Author: kannadanewsnow05

ಬೆಂಗಳೂರು : ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ಷಯ್ ಸಹೋದರ ಬೆನಕ ರಾಜ್ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ. RFO, ACF, DFO ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿ ಏನ್ ಎಸ್ ಕಾಯಿದೆ 105ರ ಅಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಕ್ಷಯ್ ಸಾವಿನ ನಂತರ ಕುಟುಂಬಸ್ಥರು ಸಾರ್ಥಕ ಮೆರೆದಿದ್ದು, ಅಕ್ಷಯ್ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಘಟನೆ ಹಿನ್ನೆಲೆ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್​​ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿತ್ತು. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ…

Read More

ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಲಾರಿಯಿಂದ ಗ್ರಾನೈಟ್ ಇಳಿಸುವಾಗ ಕಾರ್ಮಿಕನನ್ನು ರಕ್ಷಿಸಲು ಹೋಗಿ ಮಾಲೀಕನ ತಲೆಯ ಮೇಲೆ ಗ್ರಾನೆಟ್ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹೊಸಾಳಿ ಕ್ರಾಸ್ ಸಮೀಪದ ಬಿಡ್ತುಲಬಾಗದಲ್ಲಿ ನಡೆದಿದೆ. ಗ್ರಾನೈಟ್ ತಲೆ ಮೇಲೆ ಬಿದ್ದು ಉದ್ಯಮಿ ಮುದ್ದಣ್ಣ ಹನಮಪ್ಪ ಹಾಲುಂಡಿ (53) ಮೃತಪಟ್ಟಿದ್ದಾರೆ.ನಗರದ ಬಾಂಡಿಶಿಟ್ಟಾದ ಮುದ್ದಣ್ಣ ಅವರು ಮೂರು ತಾಲ್ಲೂಕಿನ ಮೂರು ಕಡೆ ಟೈಲ್ಸ್ ಮತ್ತು ಸಿರಾಮಿಕ್ಸ್ ಮಳಿಗೆ ನಡೆಸುತ್ತಿದ್ದರು.ದುರ್ಘಟನೆ ನಡೆದ ಬಿಡ್ತುಲಭಾಗದಲ್ಲಿ ಈಚೆಗಷ್ಟೆ ಹೊಸ ಮಳಿಗೆ ತೆರೆದಿದ್ದರು. ಮಲ್ಲಿಕಾರ್ಜುನ ಟೈಲ್ಸ್ ಹಾಗೂ ಸೆರಾಮಿಕ್ ಮಾಲೀಕರಾಗಿದ್ದ ಮುದ್ದಣ್ಣ, ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದರು. ಕೆಲವು ವರ್ಷಗಳಿಂದ ಬಾಂಡಿಶೆಟ್ಟಾದಲ್ಲಿ ವಾಸ ಮಾಡುತ್ತಿದ್ದರು. ಗ್ರಾನೈಟ್ ಕಲ್ಲುಗಳನ್ನು ಆಟೋ ಗೆ ತುಂಬುತ್ತಿದ್ದ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಗ್ರಾನೈಟ್ ಕಲ್ಲಿಗೆ ಹಗ್ಗ ಬಿಗಿಯುವಾಗ ತಲೆಯ ಮೇಲೆ ಗ್ರಾನೈಟ್ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ಜೂನ್ 20 ಮತ್ತು 21 ರಂದು ಏರ್ಪೋರ್ಟ್ ರಸ್ತೆಯಲ್ಲಿರುವ ಹೆಬ್ಬಾಳ ಫ್ಲೈಓವರ್ ಬಳಿ ಎರಡು ದಿನಗಳ ಕಾಲ ರಸ್ತೆ ಬಂದ್ ಮಾಡಲಾಗಿದೆ. ಹಾಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆ ಎರಡು ದಿನ ಬಂದ್ ಇರಲಿದೆ. ಜೂನ್ 20 ಮತ್ತು 21ರ ರಾತ್ರಿಯ ವೇಳೆ ಹೆಬ್ಬಾಳ ಬಂದ್ ಇರಲಿದೆ ರಾತ್ರಿ 11:30 ರಿಂದ ಮುಂಜಾನೆ 5 ಗಂಟೆಯ ವರೆಗೆ ಹೆಬ್ಬಾಳ್ ಫ್ಲೈ ಓವರ್ ಬಂದ್ ಇರಲಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.

Read More

ಮಂಡ್ಯ : ಮಂಡ್ಯದಲ್ಲಿ ‘KSRTC’ ಡಿಪೋಗೆ ಇಂಧನ ಪೂರೈಕೆಯಲ್ಲಿ ಸದ್ದಿಲ್ಲದೆ ಟ್ಯಾಂಕರ್ ಮೂಲಕ ಇಂಧನ ಕಳ್ಳತನ ನಡೆಸಲಾಗುತ್ತಿದೆ. ಈ ಕುರಿತು ಇಂಧನ ಕಳ್ಳತನದ ಜಾಲವನ್ನು ಪಾಂಡವಪುರದ KSRTC ಘಟಕದ ಮ್ಯಾಕಾನಿಕ್ ಬಯಲಿಗೆಳೆದಿದ್ದಾನೆ. ಹೌದು ಮಂಡ್ಯದಲ್ಲಿ ಈ ಒಂದು ಇಂಧನ ಕಳ್ಳತನದ ಬಗ್ಗೆ ಮೆಕ್ಯಾನಿಕ್ ವಿಡಿಯೋ ಮೂಲಕ ಬಯಲಿಗೆ ಎಳೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ KSRTC ಘಟಕಕ್ಕೆ ಟ್ಯಾಂಕರ್ ನಿಂದ ಇಂಧನ ಕಳ್ಳತನ ಪತ್ತೆ ಹಚ್ತಿರೋ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಗ್ಗೆ ಮಾಹಿತಿ ನೀಡಲು KSRTC ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ KSRTC ಡಿಪೋದಲ್ಲಿ ಈ ಒಂದು ಘಟನೆ ನಡೆದಿದೆ. ಟ್ಯಾಂಕರ್ ಒಳಭಾಗದಿಂದ ನಿಂದ ಫ್ಲೆಕ್ಸಿಬಲ್ ಪೈಪ್ ಮೂಲಕ ಇಂಧನ ಕಳ್ಳತನ ಮಾಡ್ತಿದ್ದ ಬಗ್ಗೆ ಮೆಕ್ಯಾನಿಕ್ ವಿಡಿಯೋ ಮೂಲಕ ಕಳ್ಳತನ ಬಹಿರಂಗಗೊಳಿಸಿದ್ದಾನೆ. ಹಾಸನದ HPCL ಘಟಕದಿಂದ ಟ್ಯಾಂಕರ್ ಮೂಲಕ ಡಿಪೋಗಳಿಗೆ ಇಂಧನ ಸರಬರಾಜು ಮಾಡಲಾಗುತ್ತಿತ್ತು. TN-02 BH 3039 ಟ್ಯಾಂಕರ್ ನಲ್ಲಿ ಪ್ರತಿ ಬಾರಿ ಅನ್ಲೋಡ್ ನಲ್ಲಿ ವೇಳೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಫಿಕ್ಸಿಸ್’ ಎನ್ನುವ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಸ್ಪಾ ಮೇಲೆ ದಾಳಿ ಮಾಡಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಫಿಕ್ಸಿಸ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಿಸಿಬಿ ದಾಳಿ ವೇಳೆ ಬಾಂಗ್ಲಾದೇಶದ ಅಜಯಶೂರ ಜಿಲ್ಲೆಯ ಕುಲ್ನ ಪ್ರದೇಶದ ಯುವತಿ ಪತ್ತೆಯಾಗಿದ್ದಾಳೆ. ಫಿಕ್ಸಿಸ್ ಸ್ಪಾನಲಿ ಸಿಸಿಬಿ ಅಧಿಕಾರಿಗಳು ಇದೀಗ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಹುಲಿ ದಾಳಿಗೆ ಪುಟ್ಟಮ (45) ಎನ್ನುವ ಮಹಿಳೆ ಬಲಿಯಾಗಿದ್ದಾರೆ. ಕುರಿ ಮೇಯಿಸಲು ತೆರಳಿದ ವೇಳೆ ದೇಶಿಪುರ ಕಾಲೋನಿಯ ಪುಟ್ಟಮ್ಮ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಶಿಪುರದ ಪುಟ್ಟಮ್ಮರನ್ನು ಹುಲಿ ಕೊಂದು ಸ್ವಲ್ಪದೂರು ಎಳೆದೊಯ್ದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಕೋಲಾರ : ಮಾವಿನ ಬಲೆ ತೀವ್ರವಾಗಿ ಕುಸಿತಗೊಂಡಿದ್ದರಿಂದ ವ್ಯಾಪಾರಿ ಒಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಾವಿನ ತೋಟದಲ್ಲಿ ಕಟಾವು ಮಾಡುವ ವೇಳೆ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಮಾವಿನ ತೋಟದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಘಾತದಿಂದ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಸಾವನ್ನಪ್ಪಿದ್ದಾರೆ. ಮೃತ ಅನ್ವರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ನಿವಾಸಿ ಎನ್ನಲಾಗಿದ್ದು, ಸುಮಾರು 30 ಲಕ್ಷ ರೂಪಾಯಿ ಮಾವಿನ ವಹಿವಾಟು ಮಾಡಿದ್ದರು. ಇಂದು ಮಾವಿನ ಬೆಳೆ ಮತ್ತಷ್ಟು ಕುಸಿತ ಸುದ್ದಿ ತಿಳಿದು ತೀವ್ರ ಹೃದಯಘಾತವಾಗಿದೆ. ಬೆಲೆ ಕುಸಿತದಿಂದ ಬೆಳೆಗೆ ಔಷಧಿ ಸಿಂಪಡಿಸಿದ್ದರು. ಅದರ ದುಡ್ಡು ಸಹ  ಬಾರದೇ ಸಂಕಷ್ಟ ಅನುಭವಿಸಿದ್ದರು. ಸಹ ದುಡ್ಡು ಬಾರದೇ ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಮಾವಿನ ತೋಟದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮಾವಿನ ಬೆಳೆಗೆ ಬೆಂಬಲ ಬೆಲೆ 18 ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಸರ್ಕಾರದ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ…

Read More

ಬೆಂಗಳೂರು : ಇಸ್ರೇಲ್ ಹಾಗೂ ಇರಾನ್​ ನಡುವೆ ತೀವ್ರ ಯುದ್ಧ ನಡೆಯುತ್ತಿದೆ. ಎರಡು ದೇಶಗಳ ನಡುವೆ ಮಿಸೈಲ್​ ಡ್ರೋನ್​ ವಾರ್​ ನಡೆಯುತ್ತಿದ್ದು, ಜನಸಾಮಾನ್ಯರು ದಾಳಿಗೆ ತುತ್ತಾಗಿದ್ದಾರೆ. ಇಂತಹ ಆತಂಕದ ಪರಿಸ್ಥಿತಿಯ ನಡುವೆ ಇಸ್ರೇಲ್​ನ ಟೆಲ್ ಅವೀವ್​​ನಲ್ಲಿ 18 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದರು. ಇಂದು 18 ದಿನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಹೌದು ಇಸ್ರೇಲ್ ಅಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಸಂಜೆ 5 ಗಂಟೆಗೆ ಏರ್ ಇಂಡಿಯಾ ವಿಮಾನದಲ್ಲಿ 18 ಜನ ಕನ್ನಡಿಗರು ಇದೀಗ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 18 ಜನ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.

Read More

ಬೆಂಗಳೂರು : 18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಖುಷಿ RCB ಅಭಿಮಾನಿಗಳಿಗೆ ಬಹಳ ದಿನ ಉಳಿಯಲಿಲ್ಲ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ನೀಡಿದ್ದಾರೆ. ಹೌದು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಾ. ಶಾಲಿನಿ ರಜನೀಶ್, ಸತ್ಯವತಿ, ಕೆಎಸ್ ಸಿಎ, ಆರ್ ಸಿಬಿ, ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿ ದಯಾನಂದ್, ವಿಕಾಸ್ ಕುಮಾರ್, ಶೇಖರ್ ತೆಕ್ಕಣನವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಸೇರಿ ಹಲವರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ದುರಂತ ನಡೀತು. 11…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಇಂದು ಬಿಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿ ಪತ್ನಿಯ ಮೃತ ದೇಹ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಂಬಂಧಿಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More