Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಸಭೆ ಚುನಾವಣೆ ನಿಖರ ಫಲಿತಾಂಶ ಜೂನ್ 4ರಂದು ಹೊರ ಬೀಳಲಿದೆ. ಅದಕ್ಕೂ ಮುಂಚೆ ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ ಈ ಬಾರಿ ಮತ್ತೆ ಎನ್ ಡಿ ಎ ಬಹುಮತ ಪಡೆದು ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಲಿದ್ದಾರೆ ಎಂಬ ಸಮೀಕ್ಷೆಯನ್ನು ಬಹಿರಂಗ ಮಾಡಿದೆ. ಇನ್ನೂ ಈ ಕುರಿತು ಬಿಜೆಪಿಯ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್ ಪ್ರತಿಕ್ರಿಯ ನೀಡಿದ್ದು ಕಾಂಗ್ರೆಸ್ ಎಕ್ಸಿಟ್ ಪೋಲ್ ನಂಬುತ್ತಿಲ್ಲ ಅವರು ನಮಗೆ ಬಹುಮತ ಬರುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್ ಡಿ ಎ ಗೆ ಜನರು ಬಹುಮತ ನೀಡಲಿದ್ದಾರೆ. 360 ರಿಂದ 400 ಸೀಟ್ ಬರುತ್ತೆ ಅಂತ ಎಕ್ಸಿಟ್ ಪೋಲ್ ಹೇಳಿದೆ. ಕರ್ನಾಟಕ ಸೇರಿ ಬೇರೆ ರಾಜ್ಯದಲ್ಲೂ ಕೂಡ ಹೆಚ್ಚು ಸೀಟು ಬರುತ್ತವೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಯಾವುದೇ ಅಡೆತಡೆ ಇಲ್ಲದ ಫಲಿತಾಂಶವನ್ನು ಜನರು ನೀಡಿದ್ದಾರೆ ಎಂದರು.…
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ತಡ, ಮಹಿಳೆಯರಿಗೆ ಅನುಕೂಲವಾಗಲೆಂದು ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಿತು. ಯೋಜನೆ ಜಾರಿಗೆ ಬಂದಿದ್ದೆ ತಡ ಬಸ್ ನಲ್ಲಿ ಆಸನಕ್ಕಾಗಿ ಹೊಡೆದಾಟ ಬಡಿದಾಟ ಜಗಳ ಗಲಾಟೆ ನಡೆದಂತ ಪ್ರಸಂಗಗಳು ನಡೆದಿವೆ. ಇದೀಗ ಶಿವಮೊಗ್ಗದಲ್ಲಿ ಬಸ್ ಸೀಟ್ಗಾಗಿ ಮಹಿಳೆಯರಿಬ್ಬರೂ ಹೊಡೆದಾಡಿಕೊಂಡಿದ್ದು ಇವರ ಇಬ್ಬರ ಜಗಳ ಬಿಡಿಸಲಾಗದೆ ಬಸ್ಸಿನ ನಿರ್ವಾಹಕ ನೇರವಾಗಿ ಬಸ್ಸನ್ನು ಠಾಣೆ ಮುಂದೆ ನಿಲ್ಲಿಸಿ ಪೊಲೀಸರನ್ನು ಕರೆದು ನಿರ್ವಾಹಕ ಘಟನೆ ವಿವರಿಸಿದ್ದಾರೆ. ಸಾಗರ ನಿಲ್ದಾಣದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಸೀಟಿಗಾಗಿ ನಾರಿಯರಿಬ್ಬರ ನಡುವೆ ಜಗಳ ನಡೆದಿದೆ. ಜಗಳ ಬಿಡಿಸಲಾಗದೇ ನಿರ್ವಾಹಕ ಬಸ್ಸನ್ನು ನೇರವಾಗಿ ಸಾಗರಪೇಟೆ ಪೊಲೀಸ್ ಠಾಣೆಗೆ ಕೊಂಡೊಯ್ದ ಘಟನೆ ನಡೆದಿದೆ. ಬಸ್ಸನ್ನು ಠಾಣೆ ಮುಂದೆ ನಿಲ್ಲಿಸಿ ಪೊಲೀಸರನ್ನು ಕರೆದು ನಿರ್ವಾಹಕ ಘಟನೆ ವಿವರಿಸಿದ್ದಾರೆ. ನಾರಿಯರ ಜಗಳ ಬಗೆಹರಿಸಲಾಗದೆ ಹೈರಾಣಾದ ಪೊಲೀಸರು ಕೊನೆಗೆ ಬೇಸತ್ತು ಅವರಿಬ್ಬರನ್ನೂ ಕೆಳಗಿಳಿಸಿ ಬಸ್ ಕಳುಹಿಸಿದ್ದಾರೆ.
ಮೈಸೂರು : ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಸಿಗದೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. 15 ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇದೀಗ SIT ಅಧಿಕಾರಿಗಳು ಮೈಸೂರಿನ 5 ಸ್ಥಳಗಳಲ್ಲಿ ಭವಾನಿ ರೇವಣ್ಣ ಅವರಿಗೆ ಹುಡುಕಾಟ ನಡೆಸಿದ್ದಾರೆ. ಹಾಸನದ ಮೈಸೂರು ಜಿಲ್ಲೆಯಲ್ಲಿ 5 ಕಡೆ ಹುಡುಕಾಟ ನಡೆಸಿದ್ದಾರೆ. ಸಹೋದರಿ ಮಗನ ಮನೆ ಫಾರ್ಮ್ ಹೌಸ್ ಪರಿಚಯ ಗುತ್ತಿಗೆದಾರ ಹಾಗೂ ಫಾರ್ಮ್ ಹೌಸ್ ಸೇರಿದಂತೆ ಅವರ ಪರಿಚಯಸ್ಥರ ಮನೆಯಲ್ಲಿ SIT ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಭವಾನಿ ರೇವಣ್ಣಗೆ ಎಸ್ಐಟಿ ಎರಡೆರಡು ನೋಟಿಸ್ ಕೊಟ್ಟಿತ್ತು. ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ ಭವಾನಿ ಪತ್ರ ಬರೆದಿದ್ದರು. ಹಾಗಾಗಿ ಇಂದು ಬೆಳಿಗ್ಗೆಯಿಂದ ಪತ್ರದಂತೆ ಎಸ್ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಆದರೆ, ಮನೆಯೊಳಗೆ ಹೋದ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕಾದಿದೆ. ಭವಾನಿ ರೇವಣ್ಣ…
ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಬಹುನಿರೀಕ್ಷಿತ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಹೊರಬಂದಿವೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಲಿದೆ. ಆದ್ರೇ ಕರ್ನಾಟಕದಲ್ಲಿ ಇಂಡಿಯಾ ಬಣಕ್ಕೆ ಹಿನ್ನಡೆಯಾದ್ರೇ, ಕೇರಳದಲ್ಲಿ ಬಿಜೆಪಿ 2-3 ಸ್ಥಾನ ಗೆಲ್ಲುವುದಾಗಿ ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಇನ್ನು ಈ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡು ಅಂಕಿ ದಾಟುತ್ತದೆ. ಈ ಚುನಾವಣೆ ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ. ಕೆಲವರ ಅಭಿಪ್ರಾಯ ಮಾತ್ರ ಈ ಒಂದು ಸಮೀಕ್ಷೆಯಲ್ಲಿ ಸಂಗ್ರಹಿಸೀರುತ್ತಾರೆ ಅಷ್ಟೇ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಅಲ್ಲದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಡಿಕೆ ಶಿವಕುಮಾರ್ ಅವರು ಇದೇ ರೀತಿ ಒಂದು ಹೇಳಿಕೆಯನ್ನು ನೀಡಿದ್ದರು. ಯಾವುದೇ ಸಮೀಕ್ಷೆಯ ಮೇಲೆ ನನಗೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 130 ರಿಂದ 135 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿಕೆ ನೀಡಿದ್ದರು.…
ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ ಹಾಗೂ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಯುವತಿ ಕೊಲೆ ಮಾಡಲಾಗಿತ್ತು. ಅದೇ ರೀತಿ ಇದೀಗ ಹುಬ್ಬಳ್ಳಿಯ ಶಾಲೆಯ ಮುಖ್ಯ ಶಿಕ್ಷಕಿಗೆ ಬೆದರಿಕೆ ಪತ್ರ ಬಂದಿದ್ದು ನೆಹ ಹಾಗೂ ಅಂಜಲಿಯ ಹಾಗೆ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಕಿಡಿಗೇಡಿಗಳು ಬೆದರಿಕೆ ಪತ್ರ ಕಳಿಸಿದ್ದಾರೆ. ಹೌದು ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. ಮುಖ್ಯ ಶಿಕ್ಷಕಿ ದೀಪಾ ಅಡವಿಮಠ ಎನ್ನುವವರಿಗೆ ಕಳೆದ ಐದು ದಿನಗಳ ಹಿಂದೆ ಪೋಸ್ಟ್ ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಹಿನ್ನಲೆ ಹತ್ಯೆ ಬೆದರಿಕೆ ಪತ್ರದ ಕುರಿತು ಕೇಶ್ವಾಪೂರ ಪೊಲೀಸರ ಗಮನಕ್ಕೆ ಮುಖ್ಯ ಶಿಕ್ಷಕಿ ತಂದಿದ್ದು, ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮುಖ್ಯ ಶಿಕ್ಷಕಿ ಮನೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಕುರಿತಂತೆ ಮುಖ್ಯ ಶಿಕ್ಷಕಿ ದೀಪಾ ಅವರು ಮಾತನಾಡಿದ್ದು, ಮೇ. 28 ರಂದು ನನಗೆ ಅನಾಮಧೇಯ ಪತ್ರ ಬಂದಿದೆ.…
ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟದ ರಂಗನಾಥಸ್ವಾಮಿ ದರ್ಶನ ಪಡೆದು ವಾಪಾಸ್ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, 26 ಜನರು ಗಾಯಗೊಂಡಿರುವ ಘಟನೆ ಬಿಳಿಗಿರಿರಂಗನ ಬೆಟ್ಟದ ರಸ್ತೆಯಲ್ಲಿ ಗವಿ ಬೋರೆ ಬಳಿ ನಡೆದಿದೆ. ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಅಗಿನವಾಳು ಹಾಗೂ ಸುತ್ತಮುತ್ತಲ ಗ್ರಾಮಗಳ ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಗವಿಬೋರೆ ಇಳಿಜಾರಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ನಂಜನಗೂಡು ತಾಲ್ಲೂಕಿನ ಬಾಗೂರು, ಮಡನಳ್ಳಿ, ಹೂರಲ್ವಾಡಿ, ತಗಡೂರು ಕೆಬ್ಬೆಪುರ ಸುತ್ತಮುತ್ತಲ 60ಕ್ಕೂ ಹೆಚ್ಚು ಜನರು ಬಸ್ನಲ್ಲಿದ್ದರು. ಬಸ್ ಉರುಳಿ ಬಿದ್ದ ರಭಸಕ್ಕೆ ಬಹುತೇಕರಿಗೆ ಎದೆ, ಕೈಕಾಲು ಒತ್ತಿಕೊಂಡಂತೆ ಆಗಿದ್ದು, ಆಘಾತದಿಂದ ಅಸ್ವಸ್ಥಗೊಂಡರು. ಬಸ್ ಗವಿ ಬೋರೆ ಬಳಿ ಬಸ್ ಇಳಿಯುತ್ತಿದ್ದಾಗ ಮುಂಭಾಗದಿಂದ ಕಾರು ಬರುವುದನ್ನು ಕಂಡು ಚಾಲಕ ಗಲಿಬಿಲಿಕೊಂಡಿದ್ದ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಧ್ಯ ಮಾರಾಟದಲ್ಲಿ ವ್ಯತ್ಯಯ ಇರಲಿದ್ದು, ಇಂದು ಸಂಜೆ 4 ಗಂಟೆ ನಂತರ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಪರಿಷತ್ ಚುನಾವಣೆ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಮದ್ಯ ಮಾರಾಟ ಸಮಯದಲ್ಲಿ ಬದಲಾವಣೆಯಾಗಲಿದ್ದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಜೂನ್ 3 ರಂದು ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 6 ರಂದು ಪರಿಷತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಂಜೆ ನಾಲ್ಕು ಗಂಟೆಯಿಂದ ಜೂನ್ 3 ರವರೆಗೆ ಮದ್ಯದ ಅಂಗಡಿ ಬಂದ್ ಇರಲಿದೆ. 5 ರಂದು ಸಂಜೆ 4ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ ಇರಲಿದ್ದು. ಅಂದು ಆಯ್ದ ಪ್ರದೇಶಗಳಲ್ಲಿ ಮಾತ್ರ ಮಧ್ಯ ಮಾರಾಟಕ್ಕೆ ಅವಕಾಶ ಇರಲಿದೆ.ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬೆಳಿಗ್ಗೆ 6:00 ಯಿಂದ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧ…
ಹಾಸನ : ಹಾಸನದಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇಬ್ಬರನ್ನು ನ್ಯಾಯಾಂಗ ಬಂದನಕ್ಕೆ ನೀಡಿ ಇದೀಗ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪ ಕುರಿತಂತೆ ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಕ್ಷೇತ್ರವಾಗಿರುವಂತ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಗೆಲ್ಲುವುದಕ್ಕಾಗಿ ಬರೋಬ್ಬರಿ 500 ಕೋಟಿ ರೂ. ಖರ್ಚು ಮಾಡಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಆರೋಪಿಸಿದ್ದಾರೆ. ಡಿಕೆ ಬ್ರದರ್ಸ್ ದೈತ್ಯಶಕ್ತಿ, ಹಣಬಲ, ಅಧಿಕಾರ ಬಲವನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಅವರೇ ಸಮಸ್ಯೆ ಸೃಷ್ಠಿಸಿ, ಅವರೇ ಅದನ್ನ ಬಗೆಹರಿಸುತ್ತಾರೆ. ಅಂತವರ ನಡುವೆ ನಮ್ಮದು ರೋಚಕ ಹೋರಾಟ ನಡೆದಿದೆ. ಆದರೆ, ಕಾಂಗ್ರೆಸ್ ನವರು ಆಫ್ ದ ರೆಕಾರ್ಡ್ 400-500ಕೋಟಿ ಖರ್ಚು ಮಾಡಿದ್ದೀವಿ ಎಂದು ಹೇಳಿದ್ದಾರೆ. ಅಷ್ಟು ಖರ್ಚು ಮಾಡಿ ಗೆಲ್ಲಲೇಬೇಕು ಅನ್ನೋ ಹಠ ಇದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಆಸೆ ಇಟ್ಕೊಂಡಿದ್ದಾರೆ ಎಂದರು. ನಮ್ಮ ಪಕ್ಷದಿಂದ ಡಾ.ಸಿ.ಎನ್. ಮಂಜುನಾಥ್ ಅವರ ಒಳ್ಳೆತನ ಮುಂದಿಟ್ಟುಕೊಂಡು ಜನರ ಓಟ್ ಕೇಳಿದ್ದೇವೆ. ಹಾಗಾಗಿ, ಫಲಿತಾಂಶ ಏನಾಗುತ್ತೋ ನೋಡೊಣ. ಡಾಕ್ಟರ್ ಗೆದ್ದರೆ ಜನಶಕ್ತಿಗೆ ಬೆಲೆ ಇದೆ ಅನ್ನೋದು ಗೊತ್ತಾಗುತ್ತದೆ. ಇನ್ನು ಡಿ.ಕೆ. ಶಿವಕುಮಾರ್ ಶತ್ರು ಭೈರವಿ ಯಾಗ ಮಾಡಿದ ವಿಚಾರವನ್ನು ನಾನು…
ಹಾಸನ : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗಿ ಎಂದು ಭವಾನಿ ರೇವಣಗೆ ನೋಟಿಸ್ ನೆಡಿದೆ ಆದರೆ ಇದುವರೆಗೂ ಭವಾನಿ ರೇವಣ್ಣ ಅವರು ಎಲ್ಲಿಯೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದಾರೆ ಇದೀಗ ಭವಾನಿ ರೇವಣ್ಣ ಅವರ ನಿವಾಸಕ್ಕೆ ಮೂರು ಮಹಿಳಾ ವಕೀಲರು ಭೇಟಿ ನೀಡಿದ್ದು, ಇದೀಗ SIT ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಠಾಣೆಯ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗದ ಭವಾನಿ ರೇವಣಗೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗಲು SIT ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು ಕೂಡ ಇದುವರೆಗೂ ಹಾಜರಾಗಿಲ್ಲ. ಹಾಗಾಗಿ ಸಂಜೆ ಐದು ಗಂಟೆಯ ಒಳಗೆ ಎಸ್ಐಟಿದರೂ ಹಾಜರಾಗದಿದ್ದರೆ ಬಂಧನ ಮಾಡುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಾದರೂ ಭವಾನಿ ಅವರನ್ನು ಎಸ ಐ ಟಿ ಬಂಧಿಸುವ ಸಾಧ್ಯತೆ ಇದೆ ಆದರೆ ಭವಾನಿ ರೇವಣ್ಣ ಅವರು ಎಲ್ಲಿದ್ದಾರೆ ಎಂದು ಇದುವರೆಗೂ ತಿಳಿದು ಬಂದಿಲ್ಲ. ಇದೀಗ ಭವಾನಿ ನಿವಾಸಕ್ಕೆ…












