Author: kannadanewsnow05

ಬೆಂಗಳೂರು : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಅವಧಿ ಮುಗಿಯೋದರ ಒಳಗಾಗಿ ಜಾತಿ ಗಣತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು ಇಂದು ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ ನೀಡಿದರು. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿದ್ದರೆ ಬೀಳಲಿ ಬಿಡಿ ಯಾಕೆ ಹೆದರುತ್ತೀರ? ಜಾತಿಗಣತಿ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಸರ್ಕಾರ ಯಾಕೆ ಯೋಚನೆ ಮಾಡುತ್ತೀದೆ ಅರ್ಥ ಆಗ್ತಿಲ್ಲ.ಮೀನಾ ಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿಗೆ ಮಾಡಲಿ ಜಾತಿಗಣತಿ ಜಾರಿಯಿಂದ ಎಲ್ಲಾ ಸಮುದಾಯಕ್ಕೆ ಅನುಕೂಲ ಆಗಲಿದೆ ಜಾತಿಗಣತಿ ಜಾರಿಯಿಂದಲೇ ಸರ್ಕಾರ ಹೋಗುತ್ತದೆ ಅಂದರೆ ಹೋಗಲಿ. ಎಂದು ಅವರು ತಿಳಿಸಿದರು. ಜಾತಿ ಗಣತಿ ಎನ್ನುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಮುಖ ಅಂಶವಾಗಿದೆ. ಜಾತಿಗಣತಿ ಜಾರಿಗೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ…

Read More

ಮಂಗಳೂರು : ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ದಿಢೀರ್ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದೆ. ಆದರೆ ಈ ಒಂದು ಪ್ರಕರಣಕ್ಕೆ ಇದೀಗ ಸ್ಪೋಟಕವಾದ ಟ್ವಿಸ್ಟ್ ಸಿಕ್ಕಿದ್ದು ಆತ್ಮಹತ್ಯೆಗೆ ಮಹಿಳೆಯ ಕಿರುಕುಳವೇ ಕಾರಣ ಎಂದು ಹೇಳಲಾಗುತ್ತಿದೆ. ಹೌದು ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಮಹಿಳೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯಿಂದ ಮುಮ್ತಾಜ್ ಅಲಿಗೆ ನಿರಂತರವಾಗಿ ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಮದುವೆ ಆಗುವಂತೆ ಮುಮ್ತಾಜಿಗೆ ಮಹಿಳೆ ಪಿಡಿಸುತ್ತಿದ್ದಳು ಎಂಬ ಗುಮಾನಿ ಕೇಳಿಬಂದಿದೆ. ಅಲ್ಲದೆ ಮಹಿಳೆಯ ಬ್ಲಾಕ್ ಮೆಲ್ ಗೆ ನಾಲ್ವರು ಸಹಕಾರ ಕೊಟ್ಟಿದ್ದಾರೆ. ಸೂರತ್ಕಲ್ ಮೂಲದ ನಾಲ್ವರ ಬ್ಲಾಕ್ ಮೆಲ್ ಗೆ ಸಹಕಾರ ನೀಡಿರುವ ಗುಮಾನಿ ಎದ್ದಿದೆ. ಮಸೀದಿ ಕಮಿಟಿ ವಿಚಾರದಲ್ಲಿ ಮುಮ್ತಾಜ್ ನಾಲ್ವರ ಜೊತೆ ಗಲಾಟೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೆ…

Read More

ಬೆಂಗಳೂರು : ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಪೊಲೀಸರು ಹಲವಾರು ಕಠಿಣ ಕ್ರಮ ಕೈಗೊಂಡರು ಸಹ ಚಾಲಾಕಿ ಖದೀಮರು ಯಾವುದೊ ಒಂದು ಮಾರ್ಗ ಬಳಸಿ ಇದನ್ನ ಮಾರಾಟ ಮಾಡಿತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವಿದೇಶಿ ಪೋಸ್ಟ್ ಆಫೀಸ್ ಗಳಿಗೆ ವಿದೇಶದಿಂದಲೇ ಮಾದಕ ವಸ್ತುಗಳ ಪಾರ್ಸೆಲ್ ಬರುತ್ತೀವೆ. ಹೌದು ಅಪರಿಚಿತ ವ್ಯಕ್ತಿಗಳ ವಿಳಾಸಕ್ಕೆ ವಿದೇಶಗಳಿಂದ ಮಾದಕ ವಸ್ತುಗಳು ಬರುತ್ತಿದೆ. ಕಳೆದ ಅಕ್ಟೋಬರ್ 1 ರಂದು ಸಿಸಿಬಿ ಅಧಿಕಾರಿಗಳಿಗೆ ಈ ಬಗ್ಗೆ ಫಾರಿನ್ ಪೋಸ್ಟ್ ಆಫೀಸ್ ನಿಂದ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಶ್ವಾನ ದಳದ ಸಮೇತ ಸಿಸಿಬಿ ನಾರ್ಕೋಟಿಕ್ ವಿಂಗ್ ದಾಳಿ ನಡೆಸಿದ್ದು ಈ ವೇಳೆ ಪಾರ್ಸೆಲ್ ಗಳನ್ನ ಕಂಡು ಶ್ವಾನದಳ ಅನುಮಾನಾಸ್ಪದವಾಗಿ ವರ್ತಿಸಿದೆ. ಕೂಡಲೇ ಆ ಪಾರ್ಸೆಲ್ ವಶಕ್ಕೆ ಪಡೆದು ಟೆಸ್ಟ್​ಗೆ ಕಳುಹಿಸಿದಾಗ ಅದರಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ. ಎಂಡಿಎಂಎ, ಕೊಕೇನ್ ಹಾಗೂ ಬ್ರೌನ್ ಶುಗರ್ ಬೆಂಗಳೂರಿಗೆ ಬರುತ್ತಿದೆ. ವಿದೇಶಗಳಿಂದ ನಗರದ ವಿದೇಶಿ ಪೋಸ್ಟ್ ಆಫೀಸ್​ಗೆ ಮಾದಕ ವಸ್ತುಗಳು ಬರ್ತಿವೆ ಎಂಬ ಸ್ಪೋಟಕ ವಿಚಾರ…

Read More

ದಕ್ಷಿಣಕನ್ನಡ : ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪ್ರಾಧ್ಯಪಕ ಹೇಳಿದ್ದೇನು? ನವದಂಪತಿ ಸಮಾವೇಶದಲ್ಲಿ ಬಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು. ಇವರ…

Read More

ಚಿತ್ರದುರ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇನ್ನೊಂದೆಡೆ ವಿಪಕ್ಷ ನಾಯಕರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಕುರಿತಾಗಿ ಬಿ ವೈ ವಿಜಯೇಂದ್ರ ಅವರು ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಹಿಂದಕ್ಕೆ ಮೋಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಹಿಂದಕ್ಕೆ ಮೋಸ ಮಾಡಿದ್ದಾರೆ. ವಾಲ್ಮೀಕಿ ಮುಡಾ ಹಗರಣದಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ. ಜನತೆ ಸಿಎಂ ಮತ್ತು ಸರ್ಕಾರದ ವಿರುದ್ಧ ಧ್ವನಿ ಎತ್ತುತಿದ್ದಾರೆ ಬಿಜೆಪಿ ರಾಜ್ಯಪಾಲರು ಏನು ಹೇಳಿದ್ದಾರೆ ಎಂಬುದು ಬದಿಗಿಡಿ, ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಲಿ ಎಂದು ಅವರು ಒತ್ತಾಯಿಸಿದರು.

Read More

ಚಿಕ್ಕಮಗಳೂರು : ಕೆರೆ ಒತ್ತುವರಿ ತೆರವಿಗಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ವೇಳೆ ರೈತನೊಬ್ಬ ತನ್ನ ಜಮೀನು ಕೂಡ ಅಧಿಕಾರಿಗಳು ತೆರವು ಮಾಡುತ್ತಾರೆ ಎಂದು ಆತಂಕಕ್ಕೆ ಒಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಕೆ.ಆರ್.ಪೇಟೆ ಸಮೀಪದ ಕೆಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂಡ ರೈತನನ್ನು ಮಲ್ಲೇಶ್ (38) ಎಂದು ತಿಳಿದುಬಂದಿದೆ.ಮೃತ ಮಲ್ಲೇಶ್ ಗ್ರಾಮದ ಕೆರೆ ಪಕ್ಕ 14 ಗುಂಟೆ ಒತ್ತುವರಿ ಮಾಡಿದ್ದರು. ಮಲ್ಲೇಶ್ ತನ್ನ ಸಕ್ರಮ ಜಮೀನಿನ ಜೊತೆ ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆದಿದ್ದರು. ಹಾಗಾಗಿ ಕೆಲವು ದಿನಗಳ ಹಿಂದೆ ಕೆರೆ ಒತ್ತುವರಿ ತೆರವುಗೊಳಿಸಲು ಸರ್ವೇ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ನಡೆಸಿ ವರದಿಯನ್ನು ತಯಾರು ಮಾಡಿ ನೋಟೀಸ್ ನೀಡಿದ್ದರು. ಮೃತ ಮಲ್ಲೇಶ್ ತನ್ನ ಸಕ್ರಮ ಜಮೀನಿನ ಜೊತೆ ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆದಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡುತ್ತಿದ್ದಂತೆ ಭಯಗೊಂಡು ಕಾಫಿಗೆ ಸಿಂಪಡಿಸಲು ತಂದಿದ್ದ ಕಳೆನಾಶಕವನ್ನೇ…

Read More

ಗದಗ : ಜಾತಿಗಣತಿ ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ಜಾತಿಗಣತಿ ಪ್ರಾಮಾಣಿಕವಾಗಿ, ಪಾರದರ್ಶಕವಾಗಿರಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಗದಗದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಜಾತಿಗಣತಿ ಮಾಡಲು ನಮ್ಮದು ಸಂಪೂರ್ಣ ಸಹಕಾರವಿದೆ. ಅವೈಜ್ಞಾನಿಕವಾಗಿರುವ, ದುರುದ್ದೇಶ ಕೂಡಿರುವ, ಸಮುದಾಯಗಳಿಗೆ ನೋವುಂಟು ಮಾಡುವ ಯಾವುದೇ ಜಾತಿಗಣತಿಯನ್ನು ಪಂಚಮಸಾಲಿ ಒಪ್ಪೊದಿಲ್ಲ. ಜಾತಿಗಣತಿ ಯಾವುದೇ ಸಮುದಾಯ ಟಾರ್ಗೆಟ್ ಮಾಡದ ರೀತಿಯಲ್ಲಿ ಇರಬಾರದು. ಎಲ್ಲಾ ಸಮುದಾಯದ ನಿಖರವಾದ ಮಾಹಿತಿ ಪಡೆದುಕೊಂಡಿರಬೇಕು ಎಂದರು. ಕಾನೂನಾತ್ಮಕವಾಗಿ ದತ್ತಾಂಶ ಕ್ರೂಢಿಕರಣ ಇರಬೇಕು. ಇನ್ನು ಒಳ ಮೀಸಲಾತಿ ಎಸ್.ಸಿ, ಎಸ್.ಟಿ ಗೆ ಸಂಬಂಧಿಸಿದ್ದು. ಪಂಚಮಸಾಲಿ ನಾವು 3-ಬಿ ನಲ್ಲಿದ್ದೇವೆ. ನಮ್ಮ ಸಮುದಾಯಲ್ಲಿರುವ ಜನಸಂಖ್ಯೆಗೆಯೇ ಮೀಸಲಾತಿ ಸಾಕಾಗುತ್ತಿಲ್ಲ. ಉದ್ಯೋಗ ಸಿಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಮೆರಿಟ್ ಮೇಲೆ ಸಹ ನ್ಯಾಯ ಸಿಗುತ್ತಿಲ್ಲ. ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಬೇಕು ಎಂದು ಕೇಳುತ್ತಿದ್ದೇವೆ. ಜಾತಿಗಣತಿ ವಿಚಾರದಲ್ಲಿ ಅನೇಕ ಕಡೆಗಳಲ್ಲಿ ಅಪಸ್ವರ ಎದ್ದಿದೆ. ಪ್ರಬಲ ಸಮುದಾಯಗಳ ಸಂಖ್ಯೆ ಕಡಿಮೆ ಇದೆ ಎಂಬ…

Read More

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್ ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ವರುಣ ಆರ್ಭಟಿಸಿದ್ದಾನೆ. ಭಾರಿ ಮಳೆಯಿಂದಾಗಿ ರಸ್ತೆಯಲ್ಲ ಸಂಪೂರ್ಣವಾಗಿ ಜಲಾವೃತವಾಗಿದ್ದವು. ಬೆಂಗಳೂರಿನ ಶಾಂತಿನಗರ, ಕೋರಮಂಗಲ, ರಿಚ್ಮಂಡ್ ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ.ಈ ವೇಳೆ ವಾಹನ ಸವಾರರು ಪರದಾಟ ನಡೆಸಿದರು.

Read More

ಚಿಕ್ಕಮಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರ ಷಡ್ಯಂತರಗಳಿಗೆ ನಾನು ಯಾವುದೇ ಕಾರಣಕ್ಕೂ ಹೆದರಲ್ಲ ಜಗ್ಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಹಿಂದೆ ರಾಕ್ಷಸರು ಕೂಡ ಹೆದರಲ್ಲ ಅಂತಿದ್ದರಂತೆ, ನಾವು ಹಾಗೆ ಅಂದುಕೊಳ್ಳಬಹುದಾ ಎಂದು ವ್ಯಂಗ್ಯವಾಡಿದ್ದಾರೆ. ಚಿಕ್ಕಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂಗೆ ಸಂವಿಧಾನ-ಕಾನೂನಿನ ಬಗ್ಗೆ ಭಯವಿಲ್ಲ.‌ ನೈತಿಕತೆ ಪ್ರಜ್ಞೆಯೂ ಇಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಹೆದರದಿದ್ದರೂ ಜನರಿಗೆ ಹೆದರಬೇಕು. ಅವರು ಜನರಿಗಿಂತಾ ದೊಡ್ಡವರಾ? ಜನ, ಸಂವಿಧಾನ, ಕಾನೂನು, ನ್ಯಾಯಾಲಯಕ್ಕೆ ಹೆದರಲ್ಲ ಅಂದ್ರೆ, ನಾವು ಮನುಷ್ಯರು ಅನ್ಕೊಳ್ಳಾದಾ? ರಾಕ್ಷಸರು ನಾವು ಯಾರಿಗೂ ಹೆದರಲ್ಲ ಅಂತಿದ್ರಂತೆ, ಹಾಗೇ ಅನ್ಕೋಬೇಕಾ ಎಂದು ವ್ಯಂಗ್ಯವಾಡಿದರು.‌ ಇಂದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನ ಸಮಾವೇಶದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಅಧಿಕಾರ-ಹಣ ಉಪಯೋಗಿಸಿಕೊಂಡು ಯಾವ ಸಮಾವೇಶ ಬೇಕಾದರೂ ಮಾಡಬಹುದು. ಆದರೆ, ಸಮಾವೇಶಗಳ ಮೂಲಕ ಭ್ರಷ್ಟಾಚಾರ ಮುಚ್ಚಿ ಹಾಕಲು ಆಗಲ್ಲ.…

Read More

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿವೆ. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಪ್ರತಿಕ್ರಿಯೆ ನೀಡಿ ೪೦% ಕಮಿಷನ್ ಹೊಡೆದು, ರಾಜ್ಯದ ಮರ್ಯಾದೆ ತೆಗೆದವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸ್ವಾಭಿಮಾನ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಘನತೆಗೆ ದಕ್ಕೆ ತರುವ ರೀತಿಯಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ.ಕೇಂದ್ರದ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುತ್ತಿದೆ.ಕರ್ನಾಟಕದ ಜನರ ಸ್ವಾಭಿಮಾನಕ್ಕೆ ಧಕ್ಕೆ ಆಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಕೋವಿಡ್ ವೇಳೆ ಲೂಟಿ ಮಾಡಿದವರು ನಮಗೆ ನೀತಿ ಪಾಠ ಮಾಡುತ್ತಿದ್ದಾರೆ.40% ಕಮಿಷನ್ ಮೂಲಕ ರಾಜ್ಯದ ಮರ್ಯಾದೆ ಹರಾಜು ಹಾಕಿದ್ದಾರೆ. ಅಂಥವರು ನಮಗೆ ನೀತಿ ಪಾಠ ಹೇಳುತ್ತಿದ್ದಾರೆ. ಅಂತವರಿಂದ ನೀತಿ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ನಮಗೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಆಕ್ರೋಶ…

Read More