Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ನೂರಾರು ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಲಾಗಿದ್ದು, ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಲಾಗಿದೆ. ಮಹಿಳ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಸಂಘದಿಂದ ಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದ್ದು, ಮಹಾರಾಷ್ಟ್ರ ಮೂಲದ ಬಾಬಾ ಸಾಹೇಬ್ ಕೊಳೇಕರ ವಿರುದ್ಧ ಆರೋಪ ಕೇಳಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆಯರೇ ಈತನ ಟಾರ್ಗೆಟ್ ಆಗಿದ್ದರು. ಐಡಿ ಕಾರ್ಡ್ ಮಾಡಲು ಮಹಿಳೆಯರಿಂದ 2500 ರೂಪಾಯಿ ವಸೂಲಿ ಮಾಡಲಾಗಿತ್ತು. ಒಂದೊಂದು ಐಡಿ ಕಾರ್ಡಿಗೆ ರೂ.3,000 ನೀಡುತ್ತೇವೆ ಎಂದು ಆಮೀಷ ಒಡ್ಡಿದ್ದರು. 20 ದಿನಕ್ಕೆ ರೂ.3,000 ಹಣ ನೀಡುತ್ತೇವೆ ಎಂದು ನಂಬಿಸಲಾಗಿತ್ತು.ವಂಚಕನ ಮಾತು ನಂಬಿ ಮಹಿಳೆಯರು ಐಡಿ ಕಾರ್ಡ್ ಖರೀದಿಸಿದ್ದರು. ಒಬ್ಬೊಬ್ಬ ಮಹಿಳೆ ತಲಾ 20 ರಿಂದ 30 ಐಡಿ ಕಾರ್ಡ್ ಖರೀದಿ ಮಾಡಿದ್ದರು. ಸುಮಾರು 12 ಕೋಟಿ ಅಧಿಕವಾಗಿ ಹಣ ಪಡೆದು ಆರೋಪಿ ಪರಾರಿಯಾಗಿದ್ದಾನೆ. ವಂಚನೆ ಬಯಲಾಗುತ್ತಿದ್ದಂತೆ ಮಹಿಳೆಯರು ಡಿಸಿ…

Read More

ಬೆಂಗಳೂರು : ಸ್ಮಾರ್ಟ್ ಮೀಟರ್ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಧನ ಸಚಿವ ಕೆ ಜೆ ಚಾರ್ಜ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸ್ಮಾರ್ಟ್‌ ಮೀಟರ್ ಖರೀದಿ ಗುತ್ತಿಗೆ ನೀಡಿಕೆಯಲ್ಲಿ ಬಹುಕೋಟಿ ಅವ್ಯವಹಾರ ಆರೋಪ ಸಂಬಂಧ ವಿವರಣೆ ಕೋರಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಕೆಲ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ನೋಟಿಸ್‌ಗೆ ವಾರದಲ್ಲಿ ಉತ್ತರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನೋಟಿಸ್ ಸ್ವೀಕರಿಸಿರುವ ಸಚಿವ ಜಾರ್ಜ್‌ ಅವರು, ಈ ಗುತ್ತಿಗೆ ಸಂಬಂಧ ತಾವು ಏಕಪಕ್ಷೀಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಡಿಸಿರುವುದಾಗಿ ತಿಳಿದು ಬಂದಿದೆ. ಸ್ಮಾರ್ಟ್‌ ಮೀಟರ್ ಖರೀದಿ ಗುತ್ತಿಗೆ ಅವ್ಯವಹಾರ ಆರೋಪ ಕುರಿತು ದಾಖಲೆಗಳನ್ನು ಸಂಗ್ರಹಿಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತ ಪೊಲೀಸರು, ಅಕ್ರಮದ ಬಗ್ಗೆ ವಿವರಣೆ ಕುರಿತು ಸಚಿವ ಜಾರ್ಜ್‌ ಹಾಗೂ ಬೆಸ್ಕಾಂ ವ್ಯವಸ್ಥಾಪಕ ಮಹಾಂತೇಶ್ ಬೀಳಗಿ ಸೇರಿದಂತೆ ಇಂಧನ ಇಲಾಖೆ ಕೆಲ ಅಧಿಕಾರಿಗಳಿಗೆ ನೋಟಿಸ್…

Read More

ಬಳ್ಳಾರಿ : ಬಳ್ಳಾರಿಯಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದು, ವ್ಯಕ್ತಿ ಒಬ್ಬನನ್ನು ವ್ಯಕ್ತಿಯ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದವರನ್ನು ಅರೆಸ್ಟ್ ಮಾಡಿದ್ದಾರೆ ಪ್ರಕರಣದ ತನಿಖೆ ನಡೆಸಿ ಪೊಲೀಸರು 10 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಅಕ್ಟೋಬರ್ 23 ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ರವಿ (30) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದ ಬಳಿ ರವಿ ಕೊಲೆಯಾಗಿದೆ. ವಾರದ ಹಿಂದೆ ಗ್ರಾಮದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರ ಸಂತ್ರಸ್ತೆಯ ಪರವಾಗಿ ನಿಂತಿದ್ದಕ್ಕೆ ಈ ಒಂದು ಗ್ಯಾಂಗ್ ರವಿಯನ್ನು ಸುತ್ತಿಗೆನಿಂದ ಹೊಡೆದು ಕೊಲೆ ಮಾಡಿದ್ದಾರೆ. ಆರೋಪಿಗಳು ಜೈಲಿಗೆ ಹೋಗಿದ್ದಕ್ಕೆ ರವಿಯ ಮೇಲೆ ಅತ್ಯಾಚಾರ ಕೇಸ್ ನ ಆರೋಪಿ ಲಿಂಗಣ್ಣ ಸಂಬಂಧಿಕರಿಂದ ರವಿ ಹತ್ಯೆಯಾಗಿದೆ ತನ್ನ ಸಹೋದರರಿಗೆ ಹೋಗಿದ್ದಕ್ಕೆ ಸಂಚುರೂಪಿಸಿ ರವಿಯನ್ನು ಹೊನ್ನೂರಸ್ವಾಮಿ ಮತ್ತು ಗ್ಯಾಂಗ್ ಕೊಲೆ ಮಾಡಿದೆ. ರವಿ ತಲೆ ಮತ್ತು ಮುಖಕ್ಕೆ…

Read More

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಸರ್ಕಾರಿ ಶಾಲೆಗಳಲ್ಲಿ ಕಾರ್ಯ ಚಟುವಟಿಕೆ ನಿಷೇಧಿಸಲು ಇತ್ತೀಚಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಸಿಎಂ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ನಿರ್ಧರಿಸಿ ಆದೇಶ ಹೊರಡಿಸಿತ್ತು. ಇದೀಗ ಧಾರವಾಡ ಹೈಕೋರ್ಟ್ ಪೀಠ ಈ ಒಂದು ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಲಾರೆನ್ಸ್ ಬಿಷ್ನೋಯ್ ಎಂದು ಹೆಸರು ಬರೆದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಿಡಿಗೇಡಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ನಂದಿ ಬೆಟ್ಟದಲ್ಲಿರುವ ಟಿಪ್ಪು ಅರಮನೆಯ ಮೇಲೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯ್ ಹೆಸರು ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿಗಿರಿ ಧಾಮ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. PDLP, BNS ಸೆಕ್ಷನ್ 324 (2), 329 (3)ರ ಅಡಿ ದುಷ್ಕರ್ಮಿಗಳ ಮೇಲೆ ಕೇಸ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಎಸ್ ಪಿ ಕುಶಲ್ ಚೌಕ್ಸೆ ಸೂಚನೆಯ ಮೇರೆಗೆ ಕೇಸ್ ದಾಖಲಾಗಿದೆ. ಸದ್ಯ ಗ್ಯಾಂಗ್ ಸ್ಟರ್ ಬಿಷ್ನೋಯ್ ದೆಹಲಿಯ ತಿಹಾರ್ ಜೈಲಿನಲ್ಲಿ ಇದ್ದಾನೆ. ಅಂತಾರಾಷ್ಟ್ರೀಯ ಗ್ಯಾಂಗ್ ಸ್ಟರ್ ಆಗಿರುವ ಲಾರೆನ್ಸ್ ಬಿಷ್ನೋಯ್ ಹೆಸರನ್ನ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಕೆತ್ತಲಾಗಿತ್ತು. ದುಷ್ಕರ್ಮಿಗಳು ಒಂದು ತಿಂಗಳ…

Read More

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಸ್ತೆಯಲ್ಲಿ ವಾಹನಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಗೋರಿಪಾಳ್ಯ ಜಂಕ್ಷನ್ ನಲ್ಲಿ ನಿಂತಿದ್ದ ಎರಡು ಆಟೋ ಮತ್ತು ಒಂದು ದ್ವಿಚಕ್ರ ವಾಹನ ಹಾಗೂ ಮಿನಿ ಗೂಡ್ಸ್ ವಾಹನಕ್ಕೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಡಿಪೋ 35ಕ್ಕೆ ಸೇರಿದ KA 51 AK 6230 ಬಸ್ ಅಡಿಕೆ ಹೊಡೆದಿದೆ ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತವಾಗಿದೆ.ಕೆಆರ್ ಮಾರ್ಕೆಟ್ ಮತ್ತು ತಾವರೆಕೆರೆ ನಡುವೆ ಈ ಒಂದು ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿತ್ತು. ಪ್ರಯಾಣಿಕ ಮತ್ತು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿದ್ದು, ತಕ್ಷಣ ಗಾಯಾಳುಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಮರಾಜಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ ಮಾದಕದ್ರವ್ಯ ವಿರೋಧಿ ಕಾರ್ಯಪಡೆ (ANTF)ಗೆ ಇಂದು ಚಾಲನೆ ನೀಡಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಒಂದು ಕಾರ್ಯಪಡೆಗೆ ಚಾಲನೆ ನೀಡಿದ್ದಾರೆ.66 ಸಿಬ್ಬಂದಿಗಳ ಅನುಮೋದಿತ ಬಲದೊಂದಿಗೆ ಮಾದಕವಸ್ತು ನಿಗ್ರಹ ದಳವನ್ನು ರಚಿಸಿ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರು ನೂತನ ಕಾರ್ಯಪಡೆಗೆ ಚಾಲನೆ ನೀಡಿದರು. ಹೇಗೆ ಕಾರ್ಯ ನಿರ್ವಹಿಸಲಿದೆ? ಕೇಂದ್ರ ತನಿಖಾ ಸಂಸ್ಥೆಯಾಗಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾದರಿಯಲ್ಲಿ ಕಾರ್ಯ ನಿರ್ವಹಿಸಿಸಲಿರುವ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ, ಬೆಂಗಳೂರು ಸೇರಿದಂತೆ ರಾಜ್ಯದ ಇತರ ನಗರಗಳು ಮಾತ್ರವಲ್ಲದೆ ಜಿಲ್ಲೆಗಳಲ್ಲಿನ ಸಂಘಟಿತ ಮಾದಕವಸ್ತು ಜಾಲಗಳನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸಲಿದೆ. ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ…

Read More

ಬೆಂಗಳೂರು : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನಲ್ಲಿ ರೋಡ್ ರೋಮಿಯೋ ಕಿರುಕುಳದಿಂದ ಅಪ್ರಾಪ್ತೆ ಬಾಲಕಿಯೊಬ್ಬಳು ಹೆಣವಾಗಿದ್ದಾಳೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಲವ್ ಹೆಸರಿನಲ್ಲಿ ಅಪ್ರಾಪ್ತ ಹಿಂದೆ ಮನೋಜ್ ಎಂಬ ಯುವಕ ಬಿದ್ದಿದ್ದ ಲೈಂಗಿಕವಾಗಿ ಬಳಸಿಕೊಳ್ಳಲು ಗ್ಯಾಂಗ್ ಒಂದು ಆಕೆಯನ್ನು ಕರೆದೊಯ್ಯುತ್ತಿತ್ತು. ಬೈಕ್ ನಲ್ಲಿ ಕರೆದೋಯ್ಯುವಾಗ ಅಪಘಾತ ಸಂಭವಿಸಿ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ. ಲೈಂಗಿಕವಾಗಿ ಬಳಸಿಕೊಳ್ಳಲು ಆಕೆಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುವಾಗ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ. 9ನೇ ತರಗತಿ ಓದುತ್ತಿದ್ದ ಬಾಲಕಿಯ ಹಿಂದೆ ಮನೋಜ್ ಹಿಂದೆ ಬಿದ್ದಿದ್ದ ಪದೇ ಪದೇ ಕರೆ ಮಾಡಿ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಕ್ಟೋಬರ್ 24ರಂದು ಮನೋಜ್ ಕರೆದುಕೊಂಡು ಹೋಗಿದ್ದಾನೆ ಎರಡು ಬೈಕ್ಗಳಲ್ಲಿ ಹೊಸಕೋಟೆ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾನೆ. ಬಾಲಕಿ ಮನೋಜ್ ಮತ್ತು ಮತ್ತೋರ್ವ ಒಂದು ಬೈಕ್ನಲ್ಲಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯಕರ. ಪ್ರಿಯತಮೆಗಾಗಿ ದುಬಾರಿ ಮೊಬೈಲ್‌ಗಳನ್ನು ಪ್ರಿಯಕರ ಕಳ್ಳತನ ಮಾಡಿದ್ದಾನೆ. ಕಳೆದ ವಾರ ಒಂದೇ ರಾತ್ರಿ ಎರಡು ಶೋ ರೂಮ್ಗೆ ಕನ್ನ ಹಾಕಿದ್ದಾನೆ. 30ಕ್ಕೂ ಹೆಚ್ಚು ದುಬಾರಿ ಮೊಬೈಲ್ ಗಳನ್ನ ಕಳ್ಳತನ ಮಾಡಿದ್ದಾನೆ. ಸ್ನೇಹಿತನೊಂದಿಗೆ ಸೇರಿ ಸುಮಾರು 30ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮೊಬೈಲ್ ಕಳ್ಳತನ ಮಾಡಿದ್ದಾನೆ. ಪತಿ ಬಿಟ್ಟು ಮಹಿಳೆ ಅಸ್ಮಿತ ಕಳ್ಳನ ಜೊತೆಗೆ ಲಿವ್ ಇನ್ ರಿಲೇಶನ್ ನಲ್ಲಿ ಇದ್ದಳು ಪ್ರಿಯಕರ ತಂದುಕೊಟ್ಟ ಮೊಬೈಲ್ ಅನ್ನು ಪ್ರೇಯಸಿ ಸೇಲ್ ಮಾಡುತ್ತಿದ್ದಳು. ಪ್ರಿಯಕರ ದಿವಾಸ್ ಗೆಳೆಯ ಆರೋಹನ ಹಾಗೂ ಪ್ರೇಯಸಿ ಅಸ್ಮಿತಾಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಪ್ರಿಯಕರ ಕಳ್ಳತನ ಮಾಡಿ ಗಿಫ್ಟ್ ಕೊಡಬೇಕು ಅಂತ ಅಲ್ಲ. ಕದ್ದ ಮೊಬೈಲ್ ಗಳನ್ನ ಅಸ್ಮಿತಾಗೆ ತಂದು ಆತ ಕೊಡುತ್ತಿದ್ದ ಪ್ರೇಯಸಿ ಅಸ್ಮಿತ ಅದನ್ನು ಮಾರಾಟ ಮಾಡುತ್ತಿದ್ದಳು 30 ಲಕ್ಷದ ಒಟ್ಟು 28 ಮೊಬೈಲ್ ಹಾಗೂ ವಾಚ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವರ್ತೂರು ಪೋಲಿಸರಿಂದ…

Read More