Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಬಳ್ಳಾಪುರ : ಚುನಾವಣೆಯ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ನಲ್ಲಿ ವ್ಯವಹಾರ ನಡೆಸಿದ್ದು, ಹಾಗೂ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಇದೀಗ ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿರುವ ಡಾ. ಕೆ ಸುಧಾಕರ್ ಅವರ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣೆ ವೇಳೆ ರಾಜ್ಯ ಸರ್ಕಾರದ ಚಿನ್ಹೆಯನ್ನು ಬಳಸಿ ಚುನಾವಣಾ ಆಯುಕ್ತರು ಬೆಂಗಳೂರು ವಿಭಾಗಕ್ಕೆ ಸುಧಾಕರ್ ಅವರು ಪತ್ರ ಬರೆದಿದ್ದರು. ಅಲ್ಲದೆ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿ ಇದೀಗ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ನಲ್ಲಿ ಚುನಾವಣಾ ಆಯುಕ್ತರು ಮತ್ತು ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಕ್ಕೆ ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಕೊಡಗು : ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್ಟಿ ಒಳ ಮೀಸಲಾತಿಗೆ ಕಮಿಷನ್ ರಚನೆ ಮಾಡಬೇಕು. ಈ ಮೂಲಕ ಎಸ್ಟಿ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದು ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕೊಡಗಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ, ಆದರೆ ಎಸ್ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ, ಸಿಎಂ ಬೊಮ್ಮಾಯಿ ಒಳಮೀಸಲಾತಿಗೆ ಆಯೋಗ ರಚಿಸಿದರು, ಈಗಿನ ಸರಕಾರ ಎಲ್ಲಾವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿ ಜನಗಣತಿ ಹೊರಗೆ ಬರಬೇಕು ಎಂದು ನಟ ಚೇತನ್ ಆಗ್ರಹಿಸಿದರು. ಇನ್ನು ಅಲೆಮಾರಿ ಜನಾಂಗದ ಅಭಿವೃದ್ಧಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ನೀಡಿರುವ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ನೀಡಿ ಎಂದು ನಟ ಚೇತನ್ ಆಗ್ರಪಡಿಸಿದರು.
ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದು ಅವರನ್ನು ಬಂಧಿಸಿದ್ದಾರೆ ಎಂದು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಹೇಮಾ ಅವರು ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ತೆಲುಗು ನಟಿ ಹೇಮಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ನಟಿ ಹೇಮಾ ಅವರು ಬುರ್ಖಾಹಾಕಿಕೊಂಡು ವಿಚಾರಣೆಗೆ ಬಂದಿದ್ದರು ಪಾರ್ಟಿಯಲ್ಲಿ ಹೇಮಾ ಡ್ರಗ್ಸ್…
ಉಡುಪಿ : ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪುತ್ತಿರುವವರ ಘಟನೆ ನಡೆದಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೂಡ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಟ್ರಾನ್ಸ್ಫಾರ್ಮರ್ ದುರಸ್ತಿಯ ವೇಳೆ ಸಲೀಂ 38 ಸಾವನ್ನುಪ್ಪಿರುವ ದುರ್ದೈವಿ ಎಂದು ಹೇಳಲಾಗುತ್ತಿದೆ ಬೈಂದೂರು ಮೆಸ್ಕಾಂ ನಲ್ಲಿ ಕಳೆದ 8 ವರ್ಷದಿಂದ ಸಲೀಂ ಕೆಲಸ ಮಾಡುತ್ತಿದ್ದರು ಬೈಂದೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗಾವಣೆಯಲ್ಲಿ ತೆಲಂಗಾಣಕ್ಕೆ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೈ ಹೈಕಮಾಂಡ್ಗೆ ತಲುಪಿಸಲು ಹಣ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜು ಹೇಳಿಕೆಯನ್ನು ನೀಡಿದ್ದು, ಈ ಒಂದು ಪ್ರಕರಣದಲ್ಲಿ ಸಿಎಂ ಸಹ ತಪ್ಪಿತಸ್ಥರು. ಅವರ ಒಂದು ನಿಗಾವಣೆಯಲ್ಲಿ ಹಣ ವರ್ಗಾವಣೆ ಮಾಡಲಾಗಿದೆ.ಇದು ಸಿಎಂ ಮೂಗಿನ ಅಡಿಯಲ್ಲಿ ನಡೆದ ಅಕ್ರಮವಾಗಿದೆ.ಆರ್ಥಿಕ ಇಲಾಖೆಯ ಅನುಮತಿ ಇಲ್ಲದೆ ಹಣ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ತೆಲಂಗಾಣ ಚುನಾವಣೆಗೆ ದಲಿತರ ಹಣವನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆಯಬೇಕು. ಇಲ್ಲದಿದ್ದರೆ ವಿಜಯೇಂದ್ರ ಹಾಗೂ ಆರ್ ಅಶೋಕ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಾಗುತ್ತದೆ.ಈ…
ಮಂಡ್ಯ : ಕಾವೇರಿ ನದಿಯಲ್ಲಿ ಅಪರಿಚಿತ ಮಹಿಳೆ ಪುರುಷನ ಶವ ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ಶವ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ನದಿಯಲ್ಲಿ ಶವಗಳು ತೇಲುತ್ತಿವೆ.ಈ ವೇಳೆ ಜನರು ತೇಲುತ್ತಿರುವ ಶವಗಳನ್ನು ನೋಡಲು ಮುಗಿಬಿದ್ದಿದ್ದಾರೆ. ಹೌದು ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ನದಿಯಲ್ಲಿ ತೇಲುತ್ತಿದ್ದು, ಜೋಡಿ ಶವ ನೋಡಲು ಈ ವೇಳೆ ಜನರು ಮುಗಿಬಿದ್ದರೂ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಹಾಗಾಗಿ ಹೇಮಾಗೆ ಸಿಸಿಬಿ ಎರಡು ಸಲ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ಮೊದಲ ಬಾರಿಗೆ ನಟಿ ಹೇಮಾ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅದರಂತೆ ಇಂದು ನಟಿ ಹೇಮಾಳನ್ನು ವಶಕ್ಕೆ ಪಡೆಯಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದ್ದಾರೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ…
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ ಬಿಎಂಟಿಸಿ ಬಸ್ ಮುಳುಗಡೆಯಾಗಿ ಪ್ರಯಾಣಿಕರು ಪ್ರಾಣಭಯದಲ್ಲಿ ಇದ್ದರು ಇವಳೇ ಸ್ಥಳದಲ್ಲಿದ್ದ ಜನರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವೇಸ್ತವಾಗಿದ್ದು, ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ BMTC ಬಸ್ ಸಿಲುಕಿ ಮುಳುಗಡೆಯಾಗಿದೆ. ನೆಲಮಂಗಲದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ಬಸ್ ಇದೀಗ ಸಂಪೂರ್ಣ ಮುಳುಗಡೆಯಾಗಿತ್ತು. ಈ ವೇಳೆ ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನಲ್ಲಿ ಸಿಲುಕಿದ್ದ ಸ್ತ್ರೀಯರು ಮಕ್ಕಳನ್ನು ಹೊರಗೆ ಕರೆತಂದ ಚಾಲಕ ಮತ್ತು ನಿರ್ವಾಹಕ. ಪ್ರತಿಬಾರಿ ಮಳೆ ಬಂದಾಗಲೂ ಈ ಒಂದು ಅಂಡರ್ ಪಾಸ್ ಸಂಪೂರ್ಣವಾಗಿ ಜಲಾವೃತವಾಗುತ್ತದೆ.ಹಲವು ಬಾರಿ ರಸ್ತೆಯನ್ನು ದುರಸ್ತಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಬಸ್ ನಲ್ಲಿ ಸಿಲುಕಿದ್ದ ಸ್ತ್ರೀಯರು ಮಕ್ಕಳು ಸಿರಿಗಂತೆ ಎಲ್ಲರನ್ನು ಚಾಲಕ್ ಮತ್ತು ನಿರ್ವಾಹಕರು ಸ್ಥಳೀಯರ ನೆರವನಿಂದ ರಕ್ಷಣೆ ಮಾಡಿದ್ದಾರೆ.…
ವಿಜಯಪುರ : ಜಿಲ್ಲೆಯ ತಿಕೋಟಾ ಸಮೀಪ ನಿನ್ನೆ ತಡರಾತ್ರಿ ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ನಡೆದ ರಸ್ತೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ರಾಮು ರಾಠೋಡ್ ಹಾಗೂ ಕಿಟ್ಟು ಎಂದು ಹೇಳಲಾಗುತ್ತಿದ್ದು, ಬಸ್ ತೆರಳುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿಯಾಗಿ ರಾಮು ಕಿಟ್ಟು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯ ರತ್ನಾಪುರ ಕ್ರಾಸ್ ಬಳಿ ಈ ಒಂದು ಅಪಘಾತ ನಡೆದಿದೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯಾದ್ಯಂತ ಇಂದು ನೈರುತ್ಯ ಮನ್ಸೂನ್ ಪ್ರವೇಶ ಮಾಡಿದ್ದೂ, ಇಂದು ಬೆಂಗಳೂರಿನ ಹಲವಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕೂಡ ಭಾರಿ ಮಳೆಯಾಗಿದೆ. ಅಲ್ಲದೆ ಇತ್ತ ಮಹಾಲಕ್ಷ್ಮಿ ಲೇಔಟ್ ನ ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರ ಧರೆಗೊಳದಿದ್ದರಿಂದ ಕಾರಿನ ಮುಂಭಾಗ ಭಾಗಶಹ ಜಿತಮ್ಗೊಂಡಿದೆ ಚಾಲಕ ಕಾರು ನಿಲ್ಲಿಸಿ ತೆರಳಿದ ಬಳಿಕ ಮರ ಬಿದ್ದಿದ್ದರಿಂದ ದುರಂತ ಒಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಗಳೂರಿನ ಹೊಸನಗರ, ಶಾಂತಿನಗರ, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ರಾಜಾಜಿನಗರ ಬನಶಂಕರಿ ಸಿಟಿ ಮಾರ್ಕೆಟ್ ನಗರದ ಬಹುತೇಕ ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ ಮಳೆಯಲ್ಲಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ ಘಟನೆ ನಡೆಯಿತು. ಮೆಜೆಸ್ಟಿಕ್ ರಾಜಾಜಿನಗರ ಮಲ್ಲೇಶ್ವರಂ, ಶಾಂತಿನಗರ, ವಿಧಾನಸೌಧ ಟೌನ್ ಹಾಲ್ ಕೆಆರ್ ಮಾರ್ಕೆಟ್ ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಶಿವಾಜಿನಗರ, ಜಯನಗರ, ಸದಾಶಿವನಗರ, ಹೆಬ್ಬಾಳ, ಯಲಹಂಕ ವಿಜಯನಗರ, ಮೈಸೂರು ರಸ್ತೆ, ಕೆಂಗೇರಿ, ಮಾಗಡಿ ರಸ್ತೆ,…












