Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆಗೊಳಿಸಿ ಬಿಗ್ ರಿಲೀಫ್ ನೀಡಿದೆ. ಹೌದು 2014ರ ಮಾರ್ಚ್ನಲ್ಲಿ, 24 ಜನರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಇ.ಡಿ ಪ್ರಕರಣ ದಾಖಲಿಸಿತ್ತು. ಖಾಸಗಿ ಕಂಪೆನಿ ಮುಖಾಂತರ ಶೋಭಾ ಕರಂದ್ಲಾಜೆ ಅವರ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಒಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 24ನೇ ಆರೋಪಿಯಾಗಿದ್ದ ಅವರು, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಪ್ರಕರಣದಿಂದ ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಸೇರಿದ್ದಾರೆ. ಶೋಭಾ ಕರಂದ್ಲಾಜೆಯವರ ವಿರುದ್ಧ 44 ಕೋಟಿ ರೂ.ಗಳ ಹಗರಣದ…
ಮೈಸೂರು : ತನ್ನದಲ್ಲದ ತಪ್ಪಿಗೆ ಮನನೊಂದು ಕಳ್ಳತನ ಆರೋಪ ಹೊರೆಸಿದ್ದಾರೆಂದು ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಹೌದು ಮೈಸೂರು ಜಿಲ್ಲೆಯ ನಂಜನಗೂಡು ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲ್ಮಲಿ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯನಿರ್ವಹಿಸುತ್ತಿದ್ದ ನಂಜೇಶ್ ಎಂಬಾತ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ. ನಂಜೇಶ್ ನಂಜನಗೂಡಿನ ಮಹದೇವ ನಗರದ ನಿವಾಸಿ ಎಂದು ಹೇಳಲಾಗುತ್ತಿದೆ. ನಂಜೇಶ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಂಜೇಶ್ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಆವರಣದಲ್ಲಿ ಇದೀಗ ನೇಣಿಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ನಂಜನಗೂಡಿನ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೂ ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಪ್ರವೇಶಿಸಿದ್ದು, ಮುಂಗಾರು ಮಾರುತಗಳು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಆವರಿಸಿದ್ದು ಇದೀಗ ನಿರಂತರ ಗುಡುಗು ಸಹಿತ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.ಅಲ್ಲದೆ 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ…
ಚಿಕ್ಕಬಳ್ಳಾಪುರ : ಚುನಾವಣೆಯ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ನಲ್ಲಿ ವ್ಯವಹಾರ ನಡೆಸಿದ್ದು, ಹಾಗೂ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಇದೀಗ ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿರುವ ಡಾ. ಕೆ ಸುಧಾಕರ್ ಅವರ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣೆ ವೇಳೆ ರಾಜ್ಯ ಸರ್ಕಾರದ ಚಿನ್ಹೆಯನ್ನು ಬಳಸಿ ಚುನಾವಣಾ ಆಯುಕ್ತರು ಬೆಂಗಳೂರು ವಿಭಾಗಕ್ಕೆ ಸುಧಾಕರ್ ಅವರು ಪತ್ರ ಬರೆದಿದ್ದರು. ಅಲ್ಲದೆ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿ ಇದೀಗ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ನಲ್ಲಿ ಚುನಾವಣಾ ಆಯುಕ್ತರು ಮತ್ತು ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಕ್ಕೆ ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಕೊಡಗು : ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್ಟಿ ಒಳ ಮೀಸಲಾತಿಗೆ ಕಮಿಷನ್ ರಚನೆ ಮಾಡಬೇಕು. ಈ ಮೂಲಕ ಎಸ್ಟಿ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದು ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕೊಡಗಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ, ಆದರೆ ಎಸ್ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ, ಸಿಎಂ ಬೊಮ್ಮಾಯಿ ಒಳಮೀಸಲಾತಿಗೆ ಆಯೋಗ ರಚಿಸಿದರು, ಈಗಿನ ಸರಕಾರ ಎಲ್ಲಾವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿ ಜನಗಣತಿ ಹೊರಗೆ ಬರಬೇಕು ಎಂದು ನಟ ಚೇತನ್ ಆಗ್ರಹಿಸಿದರು. ಇನ್ನು ಅಲೆಮಾರಿ ಜನಾಂಗದ ಅಭಿವೃದ್ಧಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ನೀಡಿರುವ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ನೀಡಿ ಎಂದು ನಟ ಚೇತನ್ ಆಗ್ರಪಡಿಸಿದರು.
ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದು ಅವರನ್ನು ಬಂಧಿಸಿದ್ದಾರೆ ಎಂದು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಹೇಮಾ ಅವರು ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ತೆಲುಗು ನಟಿ ಹೇಮಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ನಟಿ ಹೇಮಾ ಅವರು ಬುರ್ಖಾಹಾಕಿಕೊಂಡು ವಿಚಾರಣೆಗೆ ಬಂದಿದ್ದರು ಪಾರ್ಟಿಯಲ್ಲಿ ಹೇಮಾ ಡ್ರಗ್ಸ್…
ಉಡುಪಿ : ನಿನ್ನೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪುತ್ತಿರುವವರ ಘಟನೆ ನಡೆದಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಕೂಡ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಟ್ರಾನ್ಸ್ಫಾರ್ಮರ್ ದುರಸ್ತಿಯ ವೇಳೆ ಸಲೀಂ 38 ಸಾವನ್ನುಪ್ಪಿರುವ ದುರ್ದೈವಿ ಎಂದು ಹೇಳಲಾಗುತ್ತಿದೆ ಬೈಂದೂರು ಮೆಸ್ಕಾಂ ನಲ್ಲಿ ಕಳೆದ 8 ವರ್ಷದಿಂದ ಸಲೀಂ ಕೆಲಸ ಮಾಡುತ್ತಿದ್ದರು ಬೈಂದೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗಾವಣೆಯಲ್ಲಿ ತೆಲಂಗಾಣಕ್ಕೆ ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆಗಿದೆ ಎಂದು ಗಂಭೀರ ಆರೋಪ ಮಾಡಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೈ ಹೈಕಮಾಂಡ್ಗೆ ತಲುಪಿಸಲು ಹಣ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜು ಹೇಳಿಕೆಯನ್ನು ನೀಡಿದ್ದು, ಈ ಒಂದು ಪ್ರಕರಣದಲ್ಲಿ ಸಿಎಂ ಸಹ ತಪ್ಪಿತಸ್ಥರು. ಅವರ ಒಂದು ನಿಗಾವಣೆಯಲ್ಲಿ ಹಣ ವರ್ಗಾವಣೆ ಮಾಡಲಾಗಿದೆ.ಇದು ಸಿಎಂ ಮೂಗಿನ ಅಡಿಯಲ್ಲಿ ನಡೆದ ಅಕ್ರಮವಾಗಿದೆ.ಆರ್ಥಿಕ ಇಲಾಖೆಯ ಅನುಮತಿ ಇಲ್ಲದೆ ಹಣ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ತೆಲಂಗಾಣ ಚುನಾವಣೆಗೆ ದಲಿತರ ಹಣವನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆಯಬೇಕು. ಇಲ್ಲದಿದ್ದರೆ ವಿಜಯೇಂದ್ರ ಹಾಗೂ ಆರ್ ಅಶೋಕ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಲಾಗುತ್ತದೆ.ಈ…
ಮಂಡ್ಯ : ಕಾವೇರಿ ನದಿಯಲ್ಲಿ ಅಪರಿಚಿತ ಮಹಿಳೆ ಪುರುಷನ ಶವ ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಂತೆಮಾಳದ ಬಳಿ ಶವ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ನದಿಯಲ್ಲಿ ಶವಗಳು ತೇಲುತ್ತಿವೆ.ಈ ವೇಳೆ ಜನರು ತೇಲುತ್ತಿರುವ ಶವಗಳನ್ನು ನೋಡಲು ಮುಗಿಬಿದ್ದಿದ್ದಾರೆ. ಹೌದು ಕಾವೇರಿ ನದಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವಗಳು ನದಿಯಲ್ಲಿ ತೇಲುತ್ತಿದ್ದು, ಜೋಡಿ ಶವ ನೋಡಲು ಈ ವೇಳೆ ಜನರು ಮುಗಿಬಿದ್ದರೂ. ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಹಾಗಾಗಿ ಹೇಮಾಗೆ ಸಿಸಿಬಿ ಎರಡು ಸಲ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ಮೊದಲ ಬಾರಿಗೆ ನಟಿ ಹೇಮಾ ಅವರು ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅದರಂತೆ ಇಂದು ನಟಿ ಹೇಮಾಳನ್ನು ವಶಕ್ಕೆ ಪಡೆಯಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದ್ದಾರೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ…












