Author: kannadanewsnow05

ಬೆಂಗಳೂರು, :ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ. ಮಂಜುನಾಥ್ ಅವರಿಗೆ ಅಭಿನಂದನೆಗಳು: ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗು ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿದೆ. ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು. 2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ5 ರಷ್ಟು ಕುಸಿದಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್…

Read More

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗು ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮದ ಹೆಸರಲ್ಲಿ ಮತ ಕೇಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿಯಾಗಲು ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಗ್ರಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನೀರೀಕ್ಷೆಯಂತೆ ರಾಜ್ಯದಲ್ಲಿ ಹೆಚ್ಚು ಸೀಟ್ ಗೆಲ್ಲಲು ಆಗಲಿಲ್ಲ. ಪ್ರಧಾನಿ ಮೋದಿಗೆ ಸೋಲುವ ಭೀತಿ ಇತ್ತು.ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಹೇಳಿದರು.ಆದರೆ ಚುನಾವಣೆಯಲ್ಲಿ ಇದು ಯಾವುದು ವರ್ಕ್ ಔಟ್ ಆಗಲಿಲ್ಲ. ಬಿಜೆಪಿಗೆ ಕಳೆದ ಬಾರಿಗಿಂತ ಸೀಟ್ ಕಡಿಮೆಯಾಗಿದೆ.ಪ್ರಧಾನಿಯಾಗಲು ನರೇಂದ್ರ ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದರು. ಸಿಎಂಗಳನ್ನು ಜೈಲಿಗೆ ಕಳುಹಿಸಿದರು ಈಡಿ ಸಿಬಿಐ ಬಳಸಿದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತಿ ದೊಡ್ಡ ಹಿನ್ನಡೆಯಾಗಿದೆ ಜೋಡೋ ಯಾತ್ರೆ ನ್ಯಾಯ ಯಾತ್ರೆಗೆ ಮನ್ನಣೆ ಸಿಕ್ಕಿದೆ ರಾಹುಲ್ ಯಾದರಿಗಳಿಂದಲೇ ಹೆಚ್ಚು ಮೈತ್ರಿ ಅಭ್ಯರ್ಥಿಗಳ ಜಯವಾಗಿದೆ…

Read More

ಬೆಂಗಳೂರು : ಲೋಕಸಭೆಯ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ನಿರೀಕ್ಷೆಯಂತೆ ಈ ಬಾರಿ ಏನ್ಡಿಎ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗಲಿಲ್ಲ ಅದರಂತೆ ಇಂಡಿಯಾ ಮೈತ್ರಿ ಕೂಟ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ದೇಶದಲ್ಲಿ ಮತ್ತು ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ನಲ್ಲಿ ಮತದಾನದ ಪ್ರಮಾಣ ಹೆಚ್ಚಳವಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಿಂದ ಗೆದ್ದಂತಹ ಬಿಜೆಪಿ ಇರಬಹುದು ಜೆಡಿಎಸ್ ಇರಬಹುದು ಅಥವಾ ಕಾಂಗ್ರೆಸ್ನವರು ಎಲ್ಲಾ ಸಂಸತ್ ಸದಸ್ಯರಿಗೆ ಅಭಿನಂದನೆ ಹೇಳಲಿಕ್ಕೆ ಬಯಸುತ್ತೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ಏನು ನಿರೀಕ್ಷೆ ಮಾಡಿತ್ತೋ ಆ ನಿರೀಕ್ಷೆಗೆ ಅನುಗುಣವಾಗಿ 10 ಸ್ಥಾನಗಳನ್ನು ಗೆಲ್ಲಿಕೆ ಸಾಧ್ಯವಾಗಿದೆ. ನಾವು ಸುಮಾರು ಹದಿನೈದರಿಂದ ಇಪ್ಪತ್ತು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಲೆಕ್ಕಾಚಾರ ಹಾಕಲಾಗಿತ್ತು.ಆದರೆ ನಮ್ಮ ಲೆಕ್ಕಚಾರದಂತೆ ಅದು ಆಗಲಿಲ್ಲ. ಆದರೆ 2019ರಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದಿದ್ದೆವು ಈ ಬಾರಿ 9 ಸ್ಥಾನಗಳನ್ನು ಗೆದ್ದಿದ್ದೇವೆ ಎಂದರು. ರಾಜ್ಯಕ್ಕೆ…

Read More

ಮಂಡ್ಯ : 2024ರ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಜನರ ಈ ಒಂದು ತೀರ್ಪಿಗೆ ನಾನು ತಲೆಬಾಗುತ್ತೇನೆ ಎಂದು ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ತಿಳಿಸಿದರು. ಅತಿ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ. ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ.ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ನನ್ನ ಮತದಾರ ಬಂಧುಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು,  ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯದ ಪೂರ್ವಕ ಅಭಿನಂದನೆಗಳು. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ, ಕ್ಷೇತ್ರದ ಶಾಸಕರಿಗೆ ಧನ್ಯವಾದಗಳು. ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರು,…

Read More

ನವದೆಹಲಿ : ಲೋಕಸಭೆ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು , ನಿರೀಕ್ಷೆಯಂತೆ ಎನ್ಡಿಎ ಹೆಚ್ಚಿನ ಸ್ಥಾನಗಳನ್ನು ಪಡೆಯುವ ವಿಫಲವಾಗಿದೆ. ಅದೇ ರೀತಿಯಾಗಿ, ಇಂಡಿಯಾ ಮೈತ್ರಿ ಕೂಟ ನಿರೀಕ್ಷೆಯಂತೆ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಂಡಿದೆ, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸುದ್ದಿಗೋಷ್ಠಿ ನಡೆಸಿದರು. ಸಂವಿಧಾನವನ್ನು ಉಳಿಸುವ ಮೊದಲ ಹೆಜ್ಜೆ ಜನರು ಇಟ್ಟಿದ್ದಾರೆ. ಸಂವಿಧಾನದ ರಕ್ಷಣೆಗಾಗಿ ಜನರು ಒಗ್ಗಟ್ಟಾಗಿ ಹೋರಾಡಿದ್ದಾರೆ. ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ರಾಹುಲ್ ಗಾಂಧಿ ಇದೆ ವೇಳೆ ತೋರಿಸಿದರು. ಸಂವಿಧಾನವನ್ನು ಉಳಿಸಲು ಹೋರಾಟ ಮಾಡಬೇಕಿತ್ತು.ಮೋದಿ ಅಮಿತ್ ಶಾ ಎಲ್ಲಾ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದರು. ಇಡೀ ಆಡಳಿತ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ್ದೇವೆ. ನಾವು ಕೇವಲ ರಾಜಕಾರಣಕ್ಕಾಗಿ ಹೋರಾಟ ಮಾಡಲಿಲ್ಲ ಎಂದು ದೆಹಲಿ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಎಲ್ಲಾ ಸಂಸ್ಥೆಗಳನ್ನ ಮೋದಿ, ಅಮಿತ್ ಶಾ ಬೆದರಿಸಿದ್ದರು. ಸಂವಿಧಾನವನ್ನು ಉಳಿಸುವ ಹೋರಾಟವಾಗಿತ್ತು. ನಮ್ಮ ಬ್ಯಾಂಕ್ ಅಕೌಂಟ್ ಸೀಸ್ ಮಾಡಿದಾಗ ನಮ್ಮ ಮುಖ್ಯಮಂತ್ರಿ ಅವರನ್ನು ಜೈಲಿಗೆ ಹಾಕಿದ್ದರು. ಒಂದಾಗಿ ಹೋರಾಡಬೇಕು ಅಂತ…

Read More

ಹಾವೇರಿ: ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಹಾವೇರಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು,ನನ್ನ ಗೆಲುವಿಗೆ ಕಾರಣರಾದ ಹಾವೇರಿ ಗದಗ ಜಿಲ್ಲೆಗಳ ಜನರಿಗೆ ಕೋಟಿ ಕೋಟಿ ನಮನಗಳು, ಮಹಾಜನತೆಯ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದೇನೆ ಎಂದು ಹೇಳಿದರು. ಈಗಾಗಲೇ ಸಂದೇಶ ಬಂದಿದೆ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ .ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನಶಕ್ತಿ ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ ಎಂದರು. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ.ನಮ್ಮ ಕಾರ್ಯಕರ್ತರಿಗೆ…

Read More

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಗೆಲುವು ಕುರಿತಾಗಿ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ಡಾ.ಮಂಜುನಾಥ್ ನ ಹರಕೆ ಕುರಿ ಮಾಡಿದ್ದಾರೆ ಎಂದಿದ್ದರೂ.ಇವತ್ತು ಯಾರು ಹರಕೆ ಕುರಿಯಾಗಿದ್ದಾರೆ ಎಂಬುದು ಫಲಿತಾಂಶದಿಂದ ತಿಳಿದಿದೆ.ಡಿ.ಕೆ.ಸುರೇಶ್ ರ 2019 ರ ಗೆಲುವಿಗೆ ಜೆಡಿಎಸ್ ಕಾರಣ.ಜೆಡಿಎಸ್ ಸಹಕಾರವೇ ಅವರ ಹಿಂದಿನ ಎರಡು ಗೆಲುವಿಗೆ ಕಾರಣ. ನಮ್ಮ ಪಕ್ಷವನ್ನ ಸರ್ವ ನಾಶ ಮಾಡಲು ಹೊರಟಿದ್ದರು.ಅದಕ್ಕೆ ಇಂದು ಜನರು ಉತ್ತರ ಕೊಟ್ಟಿದ್ದಾರೆ ಎಂದರು ಮಂಡ್ಯದಲ್ಲಿ ನೂತನ ಸಂಸದ ಕುಮಾರಸ್ವಾಮಿ ಸುದಿಗೋಷ್ಠಿಯಲ್ಲಿ ಮಾತನಾಡಿ,ಇದು ನನ್ನ ಗೆಲುವಲ್ಲ, ಮಂಡ್ಯ ಜಿಲ್ಲೆ ಜನರ ಗೆಲುವು. ನಾನು ಈ‌ ಚುನಾವಣೆಯಲ್ಲಿ ಪ್ರಚಾರ ಮಾಡಿಲ್ಲ. ಎರಡು ಪಕ್ಷದ ನಾಯಕರು, ಕಾರ್ಯಕರ್ತರ ಶ್ರಮದಿಂದ ಗೆಲುವು ಕಂಡಿದ್ದೇನೆ.ಈ‌ ಜಿಲ್ಲೆಯ ಜನರು ಋಣ ನಾನು ಹೊತ್ತಿದ್ದೇನೆ. ಭಗವಂತ‌ ಕೊಟ್ಟ ಅವಕಾಶವನ್ನ ಬಳಸಿಕೊಂಡು ಸಮಸ್ಯೆ ಪರಿಹಾರ ಮಾಡಲು ಪ್ರಯತ್ನಿಸುತ್ತೇನೆ.ಜನರ ನಿರೀಕ್ಷೆಗಳನ್ನ ಈಡೇರಿಸಲು ಪ್ರಾಮಾಣಿಕ ಪ್ರಯತ್ನ‌ ಮಾಡ್ತೇನೆ.ಎಲ್ಲ ಫ್ಯಾಕ್ಟರ್ ವರ್ಕ್ ನಿಂದ ಗೆಲುವು ಸಿಕ್ಕಿದೆ.ಪಕ್ಷಾತೀತವಾಗಿ ನನ್ನನ್ನ ಗೆಲ್ಲಿಸಿದ್ದಾರೆ. ಬೇರೆ ಪಕ್ಷದ ಮುಖಂಡರು‌ ಸಹಕರಿಸಿದ್ದಾರೆ.ಅವರ ನಿರೀಕ್ಷೆ…

Read More

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಿಂದ ಶೋಭ ಗೋ ಬ್ಯಾಕ್ ಅಭಿಯಾನ ಆದ ಬಳಿಕ ಬಿಜೆಪಿ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶುಭ ಕರಂದ್ಲಾಜೆ ಅವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಹೌದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆ ಭರ್ಜರಿ ಜಯ ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಗೆ 2,59,476 ಮತಗಳ ಅಂತರದಿಂದ ಜಯ ಸಿಕ್ಕಿದ್ದು, ಬಿಜೆಪಿಗೆ ಶೋಭಾ ಕರಂದ್ಲಾಜೆ ಅವರು 9,86,49 ಮತಗಳು ಪಡೆದುಕೊಂಡಿದ್ದಾರೆ. ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್ನ ಪ್ರೊ. ರಾಜೀವ್ ಗೌಡ ಅವರು 76,573 ಮತಗಳು ಪಡೆದುಕೊಂಡಿದ್ದಾರೆ.ಹೀಗಾಗಿ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯದರು ಸಂಭ್ರಮಾಚರಣೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರು ಇದೀಗ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Read More

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹಿಂದೂ ಪ್ರಕಟವಾಗಿದ್ದು ಕಳೆದ ಎರಡು ದಿನಗಳ ಹಿಂದೆ ಮತದಾನೋ ತರ ಸಮೀಕ್ಷೆಗಳು ಬಹಿರಂಗ ಪಡಿಸಿದ್ದ ಅಂಕಿ ಅಂಶಗಳು ಇದೀಗ ಸಂಪೂರ್ಣ ತಲೆಕೆಳಗಾಗಿವೆ ಎನ್‌ಡಿಎ ಮತ್ತು ಐಎನ್‌ಡಿಐಎ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇದೀಗ ಚುನಾವಣೆ ಫಲಿತಾಂಶದ ಕುರಿತು ಹಿರಿಯ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಕಾಶ್ ರೈ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ. ಅವನು ಈಗ ಬೇರೊಬ್ಬರ ಬೆಂಬಲದ ಸಹಾಯ ಪಡೆದುಕೊಳ್ಳುವಂತಾಗಿದೆ. ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ, ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮ ರೀತಿಯಲ್ಲಿ ಹೋರಾಡಿದ್ದು, ಇದು ಮುಂದುವರಿಯುತ್ತದೆ ಎಂದು ಪ್ರಕಾಶ್ ರೈ ಬರೆದುಕೊಂಡಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ 17 ಸ್ಥಾನ ಬಿಜೆಪಿ 9 ಸ್ಥಾನ ಕಾಂಗ್ರೆಸ್ ಹಾಗೂ 2 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ…

Read More