Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ನಾಳೆ ಉಡುಪಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 11:05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ, ಮಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಮಂಗಳೂರಿಗೆ ವಾಪಸಾಗಲಿದ್ದಾರೆ ಮಧ್ಯಾಹ್ನ 2 ಗಂಟೆಗೆ ಏರ್ಪೋರ್ಟಿಗೆ ವಾಪಸ್ ಆಗಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತೆ ನೀಡು ನಿಯೋಜನೆ ಮಾಡಲಾಗಿದೆ. ಏರ್ಪೋರ್ಟ್ ನಲ್ಲಿಯೇ SPG ಮತ್ತು ಐಬಿ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.
ಬೆಂಗಳೂರು : ಹೊಸ ವರ್ಷಕ್ಕೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್ಆರ್ಸಿಎಲ್ ಸಿಹಿ ಸುದ್ದಿಯೊಂದನ್ನು ನೀಡಿದ್ದು ಹೊಸ ವರ್ಷಕ್ಕೆ 8 ರಿಂದ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಸದ್ಯ 15 ನಿಮಿಷಕ್ಕೊಂದು ಸಂಚರಿಸುವ ರೈಲುಗಳ ನಡುವಿನ ಸಮಯಾವಧಿ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ. ಇದರಿಂದ ಸಮಸ್ಯೆ ಎದುರಿಸುತ್ತಿರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಹೌದು ಯೆಲ್ಲೊ ಮಾರ್ಗದಲ್ಲಿ ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ. ಮಾರ್ಗ ಓಪನ್ ಆಗಿ ತಿಂಗಳುಗಳೇ ಕಳೆದರೂ ಪೂರ್ಣ ಪ್ರಮಾಣದ ರೈಲುಗಳಿಲ್ಲದೇ ಪ್ರಯಾಣಿಕರು ಕಷ್ಟನೋ ಸುಖನೋ ಅಡ್ಜಸ್ಟ್ ಮಾಡಿಕೊಂಡು ಹೋಗ್ತಿದ್ದಾರೆ. ಆದರೆ ಶೀಘ್ರದಲ್ಲೇ ಹೊಸ ರೈಲುಗಳು ಸೇರ್ಪಡೆಯಾಗಿ, ಪ್ರಯಾಣಿಕರಿಗೆ ಸುಲಭ ಸಂಚಾರ ನೀಡಲು ಮುಂದಾಗಿದೆ. ಈಗಾಗಲೇ ಕೋಲ್ಕತ್ತಾದ ಟಿಟಾಗರ್ನಿಂದ 6 ರೈಲು ಬೆಂಗಳೂರಿನತ್ತ ಹೊರಟಿದೆ. ಮುಂದಿನ ವಾರ ಈ ರೈಲು ಬೆಂಗಳೂರು ಸೇರಿ, ಎಲ್ಲಾ ಪರೀಕ್ಷೆ ಪೂರ್ಣಗೊಳಿಸಿ ಡಿಸೆಂಬರ್ ಅಂತ್ಯಕ್ಕೆ ಟ್ರ್ಯಾಕ್ಗೆ ಇಳಿಯಲಿದೆ. ಅಲ್ಲದೇ ಮುಂದಿನ ತಿಂಗಳು ಅಂದರೆ ಡಿಸೆಂಬರ್ಗೆ ಮತ್ತೊಂದು ಸೆಟ್ ಕೂಡ ಬೆಂಗಳೂರು…
ಬೆಂಗಳೂರು: ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡದೇ ಹೋದರೆ ಕರ್ನಾಟಕದಾದ್ಯಂತ ಹೋರಾಟಕ್ಕೆ ಒಕ್ಕಲಿಗ ಜನಾಂಗ ಮುಂದಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಇಂದು ನಡೆಯಲಿರುವ ಒಕ್ಕಲಿಗರ ಸಂಘದ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ಇಂದಿನ ಸಭೆಯಲ್ಲಿ ಎಲ್ಲವನ್ನು ಅಂತಿಮ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅಂತಿಮ ಸಂದೇಶ ಹೊರಬೀರಲಿದೆ. ಹಲವು ಸ್ವಾಮೀಜಿಗಳು ಡಿ.ಕೆ ಶಿವಕುಮಾರ್ ಪರವಾಗಿ ಸಿಎಂ ಸ್ಥಾನ ನೀಡುವುದರ ಬಗ್ಗೆ ಬ್ಯಾಟ್ ಬೀಸಿದ್ದಾರೆ. ಇದಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವುದಕ್ಕೆ ನಿರ್ಧಾರ ಮಾಡಲಾಗುವುದು ಎನ್ನಲಾಗಿದೆ. ಈ ನಡುವೆ ಅಹಿಂದ ಒಕ್ಕೂಟ ಕೂಡ ಸಿಎಂ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ತೆಗೆದು ಹಾಕಿದರೆ ನಾವು ಕೂಡ ಹೋರಾಟ ಮಾಡಲಿದ್ದೇವೆ ಎನ್ನಲಾಗಿದೆ. ಈ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ…
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ. ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ರಾಜಕೀಯ ಗರಿಗೆದರಿದ್ದು, ಸಚಿವರು ಶಾಸಕರುಗಳು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಕಾವೇರಿ ನಿವಾಸದಲ್ಲಿ ಸಚಿವರ ಶಾಸಕರ ದಂಡೆ ಜಮಯಿಸಿದೆ. ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ ಮಹದೇವಪ್ಪ, ಸಿಂಧನೂರು ಶಾಸಕ ಸೇರಿದಂತೆ ಹಲವಾರು ಭೇಟಿ ನೀಡಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ.ಇದರ ಮಧ್ಯ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದು, ನಾಯಕತ್ವ ಬದಲಾವಣೆ ಕುರಿತು ಮಾತಾಡಿ ಎಲ್ಲವನ್ನು ಸೆಟಲ್ ಮಾಡ್ತೀವಿ ಎಂದು ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಎಲ್ಲವನ್ನು ಹೈಕಮಾಂಡ್ ಸಮ್ಮುಖದಲ್ಲಿ ಚರ್ಚಿಸುತ್ತೇನೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತಾಡ್ತೀನಿ. ಹೈ ಕಮಾಂಡ್ ಜೊತೆ ಕೂತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಇರುತ್ತಾರೆ. 3-4 ಪ್ರಮುಖ ನಾಯಕರನ್ನು ಕರೆಸಿ ಚರ್ಚಿಸುತ್ತೇನೆ. ಎಲ್ಲರ ಸಮ್ಮುಖದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು. ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸಿಎಂ ಖುರ್ಚಿ ಕದನ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಾಮಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಹೊರ ಬಾರದ ಕಾಂಗ್ರೆಸ್ಗೆ ಈಗ ರಾಜ್ಯದ ಕಾಂಗ್ರೆಸ್ ನಾಯಕರ ನಡವಳಿಕೆ ತೀವ್ರ ಬೇಸರ ಉಂಟು ಮಾಡುತ್ತಿದೆ. ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕರೆದು ಮಾತನಾಡಲಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪ್ರಸಕ್ತ ರಾಜಕೀಯ ಬಿಕ್ಕಟ್ಟು ಸೇರಿದಂತೆ ಇತರೆ ಮಾಹಿತಿಗಳನ್ನು ಪಾರ್ಟಿಯ ಹಿರಿಯ ನಾಯಕರುಗಳ ಜೊತೆಗೆ ಚರ್ಚಿಸುತ್ತ ಅಂತಿಮ ನಿರ್ಧಾರಕ್ಕೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ ಎನ್ನಲಾಗಿದೆ. ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ್ದು, ಇದು ಹೊಸ ಚರ್ಚೆಗೆ ಕಾರಣವಾಗಿದೆ. ಇದಲ್ಲದೇ ಇಂದು ರಾಹುಲ್ ಗಾಂಧಿಯನ್ನು ಮಲ್ಲಿಕಾರ್ಜುನ ಖರ್ಗೆಯವರು ಭೇಟಿಯಾಗಲಿದ್ದು, ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ…
ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದರು ಇದೀಗ ಹಾವೇರಿಯಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ ರೈತ ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.ಶಂಕರಗೌಡರ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಕಳೆದ ವರ್ಷ ಸಹ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ವರ್ಷ ಎರಡನೇ ಬಾರಿಗೆ ರೈತ ಶಂಕರಗೌಡರ ತೋಟದ ಮನೆ ಮುಂದೆ ಕಾಣಿಸಿಕೊಂಡು ಆಂತಕ ಸೃಷ್ಟಿಯಾಗಿದೆ.ಒಂದೇ ತೋಟದಲ್ಲಿ ಮೂರನೇ ಬಾರಿಗೆ ಚಿರತೆ ಕಾಣಿಸಿಕೊಳ್ಳುತ್ತಿರುವುದಕ್ಕೆ ರೈತ ಕುಟುಂಬ ಹಾಗೂ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯದ ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ : ರಾಜ್ಯದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಹಿನ್ನೆಲೆ ಕುಕನೂರು ಠಾಣೆ ಪೊಲೀಸರು ಪೋಕ್ಸೋ ಪ್ರಕರಣದ ಕಲಿಸಿಕೊಂಡು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದ ಹತ್ತನೇ ತರಗತಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿ ಬುಧವಾರ ಬೆಳಗಿನ ಜಾವ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ವಸತಿ ನಿಲಯಗಳ ಮಕ್ಕಳ ಆರೋಗ್ಯದ ಮೇಲೆ ನಿಗಾ ವಹಿಸಲು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಮಗುವಿಗೆ ಜನ್ಮ ನೀಡಿದ ಬಾಲಕಿಯ ಆರೋಗ್ಯ ತಪಾಸಣೆಯನ್ನು ಎರಡು ತಿಂಗಳ ಹಿಂದೆ ಮಾಡಲಾಗಿದ್ದು, ಬಾಲಕಿ ಗರ್ಭಿಣಿಯಾದ ವಿಷಯವನ್ನು ವೈದ್ಯಾಧಿಕಾರಿಗಳು ಪತ್ತೆ ಹಚ್ಚಿಲ್ಲ. ಆದ್ದರಿಂದ ಕರ್ತವ್ಯ ಲೋಪದ ಮೇಲೆ ಇಬ್ಬರು ವೈದ್ಯಾಧಿಕಾರಿಗಳ ಮೇಲೂ ಎಫ್ಐಆರ್…
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲೀಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲೂ ತುಸು ವ್ಯತ್ಯಾಸ ಆಗಲಿದೆ. ನ.28ಕ್ಕೆ ಸೀಮಿತವಾಗಿ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ. ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಹಾಗಾಗಿ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ ಸಿವಿಲ್ ಕೋರ್ಟ್ ಡಿಕ್ರಿ’ ಎಂಬ ಹೊಸ ಕಾರ್ಯನಿರ್ವಹಣಾ ಶೀರ್ಷಿಕೆಯನ್ನು ಸೇರ್ಪಡೆ ಮಾಡಿ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕಾವೇರಿ 2.0 ಸದ್ಯ ಮಾರಾಟ, ಗಿಫ್ಟ್ ಡೀಡ್, ಅಡಮಾನ, ಪಿತ್ರಾರ್ಜಿತ ಆಸ್ತಿ ಕುರಿತ ವಹಿವಾಟುಗಳನ್ನು ಆಧರಿಸಿದೆ ಮತ್ತು ಅದರಲ್ಲಿ ಆಸ್ತಿ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯಗಳ ತೀರ್ಪುಗಳನ್ನು ಪರಿಶೀಲಿಸಲು ಯಾವುದೇ ಅವಕಾಶವಿಲ್ಲ. ಜೊತೆಗೆ ಇದು ನಾಗರಿಕರು ನ್ಯಾಯಾಲಯಗಳು ನಿರ್ಣಾಯಕವಾಗಿ…














