯಕ್ಕೆ ವಿಕೆ ಪಾಟೀಲ್ ನಿವೃತ್ತಿ ಘೋಷಿಸಿದ್ದಾರೆ. ಹೌದು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜು ಜನತಾ ದಳ (ಬಿಜೆಡಿ) ಮುಖಭಂಗ ಅನುಭವಿಸಿದ ನಂತರ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ವಿಕೆ ಪಾಂಡಿಯನ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.














